News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ನೀತಿ ಕಥೆ

ಒಬ್ಬರೊಂದಿಗೆ ಹೋಲಿಸಿಕೊಂಡು ಬದುಕಬೇಡಿ ಎಂದು ಹೇಳುವ ಸೊಗಸಾದ ಕಥೆ…!ತಿಳಿಯಲು ಈ ಲೇಖನ ಓದಿ …

1556

ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ. ನಮಗಿರುವ ಸೌಲಭ್ಯಗಳನ್ನು ಬಳಸುತ್ತಾ ಅವುಗಳನ್ನು ಸಂಪೂರ್ಣವಾಗಿ ಬಳಸಿಕೊಂಡು ಇನ್ನಷ್ಟು ಉತ್ತಮ ಪ್ರಯತ್ನ ಮಾಡಬೇಕೆ ಹೊರತು ಇತರರ ಜತೆಗೆ ಹೋಲಿಸಿಕೊಂಡು ನರಳಬಾರದು. ಕೆಲವು ಪಕ್ಷಿಗಳ ಮೂಲಕ ನಮ್ಮ ಆಲೋಚನೆ ವಿಷಯವನ್ನು ಸರಳವಾಗಿ ಹೇಳಿದ್ದಾರೆ.

ಒಂದು ಕಾಡಿನಲ್ಲಿ ಒಂದು ಕಾಗೆ ವಾಸವಾಗಿತ್ತು. ಅದರ ಜೀವನ ಸೊಗಸಾಗಿ ಸಾಗುತ್ತಿತ್ತು. ಆದರೆ ಪಕ್ಕದಲ್ಲೇ ಇದ್ದ ಕೊಳದಲ್ಲಿನ ಹಂಸವನ್ನು ನೋಡಿ ‘ಅದು ತುಂಬಾ ಬೆಳ್ಳಗೆ, ಸುಂದರವಾಗಿ ಇದೆ. ನಾನು ಕಪ್ಪಗಿದ್ದೇನೆ’ ಎಂದು ನೋವನುಭವಿಸುವುದನ್ನು ಆರಂಭಿಸಿತು. ಒಂದು ದಿನ ಹಂಸದ ಬಳಿ ಹೋಗಿ ‘ನೀನು ತುಂಬಾ ಸುಂದರವಾಗಿ ಇರುತ್ತೀಯ.

ಆನಂದವಾಗಿಯೂ ಇರುತ್ತೀಯ ಅಲ್ಲವೇ’ ಎಂದಿತು. ಕಾಗೆ ಮಾತಿಗೆ ಹಂಸ ಉತ್ತರ ಕೊಡುತ್ತಾ, ‘ನಿಜ ನಾನು ಸುಂದರವಾಗಿರುತ್ತೇನೆ. ಆದರೆ ಗಿಳಿರಾಮ ನನಗಿಂತಲೂ ಎರಡು ಬಣ್ಣಗಳಲ್ಲಿ ಸುಂದರವಾಗಿರುತ್ತದೆ. ಅದರ ಜತೆ ಹೋಲಿಸಿದರೆ ನಾನೇನು ಅಲ್ಲ’ ಎಂದು ಬೇಸರಿಸಿಕೊಂಡಿತು. ಇದನ್ನು ಕೇಳಿದ ಕಾಗೆ ಗಿಳಿ ಬಳಿಗೆ ಹೋಗಿ, ‘ಹಂಸಕ್ಕಿಂತಲೂ ಸುಂದರವಾಗಿ ನೀನಿದ್ದೀಯ’ ಎಂದಿತು. ಈ ಮಾತಿಗೆ ಗಿಳಿ, ‘ನನ್ನದೇನಿದೆ ಕೇವಲ ಎರಡು ಬಣ್ಣಗಳು. ನವಿಲು ಬಣ್ಣಬಣ್ಣದ ಗರಿಗಳಿಂದ ತುಂಬಾ ಸುಂದರವಾಗಿರುತ್ತದೆ. ಅದನ್ನು ನೋಡಲು ಜನ ಪೈಪೋಟಿ ಬೀಳುತ್ತಿರುತ್ತಾರೆ. ‘ ಎಂದಿತು.

ನವಿಲನ್ನು ನೋಡಲು ಕಾಗೆ ಜೂಗೆ ಹೋಯಿತು. ಅಲ್ಲಿ ಅದನ್ನು ನೋಡಲು ಜನ ಗುಂಪು ಗುಂಪಾಗಿದ್ದಾರೆ. ಅವರೆಲ್ಲಾ ಹೊರಟು ಹೋದ ಮೇಲೆ ನವಿಲಿನೊಂದಿಗೆ ಕಾಗೆ, ‘ನೀನು ಹಂಸ, ಗಿಳಿಗಿಂತಲೂ ತುಂಬಾ ಸುಂದರವಾಗಿದ್ದೀಯ. ನೀನು ಅದೃಷ್ಟವಂತೆ. ನಿನ್ನ ನೋಡಲು ಜನರೆಲ್ಲಾ ಬರುತ್ತಿದಾರೆ.’ ಇದರಿಂದ ನವಿಲು ಭಯದಿಂದ ‘ಹಾಂ ಏನು ಅದೃಷ್ಟ ಬಿಡಮ್ಮ…ಸುಂದರವಾಗಿದ್ದೀನಿ ಎಂದು ಈ ಜೂನಲ್ಲಿ ನನ್ನನ್ನು ತಂದು ಹಾಕಿದ್ದಾರೆ. ಇಲ್ಲಿ ಒಂದೇ ಒಂದು ಕಾಗೆ ಸಹ ಇಲ್ಲ. ಅವೆಲ್ಲಾ ಹಾಯಾಗಿ ಹೊರಗಿನ ಪ್ರಪಂಚದಲ್ಲಿ ಓಡಾಡಿಕೊಂಡಿವೆ. ನಾನು ಕಾಗೆಯಾಗಿ ಯಾಕೆ ಹುಟ್ಟಲಿಲ್ಲ ಎಂದು ಎಷ್ಟೋ ಸಲ ವ್ಯಥೆ ಪಟ್ಟಿದ್ದೇನೆ. ‘ ಎಂದು ನವಿಲು ಹೇಳಿದ ಬಳಿಕ ಕಾಗೆಗೆ ಜ್ಞಾನೋದಯವಾಯಿತು.

ಮನುಷ್ಯರಲ್ಲೂ ಇತರರೊಂದಿಗೆ ತಮ್ಮನ್ನು ಹೋಲಿಸಿಕೊಳ್ಳುವವರಿಗೇನು ಬರವಿಲ್ಲ. ಈ ರೀತಿ ಮಾಡುತ್ತಾ ತಮ್ಮಲ್ಲಿನ ಜ್ಞಾನವನ್ನು, ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾರೆ. ಅವರವರ ವಿಶೇಷತೆ ಅವರಿಗೆ ಇದ್ದೇ ಇರುತ್ತದೆ. ಅವರವರ ಸಮಸ್ಯೆಗಳೂ ಅವರವರಿಗೆ ಇರುತ್ತವೆ. ನಮಗೆ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಂಡು ಸದ್ಭಳಕೆ ಮಾಡಿಕೊಂಡರೆ ಸಂತೃಪ್ತಿಯಾಗಿ ಜೀವಿಸಬಹುದು ಎಂಬುದನ್ನು  ನಮಗೆ ನೆನಪಿಸುತ್ತದೆ. ಒಮ್ಮೆ ನೋಡಿ ಬದಲಾಗಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ಸಾಹಸಸಿಂಹ ವಿಷ್ಣುವರ್ಧನ್ ಜೊತೆ ನಟಿಸಿದ ಖ್ಯಾತ ನಟಿ ರಾಧಾ ಹಾಗೂ ಪುತ್ರಿ. ಆಕೆ ಯಾರು ಗೊತ್ತಾ..?

    ಸೌಭಾಗ್ಯಲಕ್ಷ್ಮಿ, ಉಷಾ, ಸಾವಿರ ಸುಳ್ಳು, ದಿಗ್ವಿಜಯ ಸಿನಿಮಾಗಳಲ್ಲಿ ನಟಿಸಿರುವ ಸುಂದರ ಮೊಗದ ನಟಿ ರಾಧಾ ಕನ್ನಡ ಚಿತ್ರಪ್ರೇಮಿಗಳಿಗೆ ಚೆನ್ನಾಗಿ ಪರಿಚಯ. ಕನ್ನಡದಲ್ಲಿ ನಟಿಸಿದ್ದು ಬೆರಳೆಣಿಕೆ ಸಿನಿಮಾಗಳಲ್ಲಾದರೂ ಅವರಿಗೆ ಹೆಸರು ತಂದುಕೊಟ್ಟದ್ದು ಮಾತ್ರ ಸಾಹಸಸಿಂಹ ವಿಷ್ಣುವರ್ಧನ್ ಜೊತೆ ಅಭಿನಯಿಸಿದ ಸೌಭಾಗ್ಯಲಕ್ಷ್ಮಿ ಸಿನಿಮಾ.ರಾಧಾ ಮೊದಲ ಹೆಸರು ಉದಯಚಂದ್ರಿಕ. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದವರು. ಕನ್ನಡದಲ್ಲಿ ಹೆಚ್ಚು ಸಿನಿಮಾಗಳಲ್ಲಿ ನಟಿಸದಿದ್ದರೂ ತಮಿಳು, ಮಲಯಾಳಂ ಹಾಗೂ ತೆಲುಗು ಸಿನಿಮಾಗಳಲ್ಲಿ ಹೆಸರು ಮಾಡಿದವರು ರಾಧಾ. 1991 ರಲ್ಲಿ ರಾಧಾ ಉದ್ಯಮಿ ರಾಜಶೇಖರನ್ ನಾಯರ್ ಅವರನ್ನು ವಿವಾಹವಾದರು.ಈ ದಂಪತಿಗೆ…

  • ವಿಚಿತ್ರ ಆದರೂ ಸತ್ಯ

    ಮತ್ಸ್ಯ ಮಗುವಿಗೆ ಜನ್ಮ ನೀಡಿದ ಮಹಿಳೆ..!ತಿಳಿಯಲು ಈ ಲೇಖನ ಓದಿ…

    ಮತ್ಸ್ಯಕನ್ಯೆ ಸಿಕ್ಕಿದ್ದಾಳೆ ಎನ್ನುವ ಫೋಟೋಗಳು, ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇರುತ್ತದೆ. ಇದನ್ನು ನಂಬುವುದು ತುಂಬಾ ಕಷ್ಟದ ಕೆಲಸ. ಆದರೆ ಕೆಲವೊಮ್ಮೆ ಇಂತಹ ಘಟನೆಗಳನ್ನು ನಂಬಲೇಬೇಕಾಗುವುದು. ಯಾಕೆಂದರೆ ಮಹಿಳೆಯೊಬ್ಬಳು ಮತ್ಸ್ಯಶಿಶುವಿಗೆ ಜನ್ಮ ನೀಡಿದ ಸುದ್ದಿಯಿದು. ಇದನ್ನು ನೀವು ಕೂಡ ಕೇಳಿರಬಹುದು.

  • ಸುದ್ದಿ

    ಬಿಎಂಟಿಸಿ, ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಒಂದು ಬ್ರೇಕಿಂಗ್ ನ್ಯೂಸ್…!

    ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. 2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು. 26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ…

  • ಸುದ್ದಿ

    ಶಿವೈಕ್ಯರಾದ ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ….

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…

  • ಗ್ಯಾಜೆಟ್

    ಫ್ಲಿಪ್‌ಕಾರ್ಟಿನಲ್ಲಿ ರೂ.799ಕ್ಕೆ ನೋಕಿಯಾ 3310 ಕ್ಲೋನ್ ಪೋನ್..!!!!

    ನೋಕಿಯಾ 3310 ಫೋನಿಗೆ ರೂ.3310 ನೀಡಲು ಯಾರು ಮುಂದೆ ಬಂದಿಲ್ಲ. ಇದಕ್ಕಾಗಿಯೇ ಸದ್ಯ ಮಾರುಕಟ್ಟೆಗೆ ನೋಕಿಯಾ 3310 ಕ್ಲೋನ್ ಫೋನ್ ಬಂದಿದ್ದು, ಕೇವಲ ರೂ.799ಕ್ಕೆ ಮಾರಾಟವಾಗುತ್ತಿದೆ.

  • ದೇವರು-ಧರ್ಮ

    ಶಿವರಾತ್ರಿಯಂದು ಶಿವ ಲಿಂಗವನ್ನು ಹೇಗೆ ಪೂಜಿಸಬೇಕು..?ಹೇಗೆ ಪೂಜಿಸಬಾರದು..?ತಿಳಿಯಲು ಈ ಲೇಖನ ಓದಿ…

    ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…