News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಉಪ್ಪಿ ರಾಜಕೀಯ ಎಂಟ್ರಿ?ಯಾವ ರಾಜಕೀಯ ಪಕ್ಷ ಸೇರ್ತಾರೆ ಗೊತ್ತಾ?ಮುಂದೆ ಓದಿ…

461

ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್‍ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್‍ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.

ಉಪೇಂದ್ರ ಅವರು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ರಾಜಕೀಯ ಅಂಗಳಕ್ಕೂ ಇಳಿಯಲಿದ್ದಾರೆ ಎಂದು ಅವರ ಆಪ್ತ ಮೂಲಗಳು ಹಾಗೂ ಅಭಿಮಾನಿಗಳು ಈಗಾಗಲೇ ಸಾಕಷ್ಟು ಬಾರಿ ಹೇಳಿದ್ದಾರಾದರೂ ಈ ಬಗ್ಗೆ ಉಪ್ಪಿ ಎಲ್ಲೂ ಅಧಿಕೃತ ಮಾಹಿತಿ ನೀಡಿಲ್ಲ.

ಈ ಬಗ್ಗೆ ಈಗಾಗಲೇ ಸಾಮಾಜಿಕ ಜಾಲ ತಾಣಗಳಲ್ಲಿ ಚರ್ಚೆ ಆರಂಭವಾಗಿದ್ದು, ಉಪೇಂದ್ರ ರಾಜಕೀಯ ಪ್ರವೇಶ ಸುದ್ದಿ ದಟ್ಟವಾಗಿದೆ. ಈ ಕುರಿತು ನಾಳೆ ಉಪ್ಪಿ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಹಿಂದೆಯೂ ಉಪೇಂದ್ರ ರಾಜಕೀಯ ಬರುತ್ತಾರೆ ಎಂದು ಹೇಳಲಾಗುತ್ತಿತ್ತಾದರೂ ಈ ಬಗ್ಗೆ ಅವರು ಅಲ್ಲಗಳೆದಿದ್ದರು. ತಮ್ಮ ಚಿತ್ರಗಳಲ್ಲಿ ಸಮಾಜದಲ್ಲಾಗುತ್ತಿರುವ ಭ್ರಷ್ಟಾಚಾರ ಹಾಗೂ ರಾಜಕಾರಣದ ಬಗ್ಗೆ ಯುವ ಜನತೆಯಲ್ಲಿ ಜಾಗೃತಿ ಮೂಡಿಸಿದ್ದರು.

ಉಪೇಂದ್ರರವರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದು, ಈ ಮೂಲಕ ಉಪೇಂದ್ರ ಅವರು ರಾಜಕೀಯಕ್ಕೆ ಎಂಟ್ರ ಕೊಟ್ಟರೇ ಬಿಜೆಪಿ ಸೇರಲಿದ್ದಾರೆಯೇ ಅಥವಾ ತಾವೇ ಸ್ವತಂತ್ರ ಪಕ್ಷ ಕಟ್ಟಲಿದ್ದಾರೆಯೇ ಎಂಬ ಪ್ರಶ್ನೆ ಮೂಡತೊಡಗಿದೆ.

ತಮ್ಮ ರಾಜಕೀಯ ಪ್ರವೇಶದ ಕುರಿತಾಗಿ ಅಭಿಮಾನಿಗಳು, ಆತ್ಮೀಯರೊಂದಿಗೆ ಉಪೇಂದ್ರ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಪ್ರಸ್ತುತ ಬೆಳವಣಿಗೆಗಳ ಕುರಿತಾಗಿ ಇತ್ತೀಚೆಗೆ ಟ್ವಿಟರ್ ನಲ್ಲಿ ಅವರು ನೀಡುತ್ತಿದ್ದ ಅಭಿಪ್ರಾಯಗಳು ಹೆಚ್ಚಿನ ಗಮನಸೆಳೆದಿದ್ದವು.

ಆದರೆ ಉಪ್ಪಿ ಅವರ ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ಅವರು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಯಾವುದಾದರೂ ಪಕ್ಷದ ಚಿಹ್ನೆಯಿಂದಲೋ ಅಥವಾ ಸ್ವಾತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೋ ಅಥವಾ ತಾವೇ ಹೊಸ ಪಕ್ಷವನ್ನು ಹುಟ್ಟಿ ಹಾಕುತ್ತಾರೋ ಎಂಬುದನ್ನು ಅವರೇ ಸ್ಪಷ್ಟಪಡಿಸಬೇಕು.

ಅಪಾರ ಅಭಿಮಾನಿಗಳನ್ನು ಹೊಂದಿರುವ ಉಪೇಂದ್ರ ಅವರು ರಾಜಕೀಯಕ್ಕೆ ಪ್ರವೇಶ ಪಡೆಯುತ್ತಿರುವುದಕ್ಕೆ ಅವರ ಅಪಾರ ಅಭಿಮಾನಿಗಳು ಸಹಮತ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.

ಉಪೇಂದ್ರ ಅವರು ತಮ್ಮ ಸೂಪರ್, ಟೋಪಿವಾಲ, ಓಂಕಾರ ಚಿತ್ರಗಳಲ್ಲಿ ನಮ್ಮ ರಾಜಕಾರಣಿಗಳು ವಿದೇಶಗಳಲ್ಲಿ ಇಟ್ಟಿರುವ ಕಪ್ಪು ಹಣದ ಬಗ್ಗೆ ವಿಷಯದ ಬಗ್ಗೆ ಹಾಗೂ ಎಚ್‍ಟುಒ ಚಿತ್ರದಲ್ಲಿ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವಿನ ನೀರಿನ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲುವ ಮೂಲಕ ಗಮನ ಸೆಳೆದಿದ್ದರು.  ದೇಶದ ಅಭಿವೃದ್ಧಿಯ ಬಗ್ಗೆ ಕಾಳಜಿ ಹೊಂದಿರುವ ಉಪೇಂದ್ರ ಅವರು ರಾಜಕೀಯಕ್ಕೆ ಬರುತ್ತಾರೋ ಇಲ್ಲವೋ ಎಂಬುದು ಕುತೂಹಲ ಮೂಡಿಸಿದೆ.

ಸಿಕ್ಕಿಂ ಗಡಿಯಲ್ಲಿ ಚೀನಾ ಉದ್ವಿಗ್ನತೆ ಸೃಷ್ಟಿಸಿ ಯುದ್ಧದ ಭೀತಿ ಆವರಿಸಿರೋ ಈ ಹೊತ್ತಿನಲ್ಲಿ ದೇಶದಲ್ಲಿರೋ ನಾವು ಚಿಕ್ಕ ಚಿಕ್ಕ ವಿಷಯಗಳಿಗೆ ಕಚ್ಚಾಡುತ್ತಿದ್ದೇವೆ ಎಂದು, ಉಪೇಂದ್ರರವರು ಇತ್ತೀಚೆಗೆ ಒಂದು ಟ್ವೀಟ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದರು.

ಭಾರತೀಯರು ಹೇಗಿದ್ದರೂ ಬಂದ್‌ಗಳಿಗೆ ಹೆಸರು ಮಾಡಿದವರು, ಯಾವುದೋ ಸಣ್ಣ ಪುಟ್ಟ ವಿಷಯಕ್ಕೆ ಬಂದ್‌ ಮಾಡಿ ಬೀದಿಗಿಳಿಯುವ ನಾವು ಯಾಕೆ ಭಾರತ್ ಬಂದ್ ಮಾಡಿ ನಮ್ಮ ಯೋಧರನ್ನು ಬೆಂಬಲಿಸಬಾರದು? ಆ ಮೂಲಕ ಯಾಕೆ ಚೀನಾಗೆ ಎಚ್ಚರಿಕೆ ನೀಡಬಾರದು ಎಂದು ಉಪೇಂದ್ರ ಇತ್ತೀಚೆಗಷ್ಟೇ ತಮ್ಮ ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿರೋ 7 ವರ್ಷದ ಪುಟ್ಟ ಬಾಲಕನೊಬ್ಬನ ಕಥೆ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್‍ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್‍ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.

  • ಆರೋಗ್ಯ

    ಧೂಮಪಾನದಿಂದ ದೂರ ಸರಿಯಲು ಮನೆ ಮದ್ದು ತಯಾರಿಸುವುದು ಹೇಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್‍ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು

  • ಆರೋಗ್ಯ

    ಬೆಳ್ಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವಿಸಿದರೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.

  • ಸುದ್ದಿ

    ವೇಶ್ಯೆಯರನ್ನೂ ಬಿಡದ ಕಾಮುಕರು, ಮೂವರ ಮೇಲೆ 9 ಮಂದಿಯಿಂದ ಸಾಮೂಹಿಕ ಅತ್ಯಾಚಾರ…!

    ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮೂವರು ವೇಶ್ಯರನ್ನು 9 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿರುವ ವಿದ್ರಾವಕ ಘಟನೆ ನಡೆದಿದೆ. ದೆಹಲಿಯ ಲಜಪತ್ ನಗರದ ಮೆಟ್ರೋ ನಿಲ್ದಾಣದ ಬಳಿ ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಓಲಾ ಕ್ಯಾಬ್ ನ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಇಬ್ಬರು ಗಿರಾಕಿಗಳ ಸೋಗಿನಲ್ಲಿ ಮಹಿಳೆಯರನ್ನು ಸಂಪರ್ಕಿಸಿದ್ದಾರೆ. 3000 ಸಾವಿರ ರೂಗಳಿಗೆ ಡೀಲ್ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯರನ್ನು ನೊಯ್ಡಾದ ಸೆಕ್ಟರ್ 18ಗೆ ಬರುವಂತೆ ಹೇಳಿ 3600 ರೂ ಮುಂಗಡ ಹಣವನ್ನೂ ನೀಡಿದ್ದಾರೆ. ಬಳಿಕ ಮಹಿಳೆಯರನ್ನು…

  • ಆರೋಗ್ಯ

    ಎಲೆಕೋಸಿನಿಂದ ಮಾನವನ ದೇಹಕ್ಕೆ ಏನೆಲ್ಲಾ ಲಾಭವಿದೆ ಗೊತ್ತಾ. ಈ ಅರೋಗ್ಯ ಮಾಹಿತಿ ನೋಡಿ.

    ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್‌ ಅಂಶಗಳು ವಿಟಮಿನ್‌ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….

  • ಸುದ್ದಿ

    ಮೃತ ಅಪ್ಪನಿಗೆ ಮಸೇಜ್ ಮಾಡುತ್ತಿದ್ದಳು, 4 ವರ್ಷದ ನಂತರ ಬಂತು ರಿಪ್ಲೈ..! ತಂದೆ ಮಗಳ ಕರುಣಾಜನಕ ಕಥೆ….

    ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್​ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರ​​​ನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್​ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್​ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ…