ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್ ಏನು ಗೊತ್ತಾ ! ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ.
ಐಟಿ ಕಂಪೆನಿಗಳು ಈಗ ತಮಗೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಕೆಲ ಉದ್ಯೋಗಿಗಳನ್ನು ಕಿತ್ತು ಹಾಕಲು ಮುಂದಾಗುತ್ತಿದ್ದು, ಈಗ ಸಹೋದ್ಯೋಗಿಗಳ ನಡುವೆ ವೈಮನಸ್ಸು ತರುವ ಕೆಲಸಕ್ಕೆ ಹೈ ಹಾಕಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.
ಕಂಪೆನಿಗಳು ಈಗ ತಮಗೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಅಸಮರ್ಥ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಒಂದೊಂದೆ ತಂತ್ರವನ್ನು ಅನುಸರಿಸಲು ಆರಂಭಿಸಿದೆ. ಈಗ ಉದ್ಯೋಗಿಯೊಬ್ಬ ತನ್ನ ಉದ್ಯೋಗವನ್ನು ಉಳಿಸಿಕೊಳ್ಳಲು ಬೇರೆ ಒಬ್ಬ ಉದ್ಯೋಗಿಯನ್ನು ಮನೆಗೆ ಕಳುಹಿಸಬೇಕಾದ ಸಂದರ್ಭ ಒದಗಿ ಬಂದಿದೆ, ಎಂದು ಉದ್ಯೋಗಿಗಳ ಹೇಳಿಕೆಯನ್ನು ಆಧರಿಸಿ ವರದಿಯಾಗಿದೆ.
ಕಂಪೆನಿಗೆ ವೆಚ್ಚದಾಯಕವಾಗಿರುವ ಉದ್ಯೋಗಿಗಳನ್ನು ಗುರುತಿಸಿ ಅವರನ್ನು ಕೆಲಸದಿಂದ ಕಿತ್ತು ಹಾಕುವಂತೆ ಕಂಪೆನಿಯ ಹಿರಿಯ ಅಧಿಕಾರಿಗಳು ಎಚ್ಆರ್ಗೆ ಆದೇಶಿಸಿದ್ದಾರೆ.
ಇದರಂತೆ ಕೆಲ ಕಂಪೆನಿಗಳ ಎಚ್ಆರ್ಗಳು ಕೆಲ ಉದ್ಯೋಗಿಗಳಿಗೆ ಕರೆ ಮಾಡಿ, ಕಡಿಮೆ ವೇತನ ಪಡೆದು ಕೆಲಸವನ್ನು ತೊರೆಯುವಂತೆ ಹೇಳಿದ್ದಾರೆ. ಇನ್ನು ಕೆಲ ಕಂಪೆನಿಗಳು, ನಿಮಗೆ ಇಷ್ಟೊಂದು ವೇತನ ನೀಡಲು ಕಷ್ಟವಾಗುತ್ತದೆ. ಹೀಗಾಗಿ ಒಂದೋ ನೀವು ಕಂಪೆನಿ ತೊರೆಯಿರಿ, ಇಲ್ಲವೇ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೆಂದು ರೆಫರ್ ಮಾಡಿ ಎಂದು ಹೇಳಿದ್ದಾರೆ.
ಎಚ್ಆರ್ಗಳ ಮೂಲಕ ಈ ಆಟವನ್ನು ಆಡಿ ಕಂಪೆನಿಗಳು ಮನರಂಜನೆಯನ್ನು ತೆಗೆದುಕೊಳ್ಳುತ್ತಿದ್ದರೆ, ಉದ್ಯೋಗಿಗಳು ತಮ್ಮ ನೋವಿನ ವಿಚಾರವನ್ನು ಮಾಧ್ಯಮಗಳಲ್ಲಿ ತೋಡಿಕೊಂಡಿದ್ದಾರೆ.
ಐಟಿ ಉದ್ಯೋಗಿಯೊಬ್ಬರು ಹೇಳಿರುವ ಪ್ರಕಾರ ಕಂಪೆನಿಗಳ ಆಟ ಹೇಗಿರುತ್ತೆ ಗೊತ್ತಾ?
ಬೆಂಗಳೂರಿನ ನೊಂದ ಐಟಿ ಉದ್ಯೋಗಿಯೊಬ್ಬರು ಕಂಪೆನಿ ಹೇಗೆ ಉದ್ಯೋಗಿಗಳ ಜೊತೆ ನಡೆದುಕೊಳ್ಳುತ್ತಿದೆ ಎನ್ನುವುದನ್ನು ವಿವರಿಸುತ್ತಾ, ಕಳೆದ ತಿಂಗಳ 23ರಂದು ಎಚ್ಆರ್ ಮ್ಯಾನೇಜರ್ ಅವರನ್ನು ಭೇಟಿಯಾಗುವಂತೆ ನನಗೆ ಕರೆ ಬಂತು. ಹೀಗಾಗಿ ನಾನು ಹೈದರಾಬಾದ್ನಲ್ಲಿರುವ ಎಚ್ಆರ್ ಮುಖ್ಯಸ್ಥರ ಜೊತೆ ವಿಡಿಯೋ ಚಾಟ್ ಮಾಡುತ್ತಿರುವಾಗ, “ನೀನು ಉದ್ಯೋಗವನ್ನು ತೊರೆಯಬೇಕು. ನಿನಗೆ 2 ವಾರ ಸಮಯವಕಾಶ ಮತ್ತು 2 ತಿಂಗಳ ಮೂಲ ವೇತನ ನೀಡುತ್ತೇವೆ” ಎಂದರು.
ಇದಾದ ಬಳಿಕ 29ರಂದು ಕರೆ ಮಾಡಿ “ಇನ್ನು ಯಾಕೆ ರಾಜೀನಾಮೆ ನೀಡಿಲ್ಲ” ಎಂದು ಪ್ರಶ್ನಿಸಿದರು. ನಾನು “ರಾಜೀನಾಮೆ ನೀಡುವುದಿಲ್ಲ” ಎಂದೆ. ಇದಕ್ಕೆ ಅವರು “ನಿಮ್ಮ ಕಾಂಟ್ರಾಕ್ಟ್ ಟರ್ಮಿನೇಟ್ ಮಾಡುತ್ತೇವೆ. ಈ ರೀತಿ ಮಾಡಿದರೆ ಮುಂದೆ ಬೇರೆ ಯಾವ ಕಂಪೆನಿಯಲ್ಲೂ ಕೆಲಸ ಸಿಗುವುದಿಲ್ಲ” ಎಂದು ಬೆದರಿಸಿದರು. 31 ರಂದು ಕರೆ ಮಾಡಿ, “ನಿನ್ನ ಬದಲಿಗೆ ಬೇರೊಬ್ಬ ಉದ್ಯೋಗಿಯನ್ನು ರೆಫರ್ ಮಾಡು, ಆತನನ್ನು ಕೆಲಸದಿಂದ ತೆಗೆದು ಹಾಕಲಾಗುವುದು” ಎನ್ನುವ ವಿಚಿತ್ರ ಆಫರ್ ನೀಡಿದರು.
ಅದೇ ದಿನ ನನಗೆ ಆಟೋಮೇಟೆಡ್ ಇಮೇಲ್ ಬಂತು. ಅದರಲ್ಲಿ “ಕಂಪನಿಯಲ್ಲಿ ಇದು ನಿನ್ನ ಕೊನೆಯ ದಿನ. ಇಂದಿನಿಂದ ನಿನಗೆ ನೀಡಿರುವ ಕಂಪನಿ ಇಮೇಲ್ ಐಡಿ ಹಾಗೂ ಇತರ ಸೇವೆಗಳನ್ನು ರದ್ದು ಮಾಡಲಾಗುತ್ತಿದೆ” ಎಂದು ತಿಳಿಸಲಾಗಿತ್ತು. ಆದರೆ ಈ ಮೇಲ್ ಬಗ್ಗೆ ಎಚ್.ಆರ್. ಕಡೆಯಿಂದ ಯಾವುದೇ ಅಧಿಕೃತ ಕರೆ ಬರಲಿಲ್ಲ ಎಂದು ಅವರು ತಮ್ಮ ನೋವನ್ನು ತೊಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೈದ್ರಾಬಾದ್ ನ ಮಹಿಳೆಯೊಬ್ಬಳ ನೋವಿನ ಕಥೆ ಬಹಿರಂಗವಾಗಿದೆ. ಮಹಿಳೆಗೆ ಒಂದಲ್ಲ ಎರಡಲ್ಲ 7 ಬಾರಿ ಗರ್ಭಪಾತವಾಗಿದೆ. ಪ್ರತಿ ಬಾರಿ ಗರ್ಭ ಧರಿಸುತ್ತಿದ್ದಂತೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಗಂಡನ ಮನೆಯವರು ಲಿಂಗ ಪರೀಕ್ಷೆ ನಂತ್ರ ಗರ್ಭಪಾತ ಮಾಡಿಸ್ತಿದ್ದರಂತೆ. ಸುಮತಿ ಏಳು ವರ್ಷಗಳಲ್ಲಿ 7 ಬಾರಿ ಗರ್ಭ ಧರಿಸಿದ್ದಾಳೆ. ಪ್ರತಿ ಬಾರಿಯೂ ಗರ್ಭಪಾತ ಮಾಡಿಸಲಾಗಿದೆ. ಒಂದು ಗರ್ಭಪಾತದಿಂದ ಚೇತರಿಸಿಕೊಳ್ಳುವ ಮೊದಲೇ ಮತ್ತೊಂದು ಗರ್ಭಪಾತ ನಡೆಯುತ್ತಿತ್ತು. ಗರ್ಭ ಧರಿಸಿದ ಮೇಲೆ ಖುಷಿ ಪಡುವ ಬದಲು ಅಳುತ್ತಿದ್ದ ಸುಮತಿ ಈ ಬಾರಿ ಹೆಣ್ಣಾಗದಿರಲಿ ಎಂದು…
ಪ್ರೀತಿ ಕುರುಡು ಅಂತಾರೆ. ಪ್ರೀತಿಯಲ್ಲಿ ವಯಸ್ಸು, ಜಾತಿ ಇದ್ಯಾವುದೂ ಪ್ರಮುಖ ಆಗುವುದಿಲ್ಲ. ಈ ತಾರಾ ಜೋಡಿಗಳಲ್ಲಿ ಪತಿಗಿಂತ ಪತ್ನಿಯರೇ ವಯಸಲ್ಲಿ ದೊಡ್ಡವರು.
ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೇಳಿದ್ದರು.
ಪಾರ್ಲಿಮೆಂಟ್ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget) ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್ ನ್ಯೂಸ್…
ಹುಟ್ಟುವ ಮಕ್ಕಳಲ್ಲಿ ಕಣ್ಣಿನ ಕ್ಯಾನ್ಸರ್ ಹೆಚ್ಚುತ್ತಿದೆ. ಪೋಷಕರು ಕ್ಯಾನ್ಸರ್ನ್ನು ಪತ್ತೆ ಹಚ್ಚಿ ತಕ್ಷಣವೇ ಮಗುವಿಗೆ ಚಿಕಿತ್ಸೆ ನೀಡಿದರೆ ಬದುಕುಳಿಯುವ ಸಾಧ್ಯತೆ ಇರುತ್ತದೆ. ಮಕ್ಕಳ ಕಣ್ಣಿನ ಕೆಳಭಾಗದಲ್ಲಿ ಬಿಳಿ ಮಚ್ಚೆ ಇದ್ದರೆ ಅಥವಾ ಮೆಳ್ಳಗಣ್ಣಿದ್ದರೆ ಎಲ್ಲಾ ಸಂದರ್ಭದಲ್ಲೂ ಅದು ಶುಭಶಕುನವಾಗಿರುವುದಿಲ್ಲ, ಸಮಸ್ಯೆಯೂ ಆಗಿರಬಹುದು ಹಾಗಾಗಿ ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವುದು ಒಳಿತು. ನಿರ್ಲಕ್ಷಿಸಿದರೆ ಶಾಶ್ವತವಾಗಿ ದೃಷ್ಟಿ ಕಳೆದುಕೊಳ್ಳಬಹುದು. ಅಷ್ಟೇ ಅಲ್ಲ ಕ್ಯಾನ್ಸರ್ ಕಣ ಮೆದುಳಿಗೆ ವ್ಯಾಪಿಸಿ ಪ್ರಾಣವನ್ನೇ ಬಲಿತೆಗೆದುಕೊಳ್ಳುವ ಸಾಧ್ಯತೆಯೂ ಕೂಡ ಇರುತ್ತದೆ.ರೆಟಿನೊ ಬ್ಲಾಸ್ಟೋಮಾ ಎಂಬುದು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷನಿಮ್ಮ ಆರೋಗ್ಯದ ಬಗ್ಗೆ…