ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.

ಒಂದು ಕಾಲದಲ್ಲಿ ನರೇಂದ್ರ ಮೋದಿಯವರಿಗೆ ವೀಸಾ ಕೊಡೋದಿಲ್ಲ ಎಂದು ಹೇಳುತ್ತಿದ್ದ ಜಗತ್ತಿನ ದೊಡ್ಡಣ್ಣ ಅಮೇರಿಕಾ, ಅದೇ ಮೋದಿಯವರನ್ನು ತಾವಾಗೆ ಅಮೆರಿಕಾಕ್ಕೆ ಬೇಟಿ ಕೊಡಿ ಎಂದು ಆಹ್ವಾನಿಸುತ್ತಾರೆ. ಹಾಗೆ ಅಲ್ಲಿಗೆ ಹೋದ ಮೋದಿಯವರಿಗೆ ಅಭೂತಪೂರ್ವ ಸ್ವಾಗತ ಸಿಗುತ್ತೆ. ಮೊದಲಿಗಿಂತಲೂ ಈಗ ಭಾರತ ಅಮೆರಿಕಾದ ಭಾಂದವ್ಯ ಹೆಚ್ಚಾಗಿದೆ.

ಬೇರೆ ದೇಶಗಳು ಹೇಗೆ ಮೋದಿ ಮಾತುಗಳನ್ನು, ಆಜ್ಞೆಯಂತೆ ಪಾಲಿಸುತ್ತವೆ ಎಂಬುದಕ್ಕೆ, ಒಂದು ಉದಾಹರಣೆ ಹೇಳಬೇಕಂದ್ರೆ ಇತ್ತೀಚೆಗಷ್ಟೇ ಸೌದಿ ಅರೇಬಿಯಾ ದೇಶವು ಯೆಮನ್ ದೇಶದ ಮೇಲೆ ಯುದ್ದ ಸಾರಿತ್ತು. ಆಗ ಯೆಮನ್ ದೇಶದಲ್ಲಿರುವ ಭಾರತೀಯರನ್ನು ರಕ್ಷಿಸಲು ಸಚಿವೆ ಸುಶ್ಮಾಸ್ವಾರಜ್’ರವರು ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತನಾಡಿದ್ರು. ಭಾರತೀಯರ ರಕ್ಷಣೆಗಾಗಿ ಮೋದಿಯವರು, ಸೌದಿ ಅರೇಬಿಯಾ ಅಧ್ಯಕ್ಷ ಸಲ್ಮಾನ್ ಬಿನ್ ಅಬ್ದುಲಾಜಿಜ್’ವರೆಗೂ ಫೋನ್ ಕಾಲ್ ಮಾಡಿ, ತಕ್ಷಣವೇ ಯೆಮನ್ ಮೇಲಿನ ಯುದ್ದ ನಿಲ್ಲಿಸಿ, ನಮ್ಮವರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದಾಗ, ಮೋದಿಯವರ ಮಾತಿಗೆ ಎದುರಾಡದ ಸಲ್ಮಾನ್ ಬಿನ್ ಅಬ್ದುಲಾಜಿಜ್ ಯುದ್ದವನ್ನು ನಿಲ್ಲಿಸಿದ್ರು. ಇದು ಜಗತ್ತಿನ ರಾಷ್ಟ್ರಗಳು ಹೇಗೆ ಮೋದಿ ಮಾತಿಗೆ ಗೌರವ ಕೊಡುತ್ತವೆ ಎಂಬುದನ್ನು ಎತ್ತಿ ತೋರಿಸುತ್ತೆ.

ಭಾರತ ದೇಶವು ಕಳೆದೆ ವರ್ಷ ನಡೆದ ಗಡಿ ಕದನದಿಂದ ಏಷಿಯಾದಲ್ಲಿಯೇ ತಾನು ಚೀನಾಕ್ಕಿಂತ ಬಲಶಾಲಿ ಎಂಬುದನ್ನು ಹಲವಾರು ಬಾರಿ ಸಾಬೀತು ಪಡಿಸುತ್ತಾ ಬಂದಿದೆ.ಭಾರತವು ಪಕ್ಕದಲ್ಲಿರುವ ಪಾಪಿ ಪಾಕಿಸ್ತಾನವನ್ನು ಬಿಟ್ಟು, ಚೀನಾಕ್ಕಿಂತಲೂ ಉಳಿದೆಲ್ಲಾ ದೇಶಗಳೊಂದಿಗೆ ಬೆಳೆಸುತ್ತಿರುವ ಭಾಂದವ್ಯ,ಏಷಿಯಾದ ಹಿರಿಯಣ್ಣನಾಗಿ ಅಧಿಕಾರ ಪಡೆಯುವಲ್ಲಿ ಮುನ್ನುಗ್ಗುತ್ತಿದೆ.ಜಪಾನ್, ವಿಯೆಟ್ನಾಮ್, ಕೋರಿಯಾ, ತೈವಾನ್ಗಳನ್ನೆಲ್ಲ ತನ್ನೆಡೆಗೆ ಸೆಳೆದುಕೊಂಡಿರುವ ಭಾರತ, ಟಿಬೆಟ್ನಲ್ಲೂ ಕೈಯ್ಯಾಡಿಸಿ ಶಕುನಿ ಚೀನಾಕ್ಕೆ ಉಸಿರುಗಟ್ಟುವಂತೆ ಮಾಡುತ್ತಿದೆ.
ಮೋದಿ ಸರ್ಕಾರ ಬಂದಾಗಿನಿಂದ ಮೋದಿಯವರು ಬರೀ ಬೇರೆ ದೇಶಗಳನ್ನು ಸುತ್ತುವುದೇ ಆಗಿದೆ ಎಂಬ ಮಾತು ಕೇಳಿಬಂದದ್ದು ಸುಳ್ಳಲ್ಲ. ಆದ್ರೆ ಜಗತ್ತಿನ ಅನೇಕ ದೇಶಗಳನ್ನು ಭೇಟಿ ಮಾಡಿದ ಮೋದಿ ಅವರೊಂದಿಗೆ ಬಹಳ ಗಟ್ಟಿಯಾದ ಬಾಂಧವ್ಯವನ್ನು ಸ್ಥಾಪಿಸಿ ಬಂದಿದ್ದಾರೆ. ಅಮೇರಿಕ, ಜಪಾನ್, ಆಸ್ಟ್ರೇಲಿಯಾ, ಇಸ್ರೇಲ್ಗಳನ್ನೆಲ್ಲ ತಮ್ಮೆಡೆಗೆ ಸೆಳೆದುಕೊಂಡು, ಮುಂಗೋಲಿಯ, ಶ್ರೀಲಂಕಾ, ತೈವಾನ್ಗಳೂ ಚೀನಾ ವಿರುದ್ಧ ತಿರುಗಿ ಬೀಳುವಂತೆ ಮಾಡಿ ಚೀನಾಕ್ಕೆ ಮೋದಿ ಕಂಟಕಪ್ರಾಯವಾಗಿಬಿಟ್ಟಿದ್ದಾರೆ. ಶಕುನಿ ಚೀನಾ ದೇಶವು ಡೋಕ್ಲಾಂನಲ್ಲಿ ನಮ್ಮೆದುರಾಗಿ ನಿಂತು,1962ರ ಯುದ್ಧವನ್ನು ನೆನಪಿಸಿ ಭಾರತೀಯ ಸೈನಿಕರ ಆತ್ಮಸ್ತೈರವನ್ನಕೆಣಕಲು ಪ್ರಯತ್ನಿಸಿತ್ತು. ಆದ್ರೆ ಭಾರತವು ಇದಕ್ಕೆ ಪ್ರತಿಯಾಗಿ ಇದು ಇದು 1962 ಅಲ್ಲ, 2017 ಎಂದಾಗ ಚೀನಾ ದೇಶಕ್ಕೆ ಬಾಲ ಮುದುರಿದ ನಾಯಿಯಂತಾಗಿತ್ತು.
ಆಗ ಮೋದಿ ಅಮೇರಿಕಾ-ಇಸ್ರೇಲ್ ಪ್ರವಾಸದಲ್ಲಿದ್ದರು.ಇನ್ನೇನು ನಾವು ಭಾರತದಲ್ಲಿ ಯುದ್ದ ಮಾಡಿಯೇ ಬಿಡುತ್ತೇವೆ ಎಂಬ ಉತ್ಸಾಹದಲ್ಲಿತ್ತು.ಅದೇ ಟೈಮಿಗೆ ಸರಿಯಾಗಿ ದಕ್ಷಿಣ ಚೀನಾ ಸಮುದ್ರಕ್ಕೆ ಲಗ್ಗೆಯಿಟ್ಟ ಅಮೇರಿಕಾ-ಜಪಾನ್ ದೇಶದ ಹಡಗುಗಳು ಚೀನಾವನ್ನು ನಡುಗುವಂತೆ ಮಾಡಿದವು.ಈ ಹೊತ್ತಲ್ಲಿಯೇ ಭಾರತದ ಪರ ನಿಂತ ತೈವಾನ್ ದೇಶವು ಎಣ್ಣೆ ಬಾವಿ ಕೊರೆಯುವ ಒಪ್ಪಂದವನ್ನು ನವೀಕರಿಸಿ ಚೀನಾ ವಿರುದ್ದ ಸೆಟೆದು ನಿಂತಿತು.ಭಾರತವನ್ನೇ ತನ್ನ ಚಕ್ರವ್ಯೂಹದಲ್ಲಿ ಸಿಕ್ಕಿಸಲು ಹೋರಾಟ ಶಕುನಿ ಚೀನಾ, ತಾನು ಎನೆದ ಚಕ್ರವ್ಯೂಹದಲ್ಲಿ ತಾನೇ ಸಿಕ್ಕಿಹಾಕಿಕೊಂಡಿತ್ತು.

ಜಗತ್ತಿನ ಅನೇಕ ದೇಶಗಳನ್ನು ಸುತ್ತಾಡಿದ್ದ ಮೋದಿ, ತಾನು ಹೋದ ಕಡೆಯೆಲ್ಲಾಲ್ಲಾ ಭಯೋತ್ಪಾದನೆಯ ಕುರಿತಂತೆ ಮಾತನಾಡಿ ಪಾಕಿಸ್ತಾನವನ್ನು ಜಗತ್ತಿನ ಶತ್ರುವನ್ನಾಗಿ ಮಾಡಿಬಿಟ್ಟಿದ್ದರು.ಆದ್ರೆ ಪಾಪಿ ಪಾಕಿಸ್ತಾನವು ತಾನು ಭಯೋತ್ಪಾದನೆಯ ಬೆಂಬಲಿಗನಲ್ಲವೆಂದು ಸಾಬೀತುಪಡಿಸಲು ಹೋಗಿ ಜಗತ್ತಿನ ಮುಂದೆ ತಲೆತಗ್ಗಿಸಬಿಟ್ಟಿತ್ತು.ಇದೆಲ್ಲಾ ಕೇವಲ ಮೋದಿ ತಂತ್ರಗಾರಿಕೆಯಿಂದ ಮಾತ್ರ ಸಾಧ್ಯವಾಯಿತು.ಪಾಕ್ ಪತ್ರಕರ್ತರು, ಟಿವಿ ಚಾನೆಲ್ಲುಗಳು ಮೋದಿ ಪರವಾದ ಮಾತುಗಳನ್ನಾಡಲಾರಂಭಿಸಿದವು. ಇದಕ್ಕೆ ಮತ್ತೊಂದು ಉದಾಹರಣೆಯಾಗಿ ಸಿಕ್ಕಿಹಾಕಿಕೊಂಡಿದ್ದ ಹೆಣ್ಣು ಮಗಳನ್ನು ಬಿಡಿಸಿ ಕ್ಯಾಮೆರಾಕ್ಕೆ ಪೋಸು ಕೊಟ್ಟರು. ಅಲ್ಲಿನ ಮಕ್ಕಳ ಚಿಕಿತ್ಸೆಗಾಗಿ ವೀಸಾ ಕೊಡಿಸಿದರು. ಈ ರಾಜತಾಂತ್ರಿಕ ಸಂಗತಿಗಳನ್ನು ಎಷ್ಟು ಸೂಕ್ಷ್ಮವಾಗಿ ನಿಭಾಯಿಸಲಾಯಿತೆಂದರೆ ಚಿಕಿತ್ಸೆ ಪಡೆದ ಮಗುವಿನ ತಾಯಿ ಪಾಕೀಸ್ತಾನದ ಪ್ರಧಾನಿ ಸುಷ್ಮಾರೇ ಆದರೆ ಚೆನ್ನಾಗಿತ್ತು ಎಂದುಬಿಟ್ಟಿದ್ದರು.

ಭಾರತದ ವಿಶ್ವಸಂಸ್ಥೆಯ ಕಾರ್ಯದರ್ಶಿ ಯೆನಾಮ್ ಗಂಭೀರ್ ಅವರು, “ಪಾಕಿಸ್ತಾನ ಭೌಗೋಳಿಕವಾಗಿ ಉಗ್ರವಾದದ ಸಮನಾರ್ಥಕವಾಗಿ ಗುರುತಿಸಿಕೊಂಡಿದೆ. ಅದೀಗ ”ಟೆರರಿಸ್ಥಾನ್” ಆಗಿದ್ದು, ಉಗ್ರರ ಕಾರ್ಖಾನೆಗಳಲ್ಲಿ ಉಗ್ರರನ್ನು ಉತ್ಪಾದನೆ ಮಾಡಿ ಜಗತ್ತಿಗೆ ರಫ್ತು ಮಾಡುತ್ತಿದೆ. ಒಸಮಾ ಬಿನ್ ಲಾಡೆನ್, ಮುಲ್ಲಾ ಓವರ್ ಗೆ ರಕ್ಷಣೆ ನೀಡಿದ ದೇಶ, 26/11 ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಪಾಕಿಸ್ತಾನದಲ್ಲಿ ಸ್ವತಂತ್ರವಾಗಿ ತಿರುಗಾಡುತ್ತಿದ್ದಾನೆ. ಜಾಗತಿಕ ಉಗ್ರರನ್ನು ಉತ್ಪಾದಿಸುವುದು ಪಾಕಿಸ್ತಾನದ ಮುಖ್ಯ ಗುರಿಯಾಗಿದ್ದು, ಉಗ್ರರಿಗೆ ಸುರಕ್ಷಿತ ತಾಣಗಳನ್ನು ನೀಡುತ್ತಿದೆ. ಉಗ್ರ ಸಂಘಟನೆಗಳ ಮುಖಂಡರು ಪಾಕ್ ಮಿಲಿಟರಿ ಮತ್ತು ರಾಜಕಾರಣಿಗಳೊಂದಿಗೆ ಉತ್ತಮ ನಂಟು ಹೊಂದಿದ್ದಾರೆ” ಎಂದು ಪಾಕ್ ಮಾನ ಹರಾಜು ಹಾಕಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನು ಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಸಿಕೊಳ್ಳಬೇಕು. ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ. 2016ರ ಮೇಘಾಲಯ ರೆಸಿಡೆಂಟ್ ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ. ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು. ತಕ್ಷಣದಿಂದ ಜಾರಿಗೆ…
ಇಂದು ಭಾನುವಾರ , 18/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಆಗಾಗ ಸಂಚಾರದಿಂದ ಕಾರ್ಯಸಿದ್ಧಿಯಾದರೂ ದೇಹಾಯಾಸ ತಂದೀತು. ಹೊಸ ಆದಾಯದ ಮೂಲಗಳು ಗೋಚರಕ್ಕೆ ಬಂದಾವು. ಸೂಕ್ತ ಸಲಹೆಗಾಗಿ ಹಿತೈಷಿಗಳು ನಿಮ್ಮ ಮಾರ್ಗದರ್ಶನಕ್ಕೆ ಬಂದಾರು. ವೃಷಭ:- ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉದಾಸೀನತೆ ತೋರಿಸಿಯಾರು. ವೃತ್ತಿರಂಗದಲ್ಲಿ ಮುನ್ನಡೆ ಸಮಾಧಾನ ತರುತ್ತದೆ. ಯಾವುದೇ ಸಮಸ್ಯೆಗಳನ್ನು…
ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…
ಮಹಾರಾಷ್ಟ್ರದಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮಲಾಡ್ನ ಕರೂರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಗೋಡೆ ಕುಸಿದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಳ್ಳಂಬೆಳಗ್ಗೆ ಈ ದುರಂತ ನಡೆದಿದ್ದು, ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾಗಿರುವ ಗುಡಿಸಲುಗಳ ಮೇಲೆಯೇ 20 ಅಡಿ ಉದ್ದ ಹಾಗೂ ಬಹು ಎತ್ತರದ ಗೋಡೆ ಕುಸಿದಿದ್ದು, 18 ಮಂದಿ ಮೃತಪಟ್ಟಿದ್ದು, ಹಲವರು ತೀವ್ರ ಗಾಯಗೊಂಡಿರುವ ಪರಿಣಾಮ ಸಾವು, ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಈಗಾಗಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಎನ್ಡಿಆರ್ಫ್ ಪಡೆ…
ಗುಜರಾತ್ ನ ಸೂರತ್ ನಲ್ಲಿ ನಡೆದ ಭೀಕರ ಕಟ್ಟಡ ಅಗ್ನಿ ಅಘಡದಲ್ಲಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಸೂರತ್ ಸಾರ್ತನ ಪ್ರದೇಶದ ತಕ್ಷಶಿಲಾ ಆರ್ಕೇಡ್ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಈ ವರೆಗೂ ಸುಮಾರು 20 ಮಂದಿ ಸಾವಿಗೀಡಾಗಿದ್ದು, ಮೃತರಲ್ಲಿ ಬಹುತೇಕರು ವಿದ್ಯಾರ್ಥಿಗಳು ಎಂದು…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…