ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.
ಶೈಕ್ಷಣಿಕ ಕ್ಷೇತ್ರ ಎನ್ನವುದು ದಿನೇ ದಿನೇ ಬೆಳೆಯುತ್ತಿದೆ. ವಿದ್ಯಾರ್ಥಿಗಳಿಗೆ ತಮ್ಮ ಕೋರ್ಸ್ಗಳಿಗೆ ವಿಪುಲ ಆಯ್ಕೆಗಳಿದ್ದು, ಔದ್ಯೋಗಿಕ ಅವಕಾಶಗಳಿಗೂ ಕೊರತೆ ಇಲ್ಲ. ಆದರೆ ಕೆಲವೊಂದು ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ತಮ್ಮ ಆಯ್ಕೆಯಲ್ಲಿ ಎಡವುತ್ತಿದ್ದಾರೆ. ಕೋರ್ಸ್ ಮುಗಿದ ಬಳಿಕ ಉದ್ಯೋಗವಿಲ್ಲ ಎಂದು ಕೊರಗುತ್ತಾರೆ. ಹೀಗಾಗಿ ವಿದ್ಯಾರ್ಥಿಗಳು ಎಂದಿಗೂ ಕ್ರೇಝ್ನ ಹಿಂದೆ ಹೋಗದೆ ಅವಕಾಶಗಳ ಕುಳಿತು ತಿಳಿದುಕೊಳ್ಳುವುದು ಅಗತ್ಯ .
ಪಿಯುಸಿ :-
ಹಿಂದೆ ಒಂದು ಕಾಲವಿತ್ತು. ಎಸೆಸೆಲ್ಸಿ ಬಳಿಕ ನೇರವಾಗಿ ಪಿಯುಸಿಗೆ ಹೋಗುತ್ತಿದ್ದರು. ಆಗ ಆಯ್ಕೆಗಳು ಕಡಿಮೆ ಇತ್ತು. ಯಾವುದಾದರೊಂದು ಕೋರ್ಸ್ ಮುಗಿಸಿ ಶಿಕ್ಷಣ ಮುಂದುವರಿಸುತ್ತಿದ್ದರು. ಆದರೆ ಇಂದು ಹಾಗಿಲ್ಲ. ಪಿಯುಸಿಯಲ್ಲಿ ಲಭ್ಯವಿರುವ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗಗಳಲ್ಲೇ ಹಲವು ಆಯ್ಕೆಗಳಿವೆ. ಇವುಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಎಚ್ಚರಿಕೆ ಅಗತ್ಯ.
ವಿದ್ಯಾರ್ಥಿಗಳಿಗೆ ಪಿಯುಸಿಯ ಆಯ್ಕೆ ಎನ್ನುವುದು ಕ್ರೇಝ್ ಆಗಿಬಿಟ್ಟಿದೆ. ಪಿಯುಸಿ ಸೈನ್ಸ್ ಎಂದು ಹೆಮ್ಮೆಯಿಂದ ತಿರುಗುತ್ತಿದ್ದಾರೆ. ಆದರೆ ಸೈನ್ಸ್ ತೆಗೆದುಕೊಂಡವರಿಗೆ ಎಲ್ಲರಿಗೂ ಉದ್ಯೋಗ ದೊರಕುತ್ತದೆ ಎಂದು ಹೇಳುವಂತಿಲ್ಲ. ಕೆಲವೊಂದು ಸಂದರ್ಭದಲ್ಲಿ ನಮ್ಮ ಆರ್ಥಿಕ ಸ್ಥಿತಿಯೂ ನಮ್ಮ ಓದನ್ನು ಮುಂದುವರಿಸಲು ಬಿಡುವುದಿಲ್ಲ. ಈ ಎಲ್ಲ ಬೆಳವಣಿಗೆಗಳ ಕುರಿತು ಆಲೋಚನೆ ಮಾಡಿಯೇ ನಮ್ಮ ಮುಂದಿನ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಅಧ್ಯಾಪಕ ವೃತ್ತಿಗೆ ತೆರಳುವವರಿಗೆ ಪಿಯುಸಿ ಉತ್ತಮ ಆಯ್ಕೆಯಾಗುತ್ತದೆ. ಜತೆಗೆ ವೈದ್ಯಕೀಯ, ಎಂಜಿನಿಯರಿಂಗ್ ಕ್ಷೇತ್ರಕ್ಕೂ ಅದು ಬೇಕಾಗುತ್ತದೆ. ಪಿಯುಸಿಯಲ್ಲಿ ವಾಣಿಜ್ಯವನ್ನು ಆಯ್ಕೆ ಮಾಡಿಕೊಂಡರೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶವಿದೆ. ಈ ರೀತಿಯ ಆಲೋಚನೆ ಅಗತ್ಯವಾಗಿದೆ.
ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ :-
ಇಂದು ತಾಂತ್ರಿಕ ಶಿಕ್ಷಣ ಎನ್ನುವುದು ವಿಪುಲ ಉದ್ಯೋಗಾವಕಾಶವನ್ನು ಸೃಷ್ಟಿಸುತ್ತಿದೆ. ಹೀಗಾಗಿ ಐಟಿಐ ಹಾಗೂ ಡಿಪ್ಲೊಮಾ ಕೋರ್ಸ್ಗಳ ಕುರಿತು ಹೆಚ್ಚಿನ ಒಲವು ತೋರಬೇಕಿದೆ. ಈ ಕೋರ್ಸ್ಗಳಿಗೆ ಎಂಜಿನಿಯರಿಂಗ್ ಕೋರ್ಸ್ನಷ್ಟೇ ಮಹತ್ವವಿದೆ. ಜತೆಗೆ ಉದ್ಯೋಗವೂ ಅಷ್ಟೇ ಶೀಘ್ರದಲ್ಲಿ ಸಿಗುತ್ತದೆ. ಡಿಪ್ಲೊಮಾದಲ್ಲಿ ಸಿವಿಲ್, ಮೆಕ್ಯಾನಿಕಲ್, ಪ್ಲಂಬಿಂಗ್, ಇಲೆಕ್ಟ್ರಿಕಲ್ ಹೀಗೆ ಅನೇಕ ಆಯ್ಕೆಗಳಿವೆ. ಜತೆಗೆ ಅತಿ ಕಡಿಮೆ ವೆಚ್ಚದಲ್ಲಿ ಈ ಕೋರ್ಸ್ಗಳನ್ನು ಪೂರ್ತಿಗೊಳಿಸಬಹುದಾಗಿದೆ. ಸರಕಾರಿ ಕಾಲೇಜುಗಳಲ್ಲಿ ಈ ಕೋರ್ಸ್ಗಳು ಉಚಿತವಾಗಿಯೂ ಸಿಗುತ್ತವೆ. ಹೀಗಾಗಿ ಯಾವ್ಯಾವ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಳು ಮಾಡುವುದಕ್ಕಿಂತ ಇಂತಹ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಳ್ಳುವುದೇ ಉತ್ತಮ.
ಔದ್ಯೋಗಿಕ ಕೋರ್ಸ್ಗಳು :-
ಇದರ ಜತೆಗೆ ಹಲವಾರು ಔದ್ಯೋಗಿಕ ಕೋರ್ಸ್ಗಳಿವೆ. ಅವರ ಬೇಡಿಕೆಗಳಿಗ ನುಗುಣವಾಗಿ ಅವುಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ನರ್ಸಿಂಗ್ ಕೋರ್ಸ್ಗಳು, ಪ್ಲಂಬಿಂಗ್, ಟೈಲರಿಂಗ್, ಹೊಟೇಲ್ ಮ್ಯಾನೇಜ್ಮೆಂಟ್, ಟೆಲಿಕಮ್ಯೂನಿಕೇಶನ್, ಹೀಗೆ ವಿವಿಧ ಕೋರ್ಸ್ಗಳನ್ನು ಆಯ್ಕೆಮಾಡಿಕೊಳ್ಳಬಹುದಾಗಿದೆ.
ಕಂಪ್ಯೂಟರ್ ಶಿಕ್ಷಣ :-
ಇಂದು ಪ್ರತಿಯೊಂದು ಕ್ಷೇತ್ರಕ್ಕೂ ಕಂಪ್ಯೂಟರ್ ಶಿಕ್ಷಣ ಅಗತ್ಯವಾಗಿದೆ. ಕಂಪ್ಯೂಟರ್ನ ಕುರಿತು ಕನಿಷ್ಠ ಜ್ಞಾನವಾದರೂ ಅತಿ ಅಗತ್ಯವಾಗಿದೆ. ಹೀಗಾಗಿ ಕಂಪ್ಯೂಟರನ್ನು ಪೂರ್ಣಾವಧಿ ಕಲಿಯುವುದು ಅಸಾಧ್ಯವಾದರೂ ರಜೆಯ ವೇಳೆ ಬೇಸಿಕ್ ಕಂಪ್ಯೂಟರ್ ಶಿಕ್ಷಣ ಪಡೆಯಬಹುದಾಗಿದೆ. ನಮ್ಮ ಎಲ್ಲ ಕೋರ್ಸ್ಗಳಿಗೂ ಕಂಪ್ಯೂಟರ್ ನಿಕಟ ಸಂಪರ್ಕವನ್ನು ಹೊಂದಿದೆ. ಹೀಗಾಗಿ ಕಂಪ್ಯೂಟರ್ ಶಿಕ್ಷಣವನ್ನು ಆದ್ಯತೆಯ ಮೇಲೆ ಕಲಿತರೆ ಉತ್ತಮ. ಪೂರ್ಣಾವಧಿಯ ಕಂಪ್ಯೂಟರ್ ಶಿಕ್ಷಣಕ್ಕೂ ಉತ್ತಮ ಬೇಡಿಕೆ ಇದೆ. ಕಂಪ್ಯೂಟರ್ ಸೈನ್ಸ್, ಕಂಪ್ಯೂಟರ್ ಅಪ್ಲಿಕೇಶನ್ ಬಹುಬೇಡಿಕೆಯ ಕೋರ್ಸ್ಗಳಾಗಿವೆ.
ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ
ವಿದ್ಯಾರ್ಥಿಗಳು ಯಾವುದೋ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಗೂ ದುಡ್ಡನ್ನು ಹಾಳು ಮಾಡುವುದಕ್ಕಿಂತಲೂ ಕೋರ್ಸ್ನ ಕುರಿತು ತಿಳಿದುಕೊಂಡು ಮುಂದುವರಿದರೆ ಉತ್ತಮ. ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿದರೆ ಉದ್ಯೋಗಕ್ಕೆ ಉತ್ತಮ ಅವಕಾಶಗಳಿವೆ. ಒಮ್ಮೆ ಕೆಲಸ ಸಿಕ್ಕರೆ ಮುಂದೆ ಕೆಲಸ ಮಾಡಿಕೊಂಡು ಓದುವುದಕ್ಕೂ ಅವಕಾಶಗಳಿವೆ. ಹೀಗಾಗಿ ನಿಮ್ಮ ಭವಿಷ್ಯ ರೂಪಿಸಲು ಈಗಿನಿಂದಲೇ ತಯಾರಿ ನಡೆಸಬೇಕಿರುವುದು ಅತಿ ಅಗತ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೆರೆಯ ಮೇಲೆ ತಮ್ಮ ನಟನೆಯಿಂದ ಸಿನಿ ಪ್ರೇಕ್ಷಕರನ್ನು ನಗೆಗಡಲಿಗೆ ತೇಲಿಸಿದ ಜೀವವದು. ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡ ಚಲನಚಿತ್ರೋದ್ಯಮಕ್ಕೆ ಹೆಮ್ಮೆ ತಂದು ಕೊಟ್ಟ ಹಾಸ್ಯದಿಗ್ಗಜ ಇವರು. ತೆರೆಯ ಮೇಲೆ ಬಣ್ಣ ಹಚ್ಚಿದ್ದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಎಲ್ಲಿಲ್ಲದ ನಗು ಖುಷಿ ತಂದುಕೊಟ್ಟವರು. ಅವರ ನಟನೆಗೆ ಅವರೇ ಸರಿಸಾಟಿ. ಅವರು ಬೇರೆಯಾರು ಅಲ್ಲ. ನಮ್ಮ ನಿಮ್ಮೆಲ್ಲ ನೆಚ್ಚಿನ ಹಾಸ್ಯ ದಿಗ್ಗಜ ಬಿರಾದರ್ ಅವೆು. ಬಿರಾದಾರ್ ಅವರು ಸಿನಿಮಾಗಳಲಿ ಕೇವಲ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡರು, ಅವರ…
ಪಾಟ್ನಾದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಸುಂದರ ಹುಡುಗಿಯ ಫೋಟೋ ನೋಡಿದ್ದಾನೆ. ಆಕೆ ಸೌಂದರ್ಯಕ್ಕೆ ಸೋತು ಮೊದಲು ರಿಕ್ವೆಸ್ಟ್ ಕಳುಹಿಸಿದ್ದಾನೆ. ಹುಡುಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ. ನಿಧಾನವಾಗಿ ಇಬ್ಬರ ಮಧ್ಯೆ ಸ್ನೇಹ ಚಿಗುರಿದೆ. ನಂತ್ರ ಪ್ರೀತಿ ಶುರುವಾಗಿದೆ. ಇಬ್ಬರೂ ಹೊಸ ಪ್ರಪಂಚದಲ್ಲಿ ತೇಲಾಡಲು ಶುರು ಮಾಡಿದ್ದಾರೆ. ಗಂಟೆಗಟ್ಟಲೆ ಚಾಟ್ ಮಾಡ್ತಿದ್ದವರು ಹೊಸ ವರ್ಷ ಭೇಟಿಯಾಗಿ, ಮದುವೆಯಾಗುವ ನಿರ್ಧಾರ ಕೈಗೊಂಡಿದ್ದಾನೆ. ಹೊಸ ವರ್ಷದ ಮೊದಲ ದಿನ ಪಾರ್ಕ್ ಒಂದನ್ನು ನಿಗಧಿ ಮಾಡಿ ಅಲ್ಲಿ ಮೊದಲ ಭೇಟಿಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ….
ಬೆಂಗಳೂರಿನಲ್ಲಿ ಜಿಮ್ ಗೆ ಬರುವವರಿಗೆ ಹಾನಿಕಾರಕ ಔಷಧ ಕೊಡುತ್ತಿದ್ದ ಜಿಮ್ ಟ್ರೈನರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ 4 ನೇ ಮುಖ್ಯರಸ್ತೆಯಲ್ಲಿರುವ ಜಿಮ್ ನಲ್ಲಿ ಫಿಟ್ನೆಸ್ ಗಾಗಿ ಬರುತ್ತಿದ್ದವರಿಗೆ ದೇಹ ಹುರಿಗೊಳಿಸಲು ಮತ್ತು ತೆಳ್ಳಗಾಗಲು ಜಿಮ್ ಟ್ರೈನರ್ ನಿಷೇಧಿತ ಔಷಧ ಕೊಡುತ್ತಿದ್ದ. ನಿಷೇಧಿತ ಡ್ರಗ್ಸ್ ಗಳನ್ನು ಬೇರೆ ಕಡೆಯಿಂದ ತರಿಸಿ ಕೊಡುತ್ತಿದ್ದ. ಜಿಮ್ ಗೆ ಬರುತ್ತಿದ್ದ ಕೆಲವರಿಗೆ ಈ ನಿಷೇಧಿತ ಔಷಧ ಸೇವಿಸಿದ್ದರಿಂದ ಆರೋಗ್ಯದ ಸಮಸ್ಯೆ ಎದುರಾಗಿದೆ. ಕೆಲವರಿಗೆ ಪುರುಷತ್ವ ಕಡಿಮೆಯಾಗಿದೆ ಎನ್ನಲಾಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡವರಿಗೆ…
ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.
ಈ ತರಕಾರಿ ವ್ಯಾಪಾರಿಯ ಸಮಯೋಚಿತ ನಿರ್ಧಾರದಿಂದ ಆಗಬಹುದಾದ ಭಾರೀ ಅನಾಹುತ ತಪ್ಪಿದೆ. ಕಂಜೂರ್ ಮಾರ್ಗ್ ಮತ್ತು ಭಂದೂಪ್ ರೈಲು ನಿಲ್ದಾಣಗಳ ನಡುವೆ ಸುಮಾರು ಒಂದೂವರೆ ಅಡಿಗಳಷ್ಟು ರೈಲು ಹಳಿ ಕಾಣಿಸದಿರುವುದನ್ನು ಈ ವ್ಯಾಪಾರಿ ಗಮನಿಸಿದ್ದಾರೆ. ಅದೇ ವೇಳೆಗೆ ರೈಲೊಂದು ಬರುತ್ತಿರುವುದನ್ನೂ ನೋಡಿದ್ದಾರೆ. ರೈಲು ಇಲ್ಲಿಗೆ ಬಂದರೆ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂಬುದನ್ನು ಅರಿತ ಆತ ತಡ ಮಾಡದೇ ತನ್ನ ಕೈಲಿದ್ದ ಛತ್ರಿಯನ್ನು ಓಪನ್ ಮಾಡಿ ರೈಲು ಹಳಿಗಳ ಮಧ್ಯೆ ನಿಂತು ರೈಲು ನಿಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನು…
ಮೂರ್ಖತನ ಹಾಗೂ ಉಗ್ಘಟತನದ ಪರಮಾವಧಿ ಎಂದರೆ ಇದೇ ಅಲ್ಲವೇ?
ಸರ್ಕಾರ ಕೊರೋನಾ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಠಿಣ ನಿರ್ದೇಶನ ನೀಡಿದ್ದರೂ ಈ ಮೂರ್ಖರು ಏನು ಮಾಡಿದ್ದಾರೆ ಎಂಬುದನ್ನು ನೋಡಿ.