ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್ ಏನು ಗೊತ್ತಾ ! ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ.
ಐಟಿ ಕಂಪೆನಿಗಳು ಈಗ ತಮಗೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಕೆಲ ಉದ್ಯೋಗಿಗಳನ್ನು ಕಿತ್ತು ಹಾಕಲು ಮುಂದಾಗುತ್ತಿದ್ದು, ಈಗ ಸಹೋದ್ಯೋಗಿಗಳ ನಡುವೆ ವೈಮನಸ್ಸು ತರುವ ಕೆಲಸಕ್ಕೆ ಹೈ ಹಾಕಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.
ಕಂಪೆನಿಗಳು ಈಗ ತಮಗೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಅಸಮರ್ಥ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಒಂದೊಂದೆ ತಂತ್ರವನ್ನು ಅನುಸರಿಸಲು ಆರಂಭಿಸಿದೆ. ಈಗ ಉದ್ಯೋಗಿಯೊಬ್ಬ ತನ್ನ ಉದ್ಯೋಗವನ್ನು ಉಳಿಸಿಕೊಳ್ಳಲು ಬೇರೆ ಒಬ್ಬ ಉದ್ಯೋಗಿಯನ್ನು ಮನೆಗೆ ಕಳುಹಿಸಬೇಕಾದ ಸಂದರ್ಭ ಒದಗಿ ಬಂದಿದೆ, ಎಂದು ಉದ್ಯೋಗಿಗಳ ಹೇಳಿಕೆಯನ್ನು ಆಧರಿಸಿ ವರದಿಯಾಗಿದೆ.
ಕಂಪೆನಿಗೆ ವೆಚ್ಚದಾಯಕವಾಗಿರುವ ಉದ್ಯೋಗಿಗಳನ್ನು ಗುರುತಿಸಿ ಅವರನ್ನು ಕೆಲಸದಿಂದ ಕಿತ್ತು ಹಾಕುವಂತೆ ಕಂಪೆನಿಯ ಹಿರಿಯ ಅಧಿಕಾರಿಗಳು ಎಚ್ಆರ್ಗೆ ಆದೇಶಿಸಿದ್ದಾರೆ.
ಇದರಂತೆ ಕೆಲ ಕಂಪೆನಿಗಳ ಎಚ್ಆರ್ಗಳು ಕೆಲ ಉದ್ಯೋಗಿಗಳಿಗೆ ಕರೆ ಮಾಡಿ, ಕಡಿಮೆ ವೇತನ ಪಡೆದು ಕೆಲಸವನ್ನು ತೊರೆಯುವಂತೆ ಹೇಳಿದ್ದಾರೆ. ಇನ್ನು ಕೆಲ ಕಂಪೆನಿಗಳು, ನಿಮಗೆ ಇಷ್ಟೊಂದು ವೇತನ ನೀಡಲು ಕಷ್ಟವಾಗುತ್ತದೆ. ಹೀಗಾಗಿ ಒಂದೋ ನೀವು ಕಂಪೆನಿ ತೊರೆಯಿರಿ, ಇಲ್ಲವೇ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೆಂದು ರೆಫರ್ ಮಾಡಿ ಎಂದು ಹೇಳಿದ್ದಾರೆ.
ಎಚ್ಆರ್ಗಳ ಮೂಲಕ ಈ ಆಟವನ್ನು ಆಡಿ ಕಂಪೆನಿಗಳು ಮನರಂಜನೆಯನ್ನು ತೆಗೆದುಕೊಳ್ಳುತ್ತಿದ್ದರೆ, ಉದ್ಯೋಗಿಗಳು ತಮ್ಮ ನೋವಿನ ವಿಚಾರವನ್ನು ಮಾಧ್ಯಮಗಳಲ್ಲಿ ತೋಡಿಕೊಂಡಿದ್ದಾರೆ.
ಐಟಿ ಉದ್ಯೋಗಿಯೊಬ್ಬರು ಹೇಳಿರುವ ಪ್ರಕಾರ ಕಂಪೆನಿಗಳ ಆಟ ಹೇಗಿರುತ್ತೆ ಗೊತ್ತಾ?
ಬೆಂಗಳೂರಿನ ನೊಂದ ಐಟಿ ಉದ್ಯೋಗಿಯೊಬ್ಬರು ಕಂಪೆನಿ ಹೇಗೆ ಉದ್ಯೋಗಿಗಳ ಜೊತೆ ನಡೆದುಕೊಳ್ಳುತ್ತಿದೆ ಎನ್ನುವುದನ್ನು ವಿವರಿಸುತ್ತಾ, ಕಳೆದ ತಿಂಗಳ 23ರಂದು ಎಚ್ಆರ್ ಮ್ಯಾನೇಜರ್ ಅವರನ್ನು ಭೇಟಿಯಾಗುವಂತೆ ನನಗೆ ಕರೆ ಬಂತು. ಹೀಗಾಗಿ ನಾನು ಹೈದರಾಬಾದ್ನಲ್ಲಿರುವ ಎಚ್ಆರ್ ಮುಖ್ಯಸ್ಥರ ಜೊತೆ ವಿಡಿಯೋ ಚಾಟ್ ಮಾಡುತ್ತಿರುವಾಗ, “ನೀನು ಉದ್ಯೋಗವನ್ನು ತೊರೆಯಬೇಕು. ನಿನಗೆ 2 ವಾರ ಸಮಯವಕಾಶ ಮತ್ತು 2 ತಿಂಗಳ ಮೂಲ ವೇತನ ನೀಡುತ್ತೇವೆ” ಎಂದರು.
ಇದಾದ ಬಳಿಕ 29ರಂದು ಕರೆ ಮಾಡಿ “ಇನ್ನು ಯಾಕೆ ರಾಜೀನಾಮೆ ನೀಡಿಲ್ಲ” ಎಂದು ಪ್ರಶ್ನಿಸಿದರು. ನಾನು “ರಾಜೀನಾಮೆ ನೀಡುವುದಿಲ್ಲ” ಎಂದೆ. ಇದಕ್ಕೆ ಅವರು “ನಿಮ್ಮ ಕಾಂಟ್ರಾಕ್ಟ್ ಟರ್ಮಿನೇಟ್ ಮಾಡುತ್ತೇವೆ. ಈ ರೀತಿ ಮಾಡಿದರೆ ಮುಂದೆ ಬೇರೆ ಯಾವ ಕಂಪೆನಿಯಲ್ಲೂ ಕೆಲಸ ಸಿಗುವುದಿಲ್ಲ” ಎಂದು ಬೆದರಿಸಿದರು. 31 ರಂದು ಕರೆ ಮಾಡಿ, “ನಿನ್ನ ಬದಲಿಗೆ ಬೇರೊಬ್ಬ ಉದ್ಯೋಗಿಯನ್ನು ರೆಫರ್ ಮಾಡು, ಆತನನ್ನು ಕೆಲಸದಿಂದ ತೆಗೆದು ಹಾಕಲಾಗುವುದು” ಎನ್ನುವ ವಿಚಿತ್ರ ಆಫರ್ ನೀಡಿದರು.
ಅದೇ ದಿನ ನನಗೆ ಆಟೋಮೇಟೆಡ್ ಇಮೇಲ್ ಬಂತು. ಅದರಲ್ಲಿ “ಕಂಪನಿಯಲ್ಲಿ ಇದು ನಿನ್ನ ಕೊನೆಯ ದಿನ. ಇಂದಿನಿಂದ ನಿನಗೆ ನೀಡಿರುವ ಕಂಪನಿ ಇಮೇಲ್ ಐಡಿ ಹಾಗೂ ಇತರ ಸೇವೆಗಳನ್ನು ರದ್ದು ಮಾಡಲಾಗುತ್ತಿದೆ” ಎಂದು ತಿಳಿಸಲಾಗಿತ್ತು. ಆದರೆ ಈ ಮೇಲ್ ಬಗ್ಗೆ ಎಚ್.ಆರ್. ಕಡೆಯಿಂದ ಯಾವುದೇ ಅಧಿಕೃತ ಕರೆ ಬರಲಿಲ್ಲ ಎಂದು ಅವರು ತಮ್ಮ ನೋವನ್ನು ತೊಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು ಪ್ರಜಾಕೀಯ ಅಲ್ಲ..!
ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ. ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು…
ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ.ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.
ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್ ಏನು ಗೊತ್ತಾ ! ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ.
ರಾಜಕಾರಣಿಗಳಾಯಿತು ಇದೀಗ ಐಪಿಎಸ್ ಅಧಿಕಾರಿಯ ಸರದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿ ರವಿ ಡಿ ಚನ್ನಣ್ಣನವರ್ ಇದೇ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವಿರುವ ಹಿನ್ನೆಲೆಯಲ್ಲಿ ರವಿ ಚನ್ನಣ್ಣನವರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಕೋಮು ಗಲಭೆ ತಡೆಯಲು ಈ ಪ್ರಯತ್ನ ಮಾಡಲಾಗಿದ್ದು, ಅವರಿಗಾಗಿ ಶಾಲೆಯಲ್ಲಿ ಬೆಡ್, ಬೆಡ್ ಶೀಟ್, ಇನ್ನಿತರ ವಸ್ತುಗಳ ಸಿದ್ಧತೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ…
ಗರುಡ ಪುರಾಣದ ಪ್ರಕಾರ, ಮನುಷ್ಯ ಭೂಮಿಯ ಮೇಲೆ ಮಾಡುವ ಅತ್ಯಾಚಾರ,ಅನಾಚಾರ ಮತ್ತು ಅಪರಾಧಗಳಿಗೆ ಪ್ರತ್ತೇಕವಾದ ಶಿಕ್ಷೆಗಳನ್ನು ಕೊಡಲಾಗುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲಿ ಅಂತಹ ಕೆಲವು ಶಿಕ್ಷೆಗಳ ಬಗ್ಗೆ ಇಲ್ಲಿ ಕೊಡಲಾಗಿದೆ