News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜೀವನಶೈಲಿ

ಊಟದ ನಂತರ ತಾಂಬೂಲ ಸೇವನೆಯು ನಿಮ್ಮ ಆರೋಗ್ಯಕ್ಕೆ ಒಳೆಯದಾ.?. ಕೆಟ್ಟದಾ..? ತಿಳಿಯಲು ಈ ಲೇಖನ ಓದಿ …

2288

ಊಟದ ನಂತರ ತಾಂಬೂಲ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಏನು ಲಾಭ: ವೀಳ್ಯದೆಲೆ ಅಥವಾ ವೀಳ್ಯೆಲೆ ಅನೇಕ ಔಷಧಿ ಗುಣಗಳಿಂದ ಕೂಡಿದ್ದು, ಆಯುರ್ವೇದ ವೈದ್ಯರು ಇದನ್ನು ಅಮೃತ ಸಮಾನವಾದ ವನಸ್ಪತಿ ಎಂದು ಗುರುತಿಸಿದ್ದಾರೆ.

ಸಂಸ್ಕೃತದಲ್ಲಿ ನಾಗವಲ್ಲಿ ಎಂದು ಕರೆಯಲ್ಪಡುವ ಇದು ರುಚಿಯಲ್ಲಿ ಕಟು (ಖಾರ), ತಿಕ್ತ (ಕಹಿ), ಮಧುರ (ಸಿಹಿ) ರಸಗಳಿಂದ ಕೂಡಿದ್ದ ಉಷ್ಣ, ತೀಕ್ಷ್ಣ ಹಾಗೂ ಕ್ಷಾರ ಗುಣವುಳ್ಳದ್ದಾಗಿದೆ.

ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ನಾಗವಲ್ಲಿ ವೃಷ್ಯ ಎಂದರೆ ಕಾಮೋತ್ತೇಜಕವಾಗಿದ್ದು, ಬಸ್ತಿರೋಧಕ, ಮೂತ್ರಪಿಂಡ ಹಾಗೂ ಹೃದಯ ರೋಗಗಳಲ್ಲಿ ಹೆಚ್ಚು ಉಪಯುಕ್ತವಾಗುತ್ತದೆ.ತಾಂಬೂಲ ಸೇವಿಸುತ್ತಿದ್ದರು.

ಹಳ್ಳಿಗಳಲ್ಲಿ ಊಟದ ನಂತರ ತಾಂಬೂಲ ಸೇವನಾ ಸಾಮಾನ್ಯ, ಹಳ್ಳಿಗರಿಗೆ ಅದರ ಲಾಭವೂ ಗೊತ್ತಿದೆ, ಊಟದ ನಂತರ ತಾಂಬೂಲ ಸೇವನೆಯಿಂದ ಜೀರ್ಣಕ್ರೀಯೆ ಸುಲಭವಾದರೆ, ಹಲ್ಲುಗಳು ಗಟ್ಟಿಯಾಗುತ್ತವೆ ಎನ್ನುವುದು  ಹಳ್ಳಿಗಳಲ್ಲಿ ಪ್ರತಿಯೊಬ್ಬರಿಗೂ ತಿಳಿದಿರುವ ಸಾಮಾನ್ಯ ಸಂಗತಿ.

ಇಷ್ಟೆ ಅಲ್ಲ ತಾಂಬೂಲ ಸೇವನೆಯಿಂದ ನಿಮಗೆ ಗೊತ್ತಿದರ ಅನೇಕ ಲಾಭಗಳೂ ಇವೆ. ಮಧುಮೇಹ ರೋಗವುಳ್ಳವರಿಗೆ ತಾಂಬೂಲ ಸೇವನೆ ಒಂದು ಪಥ್ಯ ಅಭ್ಯಾಸ. ದಿನದಲ್ಲಿ ಎರಡು ಅಥವಾ ಮೂರು ಸಲ, ಊಟವಾದ ನಂತರ ತಾಂಬೂಲ ಸೇವಿಸುವುದು ಹಿತಕರ ಹಾಗೂ ಆರೋಗ್ಯದಾಯಕ.

ಪ್ರತಿದಿನ ತಾಂಬೂಲ ಸೇವನೆ ಮಾಡುವುದರಿಂದ ಶರೀರದ ಉಷ್ಣತೆ ಸಮತೋಲನದಲ್ಲಿದ್ದು, ಮುಖ ಮತ್ತು ಚರ್ಮದ ಕಾಂತಿ ಹೆಚ್ಚಾಗುತ್ತದೆ. ಮನಸ್ಸು ಪ್ರಸನ್ನಗೊಳ್ಳುತ್ತದೆ, ಬುದ್ಧಿ ಚುರುಕಾಗುತ್ತದೆ. ಮುಪ್ಪು ಮುಂದೂಡಲ್ಪಟ್ಟು ಯೌವನ ದೀರ್ಘಕಾಲ ರಕ್ಷಿಸಲ್ಪಡುತ್ತದೆ.

ಇವೆಲ್ಲಕ್ಕಿಂತ ಮೇಲಾಗಿಸ್ತ್ರೀ-ಪುರುಷರಿಬ್ಬರಿಗೂ ತಾಂಬೂಲ ಉತ್ತಮ ಕಾಮೋತ್ತೇಜಕವಾಗಿದ್ದು, ಮುದ ನೀಡುತ್ತದೆ. ವೀಳ್ಯದ ಎಳೆಯಲ್ಲಿ ಕಾಮವನ್ನು ಉತ್ತೇಜಿಸುವ ಅಂಶಗಳಿದ್ದು, ಹಿಂದಿನ ಕಾಲದಲ್ಲಿ ಪತಿ – ಪತ್ನಿಯರು ಮಲಗುವ ಮುನ್ನ ಸಾಮಾನ್ಯವಾಗಿ ತಾಂಬೂಲ ಸೇವಿಸುತ್ತಿದ್ದರು.

ಮಧುಮೇಹದಲ್ಲಿ ಬಾಯಾರಿಕೆ ಹಾಗೂ ಬಾಯಿಂದ ದುರ್ಗಂಧ, ವಾಸನೆ ಇವು ಸಾಮಾನ್ಯ.

ಈ ತೊಂದರೆಗಳ ನಿವಾರಣೆಗೆ ತಾಂಬೂಲ ಸೇವನೆ ಉತ್ತಮ ಉಪಚಾರ ಎನ್ನಲಾಗಿದೆ. ತಾಂಬೂಲ ಸೇವನೆಯನ್ನು ಯಾವಾಗಲೂ ಊಟದ ನಂತರ ಮಾಡಬೇಕು. ಎಲೆ, ಅಡಿಕೆ, ಸುಣ್ಣಗಳನ್ನು ಚೆನ್ನಾಗಿ ಅಗಿದ ಮೇಲೆ ಸುಗಂಧ ದ್ರವ್ಯಗಳಾದ ಲವಂಗ, ಜಕಾಯಿ, ಗಂಧ ಮೆಣಸು, ಏಲಕ್ಕಿ, ನಾಗಕೇಸರಿ ಮುಂತಾದ ದ್ರವಗಳನ್ನು ಜತೆಗೆ ಸೇರಿಸಿಕೊಂಡು, ತಾಂಬೂಲವನ್ನು ಚೆನ್ನಾಗಿ ಅಗಿಯಬೇಕು. ಇದು ಬಾಯಿಯ ರುಚಿಯನ್ನು

ಹೆಚ್ಚು ಮಾಡುವುದೇ ಅಲ್ಲದೆ ಮನಸ್ಸಿಗೆ ಆಹ್ಲಾದವನ್ನು ನೀಡುತ್ತದೆ. ಸಮೋತ್ತೇಜಕವಾಗಿದ್ದು, ಯೌವನವನ್ನು ಕಾಪಾಡುತ್ತದೆ.

ತಾಂಬೂಲ ಸೇವನೆಯಿಂದ ಆರೋಗ್ಯ ವೃದ್ಧಿಗೊಳ್ಳುತ್ತದೆ. ತಾಂಬೂಲವು ಬಾಯಿಗೆ ನಿರ್ಮಲತೆ ಮತ್ತು ಪರಿಮಳ ಕೊಟ್ಟು ಮುಖದಲ್ಲಿ ಕಾಂತಿ ಮತ್ತು ಪ್ರಸನ್ನತೆಯನ್ನುಂಟುಮಾಡುತ್ತದೆ. ದವಡೆ ಹಲ್ಲು, ವಸಡುಗಳಿಗೆ ಬಲ, ನಾಲಿಗೆಗೆ ರುಚಿ ಕೊಡುತ್ತದೆ. ಸ್ವರವನ್ನು ಸ್ವಚ್ಛಗೊಳಿಸಿ, ಮಲಬದ್ಧತೆ ನಿವಾರಿಸುತ್ತದೆ. ಬಾಯಿ ಮತ್ತು
ಗಂಟಲುಗಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿ ನೆಗಡಿ, ಗಂಟಲು ನೋವು ಮುಂತಾದ ರೋಗಗಳು ಉಂಟಾಗದಂತೆ ತಡೆಯುತ್ತದೆ.

ಜೀರ್ಣಾಂಗಗಳನ್ನು ಉದ್ದೀಪನಗೊಳಿಸಿ ಅಗ್ನಿಮಾಂದ್ಯ, ಅಜೀರ್ಣ ರೋಗಗಳನ್ನು ನಿವಾರಿಸುತ್ತದೆ.

ಗರದಿಕ್ಷ ಗುಲ್ಮ ಮುಂತಾದ ರೋಗಗಳಿಗೆ ಒಳ್ಳೆಯದು.

ತಾಂಬೂಲದ ಮೂರನೆ ಮುಖ್ಯ ಘಟಕವೇ ಸುಣ್ಣ. ಸುಧಾ, ಕ್ಷಾರ ಎಂದು ಕರೆಯಲ್ಪಡುವ ಇದು ತೀಕ್ಷ್ಣ  ಉಷ್ಣ, ಕ್ಷಾರ ಗುಣಗಳಿಂದ ಕೂಡಿದ್ದು, ವಾತ ಕಫಾ ದೋಷಗಳನ್ನು
ನಾಶಮಾಡುತ್ತದೆ.

ದೇಹದಲ್ಲಿ ಕೊಬ್ಬಿನ ಅಂಶವನ್ನು ಕಡಿಮೆ ಮಾಡುವ ಗುಣವುಳ್ಳ ಸುಣ್ಣ ಒಳ್ಳೆಯ ಜೀರ್ಣಕಾರಕ ಹಾಗೂ ಕ್ರಿಮಿನಾಶಕವಾಗಿದೆ. ಮೂಳೆ ಮತ್ತು ದಂತಗಳ
ಬೆಳವಣಿಗೆ ಮತ್ತು ಪೋಷಣೆಗೆ ಸಹಾಯ ಮಾಡುತ್ತವೆ. ತಾಂಬೂಲದ ಜತೆ ಉಪಯೋಗಿಸುವ ಲವಂಗ, ಏಲಕ್ಕಿ, ಜಾಕಾಯಿ, ಜಾಪತ್ರೆ, ಪಚ್ಚ ಕರ್ಪೂರ ಮುಂತಾದ ಸುಗಂಧ
ದ್ರವ್ಯಗಳು ತಾಂಬೂಲಕ್ಕೆ ಪರಿಮಳ ಮತ್ತು ರುಚಿಯನ್ನು ಕೊಡುವುದೇ ಅಲ್ಲದೆ ಅನೇಕ ಉತ್ತಮ ಔಷದ ಗುಣಗಳನ್ನು ಹೊಂದಿದ್ದು, ಆರೋಗ್ಯ ಸುಧಾರಣೆಗೆ ಪೂರಕವಾಗುತ್ತವೆ.

ನಿಮ್ಮ ಆರೋಗ್ಯಕ್ಕೆ

ಇಂತಹ ಅಮೂಲ್ಯ ಔಷದ ಗುಣಗಳಿಂದ ಕೂಡಿರುವ ತಾಂಬೂಲ ಸೇವನೆಗೆ ನಮ್ಮ ಪ್ರಾಚೀನ ಆಯುರ್ವೇದ ವೈದ್ಯಶಾಸ್ತ್ರ ಬಹಳ ಮಹತ್ವ ನೀಡಿದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಸಂಧಿವಾತ ಹಾಗೂ ಮಂಡಿಯ ನೋವಿಗೆ ಇಲ್ಲಿದೆ ಶಾಶ್ವತ ಪರಿಹಾರ! ತಿಳಿಯಲು ಈ ಲೇಖನ ಓದಿ…

    ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.

  • ಸುದ್ದಿ

    ಕಮಲದ ಕಾಳುಗಳನ್ನು ತಿನ್ನುವುದರಿಂದ ಬೇಗ ವಯಸ್ಸಾಗುವುದಿಲ್ಲವಂತೆ, ಇದನ್ನು ಎಗೆ ಉಪಯೋಗಿಸುವುದೆಂದು ತಿಳಿಯಿರಿ,.!

    ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ ಎಂದು ಕರೆಯುತ್ತಾರೆ. ಇದನ್ನು ಸಾರಿನಲ್ಲಿ ಕೆಲವರು ಬಳಸುವುದುಂಟು. ಈ ಬೀಜಗಳನ್ನು ಒಣಗಿಸಿ ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಪ್ರಮುಖವಾಗಿ ಚೀನಿಯರು ಈ ಬೀಜಗಳಿಂದ ತಮ್ಮ ಸಂಪ್ರದಾಯ ಔಷಧಗಳನ್ನು ತಯಾರಿಸುತ್ತಾರೆ.ಈ ಬೀಜಗಳಿಂದ ಸಾಕಷ್ಟು ಪೋಷಕಗಳು ಲಭ್ಯವಾಗುತ್ತವೆ. ಇವುಗಳಲ್ಲಿ ಪ್ರೋಟೀನ್ ನೊಂದಿಗೆ ಮೆಗ್ನೀಶಿಯಂ, ಪೊಟಾಶಿಯಂ, ಫಾಸ್ಪರಸ್ ನಂತಹ ಖನಿಜಗಳು, ಐರನ್, ಜಿಂಕ್…

  • ಸಿನಿಮಾ

    ನಮ್ಮ ಸರ್ಕಾರ ಇದೆ ಎಂದು ಧಮಕಿ ಹಾಕಿದ ಶಾಸಕನಿಗೆ ತಿರುಗೇಟು ನೀಡಿದ ದರ್ಶನ್…

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ನಟರಾದ ದರ್ಶನ್ ಮತ್ತು ಯಶ್ ಸಾಥ್ ನೀಡಿದ್ದಾರೆ. ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆಯ ವೇಳೆ ಜನಸಾಗರವೇ ಹರಿದು ಬಂದಿದ್ದು, ಶಕ್ತಿ ಪ್ರದರ್ಶನದ ಮೂಲಕ ಸುಮಲತಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ನಾನು ಇಲ್ಲಿ ನಿಂತಿದ್ದಕ್ಕೆ ಹಳೆ ಮ್ಯಾಟರ್ ಓಪನ್ ಆಗುತ್ತಿದೆ. ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ, ಅದೂ ಆಗಲಿ, ಅದರಿಂದ ಖುಷಿ,…

  • ಉಪಯುಕ್ತ ಮಾಹಿತಿ

    ಮನುಷ್ಯ ಸತ್ತ ನಂತರ ಮೂಗು ಮತ್ತು ಕಿವಿಗೆ ಹತ್ತಿಯನ್ನು ಇಡುತ್ತಾರೆ ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಮತ್ತು ಶೇರ್ ಮಾಡಿ…

    ನಮ್ಮ ಕಣ್ಣ ಮುಂದಯೇ ಅನೇಕ ಚಿಕ್ಕ ಪುಟ್ಟ ವಿಷಯಗಳು ನಡೆಯುತ್ತಿರುತ್ತವೆ.ಅವನ್ನು ನೋಡಿಯೂ ನೋಡದಂತಯೂ ಇರುತ್ತೇವೆ.ಒಂದು ವೇಳೆ ಗಮನಿಸಿದರೂ ಸಹ ಅದರ ಬಗ್ಗೆ ತಿಳಿದುಕೊಳ್ಳುವ ಗೋಜಿಗೆ ನಾವು ಹೋಗುವುದಿಲ್ಲ.ಏಕೆ ಹೀಗೆ ಮಾಡುತ್ತಾರೆ ಎನ್ನುವ ಕಾರಣ ಗೊತ್ತಿಲ್ಲದಿದ್ರೂ ತಿಳಿದುಕೊಳ್ಳುವ ಯಾವುದೇ ಆಲೋಚನೆ ನಮ್ಮಲ್ಲಿ ಬರುವುದೇ ಇಲ್ಲ. ಇಂತಹ ಅನೇಕ ಚಿಕ್ಕ ಪುಟ್ಟ ವಿಷಯಗಳಲ್ಲಿ ಸತ್ತ ದೇಹದ ಮೂಗಿಗೆ ಮತ್ತು ಕಿವಿಗೆ ಹತ್ತಿ ಇಡುವುದು.ಹೌದು ಹಿಂದೂ ಧರ್ಮದಲ್ಲಿ ಮನುಷ್ಯ ತೀರಿಕೊಂಡ ನಂತರ ಮೃತದೇಹದ ಕಿವಿ ಮತ್ತು ಮೂಗಿಗೆ ಹತ್ತಿ ಇಡುತ್ತಾರೆ. ಇದನ್ನು…

  • ಸ್ಪೂರ್ತಿ

    ಈ 15 ವರ್ಷದ ಬಾಲಕ ತನ್ನ ತಾಯಿಯ ಕಷ್ಟ ನೋಡಲಾರದೆ ಮಾಡಿದ್ದೇನು ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ತನ್ನ ಮಕ್ಕಳು ಎಂದಿಗೂ ಸುಖವಾಗಿರಲಿ ಎಂಬುದಾಗಿ ಬಯಸುವ ತಾಯಿ. ಎಲ್ಲ ಕಷ್ಟವನ್ನು ತಾನೇ ಹೊತ್ತು ಕೊಳ್ಳುತ್ತಾಳೆ ಅಲ್ಲದೆ. ತನ್ನ ಮಕ್ಕಳಿಗೆ ಒಳ್ಳೇದನ್ನೇ ಬಯಸುತ್ತಾಳೆ. ಆದರೆ ಮಕ್ಕಳು ದೊಡ್ಡವರಾದ ಮೇಲೆ ಕೆಲ ಮಕ್ಕಳು ತನ್ನ ತಾಯಿಯನ್ನು ಉತ್ತಮವಾಗಿ ನೋಡಿ ಕೊಂಡರೆ ಮತ್ತೆ ಕೆಲವರು ತಮ್ಮಿಂದ ದೂರ ಇಟ್ಟಿರುತ್ತಾರೆ. ಸತ್ತ ಮೇಲೆ ತಂದೆ ತಾಯಿಯರಿಗೋಸ್ಕರ ಏನೇನೋ ಮಾಡುವ ಬದಲು ಇದ್ದಾಗ ಅವರ ಕಷ್ಟಕ್ಕೆ ಸ್ಪಂದಿಸುವುದೇ ನಿಜವಾದ ಮಕ್ಕಳು. ತನ್ನ ತಾಯಿಯ ಕಷ್ಟ ನೋಡಲಾರದೆ ಈ ೧೫ ವರ್ಷದ ಪೋರ ಮಾಡಿದ್ದೇನು…

  • ಸುದ್ದಿ

    ಪ್ರಾಣಿಗಳು ವಾಸಿಸುವ ಗುಹೆಯೊಳಗೆ ಶಿವಲಿಂಗದ ದರ್ಶನ, ಶಿವಭಕ್ತರ ಯಾತ್ರೆ! ಕರಾವಳಿಯಲ್ಲೊಂದು ವಿಶೇಷ ಗುಹಾ ದೇವಾಲಯ…!

    ಹಿಂದೂ ಸಂಸ್ಕೃತಿ ಎಂದರೆ ಜಗತ್ಪ್ರಸಿದ್ಧ ಸಂಸ್ಕೃತಿ ಎಂಬುದರಲ್ಲಿ ಸಂಶಯವಿಲ್ಲ. ‌ಹಿಂದೂ ಧರ್ಮದ ಆಚರಣೆಗಳು ಯಾವ ರೀತಿ ಜಗತ್ತು ಒಪ್ಪಿಕೊಂಡಿವೆ ಎಂದರೆ ಮನುಷ್ಯರು ಮಾತ್ರವಲ್ಲದೆ ಇಡೀ ಪ್ರಕೃತಿಯೇ ಸನಾತನ ಧರ್ಮದ ಆಚರಣೆಗೆ ಒಳಪಡುತ್ತದೆ. ಕಣ ಕಣದಲ್ಲೂ ದೇವರನ್ನು ಕಾಣುವ ಹಿಂದೂ ಧರ್ಮ, ಕಲ್ಲು, ಮಣ್ಣು, ನೀರು, ಬೆಂಕಿ, ಪ್ರಾಣಿ ಪಕ್ಷಿ, ಗಿಡ ಮರ, ಹೀಗೆ ಎಲ್ಲಾ ಜೀವಿಗಳಲ್ಲೂ ದೇವರನ್ನು ಕಾಣುವ ಧರ್ಮ ಒಂದಿದ್ದರೆ ಅದು ಹಿಂದೂ ಧರ್ಮ ಮಾತ್ರ ಎಂಬುದು ಸ್ಪಷ್ಟ. ಭೂಮಿಯ ಯಾವುದೇ ಮೂಲೆಗೆ ಹೋದರೂ ಅಲ್ಲಿ…