ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ಮರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.

ಬಳ್ಳಾರಿ ಮೃಗಾಲಯದಲ್ಲಿ 7 ವರ್ಷದ ಹಿಂದೆ ಸುಂದರಿ ಎಂಬ ಜಿಂಕೆಮರಿ ಜನ್ಮ ತಾಳಿತ್ತು, ಬಳ್ಳಾರಿ ಮೃಗಾಲಯದಲ್ಲಿದ್ದ 6೦ ಬ್ಲಾಕ್ ಬಕ್ಸ್ ಪೈಕಿ ಸುಂದರಿ ಕೂಡ ಒಬ್ಬಳಾಗಿದ್ದಳು. ಈಗ ಅವುಗಳನ್ನು ಸದ್ಯ ಹಂಪಿ ಬಳಿಯಿರುವ ಬಿಳಿಕ್ಕಲ್ ಮೃಗಾಲಯಕ್ಕೆ ಸ್ಥಳಾಂತರ ಮಾಡಲಾಗಿದೆ. ಬಳ್ಳಾರಿ ಮೃಗಾಲಯದಲ್ಲಿ ಬಸವರಾಜ್ ಪ್ರಾಣಿಗಳಿಗೆ ಆಹಾರ ನೀಡುವ ಹಾಗೂ ಊಟ ತಿನ್ನಿಸುವ ಮೇಲ್ವಿಚಾರಕರಾಗಿದ್ದರು. ಅರಣ್ಯ ಇಲಾಖೆಯ ವಾರ್ಷಿಕ ವರ್ಗಾವಣೆ ನಿಯಮದಂತೆ ಬಸವರಾಜ್ ಅವರನ್ನು ಕಮಲಪುರ ಪ್ರದೇಶಕ್ಕೆ ವರ್ಗಾವಣೆ ಮಾಡಲಾಯಿತು. ಸದ್ಯ ಬಸವರಾಜ್ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯದ ಪ್ರಾಣಿಗಳಿಗೆ ಆಹಾರ ತಿನ್ನಿಸುವ ಮೇಲ್ವಿಚಾರಕರಾಗಿ ವರ್ಗಾವಣೆ ಗೊಂಡಿದ್ದಾರೆ.

ನವೆಂಬರ್ 3 ರಿಂದ ಈ ಮೃಗಾಲಯ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿದೆ, ಇಲ್ಲಿಯೇ ವಾಸವಿರುವ ಸುಂದರಿ ಆಕಸ್ಮಿಕವಾಗಿ ತನ್ನ ಕೇರ್ ಟೇಕರ್ ನೋಡಿ, ಅವರನ್ನು ಗುರುತಿಸಿ ಆತನ ಹಿಂದೆ ಹಿಂದೆಯೇ ಸುತ್ತುತ್ತಿದ್ದಾಳೆ. 7 ವರ್ಷಗಳ ಹಿಂದೆ ಸುಂದರಿ ಹುಟ್ಟಿದಾಗ ತನಗೆ ಹಾಲು ಕುಡಿಸಿ ಬೆಳೆಸಿದ್ದ ಬಸವರಾಜ್ ನನ್ನು ಆಕೆ ಮರೆತಿಲ್ಲ, ಬಸವರಾಜ್ ಆಹಾರ ನೋಡಲು ಹೋದರೆ ಉಳಿದೆಲ್ಲಾ ಜಿಂಕೆಗಳು ಹೆದರಿ ದೂರ ಓಡುತ್ತಿದ್ದವು. ಆದರೆ ಸುಂದರಿ ಮಾತ್ರ ಬಸವರಾಜ್ ಹಿಂದಿಂದೆಯೇ ಸುತ್ತುತ್ತಿದ್ದಳು.

ಈ ಸುಂದರಿ ಜಿಂಕೆ ಯಾವಾಗಲು ನನ್ನ ಹಿಂದೆಯೇ ಇರುತಾ ಇತ್ತು , ನಾನು ಗೇಟ್ ಬಾಗಿಲು ಮುಚ್ಚಿದರೇ, ಸುಮಾರು ಅರ್ಧ ಗಂಟೆಗಳ ಕಾಲ ಕಾದು ನಂತರ ಬೇರೆ ಜಿಂಕೆಗಳ ಜೊತೆ ಹೋಗುತಿತ್ತು . ಪ್ರಾಣಿಗಳ ಈ ವರ್ತನೆ ನನಗೆ ತುಂಬಾ ಭಿನ್ನವೆನಿಸುತ್ತಿದೆ.ಈ ಜಿಂಕೆ ಮರಿ ನನ್ನನ್ನು ಇಷ್ಟೋಂದು ನೆನಪಿನಲ್ಲಿಟ್ಟುಕೊಂಡಿರುವುದು ನನಗೆ ಆಶ್ಚರ್ಯ ತರಿಸಿದೆ ಎಂದು ಬಸವರಾಜ್ ಹೇಳಿದ್ದಾರೆ. ಬಳ್ಳಾರಿಯ ಗುದ್ದೂರು ಮೂಲದ ಬಸವರಾಜ್ ಅರಣ್ಯ ಇಲಾಖೆಯ ನೌಕರರಾಗಿದ್ದಾರೆ, ಬಸವರಾಜ್ ಸದ್ಯ ಕಾವಲುಗಾರನಾಗಿ
ನೇಮಕಗೊಂಡಿದ್ದಾರೆ.

ಪ್ರಾಣಿಗಳನ್ನು ಪ್ರೀತಿಸುವ ಅವರು ಅವುಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಾರೆ, ಈಗ ಸುಂದರಿ ಜೊತೆ ಅವರಿಗೆ ವಿಶೇಷ ಪ್ರೀತಿ ವಾತ್ಸಲ್ಯ ಬೆಳೆದಿದೆ. ಸುಂದರಿಯನ್ನು ಬಸವರಾಜ್ ಸುಂದರಿ ಎಂದು ಕರೆಯುತ್ತಾರೆ, ಸುಂದರಿ ಎಂದು ಕರೆದ ಕೂಡಲೇ ಜಿಂಕೆ ಮರಿ ಪ್ರತಿಕ್ರಿಯಿಸುತ್ತದೆ. ಸುಂದರಿ ನನ್ನ ಮಗಳಿದ್ದಂತೆ ಎಂದು ಬಸವರಾಜ್ ಹೇಳಿದ್ದಾರೆ. ಬ್ಲ್ಯಾಕ್ ಬಕ್ಸ್ ಗುಜರಾತ್, ರಾಜಸ್ತಾನ, ಮಧ್ಯ ಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕದ ಒಣ ಭೂಮಿಯಲ್ಲಿ ಕಂಡುಬರುವ ಪ್ರಾಣಿಯಾಗಿದೆ ಅಳಿವಿನಂಚಿನಲ್ಲಿರುವ ಪ್ರಬೇಧದ
ಜಿಂಕೆಗಳನ್ನ ವನ್ಯ ಜೀವಿ ಕಾಯಿದೆ ಪ್ರಕಾರ ರಕ್ಷಿಸಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ…
ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….
ಲೋಕಸಭೆ ಚುನಾವಣೆ ಹತ್ತಿರುವಿರುವಾಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದೆ. ಬಿ.ಎಸ್.ವೈ.ಗೆ ಸಂಬಂಧಿಸಿದ ಡೈರಿ ಮತ್ತು ಪೆನ್ ಡ್ರೈವ್ ನ್ನು ತನಿಖಾಧಿಕಾರಿಗಳಿಗೆ ಮತ್ತು ನ್ಯಾಯಾಲಯಕ್ಕೆ ನೀಡಲು ಈಶ್ವರಪ್ಪ ಆಪ್ತ ವಿನಯ್ ಒಪ್ಪಿಕೊಂಡಿದ್ದಾರಂತೆ. ಆದ್ರೆ ವಿನಯ್ ಗೆ ಭದ್ರತೆ ಕೊಟ್ರೆ ಮಾತ್ರ ಪೆನ್ ಡ್ರೈವ್ ಕೊಡುವುದಾಗಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸರಿಗೆ ಪತ್ರ ಬರೆದಿರುವ ವಿನಯ್, ಯಡಿಯೂರಪ್ಪಗೆ ಸಂಬಂಧಿಸಿದಂತೆ ತಮ್ಮ ಬಳಿ ಪ್ರಮುಖ ಸಾಕ್ಷ್ಯಾಧಾರಗಳಿವೆ. ಅದನ್ನು ನಾನು ನ್ಯಾಯಾಲಯದ ಮುಂದೆ ಇಡಲು ಸಿದ್ದನಿದ್ದೇನೆ. ಆದ್ರೆ ಸತ್ಯ…
ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.
ಒಂದೆಕರೆ ಕ್ಷಣದಲ್ಲೇ ಪರಿಹಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ. ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ. ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ…