ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಟೆಲಿಕಾಂ ರಂಗದಲ್ಲಿ ಭಾರೀ ಪೈಪೋಟಿ ಬೆಳೆದಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಮುಖ ಟೆಲಿಕಾಂ ಕಂಪನಿಗಳನ್ನು ಗ್ರಾಹಕರನ್ನು ಆಕರ್ಷಿಸಲು ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಿವೆ. ಈ ನಿಟ್ಟಿನಲ್ಲಿ ಏರ್ಟೆಲ್ ಕೂಡ ಹಿಂದೆ ಬಿದ್ದಿಲ್ಲ. ಆರ್ಥಿಕವಾಗಿ ಸುರಕ್ಷಿತವಾದ ಭಾರತವನ್ನು ನಿರ್ಮಿಸಲು ಮೊಬೈಲ್ ಸೇವೆಗಳ ಕಾರ್ಯತಂತ್ರದ ಭಾಗವಾಗಿ ಭಾರ್ತಿ ಏರ್ಟೆಲ್ ತನ್ನ ಗ್ರಾಹಕರಿಗೆ ವಿಮಾ ರಕ್ಷಣೆಯ ರಕ್ಷಣೆಯೊಂದಿಗೆ ಪ್ರಿಪೇಡ್ ಯೋಜನೆಯನ್ನು ನೀಡಲು ಭಾರ್ತಿ ಆಕ್ಸಾ ಲೈಫ್ ಇನ್ಶುರೆನ್ಸ್ನೊಂದಿಗೆ ಒಪ್ಪಂದ ಮಾಡಿಕೊಂಡಿದೆ.

ಏರ್ಟೆಲ್ ರೂ. 599 ಯೋಜನೆ ಭಾರ್ತಿ ಏರ್ಟೆಲ್ ಭಾರ್ತಿ ಆಕ್ಸಾ ಲೈಫ್ ಇನ್ಸೂರೆನ್ಸ್ ಒಪ್ಪಂದದ ನಂತರ ಏರ್ಟೆಲ್ ತನ್ನ ಗ್ರಾಹಕರಿಗೆ ಪ್ರಿಪೇಡ್ ಪ್ಲಾನ್ ನಲ್ಲಿ ಇನ್ಶೂರೆನ್ಸ್ ಪ್ರೊಟೆಕ್ಷನ್ ಕವರ್ ನೀಡಲಿದೆ. ದೇಶದ ಎಲ್ಲ ಏರ್ಟೆಲ್ ಪ್ರಿಪೇಡ್ ಗ್ರಾಹಕರಿಗೂ ಈ ಯೋಜನೆಯ ಸೌಲಭ್ಯ ಸಿಗಲಿದೆ.
ಪ್ರಯೋಜನಗಳು : ಏರ್ಟೆಲ್ ರೂ. 599 ಯೋಜನೆಯಡಿಯಲ್ಲಿ ಪ್ರತಿದಿನ ಗ್ರಾಹಕರಿಗೆ 2ಜಿಬಿ ಡೇಟಾ, ಅನಿಯಮಿತ ಕರೆ, ಪ್ರತಿ ದಿನ 100 ಎಸ್ಎಂಎಸ್ ಹಾಗೂ 4 ಲಕ್ಷ ರೂಪಾಯಿ ಜೀವ ವಿಮೆ ನೀಡಲಿದೆ. ಈ ರಿಚಾರ್ಜ್ ಯೋಜನೆ 84 ದಿನಗಳ ವ್ಯಾಲಿಡಿಟಿ ಹೊಂದಿರುತ್ತದೆ. ಮುಂದಿನ ಮೂರು ತಿಂಗಳವರೆಗೆ ಈ ವಿಮಾ ಸೌಲಭ್ಯ ಸಿಗಲಿದೆ.

ಎಲ್ಲೆಲ್ಲಿ ಲಭ್ಯ : ಭಾರ್ತಿ ಆಕ್ಸಾ ಲೈಫ್ ಇನ್ಸೂರೆನ್ಸ್ ರಕ್ಷಣೆಯನ್ನು ಒದಗಿಸುವ ಏರ್ಟೆಲ್ನ ಈ ಪ್ರಿಪೇಡ್ ಯೋಜನೆ ತಮಿಳುನಾಡು ಮತ್ತು ಪಾಂಡಿಚೆರಿ ಗ್ರಾಹಕರಿಗೆ ಲಭ್ಯವಿದೆ. ಈ ಯೋಜನೆಯನ್ನು ಮುಂದಿನ ಕಲವೆ ತಿಂಗಳಲ್ಲಿ ದೇಶಾದ್ಯಂತ ಜಾರಿಗೆ ತರುವುದಾಗಿ ಏರ್ಟೆಲ್ ಹೇಳಿದೆ.
ನವೀನ ಯೋಜನೆ : ಏರ್ಟೆಲ್ ನ ಈ ನವೀನ ಯೋಜನೆಯು ಗ್ರಾಮೀಣ ಭಾಗಗಳು ಸೇರಿದಂತೆ ಏರ್ಟೆಲ್ನ ಆಳವಾದ ವಿತರಣಾ ವ್ಯಾಪ್ತಿಯನ್ನು ಸಂಯೋಜಿಸುತ್ತದೆ. ಭಾರ್ತಿ ಆಕ್ಸಾ ಲೈಫ್ನ ವಿಮೆಯಲ್ಲಿ ಲಕ್ಷಾಂತರ ವಿಮೆ ಮಾಡದ ಮತ್ತು ವಿಮೆ ಮಾಡುವ ಜನರು ತಮ್ಮ ಫೋನ್ಗಳನ್ನು ರೀಚಾರ್ಜ್ ಮಾಡುವಾಗಲೆಲ್ಲಾ ಅವರಿಗೆ ಸಾಕಷ್ಟು ಲೈಫ್ ಕವರ್ ಸಿಗುತ್ತದೆ.

ವಿಮಾ ನಿಯಮ : 18-54 ವರ್ಷ ವಯಸ್ಸಿನ ಎಲ್ಲ ಗ್ರಾಹಕರಿಗೆ ಲಭ್ಯವಿರುವ ಜೀವ ವಿಮಾ ರಕ್ಷಣೆಗೆ ಯಾವುದೇ ದಾಖಲೆ ಅಥವಾ ವೈದ್ಯಕೀಯ ಪರೀಕ್ಷೆಯ ಅಗತ್ಯವಿಲ್ಲ ಮತ್ತು ವಿಮೆಯ ಪ್ರಮಾಣಪತ್ರವನ್ನು ತ್ವರಿತವಾಗಿ ಡಿಜಿಟಲ್ ರೂಪದಲ್ಲಿ ತಲುಪಿಸಲಾಗುತ್ತದೆ. ವಿಮೆಯ ಭೌತಿಕ ನಕಲನ್ನು ವಿನಂತಿಯ ಮೇರೆಗೆ ಗ್ರಾಹಕರ ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈರುಳ್ಳಿಯನ್ನು ಕ್ರಮವಾಗಿ ಸೇವಿಸುತ್ತಾ ಬಂದರೆ ಮೂಳೆಗಳು, ನರಗಳು ದೃಢವಾಗಿರುತ್ತವೆಯಂತೆ. ಎರಡೂ ಹೊತ್ತಿನ ಊಟದಲ್ಲಿ ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ಸೇವಿಸುವವರು ನಿತ್ಯ ಆರೋಗ್ಯವಂತರಾಗಿ ಮುಂದುವರೆಯುತ್ತಾರೆ.
ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇನ್ನು ಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಸಿಕೊಳ್ಳಬೇಕು. ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ. 2016ರ ಮೇಘಾಲಯ ರೆಸಿಡೆಂಟ್ ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ. ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು. ತಕ್ಷಣದಿಂದ ಜಾರಿಗೆ…
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…
ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ
ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. ಬಳಿಕ ಇಬ್ಬರು…