News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಉಪ್ಪಿ ರಾಜಕೀಯ ಎಂಟ್ರಿ?ಯಾವ ರಾಜಕೀಯ ಪಕ್ಷ ಸೇರ್ತಾರೆ ಗೊತ್ತಾ?ಮುಂದೆ ಓದಿ…

461

ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್‍ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್‍ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.

ಉಪೇಂದ್ರ ಅವರು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ರಾಜಕೀಯ ಅಂಗಳಕ್ಕೂ ಇಳಿಯಲಿದ್ದಾರೆ ಎಂದು ಅವರ ಆಪ್ತ ಮೂಲಗಳು ಹಾಗೂ ಅಭಿಮಾನಿಗಳು ಈಗಾಗಲೇ ಸಾಕಷ್ಟು ಬಾರಿ ಹೇಳಿದ್ದಾರಾದರೂ ಈ ಬಗ್ಗೆ ಉಪ್ಪಿ ಎಲ್ಲೂ ಅಧಿಕೃತ ಮಾಹಿತಿ ನೀಡಿಲ್ಲ.

ಈ ಬಗ್ಗೆ ಈಗಾಗಲೇ ಸಾಮಾಜಿಕ ಜಾಲ ತಾಣಗಳಲ್ಲಿ ಚರ್ಚೆ ಆರಂಭವಾಗಿದ್ದು, ಉಪೇಂದ್ರ ರಾಜಕೀಯ ಪ್ರವೇಶ ಸುದ್ದಿ ದಟ್ಟವಾಗಿದೆ. ಈ ಕುರಿತು ನಾಳೆ ಉಪ್ಪಿ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಹಿಂದೆಯೂ ಉಪೇಂದ್ರ ರಾಜಕೀಯ ಬರುತ್ತಾರೆ ಎಂದು ಹೇಳಲಾಗುತ್ತಿತ್ತಾದರೂ ಈ ಬಗ್ಗೆ ಅವರು ಅಲ್ಲಗಳೆದಿದ್ದರು. ತಮ್ಮ ಚಿತ್ರಗಳಲ್ಲಿ ಸಮಾಜದಲ್ಲಾಗುತ್ತಿರುವ ಭ್ರಷ್ಟಾಚಾರ ಹಾಗೂ ರಾಜಕಾರಣದ ಬಗ್ಗೆ ಯುವ ಜನತೆಯಲ್ಲಿ ಜಾಗೃತಿ ಮೂಡಿಸಿದ್ದರು.

ಉಪೇಂದ್ರರವರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದು, ಈ ಮೂಲಕ ಉಪೇಂದ್ರ ಅವರು ರಾಜಕೀಯಕ್ಕೆ ಎಂಟ್ರ ಕೊಟ್ಟರೇ ಬಿಜೆಪಿ ಸೇರಲಿದ್ದಾರೆಯೇ ಅಥವಾ ತಾವೇ ಸ್ವತಂತ್ರ ಪಕ್ಷ ಕಟ್ಟಲಿದ್ದಾರೆಯೇ ಎಂಬ ಪ್ರಶ್ನೆ ಮೂಡತೊಡಗಿದೆ.

ತಮ್ಮ ರಾಜಕೀಯ ಪ್ರವೇಶದ ಕುರಿತಾಗಿ ಅಭಿಮಾನಿಗಳು, ಆತ್ಮೀಯರೊಂದಿಗೆ ಉಪೇಂದ್ರ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಪ್ರಸ್ತುತ ಬೆಳವಣಿಗೆಗಳ ಕುರಿತಾಗಿ ಇತ್ತೀಚೆಗೆ ಟ್ವಿಟರ್ ನಲ್ಲಿ ಅವರು ನೀಡುತ್ತಿದ್ದ ಅಭಿಪ್ರಾಯಗಳು ಹೆಚ್ಚಿನ ಗಮನಸೆಳೆದಿದ್ದವು.

ಆದರೆ ಉಪ್ಪಿ ಅವರ ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ಅವರು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಯಾವುದಾದರೂ ಪಕ್ಷದ ಚಿಹ್ನೆಯಿಂದಲೋ ಅಥವಾ ಸ್ವಾತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೋ ಅಥವಾ ತಾವೇ ಹೊಸ ಪಕ್ಷವನ್ನು ಹುಟ್ಟಿ ಹಾಕುತ್ತಾರೋ ಎಂಬುದನ್ನು ಅವರೇ ಸ್ಪಷ್ಟಪಡಿಸಬೇಕು.

ಅಪಾರ ಅಭಿಮಾನಿಗಳನ್ನು ಹೊಂದಿರುವ ಉಪೇಂದ್ರ ಅವರು ರಾಜಕೀಯಕ್ಕೆ ಪ್ರವೇಶ ಪಡೆಯುತ್ತಿರುವುದಕ್ಕೆ ಅವರ ಅಪಾರ ಅಭಿಮಾನಿಗಳು ಸಹಮತ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.

ಉಪೇಂದ್ರ ಅವರು ತಮ್ಮ ಸೂಪರ್, ಟೋಪಿವಾಲ, ಓಂಕಾರ ಚಿತ್ರಗಳಲ್ಲಿ ನಮ್ಮ ರಾಜಕಾರಣಿಗಳು ವಿದೇಶಗಳಲ್ಲಿ ಇಟ್ಟಿರುವ ಕಪ್ಪು ಹಣದ ಬಗ್ಗೆ ವಿಷಯದ ಬಗ್ಗೆ ಹಾಗೂ ಎಚ್‍ಟುಒ ಚಿತ್ರದಲ್ಲಿ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವಿನ ನೀರಿನ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲುವ ಮೂಲಕ ಗಮನ ಸೆಳೆದಿದ್ದರು.  ದೇಶದ ಅಭಿವೃದ್ಧಿಯ ಬಗ್ಗೆ ಕಾಳಜಿ ಹೊಂದಿರುವ ಉಪೇಂದ್ರ ಅವರು ರಾಜಕೀಯಕ್ಕೆ ಬರುತ್ತಾರೋ ಇಲ್ಲವೋ ಎಂಬುದು ಕುತೂಹಲ ಮೂಡಿಸಿದೆ.

ಸಿಕ್ಕಿಂ ಗಡಿಯಲ್ಲಿ ಚೀನಾ ಉದ್ವಿಗ್ನತೆ ಸೃಷ್ಟಿಸಿ ಯುದ್ಧದ ಭೀತಿ ಆವರಿಸಿರೋ ಈ ಹೊತ್ತಿನಲ್ಲಿ ದೇಶದಲ್ಲಿರೋ ನಾವು ಚಿಕ್ಕ ಚಿಕ್ಕ ವಿಷಯಗಳಿಗೆ ಕಚ್ಚಾಡುತ್ತಿದ್ದೇವೆ ಎಂದು, ಉಪೇಂದ್ರರವರು ಇತ್ತೀಚೆಗೆ ಒಂದು ಟ್ವೀಟ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದರು.

ಭಾರತೀಯರು ಹೇಗಿದ್ದರೂ ಬಂದ್‌ಗಳಿಗೆ ಹೆಸರು ಮಾಡಿದವರು, ಯಾವುದೋ ಸಣ್ಣ ಪುಟ್ಟ ವಿಷಯಕ್ಕೆ ಬಂದ್‌ ಮಾಡಿ ಬೀದಿಗಿಳಿಯುವ ನಾವು ಯಾಕೆ ಭಾರತ್ ಬಂದ್ ಮಾಡಿ ನಮ್ಮ ಯೋಧರನ್ನು ಬೆಂಬಲಿಸಬಾರದು? ಆ ಮೂಲಕ ಯಾಕೆ ಚೀನಾಗೆ ಎಚ್ಚರಿಕೆ ನೀಡಬಾರದು ಎಂದು ಉಪೇಂದ್ರ ಇತ್ತೀಚೆಗಷ್ಟೇ ತಮ್ಮ ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ರಾಮಕೋಟಿ ಯಾಕೆ ಬರೆಯಬೇಕು? ಯಾವ ಪೆನ್‌ನಲ್ಲಿ ಬರೆದರೆ ಒಳ್ಳೆಯದಾಗುತ್ತದೆ.!ತಿಳಿಯಲು ಓದಿ ಮರೆಯದೇ ಶೇರ್ ಮಾಡಿ…

    ರಾಮನ ಹೆಸರನ್ನು ಅಕ್ಷರ ರೂಪದಲ್ಲಿ ಜಪಿಸುವುದೇ ರಾಮಕೋಟಿ.! ಮನಸಾ ವಾಚಾ ಕರ್ಮೇಣ ರಾಮನ ಸ್ತುತಿ ಮಾಡುತ್ತಾ ಆ ಮಧುರನಾಮವನ್ನು ಕೋಟಿ ಸಲ ಬರೆಯುವುದೇ ರಾಮಕೋಟಿ. ಶ್ರೀಮನ್ನಾರಾಯಣನ ಎಲ್ಲ ರೂಪಗಳಲ್ಲಿ ರಾಮಾವತಾರಕ್ಕೆ ಬಹಳ ಪ್ರಾಮುಖ್ಯತೆ ಪಡೆದಿದ್ದು, ರಾಮನನ್ನು ಪ್ರತಿಯೊಬ್ಬರೂ ನಮ್ಮ ದೇವರು ಅಂದುಕೊಳ್ಳುವಷ್ಟು ಹತ್ತಿರವಾದ. ಅತೀತ ಶಕ್ತಿಗಳಿಗಿಂತ ರಾಮನು ತೋರಿದ ಆದರ್ಶವಂತ ಜೀವನವೇ ಬಹಳ ಮಂದಿಗೆ ರಾಮ ಎಂದರೆ ಒಂದು ವಿಶೇಷವಾದ ಇಷ್ಟ, ಭಕ್ತಿಯನ್ನು ಉಂಟುಮಾಡಿತು! ರಾಮ ಕೋಟೆಯನ್ನು ಬರೆಯುವಾಗ ಕೆಲವು ಮುಖ್ಯ ನಿಯಮಗಳನ್ನು ಪಾಲಿಸಬೇಕು… ರಾಮ ಕೋಟಿಯನ್ನು…

  • ಸುದ್ದಿ

    ವಿದ್ಯಾರ್ಥಿಗಳೇ ಎಚ್ಚರ, ಕಾಲೇಜ್​ಗೆ ಮೊಬೈಲ್​ ತೆಗೆದುಕೊಂಡು ಹೋದರೆನಿಮ್ಮ ಪೋನ್ ಆಗಬಹುದು ಪೀಸ್ ಪೀಸ್​​…!!ಯಾಕೆ ಗೊತ್ತ?

    ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್​ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು. ಆ ಕಾಲೇಜು ಆವರಣದಲ್ಲಿ, ಕ್ಲಾಸ್​ನಲ್ಲಿ ಮೊಬೈಲ್​ ಬ್ಯಾನ್​ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್​ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್​ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್​​ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್​ ಆಗಿದೆ. ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್​ ಬಳಸುತ್ತಿದ್ದರು. ಇದನ್ನು ಗಮನಿಸಿದ…

  • ಸುದ್ದಿ

    ನಗರಕ್ಕೆ ಬಂದಿದೆ ಲೂಸಿಯಾ ಮಾತ್ರೆ! ಟೆಕ್ಕಿ ಮತ್ತು ಸ್ಟುಡೆಂಟ್​​ಗಳೇ ಇವರ ಟಾರ್ಗೆಟ್​​!!

    ಸ್ಯಾಂಡಲವುಡ್​ನಲ್ಲಿ ಹೊಸತನದಿಂದ ಗೆದ್ದಿದ್ದ ಚಿತ್ರ ಲೂಸಿಯಾ ಎಲ್ಲರ ಗಮನವನ್ನು ಸೆಳೆದಿದ್ದದ್ದು ಆ ಚಿತ್ರದಲ್ಲಿ ಹೀರೋ ಸತೀಶ್ ತೆಗೆದುಕೊಳ್ಳುತ್ತಿದ್ದ ಮಾತ್ರೆಯಿಂದ. ಇದೀಗಾ ಅಂತಹದ್ದೇ ಮಾತ್ರೆ ಬೆಂಗಳೂರಿಗೆ ಕಾಲಿಟ್ಟಿದ್ದು, ಟೆಕ್ಕಿ ಮತ್ತು ಕಾಲೇಜ್ ಸ್ಟೂಡೆಂಟ್‌ಗಳನ್ನು ಗಮನದಲ್ಲಿಟ್ಟುಕೊಂಡು ಈ ಗುಳಿಗೆ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ. ಎಂತಹ ಮನುಷ್ಯನಾದರೂ ಕನಿಷ್ಠ 8-10 ಗಂಟೆಗಳ ಕಾಲ ಅಮಲಿನಲ್ಲಿ ಇಡಬಹುದಾದ ಈ ಮಾತ್ರೆ ಮಾದಕ ವಸ್ತುಗಳನ್ನು ಮೀರಿಸುವಷ್ಟು ಶಕ್ತಿ ಹೊಂದಿದೆ. ವಿದೇಶದಿಂದ ಬರುವ ಈ ಟ್ಯಾಬ್ಲೆಟ್ ಮೂಲ ಬರ್ಮಾ. ಒಂದು ಟ್ಯಾಬ್ಲೆಟ್‌ನ ಬೆಲೆ 1000 ರೂಪಾಯಿ….

  • inspirational

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ!!!

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ – ದೇಶದೆಲ್ಲೆಡೆ ಟೋಲ್ ದರ ಹೆಚ್ಚಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ… ಏಪ್ರಿಲ್ 1 ರಿಂದ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಹಲವು ಪ್ರಮುಖ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಹೆಚ್ಚಿಸಿದೆ. ಈ ದರ ಏರಿಕೆಯು ಕಾರು, ಬಸ್, ಮತ್ತು ಲಘು ವಾಣಿಜ್ಯ ವಾಹನಗಳ ಮೇಲೆ ಪರಿಣಾಮ ಬೀರಲಿದ್ದು, ಪ್ರಯಾಣಿಕರ ಜೇಬಿಗೆ ಹೊರೆಯಾಗಲಿದೆ. ಉಡುಪಿ/ಕೊಪ್ಪಳ/ ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1 ರಿಂದ ಅಂದರೆ ಇಂದಿನಿಂದ ಜಾರಿಗೆ ಬರುವಂತೆ…

  • ವಿಶೇಷ ಲೇಖನ

    ಸಣ್ಣ ಸಣ್ಣ ವಿಚಾರಕ್ಕೆ ಹೆಚ್ಚು ಕಣ್ಣೀರು ಹಾಕುವವರು ಇದನ್ನೊಮ್ಮೆ ಓದಿ…!

    ನಮ್ಮ ಜನರು ಅಳುವವರನ್ನ ದುರ್ಬಲರು ಕೈಲಾಗದವರು ಎಂದು ತಿಳಿಯುತ್ತಾರೆ ಅದು ತಪ್ಪು ಎಂಬುದು ಕೆಲವರಿಗೆ ಮಾತ್ರ ಗೊತ್ತು. ಇನ್ನು ಕೆಲವರು ಆಳುವವರಿಗೆ ಯಾವಾಗಲು ಬೈಯುತ್ತಾರೆ, ಸಣ್ಣ ಸಣ್ಣ ವಿಚಾರಕ್ಕೆ ಆಳುವವರಿಗೆ ಕಣ್ಣಿನ ತುದಿಯಲ್ಲೇ ಇರತ್ತೆ ನೀರು, ನಿನ್ನ ಕಣ್ಣಲ್ಲಿ ಕಾವೇರಿನೇ ಇದಾಳೆ. ಅಳುಮುಂಜಿ ನೀನು, ಹುಡುಗರು ಅತ್ತರೆ ನೀನೇನು ಹೆಂಗುಸ್ರುತರ ಅಳ್ತಿಯಲ ಅಂತ ಹೇಳುತ್ತಾರೆ ಹೀಗೆ ವಿವಿಧ ಬಗೆಯ ನಾಮಕರಣ ಮಾಡಿ ಆಳುವವರಿಗೆ ಮುಜುಗರವಾಗುವಂತೆ ಮಾಡುತ್ತಾರೆ.