ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ಯಾಂಕ್ ಗ್ರಾಹಕರಿಗೆ ಶುಭ ಸುದ್ದಿ ನೀಡಿರುವ ಆರ್ಬಿಐ.
ಮೊಬೈಲ್ ನಂಬರ್ ವರ್ಗಾವಣೆಯಂತೆ ಈಗ ನಿಮ್ಮ ಬ್ಯಾಂಕ್ ಖಾತೆ ವರ್ಗಾವಣೆಗೂ ಮುಂದಾಗಿದೆ. ಅಂದರೆ ತಮಗಿಷ್ಟ ಬಂದ ಬ್ಯಾಂಕ್ನಲ್ಲಿ ಖಾತೆ ಹೊಂದಬಹುದಾಗಿದೆ.
ಅಂದುಕೊಂಡಂತೆ ನಡೆದರೆ ಗ್ರಾಹಕರು ತಮ್ಮ ಬ್ಯಾಂಕ್ ಖಾತೆಗಳನ್ನು ಇನ್ನೊಂದು ಬ್ಯಾಂಕ್ಗೆ ವರ್ಗಾಹಿಸಿಕೊಳ್ಳಬಹುದಾಗಿದೆ. ಯಾವುದೇ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಬದಲಾಯಿಸಿಕೊಳ್ಳುವ ಮೂಲಕ ತಮ್ಮ ಅನುಕೂಲತೆಗೆ ತಕ್ಕಂತೆ ಬ್ಯಾಂಕ್ಗಳ ವರ್ಗಾವಣೆಗೆ ಅವಕಾಶ ಕಲ್ಪಿಸುವ ಯೋಜನೆ ಇದಾಗಿದೆ.
ಗ್ರಾಹಕರು ಚಾಲ್ತಿಯಲ್ಲಿರುವ ತಮ್ಮ ಖಾತೆಯನ್ನು ತಮಗೆ ಇಷ್ಟಬಂದ/ ಹತ್ತಿರದ ಬ್ಯಾಂಕ್ ಶಾಖೆಗಳಿಗೆ ವರ್ಗಾಹಿಸಿಕೊಳ್ಳಬಹುದಾಗಿದೆ.
ನಿಮ್ಮ ಮೊಬೈಲ್ ಸೇವಾ ಕಂಪನಿಯಂತೆ (ಮೊಬೈಲ್ ಆಪರೇಟರ್) ನಿಮ್ಮ ಬ್ಯಾಂಕ್ ಅನ್ನು ನೀವು ಬದಲಾಯಿಸಿದರೂ ಕೂಡಾ ನಿಮ್ಮ ಹಳೆಯ ಬ್ಯಾಂಕ್ ಖಾತೆ ಸಂಖ್ಯೆಯನ್ನು ಹೊಂದಲು ಸಾಧ್ಯವಾಗುತ್ತದೆ.
ಈ ಬಗ್ಗೆ ಮಾತನಾಡಿರುವ ರಿಸರ್ವ್ ಬ್ಯಾಂಕ್ ಡೆಪ್ಯುಟಿ ಗವರ್ನರ್ ಎಸ್.ಎಸ್.ಮುಂದ್ರ, ಭಾರತದಲ್ಲಿ ಬ್ಯಾಂಕ್ ಖಾತೆಯ ಪೋರ್ಟಬಿಲಿಟಿ ಪರಿಚಯಿಸಲು ಆರ್ಬಿಐ ಸಿದ್ದತೆ ನಡೆಸಿದೆ. ಪಾವತಿಯ ವ್ಯವಸ್ಥೆಯಲ್ಲಿನ ತಂತ್ರಜ್ಞಾನದ ಪ್ರಗತಿಗಳೊಂದಿಗೆ ಖಾತೆಯ ವರ್ಗಾವಣೆಗೆ ಚಿಂತನೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬ್ಯಾಂಕ್ ಎಂಪ್ಲಾ ಯೀಸ್ ಫೆಡರೇಷನ್ ಅಧ್ಯಕ್ಷ ವಸಂತ ಪೈ, ಕೇಂದ್ರದ ಈ ನಿರ್ಧಾರ ಉತ್ತಮವಾಗಿದೆ. ಇದರಿಂದ ತಮಗಿಷ್ಟ ಬಂದ ಬ್ಯಾಂಕ್ನಲ್ಲಿ ಖಾತೆ ಹೊಂದಬಹುದಾಗಿದೆ. ಇದರ ಜತೆಗೆ ಕಟ್ಟುನಿಟ್ಟಿನ ಷರತ್ತು ಜಾರಿಗೊಳಿಸಬೇಕು.
ಗ್ರಾಹಕರನ್ನು ಸೆಳೆಯೋಕೆ ಬ್ಯಾಂಕ್ಗಳು ಆಮಿಷ ಒಡ್ಡಬಹುದು. ಇಲ್ಲವಾದರೆ ಭ್ರಷ್ಟಾಚಾರ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.
ಅರವತ್ತರ ವಯಸ್ಸಿನಲ್ಲೂ ಕಟ್ಟುಮಸ್ತಾಗಿದ್ದು ಸೂಪರ್ ಮಾಡೆಲ್ನಂತಿರುವ ದಿನೇಶ್ ಮೋಹನ್ ಈಗ ಹಲವರ ಗಮನ ಸೆಳೆಯುತ್ತಿದ್ದಾರೆ. ಹರ್ಯಾಣ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್ ಮೋಹನ್ ಅತಿಯಾದ ತೂಕದಿಂದ ಬಳಲಿ ಹಾಸಿಗೆ ಹಿಡಿದಿದ್ದರು. ಅಲ್ಲಿಂದ ಚೇತರಿಸಿಕೊಂಡರೂ ದಢೂತಿ ದೇಹ ಇಳಿಸಿಕೊಳ್ಳಲು 50 ಕೆ.ಜಿ. ತೂಕ ಕಡಿಮೆ ಮಾಡಿಕೊಂಡ ಅವರು 2016ರಲ್ಲಿ ಫೋಟೋಶೂಟ್ ಮಾಡಿದ ಬಳಿಕ ಅಂಗಸೌಷ್ಠವ ರಕ್ಷಣೆ ನಿರಂತರವಾಗಿಸಿಕೊಂಡರು. ಈಗ ಅವರಿಂದ ಯುವಕರು ಮಾತ್ರವಲ್ಲ ವಯಸ್ಸಾದವರೂ ಸೆಳೆಯಲ್ಪಡುತ್ತಿದ್ದಾರೆ. ಯಾವ ವಯಸ್ಸಿನಲ್ಲಿ ಬೇಕಿದ್ದರೂ ಫಿಟ್ನೆಸ್ ಕಾಪಾಡಿಕೊಳ್ಳಬಹುದು ಎಂಬುದಕ್ಕೆ ಅವರು…
ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ. ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ….
ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ… ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ…
ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್ ಆ್ಯಪ್ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ 6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್ ಆಫ್ ಕಂಪನೀಸ್ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…
ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.