ಉದ್ಯೋಗ

ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಜಾಬ್ ಆಫರ್ ಏನು ಗೊತ್ತಾ? ಓದಿದರೆ ಶಾಕ್ ಗ್ಯಾರಂಟಿ!!!

1446

ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್ ಏನು ಗೊತ್ತಾ !  ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ.

 

ಐಟಿ ಕಂಪೆನಿಗಳು ಈಗ ತಮಗೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಕೆಲ ಉದ್ಯೋಗಿಗಳನ್ನು ಕಿತ್ತು ಹಾಕಲು ಮುಂದಾಗುತ್ತಿದ್ದು, ಈಗ ಸಹೋದ್ಯೋಗಿಗಳ ನಡುವೆ ವೈಮನಸ್ಸು ತರುವ ಕೆಲಸಕ್ಕೆ ಹೈ ಹಾಕಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.

ಕಂಪೆನಿಗಳು ಈಗ ತಮಗೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಅಸಮರ್ಥ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಒಂದೊಂದೆ ತಂತ್ರವನ್ನು ಅನುಸರಿಸಲು ಆರಂಭಿಸಿದೆ. ಈಗ ಉದ್ಯೋಗಿಯೊಬ್ಬ ತನ್ನ ಉದ್ಯೋಗವನ್ನು ಉಳಿಸಿಕೊಳ್ಳಲು ಬೇರೆ ಒಬ್ಬ ಉದ್ಯೋಗಿಯನ್ನು ಮನೆಗೆ ಕಳುಹಿಸಬೇಕಾದ ಸಂದರ್ಭ ಒದಗಿ ಬಂದಿದೆ, ಎಂದು  ಉದ್ಯೋಗಿಗಳ ಹೇಳಿಕೆಯನ್ನು ಆಧರಿಸಿ ವರದಿಯಾಗಿದೆ.

ಕಂಪೆನಿಗೆ ವೆಚ್ಚದಾಯಕವಾಗಿರುವ ಉದ್ಯೋಗಿಗಳನ್ನು ಗುರುತಿಸಿ ಅವರನ್ನು ಕೆಲಸದಿಂದ ಕಿತ್ತು ಹಾಕುವಂತೆ ಕಂಪೆನಿಯ ಹಿರಿಯ ಅಧಿಕಾರಿಗಳು ಎಚ್‍ಆರ್‍ಗೆ ಆದೇಶಿಸಿದ್ದಾರೆ.

ಇದರಂತೆ ಕೆಲ ಕಂಪೆನಿಗಳ ಎಚ್‍ಆರ್‍ಗಳು ಕೆಲ ಉದ್ಯೋಗಿಗಳಿಗೆ ಕರೆ ಮಾಡಿ, ಕಡಿಮೆ ವೇತನ ಪಡೆದು ಕೆಲಸವನ್ನು ತೊರೆಯುವಂತೆ ಹೇಳಿದ್ದಾರೆ. ಇನ್ನು ಕೆಲ ಕಂಪೆನಿಗಳು, ನಿಮಗೆ ಇಷ್ಟೊಂದು ವೇತನ ನೀಡಲು ಕಷ್ಟವಾಗುತ್ತದೆ. ಹೀಗಾಗಿ ಒಂದೋ ನೀವು ಕಂಪೆನಿ ತೊರೆಯಿರಿ, ಇಲ್ಲವೇ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೆಂದು ರೆಫರ್ ಮಾಡಿ ಎಂದು ಹೇಳಿದ್ದಾರೆ.

ಎಚ್‍ಆರ್‍ಗಳ ಮೂಲಕ ಈ ಆಟವನ್ನು ಆಡಿ ಕಂಪೆನಿಗಳು ಮನರಂಜನೆಯನ್ನು ತೆಗೆದುಕೊಳ್ಳುತ್ತಿದ್ದರೆ, ಉದ್ಯೋಗಿಗಳು ತಮ್ಮ ನೋವಿನ ವಿಚಾರವನ್ನು ಮಾಧ್ಯಮಗಳಲ್ಲಿ ತೋಡಿಕೊಂಡಿದ್ದಾರೆ.

ಐಟಿ ಉದ್ಯೋಗಿಯೊಬ್ಬರು ಹೇಳಿರುವ ಪ್ರಕಾರ ಕಂಪೆನಿಗಳ ಆಟ ಹೇಗಿರುತ್ತೆ ಗೊತ್ತಾ?
ಬೆಂಗಳೂರಿನ ನೊಂದ ಐಟಿ ಉದ್ಯೋಗಿಯೊಬ್ಬರು ಕಂಪೆನಿ ಹೇಗೆ ಉದ್ಯೋಗಿಗಳ ಜೊತೆ ನಡೆದುಕೊಳ್ಳುತ್ತಿದೆ ಎನ್ನುವುದನ್ನು ವಿವರಿಸುತ್ತಾ, ಕಳೆದ ತಿಂಗಳ 23ರಂದು ಎಚ್‍ಆರ್ ಮ್ಯಾನೇಜರ್ ಅವರನ್ನು ಭೇಟಿಯಾಗುವಂತೆ ನನಗೆ ಕರೆ ಬಂತು. ಹೀಗಾಗಿ ನಾನು ಹೈದರಾಬಾದ್‍ನಲ್ಲಿರುವ ಎಚ್‍ಆರ್ ಮುಖ್ಯಸ್ಥರ ಜೊತೆ ವಿಡಿಯೋ ಚಾಟ್ ಮಾಡುತ್ತಿರುವಾಗ, “ನೀನು ಉದ್ಯೋಗವನ್ನು ತೊರೆಯಬೇಕು. ನಿನಗೆ 2 ವಾರ ಸಮಯವಕಾಶ ಮತ್ತು 2 ತಿಂಗಳ ಮೂಲ ವೇತನ ನೀಡುತ್ತೇವೆ” ಎಂದರು.

ಇದಾದ ಬಳಿಕ 29ರಂದು ಕರೆ ಮಾಡಿ “ಇನ್ನು ಯಾಕೆ ರಾಜೀನಾಮೆ ನೀಡಿಲ್ಲ” ಎಂದು ಪ್ರಶ್ನಿಸಿದರು. ನಾನು “ರಾಜೀನಾಮೆ ನೀಡುವುದಿಲ್ಲ” ಎಂದೆ. ಇದಕ್ಕೆ ಅವರು “ನಿಮ್ಮ ಕಾಂಟ್ರಾಕ್ಟ್ ಟರ್ಮಿನೇಟ್ ಮಾಡುತ್ತೇವೆ. ಈ ರೀತಿ ಮಾಡಿದರೆ ಮುಂದೆ ಬೇರೆ ಯಾವ ಕಂಪೆನಿಯಲ್ಲೂ ಕೆಲಸ ಸಿಗುವುದಿಲ್ಲ” ಎಂದು ಬೆದರಿಸಿದರು. 31 ರಂದು ಕರೆ ಮಾಡಿ, “ನಿನ್ನ ಬದಲಿಗೆ ಬೇರೊಬ್ಬ ಉದ್ಯೋಗಿಯನ್ನು ರೆಫರ್ ಮಾಡು, ಆತನನ್ನು ಕೆಲಸದಿಂದ ತೆಗೆದು ಹಾಕಲಾಗುವುದು” ಎನ್ನುವ ವಿಚಿತ್ರ ಆಫರ್ ನೀಡಿದರು.

ಅದೇ ದಿನ ನನಗೆ ಆಟೋಮೇಟೆಡ್ ಇಮೇಲ್ ಬಂತು. ಅದರಲ್ಲಿ “ಕಂಪನಿಯಲ್ಲಿ ಇದು ನಿನ್ನ ಕೊನೆಯ ದಿನ. ಇಂದಿನಿಂದ ನಿನಗೆ ನೀಡಿರುವ ಕಂಪನಿ ಇಮೇಲ್ ಐಡಿ ಹಾಗೂ ಇತರ ಸೇವೆಗಳನ್ನು ರದ್ದು ಮಾಡಲಾಗುತ್ತಿದೆ” ಎಂದು ತಿಳಿಸಲಾಗಿತ್ತು. ಆದರೆ ಈ ಮೇಲ್ ಬಗ್ಗೆ ಎಚ್.ಆರ್. ಕಡೆಯಿಂದ ಯಾವುದೇ ಅಧಿಕೃತ ಕರೆ ಬರಲಿಲ್ಲ ಎಂದು ಅವರು ತಮ್ಮ ನೋವನ್ನು ತೊಡಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆಳಕಿನ ಹಬ್ಬ ದೀಪಾವಳಿಯ ಸೊಬಗು ಹೆಚ್ಚಿಸುವ ದೀಪಗಳ ಇಂದಿರುವ ಮಹತ್ವಗಳೇನು ಗೊತ್ತಾ..?

    ದೀಪಾವಳಿ, ದೀಪಗಳ ಹಬ್ಬ; ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ದೀಪಗಳು ಮನೆಯನ್ನು ಬೆಳಗೋದರ ಜೊತೆಗೆ ಮನಸ್ಸಿಗೆ ಮುದವನ್ನಾ ನೀಡುತ್ತವೆ. ಮನೆ ಮನಗಳನ್ನು ಬೆಳಗೋ ದೀಪಾವಳಿಗೆ ಇನ್ನೇನು ಒಂದು ವಾರವಷ್ಟೇ ಬಾಕಿ ಇದ್ದು ಸಿಲಿಕಾನ್ ಸಿಟಿಯ ಮಾರುಕಟ್ಟೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಒಂದ್ಕಡೆ ಟೆರಾಕೋಟಾ ಇಂದ ತಯಾರಾಗಿರೋ ಪುಟ್ಟ ಪುಟ್ಟ ದೀಪಗಳು. ಅವುಗಳ ಅಂದವನ್ನು ಮತ್ತಷ್ಟು ಹೆಚ್ಚಸ್ತಿರೋ ಬಣ್ಣ ಬಣ್ಣದ ದೀಪಗಳು….

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿಯಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಫೆಬ್ರವರಿ, 2019) ದಿನದಲ್ಲಿ ನಂತರ ಹಣಕಾಸುಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ….

  • ದೇಶ-ವಿದೇಶ

    ಪೊಲೀಸ್ ಅಧಿಕಾರಿ ಮುಂದೆಯೇ, ಠಾಣಾಧಿಕಾರಿಯ ಸೀಟ್ನಲ್ಲಿ ಕುಳಿತ ಸ್ವಘೋಷಿತ ದೇವ ಮಹಿಳೆ..!

    ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಬೆಳಗಿನ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣನ್ನು ತಿಂದರೆ ಏನಾಗುತ್ತೆ ಗೊತ್ತಾ..?

    ನೀವು ಪ್ರತಿದಿನ ಸೇವಿಸುವ ಆಹಾರದಲ್ಲಿ ಬೆಳಗ್ಗೆ ತಿಂಡಿ ಅತ್ಯಂತ ಮುಖ್ಯವಾದದ್ದು. ಮುಂಜಾನೆಯ ಉಪಾಹಾರ ಅತ್ಯಂತ ಪ್ರಮುಖವಾಗಿದ್ದು ಉಪಾಹಾರವನ್ನು ಯಾವುದೇ ಕಾರಣಕ್ಕೂ ಬಿಡಕೂಡದು. ಭರಪೂರ ಪೋಷಕಾಂಶಗಳಿಂದ ಕೂಡಿರೋ ತಿನಿಸನ್ನೇ ಬೆಳಗ್ಗೆ ತಿಂದರೆ ಸೂಕ್ತ. ಹಾಗಾಗಿ ಎಲ್ಲರೂ ಬ್ರೇಕ್ ಫಾಸ್ಟ್ ಗೆ ಬಾಳೆಹಣ್ಣನ್ನು ತಿನ್ನಲು ಇಷ್ಟಪಡ್ತಾರೆ.ಹೆಚ್ಚಿನವರು ಬೇನಗೇ ಉದ್ಯೋಗಸ್ಥಳಕ್ಕೆ ತಲುಪುವ ಧಾವಂತದ ಕಾರಣ ಉಪಾಹಾರವನ್ನೇ ತ್ಯಜಿಸುತ್ತಾರೆ. ಇಲ್ಲದಿದ್ದರೆ ಒಂದು ಬಾಳೆಹಣ್ಣನ್ನೋ, ಸೇಬನ್ನೋ ತಿಂದು ಹೊರಟುಬಿಡುತ್ತಾರೆ. ಆದ್ರೆ ಹಸಿದ ಹೊಟ್ಟೆಯಲ್ಲಿ ಫೈಬರ್, ಪೊಟ್ಯಾಶಿಯಂ ಸೇವನೆ ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು.ಬಾಳೆಹಣ್ಣು ಅತ್ಯಂತ ಪೌಷ್ಟಿಕ…

  • ಉಪಯುಕ್ತ ಮಾಹಿತಿ

    ನಿಮ್ಮ ತ್ವಚೆಯನ್ನು ಕಾಪಾಡಿಕೊಂಡು ಸೌಂದರ್ಯವಾಗಿ ಕಾಣಬೇಕೇ? ಹಾಗಾದರೆ ನೀವು ಇದನ್ನು ಬಳುಸುವುದು ಉತ್ತಮ.!

    ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…

  • ವೀಡಿಯೊ ಗ್ಯಾಲರಿ

    ಅಯ್ಯಪ್ಪನ ಪ್ರತಿಮೆಯೊಂದಿಗೆ ಆನೆ ಮೇಲೆ ಹೋಗುತ್ತಿದ್ದ ಅರ್ಚಕರನ್ನು ಕಾಡಿನೊಳಗೆ ಬಿಸಾಡಿ ಓಡಿ ಹೋದ ಆನೆ.!ಮುಂದೆ ನೋಡಿ ಶೇರ್ ಮಾಡಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈ ಘಟನೆ ಶಬರಿಮಲೈನಲ್ಲಿ ನಡೆದಿದ್ದು, ಶಬರಿಮಲೆ ದೇವಸ್ಥಾನದ ಪ್ರಧಾನ ಅರ್ಚಕರು ಅಯ್ಯಪ್ಪನ ಮೂರ್ತಿಯೊಂದಿಗೆ ಆನೆ ಮೇಲೆ ಕುಳಿತು ಹೋಗುತ್ತಿದ್ದರು.ಆನೆಯ ಸುತ್ತಲೂ ಅಯ್ಯಪ್ಪನ ಭಕ್ತಾದಿಗಳು ಹೋಗುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಪಲ್ಲಕ್ಕಿಯನ್ನು ಹೊತ್ತಿದ್ದ ಆನೆ ಭಕ್ತರ ಮಧ್ಯ ಜೋರಾಗಿ ಓಡುತ್ತಾ, ಕಾಡಿನೊಳಗೆ ಪ್ರತಿಮೆಯೊಂದಿಗೆ ಕುಳಿತಿದ್ದ ಪ್ರಧಾನ ಅರ್ಚಕರನ್ನು ಬಿಸಾಡಿ, ಕಾಡಿನೊಳಗೆ ಓಡಿ ಹೋಯಿತು. ಅರ್ಚಕರನ್ನು ಬಿಸಾಡಿ ಕಾಡಿನೊಳಗೆ ಓಡಿ ಹೋದ ಆನೆಯ ವಿಡಿಯೋ ನೋಡಿ…ಶೇರ್ ಮಾಡಿ…