ಶಿಕ್ಷಣ

ಎಸೆಸೆಲ್ಸಿ ಮುಗಿಯಿತು. ಮುಂದೇನು ಎನ್ನುವ ಯೋಚನೆಯೇ ???

891

ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ.  ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.

ಶೈಕ್ಷಣಿಕ ಕ್ಷೇತ್ರ ಎನ್ನವುದು ದಿನೇ ದಿನೇ ಬೆಳೆಯುತ್ತಿದೆ. ವಿದ್ಯಾರ್ಥಿಗಳಿಗೆ ತಮ್ಮ ಕೋರ್ಸ್‌ಗಳಿಗೆ ವಿಪುಲ ಆಯ್ಕೆಗಳಿದ್ದು, ಔದ್ಯೋಗಿಕ ಅವಕಾಶಗಳಿಗೂ ಕೊರತೆ ಇಲ್ಲ. ಆದರೆ ಕೆಲವೊಂದು ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ತಮ್ಮ ಆಯ್ಕೆಯಲ್ಲಿ ಎಡವುತ್ತಿದ್ದಾರೆ. ಕೋರ್ಸ್‌ ಮುಗಿದ ಬಳಿಕ ಉದ್ಯೋಗವಿಲ್ಲ ಎಂದು ಕೊರಗುತ್ತಾರೆ. ಹೀಗಾಗಿ ವಿದ್ಯಾರ್ಥಿಗಳು ಎಂದಿಗೂ ಕ್ರೇಝ್ನ ಹಿಂದೆ ಹೋಗದೆ ಅವಕಾಶಗಳ ಕುಳಿತು ತಿಳಿದುಕೊಳ್ಳುವುದು ಅಗತ್ಯ .

 

ಪಿಯುಸಿ :- 
ಹಿಂದೆ ಒಂದು ಕಾಲವಿತ್ತು. ಎಸೆಸೆಲ್ಸಿ ಬಳಿಕ ನೇರವಾಗಿ ಪಿಯುಸಿಗೆ ಹೋಗುತ್ತಿದ್ದರು. ಆಗ ಆಯ್ಕೆಗಳು ಕಡಿಮೆ ಇತ್ತು. ಯಾವುದಾದರೊಂದು ಕೋರ್ಸ್‌ ಮುಗಿಸಿ ಶಿಕ್ಷಣ ಮುಂದುವರಿಸುತ್ತಿದ್ದರು. ಆದರೆ ಇಂದು ಹಾಗಿಲ್ಲ. ಪಿಯುಸಿಯಲ್ಲಿ ಲಭ್ಯವಿರುವ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗಗಳಲ್ಲೇ ಹಲವು ಆಯ್ಕೆಗಳಿವೆ. ಇವುಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಎಚ್ಚರಿಕೆ ಅಗತ್ಯ.

ವಿದ್ಯಾರ್ಥಿಗಳಿಗೆ ಪಿಯುಸಿಯ ಆಯ್ಕೆ ಎನ್ನುವುದು ಕ್ರೇಝ್ ಆಗಿಬಿಟ್ಟಿದೆ. ಪಿಯುಸಿ ಸೈನ್ಸ್‌ ಎಂದು ಹೆಮ್ಮೆಯಿಂದ ತಿರುಗುತ್ತಿದ್ದಾರೆ. ಆದರೆ ಸೈನ್ಸ್‌ ತೆಗೆದುಕೊಂಡವರಿಗೆ ಎಲ್ಲರಿಗೂ ಉದ್ಯೋಗ ದೊರಕುತ್ತದೆ ಎಂದು ಹೇಳುವಂತಿಲ್ಲ. ಕೆಲವೊಂದು ಸಂದರ್ಭದಲ್ಲಿ ನಮ್ಮ ಆರ್ಥಿಕ ಸ್ಥಿತಿಯೂ ನಮ್ಮ ಓದನ್ನು ಮುಂದುವರಿಸಲು ಬಿಡುವುದಿಲ್ಲ. ಈ ಎಲ್ಲ ಬೆಳವಣಿಗೆಗಳ ಕುರಿತು ಆಲೋಚನೆ ಮಾಡಿಯೇ ನಮ್ಮ ಮುಂದಿನ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಅಧ್ಯಾಪಕ ವೃತ್ತಿಗೆ ತೆರಳುವವರಿಗೆ ಪಿಯುಸಿ ಉತ್ತಮ ಆಯ್ಕೆಯಾಗುತ್ತದೆ. ಜತೆಗೆ ವೈದ್ಯಕೀಯ, ಎಂಜಿನಿಯರಿಂಗ್‌ ಕ್ಷೇತ್ರಕ್ಕೂ ಅದು ಬೇಕಾಗುತ್ತದೆ. ಪಿಯುಸಿಯಲ್ಲಿ  ವಾಣಿಜ್ಯವನ್ನು ಆಯ್ಕೆ ಮಾಡಿಕೊಂಡರೆ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶವಿದೆ. ಈ ರೀತಿಯ ಆಲೋಚನೆ ಅಗತ್ಯವಾಗಿದೆ.

ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ :-
ಇಂದು ತಾಂತ್ರಿಕ ಶಿಕ್ಷಣ ಎನ್ನುವುದು ವಿಪುಲ ಉದ್ಯೋಗಾವಕಾಶವನ್ನು ಸೃಷ್ಟಿಸುತ್ತಿದೆ. ಹೀಗಾಗಿ ಐಟಿಐ ಹಾಗೂ ಡಿಪ್ಲೊಮಾ ಕೋರ್ಸ್‌ಗಳ ಕುರಿತು ಹೆಚ್ಚಿನ ಒಲವು ತೋರಬೇಕಿದೆ. ಈ ಕೋರ್ಸ್‌ಗಳಿಗೆ ಎಂಜಿನಿಯರಿಂಗ್‌ ಕೋರ್ಸ್‌ನಷ್ಟೇ ಮಹತ್ವವಿದೆ. ಜತೆಗೆ ಉದ್ಯೋಗವೂ ಅಷ್ಟೇ ಶೀಘ್ರದಲ್ಲಿ ಸಿಗುತ್ತದೆ. ಡಿಪ್ಲೊಮಾದಲ್ಲಿ ಸಿವಿಲ್‌, ಮೆಕ್ಯಾನಿಕಲ್‌, ಪ್ಲಂಬಿಂಗ್‌, ಇಲೆಕ್ಟ್ರಿಕಲ್‌ ಹೀಗೆ ಅನೇಕ ಆಯ್ಕೆಗಳಿವೆ. ಜತೆಗೆ ಅತಿ ಕಡಿಮೆ ವೆಚ್ಚದಲ್ಲಿ ಈ ಕೋರ್ಸ್‌ಗಳನ್ನು ಪೂರ್ತಿಗೊಳಿಸಬಹುದಾಗಿದೆ. ಸರಕಾರಿ ಕಾಲೇಜುಗಳಲ್ಲಿ ಈ ಕೋರ್ಸ್‌ಗಳು ಉಚಿತವಾಗಿಯೂ ಸಿಗುತ್ತವೆ. ಹೀಗಾಗಿ ಯಾವ್ಯಾವ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಳು ಮಾಡುವುದಕ್ಕಿಂತ ಇಂತಹ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳುವುದೇ ಉತ್ತಮ.

ಔದ್ಯೋಗಿಕ ಕೋರ್ಸ್‌ಗಳು :-

ಇದರ ಜತೆಗೆ ಹಲವಾರು ಔದ್ಯೋಗಿಕ ಕೋರ್ಸ್‌ಗಳಿವೆ. ಅವರ ಬೇಡಿಕೆಗಳಿಗ ನುಗುಣವಾಗಿ ಅವುಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ನರ್ಸಿಂಗ್‌ ಕೋರ್ಸ್‌ಗಳು, ಪ್ಲಂಬಿಂಗ್‌, ಟೈಲರಿಂಗ್‌, ಹೊಟೇಲ್‌ ಮ್ಯಾನೇಜ್‌ಮೆಂಟ್‌, ಟೆಲಿಕಮ್ಯೂನಿಕೇಶನ್‌, ಹೀಗೆ ವಿವಿಧ ಕೋರ್ಸ್‌ಗಳನ್ನು ಆಯ್ಕೆಮಾಡಿಕೊಳ್ಳಬಹುದಾಗಿದೆ.

ಕಂಪ್ಯೂಟರ್‌ ಶಿಕ್ಷಣ :-
ಇಂದು ಪ್ರತಿಯೊಂದು ಕ್ಷೇತ್ರಕ್ಕೂ ಕಂಪ್ಯೂಟರ್‌ ಶಿಕ್ಷಣ ಅಗತ್ಯವಾಗಿದೆ. ಕಂಪ್ಯೂಟರ್‌ನ ಕುರಿತು ಕನಿಷ್ಠ ಜ್ಞಾನವಾದರೂ ಅತಿ ಅಗತ್ಯವಾಗಿದೆ. ಹೀಗಾಗಿ ಕಂಪ್ಯೂಟರನ್ನು ಪೂರ್ಣಾವಧಿ ಕಲಿಯುವುದು ಅಸಾಧ್ಯವಾದರೂ ರಜೆಯ ವೇಳೆ ಬೇಸಿಕ್‌ ಕಂಪ್ಯೂಟರ್‌ ಶಿಕ್ಷಣ ಪಡೆಯಬಹುದಾಗಿದೆ. ನಮ್ಮ ಎಲ್ಲ ಕೋರ್ಸ್‌ಗಳಿಗೂ ಕಂಪ್ಯೂಟರ್‌ ನಿಕಟ ಸಂಪರ್ಕವನ್ನು ಹೊಂದಿದೆ. ಹೀಗಾಗಿ ಕಂಪ್ಯೂಟರ್‌ ಶಿಕ್ಷಣವನ್ನು ಆದ್ಯತೆಯ ಮೇಲೆ ಕಲಿತರೆ ಉತ್ತಮ. ಪೂರ್ಣಾವಧಿಯ ಕಂಪ್ಯೂಟರ್‌ ಶಿಕ್ಷಣಕ್ಕೂ ಉತ್ತಮ ಬೇಡಿಕೆ ಇದೆ. ಕಂಪ್ಯೂಟರ್‌ ಸೈನ್ಸ್‌, ಕಂಪ್ಯೂಟರ್‌ ಅಪ್ಲಿಕೇಶನ್‌ ಬಹುಬೇಡಿಕೆಯ ಕೋರ್ಸ್‌ಗಳಾಗಿವೆ.

ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ
ವಿದ್ಯಾರ್ಥಿಗಳು ಯಾವುದೋ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಗೂ ದುಡ್ಡನ್ನು ಹಾಳು ಮಾಡುವುದಕ್ಕಿಂತಲೂ ಕೋರ್ಸ್‌ನ ಕುರಿತು ತಿಳಿದುಕೊಂಡು ಮುಂದುವರಿದರೆ ಉತ್ತಮ. ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿದರೆ ಉದ್ಯೋಗಕ್ಕೆ ಉತ್ತಮ ಅವಕಾಶಗಳಿವೆ. ಒಮ್ಮೆ ಕೆಲಸ ಸಿಕ್ಕರೆ ಮುಂದೆ ಕೆಲಸ ಮಾಡಿಕೊಂಡು ಓದುವುದಕ್ಕೂ ಅವಕಾಶಗಳಿವೆ. ಹೀಗಾಗಿ ನಿಮ್ಮ ಭವಿಷ್ಯ ರೂಪಿಸಲು ಈಗಿನಿಂದಲೇ ತಯಾರಿ ನಡೆಸಬೇಕಿರುವುದು ಅತಿ ಅಗತ್ಯ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    MNC ಕಂಪನಿಯಲ್ಲಿ ಕೆಲಸ ಮಾಡ್ತಿರೋ ಈ ಜೋಡಿ ಪುಟ್‌ಪಾತ್‌ ಮೇಲೆ ತಿಂಡಿ ಮಾರೋದ್ಯಾಕೆ ಅಂತ ಕಾರಣಾ ಗೊತ್ತಾ..?ತಿಳಿದರೆ ಅಚ್ಚರಿಯಂತು ಗ್ಯಾರಂಟಿ..,!

    ಈ ಸ್ಟೋರಿನಾ ಮೊದಲ ಬಾರಿ ನೋಡಿದವರಿಗೆ ಇದು ವಿಚಿತ್ರ ಎನ್ನಿಸಬಹುದು. ಆದ್ರೆ ಈ ಜೋಡಿಯ ಕೆಲಸದ ಹಿಂದೆ ಒಂದೊಳ್ಳೆ ಸಂದೇಶವಿದೆ. ಅದೇನು ಅನ್ನೋದನ್ನ ಈ ಸ್ಟೋರಿಯಲ್ಲಿ ಓದಿ. ಮುಂಬೈನ ಖಾಂಡಿವಾಲಿ ಸ್ಟೇಷನ್‌ನಲ್ಲಿ ವಿದ್ಯಾವಂತರಾದ, ಒಳ್ಳೆ ಕಂಪನಿಯಲ್ಲಿ ಒಳ್ಳೆ ಸಂಬಳಕ್ಕೆ ಕೆಲಸ ಮಾಡುವ ಜೋಡಿಯೊಂದು ಫೂಟ್‌ಪಾತ್‌ನಲ್ಲಿ ತಿಂಡಿ ಮಾರುತ್ತಾರೆ. ಪ್ರತಿದಿನ ಬೆಳಿಗ್ಗೆ 5 ಗಂಟೆಯಿಂದ 10 ಗಂಟೆಯ ಒಳಗೆ ಫೂಟ್‌ಪಾತ್‌ನಲ್ಲಿ ತಿಂಡಿ ಮಾರಿ, ಇವರು ತಮ್ಮ ತಮ್ಮ ಕೆಲಸಕ್ಕೆ ತೆರಳುತ್ತಾರೆ. ಎಂಬಿಎ ಮಾಡಿರುವ ಈ ಜೋಡಿ ತಿಂಡಿ ಮಾಡೋ…

  • ದೇಶ-ವಿದೇಶ

    ಈ ಮಹಿಳೆ ಪ್ರಧಾನಿ ಮೋದಿಯನ್ನೇ ಮದುವೆಯಾಗ್ಬೇಕಂತೆ..!ಎಷ್ಟು ತಿಂಗಳಿಂದ ಧರಣಿ ಕುಳಿತ್ತಿದ್ದಾರೆ ಗೊತ್ತಾ..?

    ಪ್ರಧಾನಿ ನರೇಂದ್ರ ಮೋದಿಅವರನ್ನು ಮದುವೆಯಾಗಬೇಕು ಅಂತ 40 ವರ್ಷದ ಮಹಿಳೆಯೊಬ್ಬರು,ಸೆಪ್ಟೆಂಬರ್ 8ರಿಂದ ದೆಹಲಿಯ ಜಂತರ್ ಮಂತರ್ ಬಳಿ ಧರಣಿ ಕುಳಿತಿದ್ದಾರೆ.

  • ಜ್ಯೋತಿಷ್ಯ

    ಚಂದ್ರಗ್ರಹಣ ದೋಷ ನಿವಾರಣೆಗೆ ಇಲ್ಲಿದೆ ಪರಿಹಾರ ಏನೆಂದು ತಿಳಿಯಿರಿ….!

    ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…

  • ಜ್ಯೋತಿಷ್ಯ

    ದುರ್ಗಾ ಶಕ್ತಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷನಿಮ್ಮ ಹಠಮಾರಿ ಪ್ರಕೃತಿ…

  • ಸುದ್ದಿ

    ಕರೀನಾಳ “ಸ್ನೇಕ್ ಚೈನ್ ‘’ ಬೆಲೆ ಕೇಳಿದರೆ ಅಚ್ಚರಿಯಂತು ಗ್ಯಾರಂಟಿ..!ಅಷ್ಟಕ್ಕೂ ಅದರ ಬೆಲೆ ಎಷ್ಟು ಗೊತ್ತ.?

    ಬಾಲಿವುಡ್ ನಟಿ ಕರೀನಾ ಕಪೂರ್ ಹುಟ್ಟು ಹಬ್ಬದ ನಂತ್ರ ಡಾನ್ಸ್ ಇಂಡಿಯಾ ಡಾನ್ಸ್ ಶೋನಲ್ಲಿ ಕಾಣಿಸಿಕೊಂಡಿದ್ದಾರೆ. ಡಾನ್ಸ್ ಇಂಡಿಯಾ ಡಾನ್ಸ್ ಫೈನಲ್ ನಲ್ಲಿ ಜಡ್ಜ್ ಆಗಿ ಕರೀನಾ ಕಾಣಿಸಿಕೊಳ್ಳಲಿದ್ದಾರೆ. ಈ ವೇಳೆ ಕರೀನಾ ಸ್ಟೈಲ್ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದೆ. ಸೆಟ್ ನಲ್ಲಿ ಕರೀನಾ ಫ್ಯಾಷನ್ ಎಲ್ಲರನ್ನು ಆಕರ್ಷಿಸಿದೆ. ವಿಶೇಷವಾಗಿ ಕರಿನಾ ಕತ್ತಿಗೆ ಹಾಕಿದ್ದ ಸ್ನೇಕ್ ಚೈನ್. ಕರೀನಾ ಡೈಮಂಡ್ ಸ್ನೇಕ್ ಚೈನ್ ಧರಿಸಿ ಬಂದಿದ್ದರು. ಕರೀನಾರ ಈ ಚೈನ್ ಐಷಾರಾಮಿ ಕಾರುಗಳಿಗಿಂತ ದುಬಾರಿ ಎನ್ನಲಾಗಿದೆ. ಇದ್ರ…

  • ಸುದ್ದಿ

    ಮೈತ್ರಿ ಸರ್ಕಾರ ಆದ ನಂತರ ಮೊದಲ ಬಾರಿಗೆ ಜೆಡಿಎಸ್ ವಿರುದ್ದ ಗುಡುಗಿದ ಸಿದ್ದರಾಮಯ್ಯನವರು ಹೇಳಿದ್ದೇನು ಗೊತ್ತಾ..?

    ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಹೆಚ್. ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ಪ್ರತಿಕ್ರಿಯಿಸಲಾರೆ. ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಚಮಚಾಗಿರಿ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರೆ 130 ಸ್ಥಾನಗಳಿಂದ 78 ಸ್ಥಾನಗಳಿಗೆ ಕುಸಿದಿದ್ದು ಏಕೆ ಎಂದು ವಿಶ್ವನಾಥ್ ಹೇಳಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಅನಿಸಿಕೆ ಹಂಚಿಕೊಂಡ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ…