ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟದ ನಂತರ ತಾಂಬೂಲ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಏನು ಲಾಭ: ವೀಳ್ಯದೆಲೆ ಅಥವಾ ವೀಳ್ಯೆಲೆ ಅನೇಕ ಔಷಧಿ ಗುಣಗಳಿಂದ ಕೂಡಿದ್ದು, ಆಯುರ್ವೇದ ವೈದ್ಯರು ಇದನ್ನು ಅಮೃತ ಸಮಾನವಾದ ವನಸ್ಪತಿ ಎಂದು ಗುರುತಿಸಿದ್ದಾರೆ.
ಸಂಸ್ಕೃತದಲ್ಲಿ ನಾಗವಲ್ಲಿ ಎಂದು ಕರೆಯಲ್ಪಡುವ ಇದು ರುಚಿಯಲ್ಲಿ ಕಟು (ಖಾರ), ತಿಕ್ತ (ಕಹಿ), ಮಧುರ (ಸಿಹಿ) ರಸಗಳಿಂದ ಕೂಡಿದ್ದ ಉಷ್ಣ, ತೀಕ್ಷ್ಣ ಹಾಗೂ ಕ್ಷಾರ ಗುಣವುಳ್ಳದ್ದಾಗಿದೆ.
ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ನಾಗವಲ್ಲಿ ವೃಷ್ಯ ಎಂದರೆ ಕಾಮೋತ್ತೇಜಕವಾಗಿದ್ದು, ಬಸ್ತಿರೋಧಕ, ಮೂತ್ರಪಿಂಡ ಹಾಗೂ ಹೃದಯ ರೋಗಗಳಲ್ಲಿ ಹೆಚ್ಚು ಉಪಯುಕ್ತವಾಗುತ್ತದೆ.ತಾಂಬೂಲ ಸೇವಿಸುತ್ತಿದ್ದರು.

ಹಳ್ಳಿಗಳಲ್ಲಿ ಊಟದ ನಂತರ ತಾಂಬೂಲ ಸೇವನಾ ಸಾಮಾನ್ಯ, ಹಳ್ಳಿಗರಿಗೆ ಅದರ ಲಾಭವೂ ಗೊತ್ತಿದೆ, ಊಟದ ನಂತರ ತಾಂಬೂಲ ಸೇವನೆಯಿಂದ ಜೀರ್ಣಕ್ರೀಯೆ ಸುಲಭವಾದರೆ, ಹಲ್ಲುಗಳು ಗಟ್ಟಿಯಾಗುತ್ತವೆ ಎನ್ನುವುದು ಹಳ್ಳಿಗಳಲ್ಲಿ ಪ್ರತಿಯೊಬ್ಬರಿಗೂ ತಿಳಿದಿರುವ ಸಾಮಾನ್ಯ ಸಂಗತಿ.

ಇಷ್ಟೆ ಅಲ್ಲ ತಾಂಬೂಲ ಸೇವನೆಯಿಂದ ನಿಮಗೆ ಗೊತ್ತಿದರ ಅನೇಕ ಲಾಭಗಳೂ ಇವೆ. ಮಧುಮೇಹ ರೋಗವುಳ್ಳವರಿಗೆ ತಾಂಬೂಲ ಸೇವನೆ ಒಂದು ಪಥ್ಯ ಅಭ್ಯಾಸ. ದಿನದಲ್ಲಿ ಎರಡು ಅಥವಾ ಮೂರು ಸಲ, ಊಟವಾದ ನಂತರ ತಾಂಬೂಲ ಸೇವಿಸುವುದು ಹಿತಕರ ಹಾಗೂ ಆರೋಗ್ಯದಾಯಕ.
ಪ್ರತಿದಿನ ತಾಂಬೂಲ ಸೇವನೆ ಮಾಡುವುದರಿಂದ ಶರೀರದ ಉಷ್ಣತೆ ಸಮತೋಲನದಲ್ಲಿದ್ದು, ಮುಖ ಮತ್ತು ಚರ್ಮದ ಕಾಂತಿ ಹೆಚ್ಚಾಗುತ್ತದೆ. ಮನಸ್ಸು ಪ್ರಸನ್ನಗೊಳ್ಳುತ್ತದೆ, ಬುದ್ಧಿ ಚುರುಕಾಗುತ್ತದೆ. ಮುಪ್ಪು ಮುಂದೂಡಲ್ಪಟ್ಟು ಯೌವನ ದೀರ್ಘಕಾಲ ರಕ್ಷಿಸಲ್ಪಡುತ್ತದೆ.

ಇವೆಲ್ಲಕ್ಕಿಂತ ಮೇಲಾಗಿಸ್ತ್ರೀ-ಪುರುಷರಿಬ್ಬರಿಗೂ ತಾಂಬೂಲ ಉತ್ತಮ ಕಾಮೋತ್ತೇಜಕವಾಗಿದ್ದು, ಮುದ ನೀಡುತ್ತದೆ. ವೀಳ್ಯದ ಎಳೆಯಲ್ಲಿ ಕಾಮವನ್ನು ಉತ್ತೇಜಿಸುವ ಅಂಶಗಳಿದ್ದು, ಹಿಂದಿನ ಕಾಲದಲ್ಲಿ ಪತಿ – ಪತ್ನಿಯರು ಮಲಗುವ ಮುನ್ನ ಸಾಮಾನ್ಯವಾಗಿ ತಾಂಬೂಲ ಸೇವಿಸುತ್ತಿದ್ದರು.
ಮಧುಮೇಹದಲ್ಲಿ ಬಾಯಾರಿಕೆ ಹಾಗೂ ಬಾಯಿಂದ ದುರ್ಗಂಧ, ವಾಸನೆ ಇವು ಸಾಮಾನ್ಯ.

ಈ ತೊಂದರೆಗಳ ನಿವಾರಣೆಗೆ ತಾಂಬೂಲ ಸೇವನೆ ಉತ್ತಮ ಉಪಚಾರ ಎನ್ನಲಾಗಿದೆ. ತಾಂಬೂಲ ಸೇವನೆಯನ್ನು ಯಾವಾಗಲೂ ಊಟದ ನಂತರ ಮಾಡಬೇಕು. ಎಲೆ, ಅಡಿಕೆ, ಸುಣ್ಣಗಳನ್ನು ಚೆನ್ನಾಗಿ ಅಗಿದ ಮೇಲೆ ಸುಗಂಧ ದ್ರವ್ಯಗಳಾದ ಲವಂಗ, ಜಕಾಯಿ, ಗಂಧ ಮೆಣಸು, ಏಲಕ್ಕಿ, ನಾಗಕೇಸರಿ ಮುಂತಾದ ದ್ರವಗಳನ್ನು ಜತೆಗೆ ಸೇರಿಸಿಕೊಂಡು, ತಾಂಬೂಲವನ್ನು ಚೆನ್ನಾಗಿ ಅಗಿಯಬೇಕು. ಇದು ಬಾಯಿಯ ರುಚಿಯನ್ನು
ಹೆಚ್ಚು ಮಾಡುವುದೇ ಅಲ್ಲದೆ ಮನಸ್ಸಿಗೆ ಆಹ್ಲಾದವನ್ನು ನೀಡುತ್ತದೆ. ಸಮೋತ್ತೇಜಕವಾಗಿದ್ದು, ಯೌವನವನ್ನು ಕಾಪಾಡುತ್ತದೆ.
ತಾಂಬೂಲ ಸೇವನೆಯಿಂದ ಆರೋಗ್ಯ ವೃದ್ಧಿಗೊಳ್ಳುತ್ತದೆ. ತಾಂಬೂಲವು ಬಾಯಿಗೆ ನಿರ್ಮಲತೆ ಮತ್ತು ಪರಿಮಳ ಕೊಟ್ಟು ಮುಖದಲ್ಲಿ ಕಾಂತಿ ಮತ್ತು ಪ್ರಸನ್ನತೆಯನ್ನುಂಟುಮಾಡುತ್ತದೆ. ದವಡೆ ಹಲ್ಲು, ವಸಡುಗಳಿಗೆ ಬಲ, ನಾಲಿಗೆಗೆ ರುಚಿ ಕೊಡುತ್ತದೆ. ಸ್ವರವನ್ನು ಸ್ವಚ್ಛಗೊಳಿಸಿ, ಮಲಬದ್ಧತೆ ನಿವಾರಿಸುತ್ತದೆ. ಬಾಯಿ ಮತ್ತು
ಗಂಟಲುಗಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿ ನೆಗಡಿ, ಗಂಟಲು ನೋವು ಮುಂತಾದ ರೋಗಗಳು ಉಂಟಾಗದಂತೆ ತಡೆಯುತ್ತದೆ.

ಜೀರ್ಣಾಂಗಗಳನ್ನು ಉದ್ದೀಪನಗೊಳಿಸಿ ಅಗ್ನಿಮಾಂದ್ಯ, ಅಜೀರ್ಣ ರೋಗಗಳನ್ನು ನಿವಾರಿಸುತ್ತದೆ.
ಗರದಿಕ್ಷ ಗುಲ್ಮ ಮುಂತಾದ ರೋಗಗಳಿಗೆ ಒಳ್ಳೆಯದು.
ತಾಂಬೂಲದ ಮೂರನೆ ಮುಖ್ಯ ಘಟಕವೇ ಸುಣ್ಣ. ಸುಧಾ, ಕ್ಷಾರ ಎಂದು ಕರೆಯಲ್ಪಡುವ ಇದು ತೀಕ್ಷ್ಣ ಉಷ್ಣ, ಕ್ಷಾರ ಗುಣಗಳಿಂದ ಕೂಡಿದ್ದು, ವಾತ ಕಫಾ ದೋಷಗಳನ್ನು
ನಾಶಮಾಡುತ್ತದೆ.

ದೇಹದಲ್ಲಿ ಕೊಬ್ಬಿನ ಅಂಶವನ್ನು ಕಡಿಮೆ ಮಾಡುವ ಗುಣವುಳ್ಳ ಸುಣ್ಣ ಒಳ್ಳೆಯ ಜೀರ್ಣಕಾರಕ ಹಾಗೂ ಕ್ರಿಮಿನಾಶಕವಾಗಿದೆ. ಮೂಳೆ ಮತ್ತು ದಂತಗಳ
ಬೆಳವಣಿಗೆ ಮತ್ತು ಪೋಷಣೆಗೆ ಸಹಾಯ ಮಾಡುತ್ತವೆ. ತಾಂಬೂಲದ ಜತೆ ಉಪಯೋಗಿಸುವ ಲವಂಗ, ಏಲಕ್ಕಿ, ಜಾಕಾಯಿ, ಜಾಪತ್ರೆ, ಪಚ್ಚ ಕರ್ಪೂರ ಮುಂತಾದ ಸುಗಂಧ
ದ್ರವ್ಯಗಳು ತಾಂಬೂಲಕ್ಕೆ ಪರಿಮಳ ಮತ್ತು ರುಚಿಯನ್ನು ಕೊಡುವುದೇ ಅಲ್ಲದೆ ಅನೇಕ ಉತ್ತಮ ಔಷದ ಗುಣಗಳನ್ನು ಹೊಂದಿದ್ದು, ಆರೋಗ್ಯ ಸುಧಾರಣೆಗೆ ಪೂರಕವಾಗುತ್ತವೆ.
ನಿಮ್ಮ ಆರೋಗ್ಯಕ್ಕೆ
ಇಂತಹ ಅಮೂಲ್ಯ ಔಷದ ಗುಣಗಳಿಂದ ಕೂಡಿರುವ ತಾಂಬೂಲ ಸೇವನೆಗೆ ನಮ್ಮ ಪ್ರಾಚೀನ ಆಯುರ್ವೇದ ವೈದ್ಯಶಾಸ್ತ್ರ ಬಹಳ ಮಹತ್ವ ನೀಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿನ್ನ ಜನಸಾಮಾನ್ಯರಿಗೆ ಕೈಗೆಟುಕುತ್ತಿಲ್ಲ. ನಿರಂತರವಾಗಿ ಬಂಗಾರದ ಬೆಲೆ ಏರಿಕೆಯಾಗ್ತಿದೆ. ಸತತ 6ನೇ ದಿನವೂ ಬಂಗಾರದ ಬೆಲೆ ಹೆಚ್ಚಾಗಿದೆ. ಚಿನ್ನ ಈವರೆಗೆ ಶೇಕಡಾ 25 ರಷ್ಟು ಏರಿಕೆ ಕಂಡಿದ್ದು, ಸೋಮವಾರ 10 ಗ್ರಾಂ ಚಿನ್ನದ ಬೆಲೆ 39,196 ರೂಪಾಯಿಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಶೇಕಡಾ 1ರಷ್ಟು ಹೆಚ್ಚಳ ಕಂಡಿದೆ. ಸೋಮವಾರ ಬೆಳ್ಳಿ ಬೆಲೆ ಕೆ.ಜಿ.ಗೆ 45,058 ರೂಪಾಯಿಗೆ ಮಾರಾಟವಾಗ್ತಿದೆ. ಶುಕ್ರವಾರ ಕೆ.ಜಿ. ಬೆಳ್ಳಿ 45,148 ರೂಪಾಯಿಯಿತ್ತು. ಇದು 2016ರ ನಂತ್ರ ಗರಿಷ್ಠ…
ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ. ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ…
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್ಪಿಎಫ್ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯ ನಂತರ ದಾಳಿಯ ಹೊಣೆ ಹೊತ್ತ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ದಾಳಿಗೆ ಮುನ್ನ ಮಾತನಾಡಿದ ಕೊನೆಯ ವಿಡಿಯೊ ವೈರಲ್ ಆಗಿದೆ. ಹಿಂದೆ ಜೈಶ್ ಸಂಘಟನೆಯ ಧ್ವಜವನ್ನು ಹೊಂದಿರುವ ವಿಡಿಯೋದಲ್ಲಿ ದಕ್ಷಿಣ ಕಾಶ್ಮೀರದ ಕಾಕಪೊರದ ಆದಿಲ್ ಅಲಿಯಾಸ್ ವಕಾಸ್ ಎಂಬ ಉಗ್ರ ಮಾತನಾಡಿದ್ದಾನೆ. ಅವನ ಸುತ್ತ ಹಲವು ಅತ್ಯಾಧುನಿಕ…
ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ. ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು. ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…
ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ. ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ…
ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮಗ ಅಭಿಷೇಕ್ ಎಂದರೆ ಅಚ್ಚುಮೆಚ್ಚು, ಮಗನ ಮದುವೆ ಮಾಡಬೇಕು, ಅವನ ಮೊದಲ ಚಿತ್ರವನ್ನು ನೋಡಬೇಕು ಎಂದು ಕನಸು ಕಂಡಿದ್ದರು. ಅಂಬರೀಶ್ ಅವರಿಗೆ ಇದ್ದಿದ್ದು ಎರಡೇ ಆಸೆ. ಒಂದು ಮುದ್ದಿನ ಮಗ ಅಭಿಷೇಕ್ ಅವರ ಮದುವೆ ಮಾಡ್ಬೇಕು, ಇನ್ನೊಂದು ಮಗನ ಮೊದಲ ಸಿನಿಮಾ ಅಮರ್ ಚಿತ್ರವನ್ನು ನೋಡಬೇಕು ಅಂತಾ. ರೆಬೆಲ್ ಸ್ಟಾರ್ ಎಂದಿಗೂ ಅವರ ಮಗನಿಗೆ ನೀನು ಹೀಗೆ ಇರಬೇಕು, ಇಂತದ್ದೆ ಮಾಡಬೇಕು ಎಂದು ಹೇಳಿದವರಲ್ಲ. ಅಂಬರೀಶ್ ಅವರ ಹಾಗೆ…