ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ಮರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.

ಬಳ್ಳಾರಿ ಮೃಗಾಲಯದಲ್ಲಿ 7 ವರ್ಷದ ಹಿಂದೆ ಸುಂದರಿ ಎಂಬ ಜಿಂಕೆಮರಿ ಜನ್ಮ ತಾಳಿತ್ತು, ಬಳ್ಳಾರಿ ಮೃಗಾಲಯದಲ್ಲಿದ್ದ 6೦ ಬ್ಲಾಕ್ ಬಕ್ಸ್ ಪೈಕಿ ಸುಂದರಿ ಕೂಡ ಒಬ್ಬಳಾಗಿದ್ದಳು. ಈಗ ಅವುಗಳನ್ನು ಸದ್ಯ ಹಂಪಿ ಬಳಿಯಿರುವ ಬಿಳಿಕ್ಕಲ್ ಮೃಗಾಲಯಕ್ಕೆ ಸ್ಥಳಾಂತರ ಮಾಡಲಾಗಿದೆ. ಬಳ್ಳಾರಿ ಮೃಗಾಲಯದಲ್ಲಿ ಬಸವರಾಜ್ ಪ್ರಾಣಿಗಳಿಗೆ ಆಹಾರ ನೀಡುವ ಹಾಗೂ ಊಟ ತಿನ್ನಿಸುವ ಮೇಲ್ವಿಚಾರಕರಾಗಿದ್ದರು. ಅರಣ್ಯ ಇಲಾಖೆಯ ವಾರ್ಷಿಕ ವರ್ಗಾವಣೆ ನಿಯಮದಂತೆ ಬಸವರಾಜ್ ಅವರನ್ನು ಕಮಲಪುರ ಪ್ರದೇಶಕ್ಕೆ ವರ್ಗಾವಣೆ ಮಾಡಲಾಯಿತು. ಸದ್ಯ ಬಸವರಾಜ್ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯದ ಪ್ರಾಣಿಗಳಿಗೆ ಆಹಾರ ತಿನ್ನಿಸುವ ಮೇಲ್ವಿಚಾರಕರಾಗಿ ವರ್ಗಾವಣೆ ಗೊಂಡಿದ್ದಾರೆ.

ನವೆಂಬರ್ 3 ರಿಂದ ಈ ಮೃಗಾಲಯ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿದೆ, ಇಲ್ಲಿಯೇ ವಾಸವಿರುವ ಸುಂದರಿ ಆಕಸ್ಮಿಕವಾಗಿ ತನ್ನ ಕೇರ್ ಟೇಕರ್ ನೋಡಿ, ಅವರನ್ನು ಗುರುತಿಸಿ ಆತನ ಹಿಂದೆ ಹಿಂದೆಯೇ ಸುತ್ತುತ್ತಿದ್ದಾಳೆ. 7 ವರ್ಷಗಳ ಹಿಂದೆ ಸುಂದರಿ ಹುಟ್ಟಿದಾಗ ತನಗೆ ಹಾಲು ಕುಡಿಸಿ ಬೆಳೆಸಿದ್ದ ಬಸವರಾಜ್ ನನ್ನು ಆಕೆ ಮರೆತಿಲ್ಲ, ಬಸವರಾಜ್ ಆಹಾರ ನೋಡಲು ಹೋದರೆ ಉಳಿದೆಲ್ಲಾ ಜಿಂಕೆಗಳು ಹೆದರಿ ದೂರ ಓಡುತ್ತಿದ್ದವು. ಆದರೆ ಸುಂದರಿ ಮಾತ್ರ ಬಸವರಾಜ್ ಹಿಂದಿಂದೆಯೇ ಸುತ್ತುತ್ತಿದ್ದಳು.

ಈ ಸುಂದರಿ ಜಿಂಕೆ ಯಾವಾಗಲು ನನ್ನ ಹಿಂದೆಯೇ ಇರುತಾ ಇತ್ತು , ನಾನು ಗೇಟ್ ಬಾಗಿಲು ಮುಚ್ಚಿದರೇ, ಸುಮಾರು ಅರ್ಧ ಗಂಟೆಗಳ ಕಾಲ ಕಾದು ನಂತರ ಬೇರೆ ಜಿಂಕೆಗಳ ಜೊತೆ ಹೋಗುತಿತ್ತು . ಪ್ರಾಣಿಗಳ ಈ ವರ್ತನೆ ನನಗೆ ತುಂಬಾ ಭಿನ್ನವೆನಿಸುತ್ತಿದೆ.ಈ ಜಿಂಕೆ ಮರಿ ನನ್ನನ್ನು ಇಷ್ಟೋಂದು ನೆನಪಿನಲ್ಲಿಟ್ಟುಕೊಂಡಿರುವುದು ನನಗೆ ಆಶ್ಚರ್ಯ ತರಿಸಿದೆ ಎಂದು ಬಸವರಾಜ್ ಹೇಳಿದ್ದಾರೆ. ಬಳ್ಳಾರಿಯ ಗುದ್ದೂರು ಮೂಲದ ಬಸವರಾಜ್ ಅರಣ್ಯ ಇಲಾಖೆಯ ನೌಕರರಾಗಿದ್ದಾರೆ, ಬಸವರಾಜ್ ಸದ್ಯ ಕಾವಲುಗಾರನಾಗಿ
ನೇಮಕಗೊಂಡಿದ್ದಾರೆ.

ಪ್ರಾಣಿಗಳನ್ನು ಪ್ರೀತಿಸುವ ಅವರು ಅವುಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಾರೆ, ಈಗ ಸುಂದರಿ ಜೊತೆ ಅವರಿಗೆ ವಿಶೇಷ ಪ್ರೀತಿ ವಾತ್ಸಲ್ಯ ಬೆಳೆದಿದೆ. ಸುಂದರಿಯನ್ನು ಬಸವರಾಜ್ ಸುಂದರಿ ಎಂದು ಕರೆಯುತ್ತಾರೆ, ಸುಂದರಿ ಎಂದು ಕರೆದ ಕೂಡಲೇ ಜಿಂಕೆ ಮರಿ ಪ್ರತಿಕ್ರಿಯಿಸುತ್ತದೆ. ಸುಂದರಿ ನನ್ನ ಮಗಳಿದ್ದಂತೆ ಎಂದು ಬಸವರಾಜ್ ಹೇಳಿದ್ದಾರೆ. ಬ್ಲ್ಯಾಕ್ ಬಕ್ಸ್ ಗುಜರಾತ್, ರಾಜಸ್ತಾನ, ಮಧ್ಯ ಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕದ ಒಣ ಭೂಮಿಯಲ್ಲಿ ಕಂಡುಬರುವ ಪ್ರಾಣಿಯಾಗಿದೆ ಅಳಿವಿನಂಚಿನಲ್ಲಿರುವ ಪ್ರಬೇಧದ
ಜಿಂಕೆಗಳನ್ನ ವನ್ಯ ಜೀವಿ ಕಾಯಿದೆ ಪ್ರಕಾರ ರಕ್ಷಿಸಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ..
2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ..
ಜಿಯೋ ಗ್ರಾಹಕರ ಬೆನ್ನಲ್ಲೇ ಏರ್ಟೆಲ್ ಮತ್ತು ವೊಡಾಫೋನ್ ಗ್ರಾಹಕರಿಗೆ ಮುಂದಿನ ತಿಂಗಳಿಂದ ಫೋನ್ ಬಿಲ್ ಶಾಕ್ ತಟ್ಟಲಿದೆ. ವೊಡಾಫೋನ್ ಐಡಿಯಾ ಹಾಗೂ ಭಾರ್ತಿ ಏರ್ಟೆಲ್ ಕಂಪನಿಗಳು ಡಿಸೆಂಬರ್ 1ರಿಂದ ತನ್ನ ಸೇವೆಗಳ ದರಗಳನ್ನು ಏರಿಕೆ ಮಾಡುವುದಾಗಿ ಘೋಷಿಸಿವೆ. ಕೆಲವೇ ವರ್ಷಗಳ ಹಿಂದೆ ಹತ್ತಾರು ದೂರ ಸಂಪರ್ಕ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ತರಹೇವಾರಿ ಆಫರ್ಗಳ ಮೂಲಕ ಕಡಿಮೆ ದರ ಸೇವೆಗಳನ್ನು ಘೋಷಿಸುತ್ತಿದ್ದವು. ಆದರೆ ಈಗ ಬಹುತೇಕ ದೂರಸಂಪರ್ಕ ಕಂಪೆನಿಗಳು ಮುಚ್ಚಿ ಹೋಗಿವೆ ಅಥವಾ ವಿಲೀನಗೊಂಡಿವೆ. ಜಿಯೋ, ಏರ್ಟೆಲ್, ವೊಡಾಫೊನ್ ಐಡಿಯಾ ಹಾಗೂ ಸರ್ಕಾರಿ ಸ್ವಾಮ್ಯ…
ಮೈಸೂರು: ದೇವಾಲಯ ಪ್ರವೇಶಿಸಿದ ದಲಿತ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮೇಲ್ವರ್ಗದ ಜನರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೈಸೂರು- ಊಟಿ ರಸ್ತೆಯ ವೀರಾನಪುರ ಗೇಟ್ ಬಳಿಯ ಗ್ರಾಮದವೊಂದರಲ್ಲಿ ನಡೆದಿದೆ. ಜೂನ್ 3 ರಂದು ಘಟನೆ ನಡೆದಿದ್ದು, ದಲಿತ ವ್ಯಕ್ತಿಗೆ ಥಳಿಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲ್ಲೆಗೊಳ್ಳಗಾದ 35 ವರ್ಷದ ವ್ಯಕ್ತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಸೆಂಟ್ ಮೇರಿಸ್ ಸೈಕಿಯಾಟ್ರಿಕ್ ಡಿ- ಅಡಿಕ್ಸನ್ ಮತ್ತು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಾಲಯ ಪ್ರವೇಶಿಸಿದ್ದರಿಂದ ಮೇಲ್ವರ್ಗದವರು ಹಲ್ಲೆ ನಡೆಸಿದ್ದು,…
ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.
ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…
ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ