ವಿಸ್ಮಯ ಜಗತ್ತು

ಏಳು ವರ್ಷದ ನಂತರವೂ ತನ್ನ ಪೋಷಕನನ್ನು ಗುರುತು ಹಿಡಿದು ಆತನ ಹಿಂದೆ ಬಿದ್ದ ಜಿಂಕೆ..!ಈ ಲೇಖನ ಓದಿ ಶಾಕ್ ಆಗ್ತೀರಾ…

710

ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ಮರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.

ಸುಂದರಿ ಎಂಬ ಜಿಂಕೆಮರಿ :

ಬಳ್ಳಾರಿ ಮೃಗಾಲಯದಲ್ಲಿ 7 ವರ್ಷದ ಹಿಂದೆ ಸುಂದರಿ ಎಂಬ ಜಿಂಕೆಮರಿ ಜನ್ಮ ತಾಳಿತ್ತು, ಬಳ್ಳಾರಿ ಮೃಗಾಲಯದಲ್ಲಿದ್ದ 6೦ ಬ್ಲಾಕ್ ಬಕ್ಸ್ ಪೈಕಿ ಸುಂದರಿ ಕೂಡ ಒಬ್ಬಳಾಗಿದ್ದಳು. ಈಗ ಅವುಗಳನ್ನು ಸದ್ಯ ಹಂಪಿ ಬಳಿಯಿರುವ ಬಿಳಿಕ್ಕಲ್ ಮೃಗಾಲಯಕ್ಕೆ ಸ್ಥಳಾಂತರ ಮಾಡಲಾಗಿದೆ. ಬಳ್ಳಾರಿ ಮೃಗಾಲಯದಲ್ಲಿ ಬಸವರಾಜ್ ಪ್ರಾಣಿಗಳಿಗೆ ಆಹಾರ ನೀಡುವ ಹಾಗೂ ಊಟ ತಿನ್ನಿಸುವ ಮೇಲ್ವಿಚಾರಕರಾಗಿದ್ದರು. ಅರಣ್ಯ ಇಲಾಖೆಯ ವಾರ್ಷಿಕ ವರ್ಗಾವಣೆ ನಿಯಮದಂತೆ ಬಸವರಾಜ್ ಅವರನ್ನು ಕಮಲಪುರ ಪ್ರದೇಶಕ್ಕೆ ವರ್ಗಾವಣೆ ಮಾಡಲಾಯಿತು. ಸದ್ಯ ಬಸವರಾಜ್ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯದ ಪ್ರಾಣಿಗಳಿಗೆ ಆಹಾರ ತಿನ್ನಿಸುವ ಮೇಲ್ವಿಚಾರಕರಾಗಿ ವರ್ಗಾವಣೆ ಗೊಂಡಿದ್ದಾರೆ.

7 ವರ್ಷವಾದರು ಪೋಷಕನ ಮರೆತಿಲ್ಲ ಸುಂದರಿ:

ನವೆಂಬರ್ 3 ರಿಂದ ಈ ಮೃಗಾಲಯ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿದೆ, ಇಲ್ಲಿಯೇ  ವಾಸವಿರುವ ಸುಂದರಿ ಆಕಸ್ಮಿಕವಾಗಿ ತನ್ನ ಕೇರ್ ಟೇಕರ್ ನೋಡಿ, ಅವರನ್ನು ಗುರುತಿಸಿ ಆತನ ಹಿಂದೆ ಹಿಂದೆಯೇ ಸುತ್ತುತ್ತಿದ್ದಾಳೆ. 7 ವರ್ಷಗಳ ಹಿಂದೆ ಸುಂದರಿ ಹುಟ್ಟಿದಾಗ ತನಗೆ ಹಾಲು ಕುಡಿಸಿ ಬೆಳೆಸಿದ್ದ ಬಸವರಾಜ್ ನನ್ನು ಆಕೆ ಮರೆತಿಲ್ಲ, ಬಸವರಾಜ್ ಆಹಾರ ನೋಡಲು ಹೋದರೆ ಉಳಿದೆಲ್ಲಾ ಜಿಂಕೆಗಳು ಹೆದರಿ ದೂರ ಓಡುತ್ತಿದ್ದವು. ಆದರೆ ಸುಂದರಿ  ಮಾತ್ರ ಬಸವರಾಜ್ ಹಿಂದಿಂದೆಯೇ ಸುತ್ತುತ್ತಿದ್ದಳು.

ಜಿಂಕೆ ಮರಿ ನನ್ನ ನೆನಪಿಟ್ಟುಕೊಂಡಿರುವುದೇ ಆಶ್ಚರ್ಯ:

ಈ ಸುಂದರಿ ಜಿಂಕೆ ಯಾವಾಗಲು ನನ್ನ ಹಿಂದೆಯೇ ಇರುತಾ ಇತ್ತು , ನಾನು ಗೇಟ್ ಬಾಗಿಲು ಮುಚ್ಚಿದರೇ, ಸುಮಾರು ಅರ್ಧ ಗಂಟೆಗಳ ಕಾಲ ಕಾದು ನಂತರ ಬೇರೆ ಜಿಂಕೆಗಳ ಜೊತೆ ಹೋಗುತಿತ್ತು . ಪ್ರಾಣಿಗಳ ಈ ವರ್ತನೆ ನನಗೆ ತುಂಬಾ ಭಿನ್ನವೆನಿಸುತ್ತಿದೆ.ಈ ಜಿಂಕೆ ಮರಿ ನನ್ನನ್ನು ಇಷ್ಟೋಂದು  ನೆನಪಿನಲ್ಲಿಟ್ಟುಕೊಂಡಿರುವುದು ನನಗೆ ಆಶ್ಚರ್ಯ ತರಿಸಿದೆ ಎಂದು ಬಸವರಾಜ್ ಹೇಳಿದ್ದಾರೆ. ಬಳ್ಳಾರಿಯ ಗುದ್ದೂರು ಮೂಲದ ಬಸವರಾಜ್ ಅರಣ್ಯ ಇಲಾಖೆಯ ನೌಕರರಾಗಿದ್ದಾರೆ, ಬಸವರಾಜ್ ಸದ್ಯ ಕಾವಲುಗಾರನಾಗಿ
ನೇಮಕಗೊಂಡಿದ್ದಾರೆ.

ಸುಂದರಿ ಜೊತೆ ಅವರಿಗೆ ವಿಶೇಷ ಪ್ರೀತಿ ವಾತ್ಸಲ್ಯ ಬೆಳೆದಿದೆ:

ಪ್ರಾಣಿಗಳನ್ನು ಪ್ರೀತಿಸುವ ಅವರು ಅವುಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಾರೆ, ಈಗ ಸುಂದರಿ ಜೊತೆ ಅವರಿಗೆ ವಿಶೇಷ ಪ್ರೀತಿ ವಾತ್ಸಲ್ಯ ಬೆಳೆದಿದೆ. ಸುಂದರಿಯನ್ನು ಬಸವರಾಜ್ ಸುಂದರಿ ಎಂದು ಕರೆಯುತ್ತಾರೆ, ಸುಂದರಿ ಎಂದು ಕರೆದ ಕೂಡಲೇ ಜಿಂಕೆ ಮರಿ ಪ್ರತಿಕ್ರಿಯಿಸುತ್ತದೆ. ಸುಂದರಿ ನನ್ನ ಮಗಳಿದ್ದಂತೆ ಎಂದು ಬಸವರಾಜ್ ಹೇಳಿದ್ದಾರೆ. ಬ್ಲ್ಯಾಕ್ ಬಕ್ಸ್ ಗುಜರಾತ್, ರಾಜಸ್ತಾನ, ಮಧ್ಯ ಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕದ ಒಣ ಭೂಮಿಯಲ್ಲಿ ಕಂಡುಬರುವ ಪ್ರಾಣಿಯಾಗಿದೆ ಅಳಿವಿನಂಚಿನಲ್ಲಿರುವ ಪ್ರಬೇಧದ
ಜಿಂಕೆಗಳನ್ನ ವನ್ಯ ಜೀವಿ ಕಾಯಿದೆ ಪ್ರಕಾರ ರಕ್ಷಿಸಲಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    20ಕ್ಕೂ ಅಧಿಕ ಕೈ ಶಾಸಕರಿಂದ ಬಿಎಸ್‍ವೈಗೆ ಕರೆ!

    ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು,ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್‍ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್‍ನಲ್ಲಿ ಇದೆ. ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ…

  • ಸೌಂದರ್ಯ

    ಮಹಿಳಾಮಣಿಗಳೆ “ಮೂಗುತಿ” ಚುಚ್ಚಿಸಿಕೊಳ್ಳುವ ಮುನ್ನ ಈ ಲೇಖನಿ ಓದಿ, ತಪ್ಪದೆ ಶೇರ್ ಮಾಡಿ

    ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.

  • ಆರೋಗ್ಯ

    ‘ಎಳನೀರಿನಲ್ಲಿದೆ’ ಎಲ್ಲ ರೋಗಗಳನ್ನು ತಡೆಯಬಲ್ಲ ಶಕ್ತಿ ..!ತಿಳಿಯಲು ಈ ಲೇಖನ ಓದಿ ..

    ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು

  • ಸುದ್ದಿ

    ಮೃತ ಅಪ್ಪನಿಗೆ ಮಸೇಜ್ ಮಾಡುತ್ತಿದ್ದಳು, 4 ವರ್ಷದ ನಂತರ ಬಂತು ರಿಪ್ಲೈ..! ತಂದೆ ಮಗಳ ಕರುಣಾಜನಕ ಕಥೆ….

    ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್​ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರ​​​ನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್​ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್​ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ…

  • ಸುದ್ದಿ

    100 ಕೋಟಿ ಮೀರಿದ ಕುರುಕ್ಷೇತ್ರ ಸಂಭ್ರಮದಲ್ಲಿ ಕೇಕ್‌ ಕತ್ತರಿಸಿ ಆಚರಣೆ ಮಾಡಿದ ದರ್ಶನ್‌..!

    ದರ್ಶನ್‌ ಅಭಿಮಾನಿಗಳ ಬಳಗ ಇದನ್ನು ಅಧಿಕೃವಾಗಿ ಘೋಷಿಸಿಕೊಂಡಿದೆ. ‘ಕುರುಕ್ಷೇತ್ರ’ ಚಿತ್ರ ಬರೊಬ್ಬರಿ . 100 ಕೋಟಿ ಕಲೆಕ್ಷನ್‌ ಮಾಡಿದೆ ಎಂದು ಕೇಕ್‌ ಕತ್ತರಿಸಿ ಸಂಭ್ರಮ ಆಚರಿಸಿದೆ. ಆ ಸಂಭ್ರಮಾಚರಣೆಯಲ್ಲಿ ಚಿತ್ರದ ಪ್ರಮುಖ ಪಾತ್ರಧಾರಿ ದರ್ಶನ್‌ ಕೂಡ ಭಾಗಿಯಾಗಿದ್ದಾರೆ. ಇದೊಂದು ಖುಷಿ ವಿಚಾರ. ಅಧಿಕೃತವಾಗಿ ಇದರ ಗಳಿಕೆ ಎಷ್ಟು, ಏನು ಎನ್ನುವುದು ಗೊತ್ತಿಲ್ಲ. ಆದರೆ ಆರಂಭದಿಂದಲೇ ದಾಖಲೆ ಕಲೆಕ್ಷನ್‌ ಆಗುತ್ತಿರುವ ಬಗ್ಗೆ ಮಾಹಿತಿ ಇತ್ತು. ಆಗಾಗ ನಿರ್ಮಾಪಕರು ಸಿಕ್ಕಾಗಲೂ ಹೇಳುತ್ತಿದ್ದರು. ಈಗ ನಮ್ಮ ಚಿತ್ರ 100 ಕೋಟಿ ರೂ….

  • Health, karnataka, Lifestyle, ಆರೋಗ್ಯ

    ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…