ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.
ರಾಜ್ ಬಿ ಶೆಟ್ಟಿ ಬರೆದು ನಿರ್ದೇಶಿಸಿ, ಪ್ರಧಾನ ಪಾತ್ರದಲ್ಲಿ ನಟಿಸಿರುವ ‘ಒಂದು ಮೊಟ್ಟೆಯ ಕಥೆ’ ಸಿನೆಮಾ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದ್ದು, ಇದೇ ಶುಕ್ರವಾರ ಬಿಡುಗಡೆಯಾಗಿದೆ. ಈ ಸಿನಿಮಾದ ಟ್ರೈಲರ್ ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸಿನೆಮಾದಲ್ಲಿ “ಬೋಳು ತಲೆಗಿಂತಲೂ, ಸೌಂದರ್ಯ ಮತ್ತು ಜೀವನದ ಬಗ್ಗೆ ಹೆಚ್ಚು ಮಾತನಾಡಿದ್ದೇನೆ. ಈ ಸಿನೆಮಾ ಮಾಡುವುದಕ್ಕೂ ಮುಂಚಿತವಾಗಿ ಹಲವು ಕಿರುಚಿತ್ರಗಳನ್ನು ಮಾಡಿದ್ದಾಗಿ ನೆನಪಿಸಿಕೊಳ್ಳುವ ರಾಜ್ “‘ಒಂದು ಮೊಟ್ಟೆಯ ಕಥೆ’ ನನ್ನ ಮೊದಲ ಸಿನೆಮಾ ಆಗಲಿದೆ ಎಂದು ನಾನೆಂದಿಗೂ ಎಣಿಸಿರಲಿಲ್ಲ. ಇದಕ್ಕೂ ಮುಂಚೆ ಮೂರು ಸ್ಕ್ರಿಪ್ಟ್ ಗಳನ್ನು ಬರೆದಿದ್ದೆ. ಆದರೆ ಅವುಗಳು ಸಿನೆಮಾ ಆಗಲಿಲ್ಲ” ಎನ್ನುತ್ತಾರೆ.
ಈಗಾಗ್ಲೇ ವಿವಿಧ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಮೊಟ್ಟೆಯ ಕಥೆ ಅನಾವರಣಗೊಂಡಿದೆ. ಮೊಟ್ಟೆಯ ಕಥೆ ನವಿರಾದ ಹಾಸ್ಯದೊಂದಿಗೆ ಅವರ ಭಾವನೆಗಳು, ಸಮಾಜದ ಓರೆಕೋರೆಗಳನ್ನೆಲ್ಲಾ ತಿಳಿಸುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಲಾಗಿದೆ.
ಚಿತ್ರದ ಮೂಲಕಥಾವಸ್ತು:-
ತಲೆ ಮೇಲೆ ಕೂದಲಿಲ್ಲ ಎನ್ನುವ ಒಂದೇ ಕಾರಣದಿಂದ ಮನಸಿಗೊಪ್ಪುವ ಹುಡುಗಿಯನ್ನು ಪಡೆಯುವ ಯುವಕನ ಕನಸೇ ಇಡೀ ಚಿತ್ರದ ಮೂಲಕಥಾವಸ್ತು. ರಾಜ್ ಬಿ ಶೆಟ್ಟಿ, ಅಮೃತಾ ನಾಯಕ್, ಶ್ರೇಯಾ ಅಂಚನ್, ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ರಾಜ್ ಶೆಟ್ಟಿಯೇ ಈ ಚಿತ್ರದ ನಿರ್ದೇಶಕರೂ ಕೂಡಾ, ಪವನ್ ಕುಮಾರ್ ಮತ್ತು ಸುಹಾನ್ ಪ್ರಸಾದ್ ಇದರ ನಿರ್ಮಾಪಕರು. ಮಿದುನ್ ಮುಕುಂದನ್ ಇದಕ್ಕೆ ಸಂಗೀತ ನೀಡಿದ್ದಾರೆ.
ಇದು ಸೂಪರ್ ಕನ್ನಡ ಸಿನೆಮಾ, ನೋಡಲು ಮರೆಯದಿರಿ, ಮರೆತು ನಿರಾಶರಾಗದಿರಿ. ಎದ್ದು ನಿಂತು ಚಪ್ಪಾಳೆ ತಟ್ಟುವ ಸಿನೆಮಾ ಇದು. ಕನ್ನಡ ಚಿತ್ರಗಳನ್ನು ನೋಡಿ, ಕನ್ನಡ ಚಿತ್ರಗಳನ್ನು ಬೆಳೆಸಿ…..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ. ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ…
ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ದಿನೇ ದಿನೇ ತಮ್ಮ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಈಗ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಪ್ರಧಾನಿ ನರೇಂದ್ರ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿದ್ದಾರೆ. ಜೂನ್ 4ರಂದು ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಯಲಿದ್ದು, ಅದರಲ್ಲಿ ಭಾಗವಹಿಸಲು ಮಾರಿಸನ್ ಉತ್ಸುಕರಾಗಿದ್ದಾರೆ. ಜೂನ್ 4ರಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಲು ಉತ್ಸುಕರಾಗಿರಾಗುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್, ಪ್ರಧಾನಿ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ….
ಸಮ್ಮಿಶ್ರ ಸರ್ಕಾರದಲ್ಲಿ ತಪ್ಪುಗಳಾಗಿವೆ ಅದು ಜೆಡಿಎಸ್ ಸರ್ಕಾರದ ಸಚಿವರು ಹಾಗೂ ಶಾಸಕರಿಂದ ಆಗಿವೆ ಇದನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಬುಧವಾರ ಹೇಳಿದರು. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ನಿನ್ನೆ ಹದ್ದು ಗಿಣಿ ಟ್ವೀಟ್ಗೆ ಬಗ್ಗೆ ಕಾಗವಾಡ ಮತಕ್ಷೇತ್ರದ ಮಂಗಸೂಳಿ ಗ್ರಾಮದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇದ್ದಾಗೊಂದು, ಇಲ್ಲದಾಗೊಂದು ಹೇಳಿಕೆ ಸರಿಯಲ್ಲ, 14 ತಿಂಗಳು ಸಿಎಂ ಆಗಿದ್ದ ಸಂದರ್ಭದಲ್ಲಿ ಈ ಮಾತನ್ನು ಹೇಳಬೇಳಕಿತ್ತು….
ಸೋಮಾಲಿಲ್ಯಾಂಡ್ ಒಂದು ಸ್ವಯಂ ಅಂಗೀಕೃತ ರಾಜ್ಯವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸೋಮಾಲಿಯಾ ಗುರುತಿಸಲ್ಪಟ್ಟಿದೆ. ಆದರೆ ಸೋಮಾಲಿಲ್ಯಾಂಡ್’ಗೆ ದೇಶದ ಅನುಕೂಲ ಇನ್ನು ಸಿಕ್ಕಿಲ್ಲ. ಈ ರಾಜ್ಯದಲ್ಲಿ ಅತ್ಯಾಚಾರ ಒಂದು ಕಾನೂನುಭಂಗ ವಾಗಿರಲಿಲ್ಲ.
ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ.
ಬಹಳಷ್ಟು ವಿದ್ಯಾರ್ಥಿಗಳು ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್ ಆಯ್ಕೆ ಮಾಡುಕೊಳ್ಳುತ್ತಾರೆ. ಆದರೆ ಹೆಚ್ಚಿನವರ ನಂಬಿಕೆ ಏನೆಂದರೆ ಸಯನ್ಸ್ ಮತ್ತು ಕಾಮರ್ಸ್ನಲ್ಲಿ ಇರೋವಷ್ಟು ಕರಿಯರ್ ಆಪ್ಷನ್ ಆರ್ಟ್ಸ್ನಲ್ಲಿ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ಅದು ಸುಳ್ಳು ಆರ್ಟ್ಸ್ನಲ್ಲಿ ಬಹಳಷ್ಟು ಕರಿಯರ್ ಅವಕಾಶಗಳು ಇವೆ. ಅದಕ್ಕಾಗಿ ನೀವು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಸ್ವಲ್ಪ ಮಾಹಿತಿ ಇಲ್ಲಿ ತಿಳಿದುಕೊಳ್ಳಬೇಕು.