ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್ ಏನು ಗೊತ್ತಾ ! ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ.
ಐಟಿ ಕಂಪೆನಿಗಳು ಈಗ ತಮಗೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಕೆಲ ಉದ್ಯೋಗಿಗಳನ್ನು ಕಿತ್ತು ಹಾಕಲು ಮುಂದಾಗುತ್ತಿದ್ದು, ಈಗ ಸಹೋದ್ಯೋಗಿಗಳ ನಡುವೆ ವೈಮನಸ್ಸು ತರುವ ಕೆಲಸಕ್ಕೆ ಹೈ ಹಾಕಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.
ಕಂಪೆನಿಗಳು ಈಗ ತಮಗೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಅಸಮರ್ಥ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಒಂದೊಂದೆ ತಂತ್ರವನ್ನು ಅನುಸರಿಸಲು ಆರಂಭಿಸಿದೆ. ಈಗ ಉದ್ಯೋಗಿಯೊಬ್ಬ ತನ್ನ ಉದ್ಯೋಗವನ್ನು ಉಳಿಸಿಕೊಳ್ಳಲು ಬೇರೆ ಒಬ್ಬ ಉದ್ಯೋಗಿಯನ್ನು ಮನೆಗೆ ಕಳುಹಿಸಬೇಕಾದ ಸಂದರ್ಭ ಒದಗಿ ಬಂದಿದೆ, ಎಂದು ಉದ್ಯೋಗಿಗಳ ಹೇಳಿಕೆಯನ್ನು ಆಧರಿಸಿ ವರದಿಯಾಗಿದೆ.
ಕಂಪೆನಿಗೆ ವೆಚ್ಚದಾಯಕವಾಗಿರುವ ಉದ್ಯೋಗಿಗಳನ್ನು ಗುರುತಿಸಿ ಅವರನ್ನು ಕೆಲಸದಿಂದ ಕಿತ್ತು ಹಾಕುವಂತೆ ಕಂಪೆನಿಯ ಹಿರಿಯ ಅಧಿಕಾರಿಗಳು ಎಚ್ಆರ್ಗೆ ಆದೇಶಿಸಿದ್ದಾರೆ.
ಇದರಂತೆ ಕೆಲ ಕಂಪೆನಿಗಳ ಎಚ್ಆರ್ಗಳು ಕೆಲ ಉದ್ಯೋಗಿಗಳಿಗೆ ಕರೆ ಮಾಡಿ, ಕಡಿಮೆ ವೇತನ ಪಡೆದು ಕೆಲಸವನ್ನು ತೊರೆಯುವಂತೆ ಹೇಳಿದ್ದಾರೆ. ಇನ್ನು ಕೆಲ ಕಂಪೆನಿಗಳು, ನಿಮಗೆ ಇಷ್ಟೊಂದು ವೇತನ ನೀಡಲು ಕಷ್ಟವಾಗುತ್ತದೆ. ಹೀಗಾಗಿ ಒಂದೋ ನೀವು ಕಂಪೆನಿ ತೊರೆಯಿರಿ, ಇಲ್ಲವೇ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೆಂದು ರೆಫರ್ ಮಾಡಿ ಎಂದು ಹೇಳಿದ್ದಾರೆ.
ಎಚ್ಆರ್ಗಳ ಮೂಲಕ ಈ ಆಟವನ್ನು ಆಡಿ ಕಂಪೆನಿಗಳು ಮನರಂಜನೆಯನ್ನು ತೆಗೆದುಕೊಳ್ಳುತ್ತಿದ್ದರೆ, ಉದ್ಯೋಗಿಗಳು ತಮ್ಮ ನೋವಿನ ವಿಚಾರವನ್ನು ಮಾಧ್ಯಮಗಳಲ್ಲಿ ತೋಡಿಕೊಂಡಿದ್ದಾರೆ.
ಐಟಿ ಉದ್ಯೋಗಿಯೊಬ್ಬರು ಹೇಳಿರುವ ಪ್ರಕಾರ ಕಂಪೆನಿಗಳ ಆಟ ಹೇಗಿರುತ್ತೆ ಗೊತ್ತಾ?
ಬೆಂಗಳೂರಿನ ನೊಂದ ಐಟಿ ಉದ್ಯೋಗಿಯೊಬ್ಬರು ಕಂಪೆನಿ ಹೇಗೆ ಉದ್ಯೋಗಿಗಳ ಜೊತೆ ನಡೆದುಕೊಳ್ಳುತ್ತಿದೆ ಎನ್ನುವುದನ್ನು ವಿವರಿಸುತ್ತಾ, ಕಳೆದ ತಿಂಗಳ 23ರಂದು ಎಚ್ಆರ್ ಮ್ಯಾನೇಜರ್ ಅವರನ್ನು ಭೇಟಿಯಾಗುವಂತೆ ನನಗೆ ಕರೆ ಬಂತು. ಹೀಗಾಗಿ ನಾನು ಹೈದರಾಬಾದ್ನಲ್ಲಿರುವ ಎಚ್ಆರ್ ಮುಖ್ಯಸ್ಥರ ಜೊತೆ ವಿಡಿಯೋ ಚಾಟ್ ಮಾಡುತ್ತಿರುವಾಗ, “ನೀನು ಉದ್ಯೋಗವನ್ನು ತೊರೆಯಬೇಕು. ನಿನಗೆ 2 ವಾರ ಸಮಯವಕಾಶ ಮತ್ತು 2 ತಿಂಗಳ ಮೂಲ ವೇತನ ನೀಡುತ್ತೇವೆ” ಎಂದರು.
ಇದಾದ ಬಳಿಕ 29ರಂದು ಕರೆ ಮಾಡಿ “ಇನ್ನು ಯಾಕೆ ರಾಜೀನಾಮೆ ನೀಡಿಲ್ಲ” ಎಂದು ಪ್ರಶ್ನಿಸಿದರು. ನಾನು “ರಾಜೀನಾಮೆ ನೀಡುವುದಿಲ್ಲ” ಎಂದೆ. ಇದಕ್ಕೆ ಅವರು “ನಿಮ್ಮ ಕಾಂಟ್ರಾಕ್ಟ್ ಟರ್ಮಿನೇಟ್ ಮಾಡುತ್ತೇವೆ. ಈ ರೀತಿ ಮಾಡಿದರೆ ಮುಂದೆ ಬೇರೆ ಯಾವ ಕಂಪೆನಿಯಲ್ಲೂ ಕೆಲಸ ಸಿಗುವುದಿಲ್ಲ” ಎಂದು ಬೆದರಿಸಿದರು. 31 ರಂದು ಕರೆ ಮಾಡಿ, “ನಿನ್ನ ಬದಲಿಗೆ ಬೇರೊಬ್ಬ ಉದ್ಯೋಗಿಯನ್ನು ರೆಫರ್ ಮಾಡು, ಆತನನ್ನು ಕೆಲಸದಿಂದ ತೆಗೆದು ಹಾಕಲಾಗುವುದು” ಎನ್ನುವ ವಿಚಿತ್ರ ಆಫರ್ ನೀಡಿದರು.
ಅದೇ ದಿನ ನನಗೆ ಆಟೋಮೇಟೆಡ್ ಇಮೇಲ್ ಬಂತು. ಅದರಲ್ಲಿ “ಕಂಪನಿಯಲ್ಲಿ ಇದು ನಿನ್ನ ಕೊನೆಯ ದಿನ. ಇಂದಿನಿಂದ ನಿನಗೆ ನೀಡಿರುವ ಕಂಪನಿ ಇಮೇಲ್ ಐಡಿ ಹಾಗೂ ಇತರ ಸೇವೆಗಳನ್ನು ರದ್ದು ಮಾಡಲಾಗುತ್ತಿದೆ” ಎಂದು ತಿಳಿಸಲಾಗಿತ್ತು. ಆದರೆ ಈ ಮೇಲ್ ಬಗ್ಗೆ ಎಚ್.ಆರ್. ಕಡೆಯಿಂದ ಯಾವುದೇ ಅಧಿಕೃತ ಕರೆ ಬರಲಿಲ್ಲ ಎಂದು ಅವರು ತಮ್ಮ ನೋವನ್ನು ತೊಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಬೈಲ್ ಫೋನ್ ಬಳಕೆದಾರರು ತಮ್ಮ ಮೊಬೈಲ್ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್ಲೈನ್ ಫೋನ್ಗಳು 60 ಸೆಕೆಂಡ್ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್ ಫೋನ್ಗಳ ರಿಂಗಣವನ್ನು30 ಸೆಕೆಂಡ್ಗಳಿಗೆ ಮತ್ತು ಲ್ಯಾಂಡ್ಲೈನ್ ಫೋನ್ಗಳ ರಿಂಗಣವನ್ನು 60 ಸೆಕೆಂಡ್ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್ಫೋನ್ ಮತ್ತು ಲ್ಯಾಂಡ್ಲೈನ್ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…
ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.
ಟ್ಯಾಟೂ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಈಗಿನ ಕಾಲದಲ್ಲಿ ಎಲ್ಲರಿಗೂ ಟ್ಯಾಟೂ ಹುಚ್ಚು ಹಾಗೆಯೇ ಇಲ್ಲೊಬ್ಬ ಮಾಡೆಲ್. ದೇಹವನ್ನು ಬಗೆಬಗೆಯಾಗಿ ಮಾರ್ಪಾಡು ಮಾಡಿ ಮಿಂಚುವುದೆಂದರೆ ಈಕೆಗೆ ಬಲು ಇಷ್ಟವಂತೆ. ಇದಕ್ಕಾಗಿಯೇ ಸಾಕಷ್ಟು ಹಣವನ್ನು ಖರ್ಚು ಮಾಡುತ್ತಿದ್ದಳು . ಆದರೆ, ಇದೀಗ ಇದೇ ಹುಚ್ಚು ಇವಳನ್ನು ಮೂರು ವಾರಗಳ ಕಾಲ ದೃಷ್ಟಿಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ನ್ಯೂ ಸೌತ್ ವೇಲ್ಸ್ನ ಬಾಡಿ ಮಾಡಿಫಯರ್ ಅಂಬೇರ್ ಲೂಕ್ 24 ಎಂಬಾಕೆ ಈ ಸಂಕಷ್ಟ ಅನುಭವಿಸಿದ್ದವಳು. ಈಕೆ ತನ್ನ ದೇಹವನ್ನು…
ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ. ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ. ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ. ಈ…
ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ. ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್…
ಎರಡು ಕುಟುಂಬಗಳನ್ನು ಒಂದು ಮಾಡುವ ಸಮಾರಂಭವೇ ಮದುವೆ…ಇಲ್ಲಿಯವರೆಗೂ ಇದ್ದ ಒಂಟಿ ಪ್ರಯಾಣ ಇನ್ನು ಮುಂದೆ ಜೋಡಿಯಾಗಿ ಸಾಗುತ್ತದೆ. ನಮ್ಮ ಸಂಪ್ರದಾಯದ ಪ್ರಕಾರ ಮದುವೆಗೊಂದು ವಿಶಿಷ್ಟತೆಯಿದೆ. ಐದು ದಿನಗಳ ಕಾಲ ನಯನ ಮನೋಹರವಾಗಿ ಸಾಗುವ ಮದುವೆಯಲ್ಲಿ ಬಂಧು ಮಿತ್ರರು,ಬಾಜಾ ಭಜಂತ್ರಿಗಳು..ಎಲ್ಲವೂ ಓಕೆ.