ವಿಸ್ಮಯ ಜಗತ್ತು

ಏಳು ವರ್ಷದ ನಂತರವೂ ತನ್ನ ಪೋಷಕನನ್ನು ಗುರುತು ಹಿಡಿದು ಆತನ ಹಿಂದೆ ಬಿದ್ದ ಜಿಂಕೆ..!ಈ ಲೇಖನ ಓದಿ ಶಾಕ್ ಆಗ್ತೀರಾ…

697

ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ಮರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.

ಸುಂದರಿ ಎಂಬ ಜಿಂಕೆಮರಿ :

ಬಳ್ಳಾರಿ ಮೃಗಾಲಯದಲ್ಲಿ 7 ವರ್ಷದ ಹಿಂದೆ ಸುಂದರಿ ಎಂಬ ಜಿಂಕೆಮರಿ ಜನ್ಮ ತಾಳಿತ್ತು, ಬಳ್ಳಾರಿ ಮೃಗಾಲಯದಲ್ಲಿದ್ದ 6೦ ಬ್ಲಾಕ್ ಬಕ್ಸ್ ಪೈಕಿ ಸುಂದರಿ ಕೂಡ ಒಬ್ಬಳಾಗಿದ್ದಳು. ಈಗ ಅವುಗಳನ್ನು ಸದ್ಯ ಹಂಪಿ ಬಳಿಯಿರುವ ಬಿಳಿಕ್ಕಲ್ ಮೃಗಾಲಯಕ್ಕೆ ಸ್ಥಳಾಂತರ ಮಾಡಲಾಗಿದೆ. ಬಳ್ಳಾರಿ ಮೃಗಾಲಯದಲ್ಲಿ ಬಸವರಾಜ್ ಪ್ರಾಣಿಗಳಿಗೆ ಆಹಾರ ನೀಡುವ ಹಾಗೂ ಊಟ ತಿನ್ನಿಸುವ ಮೇಲ್ವಿಚಾರಕರಾಗಿದ್ದರು. ಅರಣ್ಯ ಇಲಾಖೆಯ ವಾರ್ಷಿಕ ವರ್ಗಾವಣೆ ನಿಯಮದಂತೆ ಬಸವರಾಜ್ ಅವರನ್ನು ಕಮಲಪುರ ಪ್ರದೇಶಕ್ಕೆ ವರ್ಗಾವಣೆ ಮಾಡಲಾಯಿತು. ಸದ್ಯ ಬಸವರಾಜ್ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯದ ಪ್ರಾಣಿಗಳಿಗೆ ಆಹಾರ ತಿನ್ನಿಸುವ ಮೇಲ್ವಿಚಾರಕರಾಗಿ ವರ್ಗಾವಣೆ ಗೊಂಡಿದ್ದಾರೆ.

7 ವರ್ಷವಾದರು ಪೋಷಕನ ಮರೆತಿಲ್ಲ ಸುಂದರಿ:

ನವೆಂಬರ್ 3 ರಿಂದ ಈ ಮೃಗಾಲಯ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿದೆ, ಇಲ್ಲಿಯೇ  ವಾಸವಿರುವ ಸುಂದರಿ ಆಕಸ್ಮಿಕವಾಗಿ ತನ್ನ ಕೇರ್ ಟೇಕರ್ ನೋಡಿ, ಅವರನ್ನು ಗುರುತಿಸಿ ಆತನ ಹಿಂದೆ ಹಿಂದೆಯೇ ಸುತ್ತುತ್ತಿದ್ದಾಳೆ. 7 ವರ್ಷಗಳ ಹಿಂದೆ ಸುಂದರಿ ಹುಟ್ಟಿದಾಗ ತನಗೆ ಹಾಲು ಕುಡಿಸಿ ಬೆಳೆಸಿದ್ದ ಬಸವರಾಜ್ ನನ್ನು ಆಕೆ ಮರೆತಿಲ್ಲ, ಬಸವರಾಜ್ ಆಹಾರ ನೋಡಲು ಹೋದರೆ ಉಳಿದೆಲ್ಲಾ ಜಿಂಕೆಗಳು ಹೆದರಿ ದೂರ ಓಡುತ್ತಿದ್ದವು. ಆದರೆ ಸುಂದರಿ  ಮಾತ್ರ ಬಸವರಾಜ್ ಹಿಂದಿಂದೆಯೇ ಸುತ್ತುತ್ತಿದ್ದಳು.

ಜಿಂಕೆ ಮರಿ ನನ್ನ ನೆನಪಿಟ್ಟುಕೊಂಡಿರುವುದೇ ಆಶ್ಚರ್ಯ:

ಈ ಸುಂದರಿ ಜಿಂಕೆ ಯಾವಾಗಲು ನನ್ನ ಹಿಂದೆಯೇ ಇರುತಾ ಇತ್ತು , ನಾನು ಗೇಟ್ ಬಾಗಿಲು ಮುಚ್ಚಿದರೇ, ಸುಮಾರು ಅರ್ಧ ಗಂಟೆಗಳ ಕಾಲ ಕಾದು ನಂತರ ಬೇರೆ ಜಿಂಕೆಗಳ ಜೊತೆ ಹೋಗುತಿತ್ತು . ಪ್ರಾಣಿಗಳ ಈ ವರ್ತನೆ ನನಗೆ ತುಂಬಾ ಭಿನ್ನವೆನಿಸುತ್ತಿದೆ.ಈ ಜಿಂಕೆ ಮರಿ ನನ್ನನ್ನು ಇಷ್ಟೋಂದು  ನೆನಪಿನಲ್ಲಿಟ್ಟುಕೊಂಡಿರುವುದು ನನಗೆ ಆಶ್ಚರ್ಯ ತರಿಸಿದೆ ಎಂದು ಬಸವರಾಜ್ ಹೇಳಿದ್ದಾರೆ. ಬಳ್ಳಾರಿಯ ಗುದ್ದೂರು ಮೂಲದ ಬಸವರಾಜ್ ಅರಣ್ಯ ಇಲಾಖೆಯ ನೌಕರರಾಗಿದ್ದಾರೆ, ಬಸವರಾಜ್ ಸದ್ಯ ಕಾವಲುಗಾರನಾಗಿ
ನೇಮಕಗೊಂಡಿದ್ದಾರೆ.

ಸುಂದರಿ ಜೊತೆ ಅವರಿಗೆ ವಿಶೇಷ ಪ್ರೀತಿ ವಾತ್ಸಲ್ಯ ಬೆಳೆದಿದೆ:

ಪ್ರಾಣಿಗಳನ್ನು ಪ್ರೀತಿಸುವ ಅವರು ಅವುಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಾರೆ, ಈಗ ಸುಂದರಿ ಜೊತೆ ಅವರಿಗೆ ವಿಶೇಷ ಪ್ರೀತಿ ವಾತ್ಸಲ್ಯ ಬೆಳೆದಿದೆ. ಸುಂದರಿಯನ್ನು ಬಸವರಾಜ್ ಸುಂದರಿ ಎಂದು ಕರೆಯುತ್ತಾರೆ, ಸುಂದರಿ ಎಂದು ಕರೆದ ಕೂಡಲೇ ಜಿಂಕೆ ಮರಿ ಪ್ರತಿಕ್ರಿಯಿಸುತ್ತದೆ. ಸುಂದರಿ ನನ್ನ ಮಗಳಿದ್ದಂತೆ ಎಂದು ಬಸವರಾಜ್ ಹೇಳಿದ್ದಾರೆ. ಬ್ಲ್ಯಾಕ್ ಬಕ್ಸ್ ಗುಜರಾತ್, ರಾಜಸ್ತಾನ, ಮಧ್ಯ ಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕದ ಒಣ ಭೂಮಿಯಲ್ಲಿ ಕಂಡುಬರುವ ಪ್ರಾಣಿಯಾಗಿದೆ ಅಳಿವಿನಂಚಿನಲ್ಲಿರುವ ಪ್ರಬೇಧದ
ಜಿಂಕೆಗಳನ್ನ ವನ್ಯ ಜೀವಿ ಕಾಯಿದೆ ಪ್ರಕಾರ ರಕ್ಷಿಸಲಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಕಾಂಗ್ರೆಸ್ ಪಕ್ಷಕ್ಕೆ ಮರುಜೀವ ನೀಡಿದ್ದ ರಾಜ್ಯ ಕರ್ನಾಟಕ!ಇಂದಿರಾಗಾಂಧಿಯವರಂತೆ ಪ್ರಿಯಾಂಕ ಗಾಂಧಿಯನ್ನು ಗೆಲ್ಲಿಸುತ್ತಾ?ಹಾಗಾದ್ರೆ ಇವರು ಯಾವ ಕ್ಷೇತ್ರದಲ್ಲಿ ನಿಂತ್ರೆ ಗೆಲ್ತಾರೆ…ಮುಂದೆ ಓದಿ…

    ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

  • ಸುದ್ದಿ

    ಬಾಕ್ಸ್ ಆಫೀಸ್ ಸುಲ್ತಾನ್,ಚಾಲೆಂಜಿಂಗ್ ಸ್ಟಾರ್ ದರ್ಶನ್ ​​ಫ್ಯಾನ್ಸ್​ ಗೆ ಸಿಹಿ ಸುದ್ದಿ​..!

    ಸ್ವಿಟ್ಜರ್ಲೆಂಡ್​ನಲ್ಲಿ ನಟ ದರ್ಶನ್​. ಒಡೆಯ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಾಲೆಂಜಿಂಗ್​ ಸ್ಟಾರ್​. ಎಂ.ಡಿ ಶ್ರೀಧರ್​ ನಿರ್ದೇಶಿಸುತ್ತಿರುವ ಒಡೆಯ ಸಿನಿಮಾದ ಕೊನೆಯ ಎರಡು ಹಾಡುಗಳ ಚಿತ್ರೀಕರಣಕ್ಕೆಂದು ಚಿತ್ರತಂಡ ಅಕ್ಟೋಬರ್ 15ರಂದು ಸ್ವಿಟ್ಜರ್ಲೆಂಡ್​ಗೆ ಹಾರಿದ್ದರು. ಹತ್ತು ದಿನಗಳ ಕಾಲ ನಡೆಯಲಿರುವ ಚಿತ್ರೀಕರಣದ ನಂತರ ಇದೇ ಅಕ್ಟೋಬರ್​ 26ರಂದು ಬೆಂಗಳೂರಿಗೆ ವಾಪಸ್​ ಆಗಲಿದ್ದಾರೆ ದಚ್ಚು ಆ್ಯಂಡ್​ ಟೀಮ್​. ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಚಿತ್ರ ಮೂಡಿಬರುತ್ತಿದ್ದು ಈ ವರ್ಷದ ಕೊನೆಯಲ್ಲಿ ಒಡೆಯ ಚಿತ್ರ ಡಿ ಬಾಸ್ ಫ್ಯಾನ್ಸ್​ಗಳ ಮುಂದೆ ಬರಲಿದೆ. ಅಕ್ಟೋಬರ್ 15ರಂದು…

  • ಸುದ್ದಿ

    ಕರ್ನಾಟಕ ಜನತೆಗೆ ಟ್ವಿಟ್ಟರ್ ಮೂಲಕ ಧನ್ಯವಾದ ತಿಳಿಸಿದ ನಟ ದರ್ಶನ್…!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ಜನತೆಗೆ ಟ್ವೀಟ್ ಮಾಡುವುದರ ಮೂಲಕ ಧನ್ಯವಾದ ತಿಳಿಸಿದ್ದಾರೆ.ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ  ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ. ಕುರುಕ್ಷೇತ್ರ ಬರೋಬ್ಬರಿ 50 ರಿಂದ 60…

  • ಸುದ್ದಿ

    ಇನ್ಮುಂದೆ 6 ಮತ್ತು 8ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ನಡೆಸಲು ಮುಂದಾದ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌,.!

    ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಿ ಪರೀಕ್ಷೆ ಬಗ್ಗೆ ಆತ್ಮವಿಶ್ವಾಸ ಮೂಡಿಸುವ ಸಲುವಾಗಿ 6 ಮತ್ತು 8ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರು ತಿಳಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಳಿಕ ಬುಧವಾರ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರು ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಚರ್ಚಿಸಿದ ಬಳಿಕ…

  • ಜ್ಯೋತಿಷ್ಯ

    `ಜೈ ಶ್ರೀರಾಮ್’ ಹೇಳುವಂತೆ ಸತತ 7 ಗಂಟೆ ಥಳಿಸಿ ಯುವಕ ದುರ್ಮರಣ……!

    ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್‍ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ…