ಉದ್ಯೋಗ

ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಜಾಬ್ ಆಫರ್ ಏನು ಗೊತ್ತಾ? ಓದಿದರೆ ಶಾಕ್ ಗ್ಯಾರಂಟಿ!!!

1445

ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್ ಏನು ಗೊತ್ತಾ !  ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ.

 

ಐಟಿ ಕಂಪೆನಿಗಳು ಈಗ ತಮಗೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಕೆಲ ಉದ್ಯೋಗಿಗಳನ್ನು ಕಿತ್ತು ಹಾಕಲು ಮುಂದಾಗುತ್ತಿದ್ದು, ಈಗ ಸಹೋದ್ಯೋಗಿಗಳ ನಡುವೆ ವೈಮನಸ್ಸು ತರುವ ಕೆಲಸಕ್ಕೆ ಹೈ ಹಾಕಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.

ಕಂಪೆನಿಗಳು ಈಗ ತಮಗೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಅಸಮರ್ಥ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಒಂದೊಂದೆ ತಂತ್ರವನ್ನು ಅನುಸರಿಸಲು ಆರಂಭಿಸಿದೆ. ಈಗ ಉದ್ಯೋಗಿಯೊಬ್ಬ ತನ್ನ ಉದ್ಯೋಗವನ್ನು ಉಳಿಸಿಕೊಳ್ಳಲು ಬೇರೆ ಒಬ್ಬ ಉದ್ಯೋಗಿಯನ್ನು ಮನೆಗೆ ಕಳುಹಿಸಬೇಕಾದ ಸಂದರ್ಭ ಒದಗಿ ಬಂದಿದೆ, ಎಂದು  ಉದ್ಯೋಗಿಗಳ ಹೇಳಿಕೆಯನ್ನು ಆಧರಿಸಿ ವರದಿಯಾಗಿದೆ.

ಕಂಪೆನಿಗೆ ವೆಚ್ಚದಾಯಕವಾಗಿರುವ ಉದ್ಯೋಗಿಗಳನ್ನು ಗುರುತಿಸಿ ಅವರನ್ನು ಕೆಲಸದಿಂದ ಕಿತ್ತು ಹಾಕುವಂತೆ ಕಂಪೆನಿಯ ಹಿರಿಯ ಅಧಿಕಾರಿಗಳು ಎಚ್‍ಆರ್‍ಗೆ ಆದೇಶಿಸಿದ್ದಾರೆ.

ಇದರಂತೆ ಕೆಲ ಕಂಪೆನಿಗಳ ಎಚ್‍ಆರ್‍ಗಳು ಕೆಲ ಉದ್ಯೋಗಿಗಳಿಗೆ ಕರೆ ಮಾಡಿ, ಕಡಿಮೆ ವೇತನ ಪಡೆದು ಕೆಲಸವನ್ನು ತೊರೆಯುವಂತೆ ಹೇಳಿದ್ದಾರೆ. ಇನ್ನು ಕೆಲ ಕಂಪೆನಿಗಳು, ನಿಮಗೆ ಇಷ್ಟೊಂದು ವೇತನ ನೀಡಲು ಕಷ್ಟವಾಗುತ್ತದೆ. ಹೀಗಾಗಿ ಒಂದೋ ನೀವು ಕಂಪೆನಿ ತೊರೆಯಿರಿ, ಇಲ್ಲವೇ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೆಂದು ರೆಫರ್ ಮಾಡಿ ಎಂದು ಹೇಳಿದ್ದಾರೆ.

ಎಚ್‍ಆರ್‍ಗಳ ಮೂಲಕ ಈ ಆಟವನ್ನು ಆಡಿ ಕಂಪೆನಿಗಳು ಮನರಂಜನೆಯನ್ನು ತೆಗೆದುಕೊಳ್ಳುತ್ತಿದ್ದರೆ, ಉದ್ಯೋಗಿಗಳು ತಮ್ಮ ನೋವಿನ ವಿಚಾರವನ್ನು ಮಾಧ್ಯಮಗಳಲ್ಲಿ ತೋಡಿಕೊಂಡಿದ್ದಾರೆ.

ಐಟಿ ಉದ್ಯೋಗಿಯೊಬ್ಬರು ಹೇಳಿರುವ ಪ್ರಕಾರ ಕಂಪೆನಿಗಳ ಆಟ ಹೇಗಿರುತ್ತೆ ಗೊತ್ತಾ?
ಬೆಂಗಳೂರಿನ ನೊಂದ ಐಟಿ ಉದ್ಯೋಗಿಯೊಬ್ಬರು ಕಂಪೆನಿ ಹೇಗೆ ಉದ್ಯೋಗಿಗಳ ಜೊತೆ ನಡೆದುಕೊಳ್ಳುತ್ತಿದೆ ಎನ್ನುವುದನ್ನು ವಿವರಿಸುತ್ತಾ, ಕಳೆದ ತಿಂಗಳ 23ರಂದು ಎಚ್‍ಆರ್ ಮ್ಯಾನೇಜರ್ ಅವರನ್ನು ಭೇಟಿಯಾಗುವಂತೆ ನನಗೆ ಕರೆ ಬಂತು. ಹೀಗಾಗಿ ನಾನು ಹೈದರಾಬಾದ್‍ನಲ್ಲಿರುವ ಎಚ್‍ಆರ್ ಮುಖ್ಯಸ್ಥರ ಜೊತೆ ವಿಡಿಯೋ ಚಾಟ್ ಮಾಡುತ್ತಿರುವಾಗ, “ನೀನು ಉದ್ಯೋಗವನ್ನು ತೊರೆಯಬೇಕು. ನಿನಗೆ 2 ವಾರ ಸಮಯವಕಾಶ ಮತ್ತು 2 ತಿಂಗಳ ಮೂಲ ವೇತನ ನೀಡುತ್ತೇವೆ” ಎಂದರು.

ಇದಾದ ಬಳಿಕ 29ರಂದು ಕರೆ ಮಾಡಿ “ಇನ್ನು ಯಾಕೆ ರಾಜೀನಾಮೆ ನೀಡಿಲ್ಲ” ಎಂದು ಪ್ರಶ್ನಿಸಿದರು. ನಾನು “ರಾಜೀನಾಮೆ ನೀಡುವುದಿಲ್ಲ” ಎಂದೆ. ಇದಕ್ಕೆ ಅವರು “ನಿಮ್ಮ ಕಾಂಟ್ರಾಕ್ಟ್ ಟರ್ಮಿನೇಟ್ ಮಾಡುತ್ತೇವೆ. ಈ ರೀತಿ ಮಾಡಿದರೆ ಮುಂದೆ ಬೇರೆ ಯಾವ ಕಂಪೆನಿಯಲ್ಲೂ ಕೆಲಸ ಸಿಗುವುದಿಲ್ಲ” ಎಂದು ಬೆದರಿಸಿದರು. 31 ರಂದು ಕರೆ ಮಾಡಿ, “ನಿನ್ನ ಬದಲಿಗೆ ಬೇರೊಬ್ಬ ಉದ್ಯೋಗಿಯನ್ನು ರೆಫರ್ ಮಾಡು, ಆತನನ್ನು ಕೆಲಸದಿಂದ ತೆಗೆದು ಹಾಕಲಾಗುವುದು” ಎನ್ನುವ ವಿಚಿತ್ರ ಆಫರ್ ನೀಡಿದರು.

ಅದೇ ದಿನ ನನಗೆ ಆಟೋಮೇಟೆಡ್ ಇಮೇಲ್ ಬಂತು. ಅದರಲ್ಲಿ “ಕಂಪನಿಯಲ್ಲಿ ಇದು ನಿನ್ನ ಕೊನೆಯ ದಿನ. ಇಂದಿನಿಂದ ನಿನಗೆ ನೀಡಿರುವ ಕಂಪನಿ ಇಮೇಲ್ ಐಡಿ ಹಾಗೂ ಇತರ ಸೇವೆಗಳನ್ನು ರದ್ದು ಮಾಡಲಾಗುತ್ತಿದೆ” ಎಂದು ತಿಳಿಸಲಾಗಿತ್ತು. ಆದರೆ ಈ ಮೇಲ್ ಬಗ್ಗೆ ಎಚ್.ಆರ್. ಕಡೆಯಿಂದ ಯಾವುದೇ ಅಧಿಕೃತ ಕರೆ ಬರಲಿಲ್ಲ ಎಂದು ಅವರು ತಮ್ಮ ನೋವನ್ನು ತೊಡಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹೆಚ್ಚಿನವರಿಗೆ ಕಣ್ಣಿನ ಸಮಸ್ಯೆ ಕಾಡುತ್ತಿದಿಯಾ..?ಇಲ್ಲಿದೆ ಸುಲಭ ಪರಿಹಾರ..!ತಿಳಿಯಲು ಈ ಲೇಖನ ಓದಿ ..

    ಣ್ಣ ಮಕ್ಕಳಲ್ಲೇ ಕಣ್ಣಿನ ದೃಷ್ಟಿ ಸಮಸ್ಯೆ ಕಾಣಿಸುವುದು ಇಂದಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದೆ. ಜೀವನಶೈಲಿ, ವಾತಾವರಣದಲ್ಲಿನ ಬದಲಾವಣೆ ಇವುಗಳಿಗೆ ಪ್ರಮುಖ ಕಾರಣವಾಗಿದೆ. ಕಣ್ಣಿನ ದೃಷ್ಟಿ ಸರಿಯಿಲ್ಲವೆಂದರೆ ಸಂಪೂರ್ಣ ದೇಹವೇ ನಿಸ್ತೇಜವಾದಂತೆ.

  • ವಿಸ್ಮಯ ಜಗತ್ತು, ಸುದ್ದಿ

    ಇದು ನೋಡಲು ಜಲಪಾತದಂತೆ ಕಾಣುತ್ತದೆ..ಆದರೆ, ಜಲಪಾತ ಅಲ್ಲ …!ಮತ್ತಿನ್ನೇನು ಗೊತ್ತಾ?

    ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು  ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ  ಹಾರುತ್ತದೆ ಎಂದರೆ  ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು…

  • ಸುದ್ದಿ

    ರಸ್ತೆ ರಿಪೇರಿ ಬಳಿಕ ಹೊಸ ರೂಲ್ಸ್ ಜಾರಿಗೆ ನಿಟ್ಟುಸಿರು ಬಿಟ್ಟ ವಾಹನ ಸವಾರರು,.!

    ಹೊಸ ಟ್ರಾಫಿಕ್ ನಿಯಮ ಜಾರಿಯಾಗುತ್ತಿದ್ದಂತೆ ಪರ ವಿರೋಧ ಕೇಳಿ ಬಂದಿದೆ. ಇದರಲ್ಲಿ ರಸ್ತೆ ರಿಪೇರಿ ಮಾಡಿ ಹೊಸ ನಿಯಮ ಜಾರಿ ಮಾಡಿ ಅನ್ನೋ ಒತ್ತಾಯ  ಕೇಳಿ ಬಂದಿತ್ತು. ಇದೀಗ ಈ ಮಾತನ್ನು ಗಂಭೀರವಾಗಿ ಪರಿಗಣಿಸಿರುವ ನೆರೆ ರಾಜ್ಯ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿ ಮಾಡಲು ಮುಂದಾಗಿದೆ. ಹೊಸ ಟ್ರಾಫಿಕ್ ರೂಲ್ಸ್ ಜಾರಿಯಾಗಿ 10 ದಿನಗಳಾಗಿವೆ. ಆಗಲೇ ಕೋಟಿ ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರು ದುಬಾರಿ ದಂಡ ಕಟ್ಟಿ ಸುಸ್ತಾಗಿದ್ದಾರೆ. ದುಬಾರಿ…

  • ಜೀವನಶೈಲಿ

    ಖಾಲಿ ಹೊಟ್ಟೆಯಲ್ಲಿ ಚಹಾ(ಟೀ) ಕುಡಿದರೆ ಏನಾಗುತ್ತೆ ಗೊತ್ತಾ?

    ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.

  • ಸುದ್ದಿ

    ಬಡ ಮಕ್ಕಳಿಗಾಗಿ ಶಾಲೆ ಆರಂಭಿಸಿದ ಸನ್ನಿ ಲಿಯೋನ್….!

    ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…