ವಿಸ್ಮಯ ಜಗತ್ತು

ಏಳು ವರ್ಷದ ನಂತರವೂ ತನ್ನ ಪೋಷಕನನ್ನು ಗುರುತು ಹಿಡಿದು ಆತನ ಹಿಂದೆ ಬಿದ್ದ ಜಿಂಕೆ..!ಈ ಲೇಖನ ಓದಿ ಶಾಕ್ ಆಗ್ತೀರಾ…

696

ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ಮರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.

ಸುಂದರಿ ಎಂಬ ಜಿಂಕೆಮರಿ :

ಬಳ್ಳಾರಿ ಮೃಗಾಲಯದಲ್ಲಿ 7 ವರ್ಷದ ಹಿಂದೆ ಸುಂದರಿ ಎಂಬ ಜಿಂಕೆಮರಿ ಜನ್ಮ ತಾಳಿತ್ತು, ಬಳ್ಳಾರಿ ಮೃಗಾಲಯದಲ್ಲಿದ್ದ 6೦ ಬ್ಲಾಕ್ ಬಕ್ಸ್ ಪೈಕಿ ಸುಂದರಿ ಕೂಡ ಒಬ್ಬಳಾಗಿದ್ದಳು. ಈಗ ಅವುಗಳನ್ನು ಸದ್ಯ ಹಂಪಿ ಬಳಿಯಿರುವ ಬಿಳಿಕ್ಕಲ್ ಮೃಗಾಲಯಕ್ಕೆ ಸ್ಥಳಾಂತರ ಮಾಡಲಾಗಿದೆ. ಬಳ್ಳಾರಿ ಮೃಗಾಲಯದಲ್ಲಿ ಬಸವರಾಜ್ ಪ್ರಾಣಿಗಳಿಗೆ ಆಹಾರ ನೀಡುವ ಹಾಗೂ ಊಟ ತಿನ್ನಿಸುವ ಮೇಲ್ವಿಚಾರಕರಾಗಿದ್ದರು. ಅರಣ್ಯ ಇಲಾಖೆಯ ವಾರ್ಷಿಕ ವರ್ಗಾವಣೆ ನಿಯಮದಂತೆ ಬಸವರಾಜ್ ಅವರನ್ನು ಕಮಲಪುರ ಪ್ರದೇಶಕ್ಕೆ ವರ್ಗಾವಣೆ ಮಾಡಲಾಯಿತು. ಸದ್ಯ ಬಸವರಾಜ್ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯದ ಪ್ರಾಣಿಗಳಿಗೆ ಆಹಾರ ತಿನ್ನಿಸುವ ಮೇಲ್ವಿಚಾರಕರಾಗಿ ವರ್ಗಾವಣೆ ಗೊಂಡಿದ್ದಾರೆ.

7 ವರ್ಷವಾದರು ಪೋಷಕನ ಮರೆತಿಲ್ಲ ಸುಂದರಿ:

ನವೆಂಬರ್ 3 ರಿಂದ ಈ ಮೃಗಾಲಯ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿದೆ, ಇಲ್ಲಿಯೇ  ವಾಸವಿರುವ ಸುಂದರಿ ಆಕಸ್ಮಿಕವಾಗಿ ತನ್ನ ಕೇರ್ ಟೇಕರ್ ನೋಡಿ, ಅವರನ್ನು ಗುರುತಿಸಿ ಆತನ ಹಿಂದೆ ಹಿಂದೆಯೇ ಸುತ್ತುತ್ತಿದ್ದಾಳೆ. 7 ವರ್ಷಗಳ ಹಿಂದೆ ಸುಂದರಿ ಹುಟ್ಟಿದಾಗ ತನಗೆ ಹಾಲು ಕುಡಿಸಿ ಬೆಳೆಸಿದ್ದ ಬಸವರಾಜ್ ನನ್ನು ಆಕೆ ಮರೆತಿಲ್ಲ, ಬಸವರಾಜ್ ಆಹಾರ ನೋಡಲು ಹೋದರೆ ಉಳಿದೆಲ್ಲಾ ಜಿಂಕೆಗಳು ಹೆದರಿ ದೂರ ಓಡುತ್ತಿದ್ದವು. ಆದರೆ ಸುಂದರಿ  ಮಾತ್ರ ಬಸವರಾಜ್ ಹಿಂದಿಂದೆಯೇ ಸುತ್ತುತ್ತಿದ್ದಳು.

ಜಿಂಕೆ ಮರಿ ನನ್ನ ನೆನಪಿಟ್ಟುಕೊಂಡಿರುವುದೇ ಆಶ್ಚರ್ಯ:

ಈ ಸುಂದರಿ ಜಿಂಕೆ ಯಾವಾಗಲು ನನ್ನ ಹಿಂದೆಯೇ ಇರುತಾ ಇತ್ತು , ನಾನು ಗೇಟ್ ಬಾಗಿಲು ಮುಚ್ಚಿದರೇ, ಸುಮಾರು ಅರ್ಧ ಗಂಟೆಗಳ ಕಾಲ ಕಾದು ನಂತರ ಬೇರೆ ಜಿಂಕೆಗಳ ಜೊತೆ ಹೋಗುತಿತ್ತು . ಪ್ರಾಣಿಗಳ ಈ ವರ್ತನೆ ನನಗೆ ತುಂಬಾ ಭಿನ್ನವೆನಿಸುತ್ತಿದೆ.ಈ ಜಿಂಕೆ ಮರಿ ನನ್ನನ್ನು ಇಷ್ಟೋಂದು  ನೆನಪಿನಲ್ಲಿಟ್ಟುಕೊಂಡಿರುವುದು ನನಗೆ ಆಶ್ಚರ್ಯ ತರಿಸಿದೆ ಎಂದು ಬಸವರಾಜ್ ಹೇಳಿದ್ದಾರೆ. ಬಳ್ಳಾರಿಯ ಗುದ್ದೂರು ಮೂಲದ ಬಸವರಾಜ್ ಅರಣ್ಯ ಇಲಾಖೆಯ ನೌಕರರಾಗಿದ್ದಾರೆ, ಬಸವರಾಜ್ ಸದ್ಯ ಕಾವಲುಗಾರನಾಗಿ
ನೇಮಕಗೊಂಡಿದ್ದಾರೆ.

ಸುಂದರಿ ಜೊತೆ ಅವರಿಗೆ ವಿಶೇಷ ಪ್ರೀತಿ ವಾತ್ಸಲ್ಯ ಬೆಳೆದಿದೆ:

ಪ್ರಾಣಿಗಳನ್ನು ಪ್ರೀತಿಸುವ ಅವರು ಅವುಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಾರೆ, ಈಗ ಸುಂದರಿ ಜೊತೆ ಅವರಿಗೆ ವಿಶೇಷ ಪ್ರೀತಿ ವಾತ್ಸಲ್ಯ ಬೆಳೆದಿದೆ. ಸುಂದರಿಯನ್ನು ಬಸವರಾಜ್ ಸುಂದರಿ ಎಂದು ಕರೆಯುತ್ತಾರೆ, ಸುಂದರಿ ಎಂದು ಕರೆದ ಕೂಡಲೇ ಜಿಂಕೆ ಮರಿ ಪ್ರತಿಕ್ರಿಯಿಸುತ್ತದೆ. ಸುಂದರಿ ನನ್ನ ಮಗಳಿದ್ದಂತೆ ಎಂದು ಬಸವರಾಜ್ ಹೇಳಿದ್ದಾರೆ. ಬ್ಲ್ಯಾಕ್ ಬಕ್ಸ್ ಗುಜರಾತ್, ರಾಜಸ್ತಾನ, ಮಧ್ಯ ಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕದ ಒಣ ಭೂಮಿಯಲ್ಲಿ ಕಂಡುಬರುವ ಪ್ರಾಣಿಯಾಗಿದೆ ಅಳಿವಿನಂಚಿನಲ್ಲಿರುವ ಪ್ರಬೇಧದ
ಜಿಂಕೆಗಳನ್ನ ವನ್ಯ ಜೀವಿ ಕಾಯಿದೆ ಪ್ರಕಾರ ರಕ್ಷಿಸಲಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗರ್ಭಿಣಿಯರೇ ಉಷಾರ್…! 3 ಗಂಟೆಗಳವರೆಗೂ ಸಂಭವಿಸಲಿದೆ ಚಂದ್ರಗ್ರಹಣ…..

    ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…

  • ಸುಳ್ಳು ಸುದ್ದಿ

    ಹೋಟಲ್ನಲ್ಲಿ ಊಟ ಆರ್ಡರ್ ಮಾಡೋದಕ್ಕೆ ಮುಂಚೆ, ನಿಮ್ಮ ಹೊಟ್ಟೆಯ ಸುತ್ತಳತೆ ನೀಡಲೇಬೇಕು..!

    ಹೋಟೆಲ್‌ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಆಹಾರಕ್ಕೆ ಮಿತಿ ಹೇರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ, ಒಬ್ಬ ವ್ಯಕ್ತಿ ಗರಿಷ್ಠ ಎಷ್ಟುಆಹಾರ ಸೇವಿಸಬಲ್ಲ ಎಂಬುದನ್ನು ಹೋಟೆಲ್‌ನವರೇ ತಿಳಿಸಬೇಕು ಹೇಳಿದೆ.

  • ಸುದ್ದಿ

    ‘ಕುರಿ’ ಪ್ರತಾಪ್ ಲೈಫಲ್ಲಿ ಫಸ್ಟ್‌ ಟೈಮ್ ಏನೇನೋ ಆಗ್ತಿದೆ..! ಏನೇನ್ ಆಗ್ತಿದೆ ಗೊತ್ತಾ?

    ‘ಕುರಿ’ ಪ್ರತಾಪ್‌ ಈಗ ಸಖತ್ ಟ್ರೆಂಡಿಂಗ್‌ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್‌. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್‌’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್‌’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್‌ ಏನೇನೋ ಆಗ್ತಿದೆ!…

  • ಸುದ್ದಿ

    ಪಾಕಿಸ್ಥಾನ ಸೋತ ಖುಷಿಯಲ್ಲಿ ಅರೆಬೆತ್ತಲೆ ಕುಣಿದಂತಹ ಪೂನ್ಂ ಪಾಂಡೆ ಅವಾಂತರ…!

    ನೆನ್ನೆ ನಡೆದ ಇಂಡಿಯಾ ಹಾಗೂ ಪಾಕಿಸ್ತಾನದ ಹೈ ವೋಲ್ಟೇಜ್ ಪಂದ್ಯದಲ್ಲಿ ಇಂಡಿಯಾ ಪಾಕ್ ವಿರುದ್ಧ 89 ರನ್ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತ್ತು. ಬಾರತದ ಈ ಗೆಲುವನ್ನು ಎಲ್ಲರೂ ಪಟಾಕಿ ಹಚ್ಚಿ, ಸಹಿ ತಿಂದು, ಪಾರ್ಟಿ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರೆ ಕೆಲ ಮಾಡೆಲ್​ಗಳು ಸ್ಪರ್ಧೆ ನೀಡುವ ರೀತಿಯಲ್ಲಿ ನ್ಯೂಡ್​ ಫೋಟೋಗಳನ್ನು ನೀನಾ – ನಾನಾ ಎಂದು ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ಸಂತಸ ವ್ಯಕ್ತ ಪಡಿಸಿದ್ದಾರೆ. ಇನ್ನೂ ಈ ಫೋಟೋಗಳಂತ್ತು…

  • ಸುದ್ದಿ

    ಪೂರ್ಣ ಯುದ್ಧ ಸಂಭವ:ಭಾರತಕ್ಕೆ ಪಾಕ್ ಎಚ್ಚರ…..!

    ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…

  • ವಿಸ್ಮಯ ಜಗತ್ತು

    ಈ ಗ್ರಾಮ ಇಡೀ ವಿಶ್ವಕ್ಕೆ ಮಾದರಿಯಾಗಿದೆ!ಇಂಟರ್ನೆಟ್ನಲ್ಲಿ ವೈರಲ್ ಆಗಿರುವ ಈ ಗ್ರಾಮ ಯಾವುದು ಗೊತ್ತಾ?

    ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್‌ನೆಟ್‌ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್‌ನೆಟ್‌ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.