ನೀತಿ ಕಥೆ

ಒಬ್ಬರೊಂದಿಗೆ ಹೋಲಿಸಿಕೊಂಡು ಬದುಕಬೇಡಿ ಎಂದು ಹೇಳುವ ಸೊಗಸಾದ ಕಥೆ…!ತಿಳಿಯಲು ಈ ಲೇಖನ ಓದಿ …

1538

ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ. ನಮಗಿರುವ ಸೌಲಭ್ಯಗಳನ್ನು ಬಳಸುತ್ತಾ ಅವುಗಳನ್ನು ಸಂಪೂರ್ಣವಾಗಿ ಬಳಸಿಕೊಂಡು ಇನ್ನಷ್ಟು ಉತ್ತಮ ಪ್ರಯತ್ನ ಮಾಡಬೇಕೆ ಹೊರತು ಇತರರ ಜತೆಗೆ ಹೋಲಿಸಿಕೊಂಡು ನರಳಬಾರದು. ಕೆಲವು ಪಕ್ಷಿಗಳ ಮೂಲಕ ನಮ್ಮ ಆಲೋಚನೆ ವಿಷಯವನ್ನು ಸರಳವಾಗಿ ಹೇಳಿದ್ದಾರೆ.

ಒಂದು ಕಾಡಿನಲ್ಲಿ ಒಂದು ಕಾಗೆ ವಾಸವಾಗಿತ್ತು. ಅದರ ಜೀವನ ಸೊಗಸಾಗಿ ಸಾಗುತ್ತಿತ್ತು. ಆದರೆ ಪಕ್ಕದಲ್ಲೇ ಇದ್ದ ಕೊಳದಲ್ಲಿನ ಹಂಸವನ್ನು ನೋಡಿ ‘ಅದು ತುಂಬಾ ಬೆಳ್ಳಗೆ, ಸುಂದರವಾಗಿ ಇದೆ. ನಾನು ಕಪ್ಪಗಿದ್ದೇನೆ’ ಎಂದು ನೋವನುಭವಿಸುವುದನ್ನು ಆರಂಭಿಸಿತು. ಒಂದು ದಿನ ಹಂಸದ ಬಳಿ ಹೋಗಿ ‘ನೀನು ತುಂಬಾ ಸುಂದರವಾಗಿ ಇರುತ್ತೀಯ.

ಆನಂದವಾಗಿಯೂ ಇರುತ್ತೀಯ ಅಲ್ಲವೇ’ ಎಂದಿತು. ಕಾಗೆ ಮಾತಿಗೆ ಹಂಸ ಉತ್ತರ ಕೊಡುತ್ತಾ, ‘ನಿಜ ನಾನು ಸುಂದರವಾಗಿರುತ್ತೇನೆ. ಆದರೆ ಗಿಳಿರಾಮ ನನಗಿಂತಲೂ ಎರಡು ಬಣ್ಣಗಳಲ್ಲಿ ಸುಂದರವಾಗಿರುತ್ತದೆ. ಅದರ ಜತೆ ಹೋಲಿಸಿದರೆ ನಾನೇನು ಅಲ್ಲ’ ಎಂದು ಬೇಸರಿಸಿಕೊಂಡಿತು. ಇದನ್ನು ಕೇಳಿದ ಕಾಗೆ ಗಿಳಿ ಬಳಿಗೆ ಹೋಗಿ, ‘ಹಂಸಕ್ಕಿಂತಲೂ ಸುಂದರವಾಗಿ ನೀನಿದ್ದೀಯ’ ಎಂದಿತು. ಈ ಮಾತಿಗೆ ಗಿಳಿ, ‘ನನ್ನದೇನಿದೆ ಕೇವಲ ಎರಡು ಬಣ್ಣಗಳು. ನವಿಲು ಬಣ್ಣಬಣ್ಣದ ಗರಿಗಳಿಂದ ತುಂಬಾ ಸುಂದರವಾಗಿರುತ್ತದೆ. ಅದನ್ನು ನೋಡಲು ಜನ ಪೈಪೋಟಿ ಬೀಳುತ್ತಿರುತ್ತಾರೆ. ‘ ಎಂದಿತು.

ನವಿಲನ್ನು ನೋಡಲು ಕಾಗೆ ಜೂಗೆ ಹೋಯಿತು. ಅಲ್ಲಿ ಅದನ್ನು ನೋಡಲು ಜನ ಗುಂಪು ಗುಂಪಾಗಿದ್ದಾರೆ. ಅವರೆಲ್ಲಾ ಹೊರಟು ಹೋದ ಮೇಲೆ ನವಿಲಿನೊಂದಿಗೆ ಕಾಗೆ, ‘ನೀನು ಹಂಸ, ಗಿಳಿಗಿಂತಲೂ ತುಂಬಾ ಸುಂದರವಾಗಿದ್ದೀಯ. ನೀನು ಅದೃಷ್ಟವಂತೆ. ನಿನ್ನ ನೋಡಲು ಜನರೆಲ್ಲಾ ಬರುತ್ತಿದಾರೆ.’ ಇದರಿಂದ ನವಿಲು ಭಯದಿಂದ ‘ಹಾಂ ಏನು ಅದೃಷ್ಟ ಬಿಡಮ್ಮ…ಸುಂದರವಾಗಿದ್ದೀನಿ ಎಂದು ಈ ಜೂನಲ್ಲಿ ನನ್ನನ್ನು ತಂದು ಹಾಕಿದ್ದಾರೆ. ಇಲ್ಲಿ ಒಂದೇ ಒಂದು ಕಾಗೆ ಸಹ ಇಲ್ಲ. ಅವೆಲ್ಲಾ ಹಾಯಾಗಿ ಹೊರಗಿನ ಪ್ರಪಂಚದಲ್ಲಿ ಓಡಾಡಿಕೊಂಡಿವೆ. ನಾನು ಕಾಗೆಯಾಗಿ ಯಾಕೆ ಹುಟ್ಟಲಿಲ್ಲ ಎಂದು ಎಷ್ಟೋ ಸಲ ವ್ಯಥೆ ಪಟ್ಟಿದ್ದೇನೆ. ‘ ಎಂದು ನವಿಲು ಹೇಳಿದ ಬಳಿಕ ಕಾಗೆಗೆ ಜ್ಞಾನೋದಯವಾಯಿತು.

ಮನುಷ್ಯರಲ್ಲೂ ಇತರರೊಂದಿಗೆ ತಮ್ಮನ್ನು ಹೋಲಿಸಿಕೊಳ್ಳುವವರಿಗೇನು ಬರವಿಲ್ಲ. ಈ ರೀತಿ ಮಾಡುತ್ತಾ ತಮ್ಮಲ್ಲಿನ ಜ್ಞಾನವನ್ನು, ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾರೆ. ಅವರವರ ವಿಶೇಷತೆ ಅವರಿಗೆ ಇದ್ದೇ ಇರುತ್ತದೆ. ಅವರವರ ಸಮಸ್ಯೆಗಳೂ ಅವರವರಿಗೆ ಇರುತ್ತವೆ. ನಮಗೆ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಂಡು ಸದ್ಭಳಕೆ ಮಾಡಿಕೊಂಡರೆ ಸಂತೃಪ್ತಿಯಾಗಿ ಜೀವಿಸಬಹುದು ಎಂಬುದನ್ನು  ನಮಗೆ ನೆನಪಿಸುತ್ತದೆ. ಒಮ್ಮೆ ನೋಡಿ ಬದಲಾಗಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಭಾರತದ ಕಾಳಧನಿಕರಲ್ಲಿ ನಡುಕ ಹುಟ್ಟಿಸಿದೆ, 2018ರ ಸ್ವಿಸ್ ಬ್ಯಾಂಕ್’ನ ಈ ನಿರ್ಧಾರ ? ಮುಂದೆ ಓದಿ…..

    ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್

  • ಸುದ್ದಿ

    ದಿನಾ ಒಂದು ಗ್ಲಾಸ್ ಈ ಹಾಲನ್ನು ಕುಡಿದರೆ ಸಾಕು ನಿಮ್ಮೆಲ್ಲಾ ಕಾಯಿಲೆಗಳು ಇನ್ನು ದೂರ,.!

    ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ….

  • ಆರೋಗ್ಯ

    ಎಳನೀರಿನ ವಿಶಿಷ್ಟತೆ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ….

    ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ HDL ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.

  • ಆಧ್ಯಾತ್ಮ, ಉಪಯುಕ್ತ ಮಾಹಿತಿ

    ಮೈಸೂರು ಚಾಮುಂಡೇಶ್ವರಿ ದೇವಿಯ, ದೇವಸ್ಥಾನದ ಬಗ್ಗೆ ನಿಮ್ಗೆ ಗೊತ್ತಿಲ್ಲದ ಕುತೂಹಲಕಾರಿ ಸಂಗತಿಗಳು..!

    ನಿಮ್ಮ ಗುಪ್ತ ಸಮಸ್ಯೆ ಗಳಿಗೆ ಒಂದೇ ಕರೆ ಶಾಶ್ವತಪರಿಹಾರರ ರಾಘವೇಂದ್ರಸಾಮ್ವಿಗಳು ಶ್ರೀ ಪಂಡಿತ್ ರಾಘವೇಂದ್ರ ಸಾಮ್ವಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772. ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ…

  • ಜ್ಯೋತಿಷ್ಯ

    ಆಂಜನೇಯನ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಶುಭ ಅಶುಭಗಳ ಲೆಕ್ಕಾಚಾರ 12/07/2019.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ಪ್ರತಿಯೊಂದು ಕ್ರಿಯೆಗೂ ಶಹಾಬಾಸ್‌ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಶಕ್ಯವಿಲ್ಲ. ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನುನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸಿನಿಮಾ

    “ಆಂಧ್ರ”ದಲ್ಲೂ “ಸುದೀಪ್‌ರ ಫ್ಯಾನ್ಸ್‌ ಕ್ಲಬ್‌” !!!

    ನಟ “ಸುದೀಪ್‌”ರವರು ಭಾರತದ ಪ್ರಮುಖ ನಟರಲ್ಲಿ ಒಬ್ಬರಾಗಿದ್ದಾರೆ. ಹಾಗಾಗಿ ಅವರು ಸದಾ ಸುದ್ದಿಯೇಲ್ಲಿರುತ್ತಾರೆ. ಇದಕ್ಕೆ ಇನ್ನೊಂದು ಕಾರಣ ಅವರು ಹೆಚ್ಚಾಗಿ ಬಳುಸುವ ಸಾಮಾಜಿಕ ಜಾಲತಾಣ ಟ್ವಿಟ್ಟರ್‌. ಕನ್ನಡದ ಬೇರೆಲ್ಲಾ ನಟರಿಗಿಂತ ಸುದೀಪ್‌ರವರು ಟ್ವಿಟ್ಟರ್‌ನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಾರೆ.