ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟದ ನಂತರ ತಾಂಬೂಲ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಏನು ಲಾಭ: ವೀಳ್ಯದೆಲೆ ಅಥವಾ ವೀಳ್ಯೆಲೆ ಅನೇಕ ಔಷಧಿ ಗುಣಗಳಿಂದ ಕೂಡಿದ್ದು, ಆಯುರ್ವೇದ ವೈದ್ಯರು ಇದನ್ನು ಅಮೃತ ಸಮಾನವಾದ ವನಸ್ಪತಿ ಎಂದು ಗುರುತಿಸಿದ್ದಾರೆ.
ಸಂಸ್ಕೃತದಲ್ಲಿ ನಾಗವಲ್ಲಿ ಎಂದು ಕರೆಯಲ್ಪಡುವ ಇದು ರುಚಿಯಲ್ಲಿ ಕಟು (ಖಾರ), ತಿಕ್ತ (ಕಹಿ), ಮಧುರ (ಸಿಹಿ) ರಸಗಳಿಂದ ಕೂಡಿದ್ದ ಉಷ್ಣ, ತೀಕ್ಷ್ಣ ಹಾಗೂ ಕ್ಷಾರ ಗುಣವುಳ್ಳದ್ದಾಗಿದೆ.
ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ನಾಗವಲ್ಲಿ ವೃಷ್ಯ ಎಂದರೆ ಕಾಮೋತ್ತೇಜಕವಾಗಿದ್ದು, ಬಸ್ತಿರೋಧಕ, ಮೂತ್ರಪಿಂಡ ಹಾಗೂ ಹೃದಯ ರೋಗಗಳಲ್ಲಿ ಹೆಚ್ಚು ಉಪಯುಕ್ತವಾಗುತ್ತದೆ.ತಾಂಬೂಲ ಸೇವಿಸುತ್ತಿದ್ದರು.

ಹಳ್ಳಿಗಳಲ್ಲಿ ಊಟದ ನಂತರ ತಾಂಬೂಲ ಸೇವನಾ ಸಾಮಾನ್ಯ, ಹಳ್ಳಿಗರಿಗೆ ಅದರ ಲಾಭವೂ ಗೊತ್ತಿದೆ, ಊಟದ ನಂತರ ತಾಂಬೂಲ ಸೇವನೆಯಿಂದ ಜೀರ್ಣಕ್ರೀಯೆ ಸುಲಭವಾದರೆ, ಹಲ್ಲುಗಳು ಗಟ್ಟಿಯಾಗುತ್ತವೆ ಎನ್ನುವುದು ಹಳ್ಳಿಗಳಲ್ಲಿ ಪ್ರತಿಯೊಬ್ಬರಿಗೂ ತಿಳಿದಿರುವ ಸಾಮಾನ್ಯ ಸಂಗತಿ.

ಇಷ್ಟೆ ಅಲ್ಲ ತಾಂಬೂಲ ಸೇವನೆಯಿಂದ ನಿಮಗೆ ಗೊತ್ತಿದರ ಅನೇಕ ಲಾಭಗಳೂ ಇವೆ. ಮಧುಮೇಹ ರೋಗವುಳ್ಳವರಿಗೆ ತಾಂಬೂಲ ಸೇವನೆ ಒಂದು ಪಥ್ಯ ಅಭ್ಯಾಸ. ದಿನದಲ್ಲಿ ಎರಡು ಅಥವಾ ಮೂರು ಸಲ, ಊಟವಾದ ನಂತರ ತಾಂಬೂಲ ಸೇವಿಸುವುದು ಹಿತಕರ ಹಾಗೂ ಆರೋಗ್ಯದಾಯಕ.
ಪ್ರತಿದಿನ ತಾಂಬೂಲ ಸೇವನೆ ಮಾಡುವುದರಿಂದ ಶರೀರದ ಉಷ್ಣತೆ ಸಮತೋಲನದಲ್ಲಿದ್ದು, ಮುಖ ಮತ್ತು ಚರ್ಮದ ಕಾಂತಿ ಹೆಚ್ಚಾಗುತ್ತದೆ. ಮನಸ್ಸು ಪ್ರಸನ್ನಗೊಳ್ಳುತ್ತದೆ, ಬುದ್ಧಿ ಚುರುಕಾಗುತ್ತದೆ. ಮುಪ್ಪು ಮುಂದೂಡಲ್ಪಟ್ಟು ಯೌವನ ದೀರ್ಘಕಾಲ ರಕ್ಷಿಸಲ್ಪಡುತ್ತದೆ.

ಇವೆಲ್ಲಕ್ಕಿಂತ ಮೇಲಾಗಿಸ್ತ್ರೀ-ಪುರುಷರಿಬ್ಬರಿಗೂ ತಾಂಬೂಲ ಉತ್ತಮ ಕಾಮೋತ್ತೇಜಕವಾಗಿದ್ದು, ಮುದ ನೀಡುತ್ತದೆ. ವೀಳ್ಯದ ಎಳೆಯಲ್ಲಿ ಕಾಮವನ್ನು ಉತ್ತೇಜಿಸುವ ಅಂಶಗಳಿದ್ದು, ಹಿಂದಿನ ಕಾಲದಲ್ಲಿ ಪತಿ – ಪತ್ನಿಯರು ಮಲಗುವ ಮುನ್ನ ಸಾಮಾನ್ಯವಾಗಿ ತಾಂಬೂಲ ಸೇವಿಸುತ್ತಿದ್ದರು.
ಮಧುಮೇಹದಲ್ಲಿ ಬಾಯಾರಿಕೆ ಹಾಗೂ ಬಾಯಿಂದ ದುರ್ಗಂಧ, ವಾಸನೆ ಇವು ಸಾಮಾನ್ಯ.

ಈ ತೊಂದರೆಗಳ ನಿವಾರಣೆಗೆ ತಾಂಬೂಲ ಸೇವನೆ ಉತ್ತಮ ಉಪಚಾರ ಎನ್ನಲಾಗಿದೆ. ತಾಂಬೂಲ ಸೇವನೆಯನ್ನು ಯಾವಾಗಲೂ ಊಟದ ನಂತರ ಮಾಡಬೇಕು. ಎಲೆ, ಅಡಿಕೆ, ಸುಣ್ಣಗಳನ್ನು ಚೆನ್ನಾಗಿ ಅಗಿದ ಮೇಲೆ ಸುಗಂಧ ದ್ರವ್ಯಗಳಾದ ಲವಂಗ, ಜಕಾಯಿ, ಗಂಧ ಮೆಣಸು, ಏಲಕ್ಕಿ, ನಾಗಕೇಸರಿ ಮುಂತಾದ ದ್ರವಗಳನ್ನು ಜತೆಗೆ ಸೇರಿಸಿಕೊಂಡು, ತಾಂಬೂಲವನ್ನು ಚೆನ್ನಾಗಿ ಅಗಿಯಬೇಕು. ಇದು ಬಾಯಿಯ ರುಚಿಯನ್ನು
ಹೆಚ್ಚು ಮಾಡುವುದೇ ಅಲ್ಲದೆ ಮನಸ್ಸಿಗೆ ಆಹ್ಲಾದವನ್ನು ನೀಡುತ್ತದೆ. ಸಮೋತ್ತೇಜಕವಾಗಿದ್ದು, ಯೌವನವನ್ನು ಕಾಪಾಡುತ್ತದೆ.
ತಾಂಬೂಲ ಸೇವನೆಯಿಂದ ಆರೋಗ್ಯ ವೃದ್ಧಿಗೊಳ್ಳುತ್ತದೆ. ತಾಂಬೂಲವು ಬಾಯಿಗೆ ನಿರ್ಮಲತೆ ಮತ್ತು ಪರಿಮಳ ಕೊಟ್ಟು ಮುಖದಲ್ಲಿ ಕಾಂತಿ ಮತ್ತು ಪ್ರಸನ್ನತೆಯನ್ನುಂಟುಮಾಡುತ್ತದೆ. ದವಡೆ ಹಲ್ಲು, ವಸಡುಗಳಿಗೆ ಬಲ, ನಾಲಿಗೆಗೆ ರುಚಿ ಕೊಡುತ್ತದೆ. ಸ್ವರವನ್ನು ಸ್ವಚ್ಛಗೊಳಿಸಿ, ಮಲಬದ್ಧತೆ ನಿವಾರಿಸುತ್ತದೆ. ಬಾಯಿ ಮತ್ತು
ಗಂಟಲುಗಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿ ನೆಗಡಿ, ಗಂಟಲು ನೋವು ಮುಂತಾದ ರೋಗಗಳು ಉಂಟಾಗದಂತೆ ತಡೆಯುತ್ತದೆ.

ಜೀರ್ಣಾಂಗಗಳನ್ನು ಉದ್ದೀಪನಗೊಳಿಸಿ ಅಗ್ನಿಮಾಂದ್ಯ, ಅಜೀರ್ಣ ರೋಗಗಳನ್ನು ನಿವಾರಿಸುತ್ತದೆ.
ಗರದಿಕ್ಷ ಗುಲ್ಮ ಮುಂತಾದ ರೋಗಗಳಿಗೆ ಒಳ್ಳೆಯದು.
ತಾಂಬೂಲದ ಮೂರನೆ ಮುಖ್ಯ ಘಟಕವೇ ಸುಣ್ಣ. ಸುಧಾ, ಕ್ಷಾರ ಎಂದು ಕರೆಯಲ್ಪಡುವ ಇದು ತೀಕ್ಷ್ಣ ಉಷ್ಣ, ಕ್ಷಾರ ಗುಣಗಳಿಂದ ಕೂಡಿದ್ದು, ವಾತ ಕಫಾ ದೋಷಗಳನ್ನು
ನಾಶಮಾಡುತ್ತದೆ.

ದೇಹದಲ್ಲಿ ಕೊಬ್ಬಿನ ಅಂಶವನ್ನು ಕಡಿಮೆ ಮಾಡುವ ಗುಣವುಳ್ಳ ಸುಣ್ಣ ಒಳ್ಳೆಯ ಜೀರ್ಣಕಾರಕ ಹಾಗೂ ಕ್ರಿಮಿನಾಶಕವಾಗಿದೆ. ಮೂಳೆ ಮತ್ತು ದಂತಗಳ
ಬೆಳವಣಿಗೆ ಮತ್ತು ಪೋಷಣೆಗೆ ಸಹಾಯ ಮಾಡುತ್ತವೆ. ತಾಂಬೂಲದ ಜತೆ ಉಪಯೋಗಿಸುವ ಲವಂಗ, ಏಲಕ್ಕಿ, ಜಾಕಾಯಿ, ಜಾಪತ್ರೆ, ಪಚ್ಚ ಕರ್ಪೂರ ಮುಂತಾದ ಸುಗಂಧ
ದ್ರವ್ಯಗಳು ತಾಂಬೂಲಕ್ಕೆ ಪರಿಮಳ ಮತ್ತು ರುಚಿಯನ್ನು ಕೊಡುವುದೇ ಅಲ್ಲದೆ ಅನೇಕ ಉತ್ತಮ ಔಷದ ಗುಣಗಳನ್ನು ಹೊಂದಿದ್ದು, ಆರೋಗ್ಯ ಸುಧಾರಣೆಗೆ ಪೂರಕವಾಗುತ್ತವೆ.
ನಿಮ್ಮ ಆರೋಗ್ಯಕ್ಕೆ
ಇಂತಹ ಅಮೂಲ್ಯ ಔಷದ ಗುಣಗಳಿಂದ ಕೂಡಿರುವ ತಾಂಬೂಲ ಸೇವನೆಗೆ ನಮ್ಮ ಪ್ರಾಚೀನ ಆಯುರ್ವೇದ ವೈದ್ಯಶಾಸ್ತ್ರ ಬಹಳ ಮಹತ್ವ ನೀಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪೇಂದ್ರ ಅವರ ಮಾತು ನಿಜಕ್ಕೂ ಸತ್ಯ? ಲೇಖನ ಓದಿ
ಉದ್ಯೋಗ ಹಂತ 6ರಲ್ಲಿ ಬರುವ ಹಿರಿಯ ಮ್ಯಾನೇಜರ್ಗಳ ಕೆಲಸಕ್ಕೆ ಇದೀಗ ಕುತ್ತು ಬಂದಿದೆ. ಇನ್ಫೋಸಿಸ್ನ ಹಂತ 6,7, ಹಾಗೂ 8ರಲ್ಲಿ ಒಟ್ಟು 30,092 ಉದ್ಯೋಗಿಗಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 2,200 ಮಂದಿ ಉದ್ಯೋಗ ಕಳೆದು ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಟಿ ದ್ಯತ್ಯ ಕಾಗ್ನಿಜೆಂಟ್ಸಂಸ್ಥೆ ಕೂಡಾ ತನ್ನ 13,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಇನ್ಫೋಸಿಸ್ಕೂಡಾ ಇದೀಗ ಕಾಗ್ನಿಜೆಂಟ್ ಹಾದಿಯನ್ನೇ ತುಳಿಯುತ್ತಿದೆ. ಹಿರಿಯ ಉದ್ಯೋಗಿಗಳ ಕಥೆ ಹೀಗಾದ್ರೆ, ಕಿರಿಯ ಉದ್ಯೋಗಿಗಳೂ ಕೂಡಾ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ….
ಗುಜರಾತ್ ನ ಸೂರತ್ ನಲ್ಲಿ ನಡೆದ ಭೀಕರ ಕಟ್ಟಡ ಅಗ್ನಿ ಅಘಡದಲ್ಲಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಸೂರತ್ ಸಾರ್ತನ ಪ್ರದೇಶದ ತಕ್ಷಶಿಲಾ ಆರ್ಕೇಡ್ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಈ ವರೆಗೂ ಸುಮಾರು 20 ಮಂದಿ ಸಾವಿಗೀಡಾಗಿದ್ದು, ಮೃತರಲ್ಲಿ ಬಹುತೇಕರು ವಿದ್ಯಾರ್ಥಿಗಳು ಎಂದು…
ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್ನ ಪ್ರತಿ ಕಂಪಾರ್ಟ್ಮೆಂಟ್ನ ಮೇಲೆ ಐದು ಡಿಜಿಟ್ ಹೊಂದಿರುವ ಒಂದು ನಂಬರ್ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್ ನಂಬರ್ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್ ಏನು..? ಯಾಕೆ ಈ ನಂಬರ್ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ ಐದು ಡಿಜಿಟ್ನ ಈ ನಂಬರ್ ಇರುವುದು ಏಕೆ ಗೊತ್ತಾ..? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ…
ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ….
ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ ಕಾರ್ಮಿಕ ಭವಿಷ್ಯ ನಿಧಿ ಇಲಾಖೆ ಇಪಿಎಫ್ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್ ಖಾತೆ ಹೊಂದಿರುವ ಪ್ರತಿ ಕಾರ್ಮಿಕರ ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್ ನಿಧಿಗಾಗಿ ಸ್ವಲ್ಪ ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು ಹಲವಾರು ವಿಧಾನಗಳಿವೆ….