ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.

ಬೇಸಿಗೆಯ ಬಿಸಿಲಿನ ಝಳದಿಂದ ತತ್ತರಿಸಿ ಹೋದವರ ಶರೀರಕ್ಕೆ ತಂಪು ನೀಡಿ ದೇಹದ ಸಮತೋಲನವನ್ನು ಕಾಪಾಡುತ್ತದೆ.ಯಾರೇ ಕುಡಿದರೂ ಯಾವುದೇ ಅಡ್ಡಪರಿಣಾಮಗಳಿಲ್ಲ. ದ್ವಿತೀಯ ಮಹಾಯುದ್ಧದ ಸಮಯದಲ್ಲಿ ಪೆಸಿಫಿಕ್ ಸಾಗರ ಪ್ರದೇಶಗಳಲ್ಲಿ, ಗಾಯಗೊಂಡ ಯೋಧರಿಗೆ ತುರ್ತು ಪ್ಲಾಸ್ಮಾ ನೀಡಿಕೆಗಾಗಿ ನೇರವಾಗಿ ಎಳನೀರನ್ನು ಸೇರಿಸುತ್ತಿದ್ದರೆಂಬುದು ಆಶ್ಚರ್ಯಕರವಾದರೂ ಸತ್ಯವಾಗಿದೆ.

ಆದ್ದರಿಂದ ಶಿಶುಗಳಲ್ಲಿ ಪಚನಕ್ರಿಯೆಗೆ ಯಾ ಕರುಳಿನ ಸಮಸ್ಯೆಗೆ ತುಂಬಾ ಪರಿಣಾಮಕಾರಿಯಾಗಿದೆ. ಎಳನೀರು ದಿಢೀರ್ ಚೇತೋಹಾರಿ ಮತ್ತು ಅತ್ಯಂತ ಶಕ್ತಿದಾಯಕವಾದ್ದರಿಂದ ಅಶಕ್ತರಿಗೆ ಹೊಸ ಚೈತನ್ಯವನ್ನು ತುಂಬುತ್ತದೆ ಮತ್ತು ಹಣ್ಣಿನ ರಸಗಳಿಗಿಂತಲೂ ಹೆಚ್ಚು ಆರೋಗ್ಯಕರವಾಗಿದೆ.ದಿನಪೂರ್ತಿ ಲವಲವಿಕೆಯಿಂದ ಕಾರ್ಯಮಗ್ನವಾಗಿರಲು ಉಪಯುಕ್ತ.ಸಂಪೂರ್ಣವಾಗಿ ಔಷಧೀಯ ಗುಣಧರ್ಮಗಳನ್ನು ಒಳಗೊಂಡಿರುವುದರಿಂದ ಎಳನೀರನ್ನು ನಿಯಮಿತವಾಗಿ ಬಳಸಬಹುದು.

ದೂರಪ್ರಯಾಣಿಸುವಾಗ ಎಳನೀರು ಕೆಡುವ ಭಯವಿಲ್ಲ, ಆದರೂ ಗೊಂಚಲಿನಿಂದ ಬೇರ್ಪಡಿಸಿದ 24 ರಿಂದ 48 ಗಂಟೆಗಳವರೆಗೆ ಮಾತ್ರ
ಅದರ ತಾಜಾತನವಿರುತ್ತದೆ. ನಂತರ ಫ್ರಿಜ್ನಲ್ಲಿ ಇರಿಸಿದರೂ ತಾಜಾತನ ನಾಶವಾಗುತ್ತದೆ. ಎಳನೀರು ಆಹ್ಲಾದಕರ ಪಾನೀಯ ಮತ್ತು ಒಂದು ಬಾಳೆ ಹಣ್ಣಿನಲ್ಲಿರುವುದಕ್ಕಿಂತ ಹೆಚ್ಚಿನ ಪ್ರಮಾಣದ ಪೊಟಾಷಿಯಂ ಒಳಗೊಂಡಿದೆ. ಎಳನೀರು ಕರುಳಿನ ಕಾರ್ಯವನ್ನು ಮತ್ತು ಪಚನಶಕ್ತಿಯನ್ನು
ಹೆಚ್ಚಿಸುತ್ತದೆ.

ಹೊಟ್ಟೆಯಲ್ಲಿರುವ ಕ್ರಿಮಿಗಳನ್ನು ನಾಶಮಾಡುತ್ತದೆ.ಎಳನೀರಿನಲ್ಲಿರುವ ಸಲೈನ್ ಮತ್ತು ಅಲ್ಬುಮಿನ್ ಕಾಲರಾ ರೋಗಕ್ಕೆ ಅತ್ಯುಪಯುಕ್ತ ಔಷಧಿ.ಖನಿಜ ವಿಷವನ್ನು ದೇಹದಿಂದ ಹೊರದಬ್ಬುತ್ತದೆ. ಎಳನೀರಿನ ಔಷಧೀಯ ಗುಣಗಳು-ಮೂತ್ರಮಲ ಮತ್ತು ಮೂತ್ರದಸೋಂಕನ್ನು ತಡೆಗಟ್ಟುವ ಗುಣ ಹೊಂದಿರುವ ಕಾರಣ ಕಿಡ್ನಿಕಲ್ಲುಗಳ ಸಂಭವವನ್ನು ಕಡಿಮೆ ಮಾಡುತ್ತದೆ. ಆಹ್ಲಾದ, ಶಕ್ತಿನೀಡವ ಪಾನೀಯಗಳಿಗಿಂತ ಕಡಿಮೆ ಸೋಡಿಯಂ ಹೊಂದಿದೆ. ಹೃದಯಕ್ಕೆ ಸಂಬಂಧಿಸಿದ ತೊಂದರೆಗಳು ಮತ್ತು ದೇಹದ ಜಲಾಂಶ ನಷ್ಟವಾಗುವಿಕೆಯನ್ನು ಕಡಿಮೆ ಮಾಡುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ಸ್ಟಾರ್ ನಟಿಯ ವಿರುದ್ಧ ದೂರು ದಾಖಲಾಗಿದೆ. ಕನ್ನಡ ಸಿನಿರಸಿಕರನ್ನ ಮಳೆಯಲ್ಲಿ ಮಿಂದೇಳಿಸಿದ ನಟಿ ಹೋಟೆಲ್ ಬಿಲ್ ಕಟ್ಟದೆ ಕದ್ದು ಓಡಿ ಹೋಗಿರುವುದರಿಂದ ದೂರು ನೀಡಲಾಗಿದೆ. ಅಶೋಕ ಹೋಟೆಲ್ ಕಡೆಯಿಂದ ಪೂಜಾಗಾಂಧಿ ವಿರುದ್ಧ ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಪೂಜಾಗಾಂಧಿ ಒಟ್ಟು 4.5 ಲಕ್ಷ ಬಿಲ್ ಮಾಡಿ ಎಸ್ಕೇಪ್ ಆಗಿದ್ದರು. ದೂರು ದಾಖಲಾದ ಕೂಡಲೇ ಪೊಲೀಸರು ನಟಿಯನ್ನು ಠಾಣೆಗೆ ಕರೆಸಿದ್ದಾರೆ. ಬಳಿಕ ಪೊಲೀಸರ ಸಮ್ಮುಖದಲ್ಲಿಯೇ ನಟಿ ಎರಡು ಲಕ್ಷ ರೂ….
ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….
ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.
ಈ ಹಿಂದೆ ಮಹಿಳೆಯರ ಸುರಕ್ಷತೆಗಾಗಿ ಉತ್ತರ ಪ್ರದೇಶದಲ್ಲಿ ಪಿಂಕ್ ಬಸ್ ರೋಡಿಗೆ ಇಳಿದಿವೆ. ಬೆಂಗಳೂರಿನಲ್ಲಿ ಇಂದಿರಾ ಸಾರಿಗೆ ಆಯಿತು ಇದೀಗ ಪಿಂಕ್ ಆಟೋ ಮಹಿಳೆಯಾರ ಸುರಕ್ಷತೆಗಾಗಿ ರಸ್ತೆಗಿಳಿಯಲಿವೆ.
ಅಮೆರಿಕದ ಗೊಡಾರ್ಡ್ ನಗರದ ಪ್ರಾಥಮಿಕ ಶಾಲೆಯ ಏಳು ಶಿಕ್ಷಕಿಯರು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಏಳು ಶಿಕ್ಷಕಿಯರು 15 ರಿಂದ 1 ತಿಂಗಳ ಆಸುಪಾಸಿನಲ್ಲಿ ಏಕಕಾಲದಲ್ಲಿ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲಾ ಮಹಿಳಾ ಸಹದ್ಯೋಗಿಗಳು ಏಕಕಾಲದಲ್ಲಿ ತಾಯಿ ಆಗುತ್ತಿದ್ದೇವೆ. ಏಳು ಶಿಕ್ಷಕಿಯರು ಒಂದೇ ಬಾರಿ ಗರ್ಭಿಣಿ ಆಗಬೇಕೆಂಬುವುದು ದೇವರ ಇಚ್ಛೆ. ಶಿಕ್ಷಕಿ ಟಿಫನಿ ಎಂಬವರು ಮೂರನೇ ಬಾರಿ ಗರ್ಭಿಣಿಯಾಗಿದ್ದು, ಅವರಿಗೆ 9 ಮತ್ತು 7 ವರ್ಷದ ಮಕ್ಕಳಿವೆ ಎಂದು ಶಿಕ್ಷಕಿ ಕೈಟಿ ಸಂತಸ ವ್ಯಕ್ತಪಡಿಸುತ್ತಾರೆ. ನನ್ನ 20 ವರ್ಷದ…
ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…