News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉದ್ಯೋಗ

ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಜಾಬ್ ಆಫರ್ ಏನು ಗೊತ್ತಾ? ಓದಿದರೆ ಶಾಕ್ ಗ್ಯಾರಂಟಿ!!!

1450

ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್ ಏನು ಗೊತ್ತಾ !  ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ.

 

ಐಟಿ ಕಂಪೆನಿಗಳು ಈಗ ತಮಗೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಕೆಲ ಉದ್ಯೋಗಿಗಳನ್ನು ಕಿತ್ತು ಹಾಕಲು ಮುಂದಾಗುತ್ತಿದ್ದು, ಈಗ ಸಹೋದ್ಯೋಗಿಗಳ ನಡುವೆ ವೈಮನಸ್ಸು ತರುವ ಕೆಲಸಕ್ಕೆ ಹೈ ಹಾಕಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.

ಕಂಪೆನಿಗಳು ಈಗ ತಮಗೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಅಸಮರ್ಥ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಒಂದೊಂದೆ ತಂತ್ರವನ್ನು ಅನುಸರಿಸಲು ಆರಂಭಿಸಿದೆ. ಈಗ ಉದ್ಯೋಗಿಯೊಬ್ಬ ತನ್ನ ಉದ್ಯೋಗವನ್ನು ಉಳಿಸಿಕೊಳ್ಳಲು ಬೇರೆ ಒಬ್ಬ ಉದ್ಯೋಗಿಯನ್ನು ಮನೆಗೆ ಕಳುಹಿಸಬೇಕಾದ ಸಂದರ್ಭ ಒದಗಿ ಬಂದಿದೆ, ಎಂದು  ಉದ್ಯೋಗಿಗಳ ಹೇಳಿಕೆಯನ್ನು ಆಧರಿಸಿ ವರದಿಯಾಗಿದೆ.

ಕಂಪೆನಿಗೆ ವೆಚ್ಚದಾಯಕವಾಗಿರುವ ಉದ್ಯೋಗಿಗಳನ್ನು ಗುರುತಿಸಿ ಅವರನ್ನು ಕೆಲಸದಿಂದ ಕಿತ್ತು ಹಾಕುವಂತೆ ಕಂಪೆನಿಯ ಹಿರಿಯ ಅಧಿಕಾರಿಗಳು ಎಚ್‍ಆರ್‍ಗೆ ಆದೇಶಿಸಿದ್ದಾರೆ.

ಇದರಂತೆ ಕೆಲ ಕಂಪೆನಿಗಳ ಎಚ್‍ಆರ್‍ಗಳು ಕೆಲ ಉದ್ಯೋಗಿಗಳಿಗೆ ಕರೆ ಮಾಡಿ, ಕಡಿಮೆ ವೇತನ ಪಡೆದು ಕೆಲಸವನ್ನು ತೊರೆಯುವಂತೆ ಹೇಳಿದ್ದಾರೆ. ಇನ್ನು ಕೆಲ ಕಂಪೆನಿಗಳು, ನಿಮಗೆ ಇಷ್ಟೊಂದು ವೇತನ ನೀಡಲು ಕಷ್ಟವಾಗುತ್ತದೆ. ಹೀಗಾಗಿ ಒಂದೋ ನೀವು ಕಂಪೆನಿ ತೊರೆಯಿರಿ, ಇಲ್ಲವೇ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೆಂದು ರೆಫರ್ ಮಾಡಿ ಎಂದು ಹೇಳಿದ್ದಾರೆ.

ಎಚ್‍ಆರ್‍ಗಳ ಮೂಲಕ ಈ ಆಟವನ್ನು ಆಡಿ ಕಂಪೆನಿಗಳು ಮನರಂಜನೆಯನ್ನು ತೆಗೆದುಕೊಳ್ಳುತ್ತಿದ್ದರೆ, ಉದ್ಯೋಗಿಗಳು ತಮ್ಮ ನೋವಿನ ವಿಚಾರವನ್ನು ಮಾಧ್ಯಮಗಳಲ್ಲಿ ತೋಡಿಕೊಂಡಿದ್ದಾರೆ.

ಐಟಿ ಉದ್ಯೋಗಿಯೊಬ್ಬರು ಹೇಳಿರುವ ಪ್ರಕಾರ ಕಂಪೆನಿಗಳ ಆಟ ಹೇಗಿರುತ್ತೆ ಗೊತ್ತಾ?
ಬೆಂಗಳೂರಿನ ನೊಂದ ಐಟಿ ಉದ್ಯೋಗಿಯೊಬ್ಬರು ಕಂಪೆನಿ ಹೇಗೆ ಉದ್ಯೋಗಿಗಳ ಜೊತೆ ನಡೆದುಕೊಳ್ಳುತ್ತಿದೆ ಎನ್ನುವುದನ್ನು ವಿವರಿಸುತ್ತಾ, ಕಳೆದ ತಿಂಗಳ 23ರಂದು ಎಚ್‍ಆರ್ ಮ್ಯಾನೇಜರ್ ಅವರನ್ನು ಭೇಟಿಯಾಗುವಂತೆ ನನಗೆ ಕರೆ ಬಂತು. ಹೀಗಾಗಿ ನಾನು ಹೈದರಾಬಾದ್‍ನಲ್ಲಿರುವ ಎಚ್‍ಆರ್ ಮುಖ್ಯಸ್ಥರ ಜೊತೆ ವಿಡಿಯೋ ಚಾಟ್ ಮಾಡುತ್ತಿರುವಾಗ, “ನೀನು ಉದ್ಯೋಗವನ್ನು ತೊರೆಯಬೇಕು. ನಿನಗೆ 2 ವಾರ ಸಮಯವಕಾಶ ಮತ್ತು 2 ತಿಂಗಳ ಮೂಲ ವೇತನ ನೀಡುತ್ತೇವೆ” ಎಂದರು.

ಇದಾದ ಬಳಿಕ 29ರಂದು ಕರೆ ಮಾಡಿ “ಇನ್ನು ಯಾಕೆ ರಾಜೀನಾಮೆ ನೀಡಿಲ್ಲ” ಎಂದು ಪ್ರಶ್ನಿಸಿದರು. ನಾನು “ರಾಜೀನಾಮೆ ನೀಡುವುದಿಲ್ಲ” ಎಂದೆ. ಇದಕ್ಕೆ ಅವರು “ನಿಮ್ಮ ಕಾಂಟ್ರಾಕ್ಟ್ ಟರ್ಮಿನೇಟ್ ಮಾಡುತ್ತೇವೆ. ಈ ರೀತಿ ಮಾಡಿದರೆ ಮುಂದೆ ಬೇರೆ ಯಾವ ಕಂಪೆನಿಯಲ್ಲೂ ಕೆಲಸ ಸಿಗುವುದಿಲ್ಲ” ಎಂದು ಬೆದರಿಸಿದರು. 31 ರಂದು ಕರೆ ಮಾಡಿ, “ನಿನ್ನ ಬದಲಿಗೆ ಬೇರೊಬ್ಬ ಉದ್ಯೋಗಿಯನ್ನು ರೆಫರ್ ಮಾಡು, ಆತನನ್ನು ಕೆಲಸದಿಂದ ತೆಗೆದು ಹಾಕಲಾಗುವುದು” ಎನ್ನುವ ವಿಚಿತ್ರ ಆಫರ್ ನೀಡಿದರು.

ಅದೇ ದಿನ ನನಗೆ ಆಟೋಮೇಟೆಡ್ ಇಮೇಲ್ ಬಂತು. ಅದರಲ್ಲಿ “ಕಂಪನಿಯಲ್ಲಿ ಇದು ನಿನ್ನ ಕೊನೆಯ ದಿನ. ಇಂದಿನಿಂದ ನಿನಗೆ ನೀಡಿರುವ ಕಂಪನಿ ಇಮೇಲ್ ಐಡಿ ಹಾಗೂ ಇತರ ಸೇವೆಗಳನ್ನು ರದ್ದು ಮಾಡಲಾಗುತ್ತಿದೆ” ಎಂದು ತಿಳಿಸಲಾಗಿತ್ತು. ಆದರೆ ಈ ಮೇಲ್ ಬಗ್ಗೆ ಎಚ್.ಆರ್. ಕಡೆಯಿಂದ ಯಾವುದೇ ಅಧಿಕೃತ ಕರೆ ಬರಲಿಲ್ಲ ಎಂದು ಅವರು ತಮ್ಮ ನೋವನ್ನು ತೊಡಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • inspirational

    ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!

    ವಿಶ್ವದ ಅತಿ ಎತ್ತರದಲ್ಲಿರುವ ರಾಷ್ಟ್ರೀಯ ಉದ್ಯಾನವನಗಳು ಪ್ರಕೃತಿಯ ಅದ್ಭುತಗಳನ್ನು ಅತ್ಯಂತ ವಿಭಿನ್ನ ರೀತಿಯಲ್ಲಿ ತೋರಿಸುತ್ತವೆ—ಹಿಮಪರ್ವತಗಳು, ಉನ್ನತ ಪರ್ವತಮಾಲೆಗಳು, ಅಪರೂಪದ ಜೀವಜಾಲ ಮತ್ತು ಕಡಿಮೆ ಆಮ್ಲಜನಕದ ಪರಿಸ್ಥಿತಿಗಳು ಇಲ್ಲಿ ಸಾಮಾನ್ಯ. ಇಲ್ಲಿ ಕೆಲವು ಪ್ರಸಿದ್ಧ ಎತ್ತರದ ರಾಷ್ಟ್ರೀಯ ಉದ್ಯಾನವನಗಳನ್ನು ನೋಡಿ: 1. Sagarmatha National Park (ನೇಪಾಳ) ಎತ್ತರ: ಸುಮಾರು 2,845 ಮೀಟರ್ ರಿಂದ 8,848 ಮೀಟರ್ (Mount Everest) ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನ ಯುನೆಸ್ಕೋ ವಿಶ್ವ ಪರಂಪರೆ ತಾಣ ಶೆರ್ಪಾ ಸಂಸ್ಕೃತಿ ಮತ್ತು ಹಿಮಾಲಯದ…

  • ದೇಶ-ವಿದೇಶ

    2018ರ ಮೊದಲ ದಿನದ ಯಾವ ದೇಶದಲ್ಲಿ ಎಷ್ಟು ಶಿಶುಗಳ ಜನನ..!ತಿಳಿಯಲು ಈ ಲೇಖನ ಓದಿ..

    2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.

  • ಸುದ್ದಿ

    ಝೊಮ್ಯಾಟೋ ಮೇಲೆ 55 ಸಾವಿರ ದಂಡ ವಿಧಿಸಿದ ಕೋರ್ಟ್…ಸಸ್ಯಾಹಾರಿ ಕೇಳಿದಕ್ಕೆ ಮಾಂಸಹಾರಿ ಡೆಲಿವರಿ

    ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ,…

  • ಸುದ್ದಿ

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸುಧಾಮುರ್ತಿ ದಂಪತಿಯ ಮಗ. ಇವರ ಮದುವೆ ಏಗೆ ನಡೆಯಿತು ಗೊತ್ತಾ.!

    ಅರ್ಪಣಾ ಈಗ ಬೆಂಗಳೂರಿನ ನಿವಾಸಿಯಾಗಿದ್ದು,  ನಿವೃತ್ತ ಎಸ್‍ಬಿಐ ಉದ್ಯೋಗಿ ಸಾವಿತ್ರಿ ಕೃಷ್ಣನ್ ಹಾಗೂ ಕಮಾಂಡರ್, ಮಾಜಿ ಭಾರತೀಯ ನೌಕಾಪಡೆ ಅಧಿಕಾರಿ ಕೆಆರ್ ಕೃಷ್ಣನ್ ಮಗಳು. ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರ್ಣಗೊಳಿಸಿರುವ ಅರ್ಪಣಾ ಹೆಚ್ಚಿನ ಶಿಕ್ಷಣಕ್ಕಾಗಿ ಕೆನೆಡಾಗೆ ಹೋಗಿದ್ದರು. ಅರ್ಪಣಾ ಅಮೆರಿಕದ ಡಾರ್ಟ್ಮೌತ್ ಕಾಲೇಜಿನಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದಾರೆ. ಮೊದಲು ಮೆಕಿನ್ಸೆ ಹಾಗೂ ಸಿಕ್ವೊಯ ಕ್ಯಾಪಿಟಲ್‍ನಲ್ಲಿ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೋಹನ್ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಪಿಎಚ್‍ಡಿ ಪದವಿಯನ್ನು ಪಡೆದಿದ್ದಾರೆ. ರೋಹನ್ ಮೂರ್ತಿ ಕ್ಲಾಸಿಕಲ್ ಲೈಬ್ರರಿ…