ನೀತಿ ಕಥೆ

ಒಬ್ಬರೊಂದಿಗೆ ಹೋಲಿಸಿಕೊಂಡು ಬದುಕಬೇಡಿ ಎಂದು ಹೇಳುವ ಸೊಗಸಾದ ಕಥೆ…!ತಿಳಿಯಲು ಈ ಲೇಖನ ಓದಿ …

1528

ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ. ನಮಗಿರುವ ಸೌಲಭ್ಯಗಳನ್ನು ಬಳಸುತ್ತಾ ಅವುಗಳನ್ನು ಸಂಪೂರ್ಣವಾಗಿ ಬಳಸಿಕೊಂಡು ಇನ್ನಷ್ಟು ಉತ್ತಮ ಪ್ರಯತ್ನ ಮಾಡಬೇಕೆ ಹೊರತು ಇತರರ ಜತೆಗೆ ಹೋಲಿಸಿಕೊಂಡು ನರಳಬಾರದು. ಕೆಲವು ಪಕ್ಷಿಗಳ ಮೂಲಕ ನಮ್ಮ ಆಲೋಚನೆ ವಿಷಯವನ್ನು ಸರಳವಾಗಿ ಹೇಳಿದ್ದಾರೆ.

ಒಂದು ಕಾಡಿನಲ್ಲಿ ಒಂದು ಕಾಗೆ ವಾಸವಾಗಿತ್ತು. ಅದರ ಜೀವನ ಸೊಗಸಾಗಿ ಸಾಗುತ್ತಿತ್ತು. ಆದರೆ ಪಕ್ಕದಲ್ಲೇ ಇದ್ದ ಕೊಳದಲ್ಲಿನ ಹಂಸವನ್ನು ನೋಡಿ ‘ಅದು ತುಂಬಾ ಬೆಳ್ಳಗೆ, ಸುಂದರವಾಗಿ ಇದೆ. ನಾನು ಕಪ್ಪಗಿದ್ದೇನೆ’ ಎಂದು ನೋವನುಭವಿಸುವುದನ್ನು ಆರಂಭಿಸಿತು. ಒಂದು ದಿನ ಹಂಸದ ಬಳಿ ಹೋಗಿ ‘ನೀನು ತುಂಬಾ ಸುಂದರವಾಗಿ ಇರುತ್ತೀಯ.

ಆನಂದವಾಗಿಯೂ ಇರುತ್ತೀಯ ಅಲ್ಲವೇ’ ಎಂದಿತು. ಕಾಗೆ ಮಾತಿಗೆ ಹಂಸ ಉತ್ತರ ಕೊಡುತ್ತಾ, ‘ನಿಜ ನಾನು ಸುಂದರವಾಗಿರುತ್ತೇನೆ. ಆದರೆ ಗಿಳಿರಾಮ ನನಗಿಂತಲೂ ಎರಡು ಬಣ್ಣಗಳಲ್ಲಿ ಸುಂದರವಾಗಿರುತ್ತದೆ. ಅದರ ಜತೆ ಹೋಲಿಸಿದರೆ ನಾನೇನು ಅಲ್ಲ’ ಎಂದು ಬೇಸರಿಸಿಕೊಂಡಿತು. ಇದನ್ನು ಕೇಳಿದ ಕಾಗೆ ಗಿಳಿ ಬಳಿಗೆ ಹೋಗಿ, ‘ಹಂಸಕ್ಕಿಂತಲೂ ಸುಂದರವಾಗಿ ನೀನಿದ್ದೀಯ’ ಎಂದಿತು. ಈ ಮಾತಿಗೆ ಗಿಳಿ, ‘ನನ್ನದೇನಿದೆ ಕೇವಲ ಎರಡು ಬಣ್ಣಗಳು. ನವಿಲು ಬಣ್ಣಬಣ್ಣದ ಗರಿಗಳಿಂದ ತುಂಬಾ ಸುಂದರವಾಗಿರುತ್ತದೆ. ಅದನ್ನು ನೋಡಲು ಜನ ಪೈಪೋಟಿ ಬೀಳುತ್ತಿರುತ್ತಾರೆ. ‘ ಎಂದಿತು.

ನವಿಲನ್ನು ನೋಡಲು ಕಾಗೆ ಜೂಗೆ ಹೋಯಿತು. ಅಲ್ಲಿ ಅದನ್ನು ನೋಡಲು ಜನ ಗುಂಪು ಗುಂಪಾಗಿದ್ದಾರೆ. ಅವರೆಲ್ಲಾ ಹೊರಟು ಹೋದ ಮೇಲೆ ನವಿಲಿನೊಂದಿಗೆ ಕಾಗೆ, ‘ನೀನು ಹಂಸ, ಗಿಳಿಗಿಂತಲೂ ತುಂಬಾ ಸುಂದರವಾಗಿದ್ದೀಯ. ನೀನು ಅದೃಷ್ಟವಂತೆ. ನಿನ್ನ ನೋಡಲು ಜನರೆಲ್ಲಾ ಬರುತ್ತಿದಾರೆ.’ ಇದರಿಂದ ನವಿಲು ಭಯದಿಂದ ‘ಹಾಂ ಏನು ಅದೃಷ್ಟ ಬಿಡಮ್ಮ…ಸುಂದರವಾಗಿದ್ದೀನಿ ಎಂದು ಈ ಜೂನಲ್ಲಿ ನನ್ನನ್ನು ತಂದು ಹಾಕಿದ್ದಾರೆ. ಇಲ್ಲಿ ಒಂದೇ ಒಂದು ಕಾಗೆ ಸಹ ಇಲ್ಲ. ಅವೆಲ್ಲಾ ಹಾಯಾಗಿ ಹೊರಗಿನ ಪ್ರಪಂಚದಲ್ಲಿ ಓಡಾಡಿಕೊಂಡಿವೆ. ನಾನು ಕಾಗೆಯಾಗಿ ಯಾಕೆ ಹುಟ್ಟಲಿಲ್ಲ ಎಂದು ಎಷ್ಟೋ ಸಲ ವ್ಯಥೆ ಪಟ್ಟಿದ್ದೇನೆ. ‘ ಎಂದು ನವಿಲು ಹೇಳಿದ ಬಳಿಕ ಕಾಗೆಗೆ ಜ್ಞಾನೋದಯವಾಯಿತು.

ಮನುಷ್ಯರಲ್ಲೂ ಇತರರೊಂದಿಗೆ ತಮ್ಮನ್ನು ಹೋಲಿಸಿಕೊಳ್ಳುವವರಿಗೇನು ಬರವಿಲ್ಲ. ಈ ರೀತಿ ಮಾಡುತ್ತಾ ತಮ್ಮಲ್ಲಿನ ಜ್ಞಾನವನ್ನು, ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾರೆ. ಅವರವರ ವಿಶೇಷತೆ ಅವರಿಗೆ ಇದ್ದೇ ಇರುತ್ತದೆ. ಅವರವರ ಸಮಸ್ಯೆಗಳೂ ಅವರವರಿಗೆ ಇರುತ್ತವೆ. ನಮಗೆ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಂಡು ಸದ್ಭಳಕೆ ಮಾಡಿಕೊಂಡರೆ ಸಂತೃಪ್ತಿಯಾಗಿ ಜೀವಿಸಬಹುದು ಎಂಬುದನ್ನು  ನಮಗೆ ನೆನಪಿಸುತ್ತದೆ. ಒಮ್ಮೆ ನೋಡಿ ಬದಲಾಗಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಇವು ಜಿಎಸ್ಟಿ ಅಡಿಯಲ್ಲಿ ಕಡಿಮೆಯಾಗಲಿವೆ.ಏನು ಅಂತ ಗೊತ್ತಾ ನಿಮಗೆ ???

    ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು  ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು?                                                                                  …

  • ಉಪಯುಕ್ತ ಮಾಹಿತಿ

    ಕಾಲಿನ ಬೆರಳುಗಳು ನೋಡಿ ವ್ಯಕ್ತಿತ್ವ ತಿಳಿದುಕೊಳ್ಳುವುದು ಹೇಗೆ ಎಂದು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು.

  • ಸುದ್ದಿ

    ಮಹಾಮಳೆಯ ಆರ್ಭಟಕ್ಕೆ ಉತ್ತರ ತತ್ತರ ..!

    ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…

  • ಸ್ಪೂರ್ತಿ

    ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿ ಜಾನುವಾರಗಳ ದಾಹ ನೀಗಿಸಿದ ಅನ್ನದಾತ. ಈ ಸುದ್ದಿ ನೋಡಿ.

    ಜಾನುವಾರುಗಳ ದಾಹ ನೀಗಿಸಿದ ಜಲದಾತ-ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿದ ಅನ್ನದಾತ ಕಾಫಿನಾಡಿನ ವೀರಣ್ಣ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವಿಟ್ಲಾಪುರದ ನಿವಾಸಿಯಾಗಿರುವ 63 ವರ್ಷದ ವೀರಣ್ಣ ಗೋಕಟ್ಟೆ ನಿರ್ಮಿಸಿದ್ದಾರೆ. 9ನೇ ತರಗತಿವರೆಗೆ ಮಾತ್ರ ಓದಿರುವ ವೀರಣ್ಣ, ಕೃಷಿಯೊಂದಿಗೆ ಮತ್ತು ಮೂಕ ಪ್ರಾಣಿಗಳ ದಿನನಿತ್ಯ ಸೇವೆ ಮಾಡುತ್ತಿದ್ದಾರೆ. ಅರೆಮಲೆನಾಡಾಗಿರುವ ಚಿಕ್ಕಮಗಳೂರಲ್ಲಿ ಬೇಸಿಗೆ ವೇಳೆ ಜಾನುವಾರುಗಳಿಗೆ ನೀರು ಸಿಗೋದು ಕಷ್ಟ ಆಗಿತ್ತು. ಕುಡಿಯಲು ನೀರು ಸಿಗದೇ ದನಕರು ಪರದಾಡೋದನ್ನು ನೋಡಲಾಗದ ವೀರಣ್ಣ, ಮೂರು ವರ್ಷದ ಹಿಂದೆ ಅರಣ್ಯ ಇಲಾಖೆ ಅನುಮತಿ ಪಡೆದು…

  • ಸುದ್ದಿ

    ಕಿರುತೆರೆಯ ನಂಬರ್ 1 ಧಾರಾವಾಹಿ ಜೊತೆ ಜೊತೆಯಲಿ ಯಾವ ಸೀರಿಯಲ್ ರಿಮೇಕ್ ಗೊತ್ತಾ.?ತಿಳಿದರೆ ಅಚ್ಚರಿ ಪಡೋದಂತು ಗ್ಯಾರಂಟಿ..!

    ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಟಿಆರ್ ಪಿಯಲ್ಲಿ ನಂ 1  ಸ್ಥಾನದಲ್ಲಿದೆ. ಇದೇಮೊದಲ ಬಾರಿಗೆ ಸ್ಯಾಂಡಲ್ ವುಡ್ ನಿಂದ ಕಿರುತೆರೆಗೆ ಬಂದಿರುವ ಅನಿರುದ್ಧ್ ಗೆ ಈ ಧಾರಾವಾಹಿ ಹೊಸ ಇನ್ನಿಂಗ್ಸ್ ನೀಡಿದೆ. ಅವರಿಗೆ ಹೆಸರನ್ನು ತಂದು ಕೊಟ್ಟಿದೆ. ನವಿರಾದ ಪ್ರೇಮ ಕಥೆ, ಮಧ್ಯಮ ವರ್ಗ ಕುಟುಂಬದಲ್ಲಿ ನಡೆಯುವಸಾಂಸಾರಿಕ ತಾಪತ್ರಯಗಳು, ಹೊಸ ರೀತಿಯ ನಿರೂಪಣೆ, ಕತೆ ಇವೆಲ್ಲವೂ. ಹೊಸ ಕಥೆಯೊಂದಿಗೆ ಜನರ ಮನಸ್ಸು ಗೆದ್ದಿರುವ ಜೊತೆ ಜೊತೆಯಲಿ ಧಾರಾವಾಹಿ ನಿಜವಾಗಿ ಸ್ವಮೇಕ್ ಕಥೆ ಅಲ್ಲ…

  • ಆರೋಗ್ಯ

    ನೀವು ರೆಡ್ ವೈನ್ ಕುಡಿದ್ರೆ ಏನೆಲ್ಲಾ ಲಾಭಗಳಿವೆ ಎಂದು ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.