ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
ಉಪೇಂದ್ರ ಅವರು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ರಾಜಕೀಯ ಅಂಗಳಕ್ಕೂ ಇಳಿಯಲಿದ್ದಾರೆ ಎಂದು ಅವರ ಆಪ್ತ ಮೂಲಗಳು ಹಾಗೂ ಅಭಿಮಾನಿಗಳು ಈಗಾಗಲೇ ಸಾಕಷ್ಟು ಬಾರಿ ಹೇಳಿದ್ದಾರಾದರೂ ಈ ಬಗ್ಗೆ ಉಪ್ಪಿ ಎಲ್ಲೂ ಅಧಿಕೃತ ಮಾಹಿತಿ ನೀಡಿಲ್ಲ.
ಈ ಬಗ್ಗೆ ಈಗಾಗಲೇ ಸಾಮಾಜಿಕ ಜಾಲ ತಾಣಗಳಲ್ಲಿ ಚರ್ಚೆ ಆರಂಭವಾಗಿದ್ದು, ಉಪೇಂದ್ರ ರಾಜಕೀಯ ಪ್ರವೇಶ ಸುದ್ದಿ ದಟ್ಟವಾಗಿದೆ. ಈ ಕುರಿತು ನಾಳೆ ಉಪ್ಪಿ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಹಿಂದೆಯೂ ಉಪೇಂದ್ರ ರಾಜಕೀಯ ಬರುತ್ತಾರೆ ಎಂದು ಹೇಳಲಾಗುತ್ತಿತ್ತಾದರೂ ಈ ಬಗ್ಗೆ ಅವರು ಅಲ್ಲಗಳೆದಿದ್ದರು. ತಮ್ಮ ಚಿತ್ರಗಳಲ್ಲಿ ಸಮಾಜದಲ್ಲಾಗುತ್ತಿರುವ ಭ್ರಷ್ಟಾಚಾರ ಹಾಗೂ ರಾಜಕಾರಣದ ಬಗ್ಗೆ ಯುವ ಜನತೆಯಲ್ಲಿ ಜಾಗೃತಿ ಮೂಡಿಸಿದ್ದರು.
ಉಪೇಂದ್ರರವರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದು, ಈ ಮೂಲಕ ಉಪೇಂದ್ರ ಅವರು ರಾಜಕೀಯಕ್ಕೆ ಎಂಟ್ರ ಕೊಟ್ಟರೇ ಬಿಜೆಪಿ ಸೇರಲಿದ್ದಾರೆಯೇ ಅಥವಾ ತಾವೇ ಸ್ವತಂತ್ರ ಪಕ್ಷ ಕಟ್ಟಲಿದ್ದಾರೆಯೇ ಎಂಬ ಪ್ರಶ್ನೆ ಮೂಡತೊಡಗಿದೆ.
ತಮ್ಮ ರಾಜಕೀಯ ಪ್ರವೇಶದ ಕುರಿತಾಗಿ ಅಭಿಮಾನಿಗಳು, ಆತ್ಮೀಯರೊಂದಿಗೆ ಉಪೇಂದ್ರ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಪ್ರಸ್ತುತ ಬೆಳವಣಿಗೆಗಳ ಕುರಿತಾಗಿ ಇತ್ತೀಚೆಗೆ ಟ್ವಿಟರ್ ನಲ್ಲಿ ಅವರು ನೀಡುತ್ತಿದ್ದ ಅಭಿಪ್ರಾಯಗಳು ಹೆಚ್ಚಿನ ಗಮನಸೆಳೆದಿದ್ದವು.
ಆದರೆ ಉಪ್ಪಿ ಅವರ ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ಅವರು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಯಾವುದಾದರೂ ಪಕ್ಷದ ಚಿಹ್ನೆಯಿಂದಲೋ ಅಥವಾ ಸ್ವಾತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೋ ಅಥವಾ ತಾವೇ ಹೊಸ ಪಕ್ಷವನ್ನು ಹುಟ್ಟಿ ಹಾಕುತ್ತಾರೋ ಎಂಬುದನ್ನು ಅವರೇ ಸ್ಪಷ್ಟಪಡಿಸಬೇಕು.
ಅಪಾರ ಅಭಿಮಾನಿಗಳನ್ನು ಹೊಂದಿರುವ ಉಪೇಂದ್ರ ಅವರು ರಾಜಕೀಯಕ್ಕೆ ಪ್ರವೇಶ ಪಡೆಯುತ್ತಿರುವುದಕ್ಕೆ ಅವರ ಅಪಾರ ಅಭಿಮಾನಿಗಳು ಸಹಮತ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.
ಉಪೇಂದ್ರ ಅವರು ತಮ್ಮ ಸೂಪರ್, ಟೋಪಿವಾಲ, ಓಂಕಾರ ಚಿತ್ರಗಳಲ್ಲಿ ನಮ್ಮ ರಾಜಕಾರಣಿಗಳು ವಿದೇಶಗಳಲ್ಲಿ ಇಟ್ಟಿರುವ ಕಪ್ಪು ಹಣದ ಬಗ್ಗೆ ವಿಷಯದ ಬಗ್ಗೆ ಹಾಗೂ ಎಚ್ಟುಒ ಚಿತ್ರದಲ್ಲಿ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವಿನ ನೀರಿನ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲುವ ಮೂಲಕ ಗಮನ ಸೆಳೆದಿದ್ದರು. ದೇಶದ ಅಭಿವೃದ್ಧಿಯ ಬಗ್ಗೆ ಕಾಳಜಿ ಹೊಂದಿರುವ ಉಪೇಂದ್ರ ಅವರು ರಾಜಕೀಯಕ್ಕೆ ಬರುತ್ತಾರೋ ಇಲ್ಲವೋ ಎಂಬುದು ಕುತೂಹಲ ಮೂಡಿಸಿದೆ.
ಸಿಕ್ಕಿಂ ಗಡಿಯಲ್ಲಿ ಚೀನಾ ಉದ್ವಿಗ್ನತೆ ಸೃಷ್ಟಿಸಿ ಯುದ್ಧದ ಭೀತಿ ಆವರಿಸಿರೋ ಈ ಹೊತ್ತಿನಲ್ಲಿ ದೇಶದಲ್ಲಿರೋ ನಾವು ಚಿಕ್ಕ ಚಿಕ್ಕ ವಿಷಯಗಳಿಗೆ ಕಚ್ಚಾಡುತ್ತಿದ್ದೇವೆ ಎಂದು, ಉಪೇಂದ್ರರವರು ಇತ್ತೀಚೆಗೆ ಒಂದು ಟ್ವೀಟ್ನಲ್ಲಿ ಬೇಸರ ವ್ಯಕ್ತಪಡಿಸಿದ್ದರು.
ಭಾರತೀಯರು ಹೇಗಿದ್ದರೂ ಬಂದ್ಗಳಿಗೆ ಹೆಸರು ಮಾಡಿದವರು, ಯಾವುದೋ ಸಣ್ಣ ಪುಟ್ಟ ವಿಷಯಕ್ಕೆ ಬಂದ್ ಮಾಡಿ ಬೀದಿಗಿಳಿಯುವ ನಾವು ಯಾಕೆ ಭಾರತ್ ಬಂದ್ ಮಾಡಿ ನಮ್ಮ ಯೋಧರನ್ನು ಬೆಂಬಲಿಸಬಾರದು? ಆ ಮೂಲಕ ಯಾಕೆ ಚೀನಾಗೆ ಎಚ್ಚರಿಕೆ ನೀಡಬಾರದು ಎಂದು ಉಪೇಂದ್ರ ಇತ್ತೀಚೆಗಷ್ಟೇ ತಮ್ಮ ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…
ಅನೇಕ ಜನರಿಗೆ ಜೀನ್ಸ್ ಅಂದ್ರೆ ಇಷ್ಟ. ಅವರ ಕಪಾಟಿನಲ್ಲಿ ಜೀನ್ಸ್ ಸಂಖ್ಯೆಯೇ ಜಾಸ್ತಿ ಇರುತ್ತೆ. ಜೀನ್ಸ್ ಆರಾಮದಾಯಕ ಹಾಗೂ ಅದು ಅಷ್ಟು ಬೇಗ ಕೊಳಕಾಗುವುದಿಲ್ಲ. ಹಾಗಾಗಿ ಒಂದೇ ಜೀನ್ಸ್ ಪ್ಯಾಂಟನ್ನು ತೊಳೆಯದೆ ಪದೇ ಪದೇ ಧರಿಸಬಹುದು. ಆದ್ರೆ ಈ ಜೀನ್ಸ್ ತೊಳೆಯೋದು ಮಾತ್ರ ಕಷ್ಟದ ಕೆಲಸ. ಕೆಲಮೊಮ್ಮೆ ನಾವು ಮಾಡುವ ತಪ್ಪಿನಿಂದ ಜೀನ್ಸ್ ಬಣ್ಣ ಬೇಗ ಮಾಸುತ್ತದೆ. ಹರಿದು ಹೋಗುವ ಛಾನ್ಸ್ ಕೂಡ ಇದೆ. ನಾವು ಹೇಳುವ ಉಪಾಯ ಅನುಸರಿಸಿದ್ರೆ ಜೀನ್ಸ್ ಬಣ್ಣವನ್ನು ಹಾಗೇ ಉಳಿಸಿಕೊಂಡು ಹೋಗಬಹುದು.ನೀವು…
ಬಿಳಿ ಕೂದಲನ್ನು ಮರೆಮಾಚಲು ಹೇರ್ ಕಲರ್ ಗಳನ್ನು ಬಳಸುತ್ತಾರೆ. ಇಂತಹ ಕಲರ್ ಗಳು ಅನೇಕರಿಗೆ ಚರ್ಮದ ಖಾಯಿಲೆ ಅಥವಾ ಇನ್ಯಾವುದೋ ಸಮಸ್ಯೆಯನ್ನು ತಂದೊಡ್ಡುತ್ತದೆ. ಹಾಗಾಗಿ ಅವುಗಳ ಬದಲು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಬಿಳಿ ಕೂದಲನ್ನು ಕಪ್ಪಾಗಿಸುವ ವಿಧಾನಗಳು ಇಲ್ಲಿವೆ. ಒಣಗಿದ ನೆಲ್ಲಿಕಾಯಿಯನ್ನು ಕೊಬ್ಬರಿ ಎಣ್ಣೆಯ ಜೊತೆ ಕುದಿಸಿ, ಅದು ತಣ್ಣಗಾದ ಮೇಲೆ ಅದನ್ನು ತಲೆಗೆ ಹಚ್ಚಬೇಕು. ವಾರಕ್ಕೆ ಎರಡು ಬಾರಿ ಹೀಗೆ ಮಾಡಿದಲ್ಲಿ ಬಿಳಿ ಕೂದಲಿನ ಸಮಸ್ಯೆ ದೂರವಾಗುತ್ತದೆ. ತೆಂಗಿನೆಣ್ಣೆಯೊಡನೆ ನಿಂಬೆಹಣ್ಣಿನ ರಸವನ್ನು ಬೆರೆಸಿ ತಲೆಗೆ ಹಚ್ಚಿ….
ಸ್ಯಾಂಡಲ್ ವುಡ್ ನಟಿ ವಿಜಯಲಕ್ಷ್ಮಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ಹಣಕಾಸು ನೆರವು ನೀಡುವಂತೆ ಅವರ ಸಹೋದರಿ ಉಷಾದೇವಿ ಮನವಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಟಾಪ್ ನಟಿಯಾಗಿದ್ದ ವಿಜಯಲಕ್ಷ್ಮಿ ಅವರಿಗೆ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವಾರ ಅವರ ತಾಯಿಯ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ಸೇರಿಸಿದ್ದು, ಇದ್ದ ಹಣವನ್ನೆಲ್ಲ ಖರ್ಚು ಮಾಡಲಾಗಿದೆ. ಈಗ ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆಗೆ ನೆರವು ನೀಡುವಂತೆ ಸಹೋದರಿ ಉಷಾದೇವಿ…
ನಾವು ಮನುಷ್ಯರು ತಾವು ವಾಸವಿರುವ ಮನೆಯನ್ನೇ ಸ್ವಚ್ಚವಾಗಿಡುವುದಕ್ಕೆ, ಸೋಮಾರಿತನ ತೋರುತ್ತಾರೆ. ಇನ್ನು ಅಕ್ಕ ಪಕ್ಕದ ಜಾಗ ಅಥವಾ ಬೇರೆ ಜಾಗಗಳನ್ನು ಸ್ವಚ್ಚವಾಗಿದುವುದರ ಬಗ್ಗೆ ಯೋಚಿಸೋದು ತಂಬಾ ದೂರ ಬಿಡಿ.
ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ…