ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್ ಏನು ಗೊತ್ತಾ ! ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ.
ಐಟಿ ಕಂಪೆನಿಗಳು ಈಗ ತಮಗೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಕೆಲ ಉದ್ಯೋಗಿಗಳನ್ನು ಕಿತ್ತು ಹಾಕಲು ಮುಂದಾಗುತ್ತಿದ್ದು, ಈಗ ಸಹೋದ್ಯೋಗಿಗಳ ನಡುವೆ ವೈಮನಸ್ಸು ತರುವ ಕೆಲಸಕ್ಕೆ ಹೈ ಹಾಕಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.
ಕಂಪೆನಿಗಳು ಈಗ ತಮಗೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಅಸಮರ್ಥ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಒಂದೊಂದೆ ತಂತ್ರವನ್ನು ಅನುಸರಿಸಲು ಆರಂಭಿಸಿದೆ. ಈಗ ಉದ್ಯೋಗಿಯೊಬ್ಬ ತನ್ನ ಉದ್ಯೋಗವನ್ನು ಉಳಿಸಿಕೊಳ್ಳಲು ಬೇರೆ ಒಬ್ಬ ಉದ್ಯೋಗಿಯನ್ನು ಮನೆಗೆ ಕಳುಹಿಸಬೇಕಾದ ಸಂದರ್ಭ ಒದಗಿ ಬಂದಿದೆ, ಎಂದು ಉದ್ಯೋಗಿಗಳ ಹೇಳಿಕೆಯನ್ನು ಆಧರಿಸಿ ವರದಿಯಾಗಿದೆ.
ಕಂಪೆನಿಗೆ ವೆಚ್ಚದಾಯಕವಾಗಿರುವ ಉದ್ಯೋಗಿಗಳನ್ನು ಗುರುತಿಸಿ ಅವರನ್ನು ಕೆಲಸದಿಂದ ಕಿತ್ತು ಹಾಕುವಂತೆ ಕಂಪೆನಿಯ ಹಿರಿಯ ಅಧಿಕಾರಿಗಳು ಎಚ್ಆರ್ಗೆ ಆದೇಶಿಸಿದ್ದಾರೆ.
ಇದರಂತೆ ಕೆಲ ಕಂಪೆನಿಗಳ ಎಚ್ಆರ್ಗಳು ಕೆಲ ಉದ್ಯೋಗಿಗಳಿಗೆ ಕರೆ ಮಾಡಿ, ಕಡಿಮೆ ವೇತನ ಪಡೆದು ಕೆಲಸವನ್ನು ತೊರೆಯುವಂತೆ ಹೇಳಿದ್ದಾರೆ. ಇನ್ನು ಕೆಲ ಕಂಪೆನಿಗಳು, ನಿಮಗೆ ಇಷ್ಟೊಂದು ವೇತನ ನೀಡಲು ಕಷ್ಟವಾಗುತ್ತದೆ. ಹೀಗಾಗಿ ಒಂದೋ ನೀವು ಕಂಪೆನಿ ತೊರೆಯಿರಿ, ಇಲ್ಲವೇ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೆಂದು ರೆಫರ್ ಮಾಡಿ ಎಂದು ಹೇಳಿದ್ದಾರೆ.
ಎಚ್ಆರ್ಗಳ ಮೂಲಕ ಈ ಆಟವನ್ನು ಆಡಿ ಕಂಪೆನಿಗಳು ಮನರಂಜನೆಯನ್ನು ತೆಗೆದುಕೊಳ್ಳುತ್ತಿದ್ದರೆ, ಉದ್ಯೋಗಿಗಳು ತಮ್ಮ ನೋವಿನ ವಿಚಾರವನ್ನು ಮಾಧ್ಯಮಗಳಲ್ಲಿ ತೋಡಿಕೊಂಡಿದ್ದಾರೆ.
ಐಟಿ ಉದ್ಯೋಗಿಯೊಬ್ಬರು ಹೇಳಿರುವ ಪ್ರಕಾರ ಕಂಪೆನಿಗಳ ಆಟ ಹೇಗಿರುತ್ತೆ ಗೊತ್ತಾ?
ಬೆಂಗಳೂರಿನ ನೊಂದ ಐಟಿ ಉದ್ಯೋಗಿಯೊಬ್ಬರು ಕಂಪೆನಿ ಹೇಗೆ ಉದ್ಯೋಗಿಗಳ ಜೊತೆ ನಡೆದುಕೊಳ್ಳುತ್ತಿದೆ ಎನ್ನುವುದನ್ನು ವಿವರಿಸುತ್ತಾ, ಕಳೆದ ತಿಂಗಳ 23ರಂದು ಎಚ್ಆರ್ ಮ್ಯಾನೇಜರ್ ಅವರನ್ನು ಭೇಟಿಯಾಗುವಂತೆ ನನಗೆ ಕರೆ ಬಂತು. ಹೀಗಾಗಿ ನಾನು ಹೈದರಾಬಾದ್ನಲ್ಲಿರುವ ಎಚ್ಆರ್ ಮುಖ್ಯಸ್ಥರ ಜೊತೆ ವಿಡಿಯೋ ಚಾಟ್ ಮಾಡುತ್ತಿರುವಾಗ, “ನೀನು ಉದ್ಯೋಗವನ್ನು ತೊರೆಯಬೇಕು. ನಿನಗೆ 2 ವಾರ ಸಮಯವಕಾಶ ಮತ್ತು 2 ತಿಂಗಳ ಮೂಲ ವೇತನ ನೀಡುತ್ತೇವೆ” ಎಂದರು.
ಇದಾದ ಬಳಿಕ 29ರಂದು ಕರೆ ಮಾಡಿ “ಇನ್ನು ಯಾಕೆ ರಾಜೀನಾಮೆ ನೀಡಿಲ್ಲ” ಎಂದು ಪ್ರಶ್ನಿಸಿದರು. ನಾನು “ರಾಜೀನಾಮೆ ನೀಡುವುದಿಲ್ಲ” ಎಂದೆ. ಇದಕ್ಕೆ ಅವರು “ನಿಮ್ಮ ಕಾಂಟ್ರಾಕ್ಟ್ ಟರ್ಮಿನೇಟ್ ಮಾಡುತ್ತೇವೆ. ಈ ರೀತಿ ಮಾಡಿದರೆ ಮುಂದೆ ಬೇರೆ ಯಾವ ಕಂಪೆನಿಯಲ್ಲೂ ಕೆಲಸ ಸಿಗುವುದಿಲ್ಲ” ಎಂದು ಬೆದರಿಸಿದರು. 31 ರಂದು ಕರೆ ಮಾಡಿ, “ನಿನ್ನ ಬದಲಿಗೆ ಬೇರೊಬ್ಬ ಉದ್ಯೋಗಿಯನ್ನು ರೆಫರ್ ಮಾಡು, ಆತನನ್ನು ಕೆಲಸದಿಂದ ತೆಗೆದು ಹಾಕಲಾಗುವುದು” ಎನ್ನುವ ವಿಚಿತ್ರ ಆಫರ್ ನೀಡಿದರು.
ಅದೇ ದಿನ ನನಗೆ ಆಟೋಮೇಟೆಡ್ ಇಮೇಲ್ ಬಂತು. ಅದರಲ್ಲಿ “ಕಂಪನಿಯಲ್ಲಿ ಇದು ನಿನ್ನ ಕೊನೆಯ ದಿನ. ಇಂದಿನಿಂದ ನಿನಗೆ ನೀಡಿರುವ ಕಂಪನಿ ಇಮೇಲ್ ಐಡಿ ಹಾಗೂ ಇತರ ಸೇವೆಗಳನ್ನು ರದ್ದು ಮಾಡಲಾಗುತ್ತಿದೆ” ಎಂದು ತಿಳಿಸಲಾಗಿತ್ತು. ಆದರೆ ಈ ಮೇಲ್ ಬಗ್ಗೆ ಎಚ್.ಆರ್. ಕಡೆಯಿಂದ ಯಾವುದೇ ಅಧಿಕೃತ ಕರೆ ಬರಲಿಲ್ಲ ಎಂದು ಅವರು ತಮ್ಮ ನೋವನ್ನು ತೊಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 06/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ಇವರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ : 06:16 ಸೂರ್ಯಾಸ್ತ : 18:28 ಪಕ್ಷ : ಕೃಷ್ಣ ಪಕ್ಷ ತಿಥಿ : ಷಷ್ಠೀ ನಕ್ಷತ್ರ : ಜ್ಯೆಷ್ಟ್ಯ ಯೋಗ : ವರಿಯಾನ್ ಪ್ರಥಮ ಕರಣ :…
ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ. ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ. ಈ ಘಟನೆ ಗುರುವಾರ ರಾತ್ರಿ…
ಅತ್ಯುನ್ನತ ಪ್ರೇಮದ ಐತಿಹಾಸಿಕ ಸ್ಮಾರಕವಾಗಿರುವ ಆಗ್ರಾದ ವಿಶ್ವ ಪ್ರಸಿದ್ಧ ತಾಜ್ ಮಹಲ್ ಈಚಿನ ದಿನಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಸುದ್ದಿಗಳಿಗಾಗಿ ಮುಖ್ಯ ಶೀರ್ಷಿಕೆಯಲ್ಲಿ ರಾರಾಜಿಸುವಂತಾಗಿದೆ.
ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. 27 ವರ್ಷದ ಮಂಜುನಾಥ್ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು…
ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು. ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 12/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ ತಿಂಗಳು (ಹುಣ್ಣಿಮಾಂತ್ಯ):ವೈಶಾಖ ಪಕ್ಷ : ಕೃಷ್ಣ ಪಕ್ಷ…