ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ. ನಮಗಿರುವ ಸೌಲಭ್ಯಗಳನ್ನು ಬಳಸುತ್ತಾ ಅವುಗಳನ್ನು ಸಂಪೂರ್ಣವಾಗಿ ಬಳಸಿಕೊಂಡು ಇನ್ನಷ್ಟು ಉತ್ತಮ ಪ್ರಯತ್ನ ಮಾಡಬೇಕೆ ಹೊರತು ಇತರರ ಜತೆಗೆ ಹೋಲಿಸಿಕೊಂಡು ನರಳಬಾರದು. ಕೆಲವು ಪಕ್ಷಿಗಳ ಮೂಲಕ ನಮ್ಮ ಆಲೋಚನೆ ವಿಷಯವನ್ನು ಸರಳವಾಗಿ ಹೇಳಿದ್ದಾರೆ.

ಒಂದು ಕಾಡಿನಲ್ಲಿ ಒಂದು ಕಾಗೆ ವಾಸವಾಗಿತ್ತು. ಅದರ ಜೀವನ ಸೊಗಸಾಗಿ ಸಾಗುತ್ತಿತ್ತು. ಆದರೆ ಪಕ್ಕದಲ್ಲೇ ಇದ್ದ ಕೊಳದಲ್ಲಿನ ಹಂಸವನ್ನು ನೋಡಿ ‘ಅದು ತುಂಬಾ ಬೆಳ್ಳಗೆ, ಸುಂದರವಾಗಿ ಇದೆ. ನಾನು ಕಪ್ಪಗಿದ್ದೇನೆ’ ಎಂದು ನೋವನುಭವಿಸುವುದನ್ನು ಆರಂಭಿಸಿತು. ಒಂದು ದಿನ ಹಂಸದ ಬಳಿ ಹೋಗಿ ‘ನೀನು ತುಂಬಾ ಸುಂದರವಾಗಿ ಇರುತ್ತೀಯ.

ಆನಂದವಾಗಿಯೂ ಇರುತ್ತೀಯ ಅಲ್ಲವೇ’ ಎಂದಿತು. ಕಾಗೆ ಮಾತಿಗೆ ಹಂಸ ಉತ್ತರ ಕೊಡುತ್ತಾ, ‘ನಿಜ ನಾನು ಸುಂದರವಾಗಿರುತ್ತೇನೆ. ಆದರೆ ಗಿಳಿರಾಮ ನನಗಿಂತಲೂ ಎರಡು ಬಣ್ಣಗಳಲ್ಲಿ ಸುಂದರವಾಗಿರುತ್ತದೆ. ಅದರ ಜತೆ ಹೋಲಿಸಿದರೆ ನಾನೇನು ಅಲ್ಲ’ ಎಂದು ಬೇಸರಿಸಿಕೊಂಡಿತು. ಇದನ್ನು ಕೇಳಿದ ಕಾಗೆ ಗಿಳಿ ಬಳಿಗೆ ಹೋಗಿ, ‘ಹಂಸಕ್ಕಿಂತಲೂ ಸುಂದರವಾಗಿ ನೀನಿದ್ದೀಯ’ ಎಂದಿತು. ಈ ಮಾತಿಗೆ ಗಿಳಿ, ‘ನನ್ನದೇನಿದೆ ಕೇವಲ ಎರಡು ಬಣ್ಣಗಳು. ನವಿಲು ಬಣ್ಣಬಣ್ಣದ ಗರಿಗಳಿಂದ ತುಂಬಾ ಸುಂದರವಾಗಿರುತ್ತದೆ. ಅದನ್ನು ನೋಡಲು ಜನ ಪೈಪೋಟಿ ಬೀಳುತ್ತಿರುತ್ತಾರೆ. ‘ ಎಂದಿತು.

ನವಿಲನ್ನು ನೋಡಲು ಕಾಗೆ ಜೂಗೆ ಹೋಯಿತು. ಅಲ್ಲಿ ಅದನ್ನು ನೋಡಲು ಜನ ಗುಂಪು ಗುಂಪಾಗಿದ್ದಾರೆ. ಅವರೆಲ್ಲಾ ಹೊರಟು ಹೋದ ಮೇಲೆ ನವಿಲಿನೊಂದಿಗೆ ಕಾಗೆ, ‘ನೀನು ಹಂಸ, ಗಿಳಿಗಿಂತಲೂ ತುಂಬಾ ಸುಂದರವಾಗಿದ್ದೀಯ. ನೀನು ಅದೃಷ್ಟವಂತೆ. ನಿನ್ನ ನೋಡಲು ಜನರೆಲ್ಲಾ ಬರುತ್ತಿದಾರೆ.’ ಇದರಿಂದ ನವಿಲು ಭಯದಿಂದ ‘ಹಾಂ ಏನು ಅದೃಷ್ಟ ಬಿಡಮ್ಮ…ಸುಂದರವಾಗಿದ್ದೀನಿ ಎಂದು ಈ ಜೂನಲ್ಲಿ ನನ್ನನ್ನು ತಂದು ಹಾಕಿದ್ದಾರೆ. ಇಲ್ಲಿ ಒಂದೇ ಒಂದು ಕಾಗೆ ಸಹ ಇಲ್ಲ. ಅವೆಲ್ಲಾ ಹಾಯಾಗಿ ಹೊರಗಿನ ಪ್ರಪಂಚದಲ್ಲಿ ಓಡಾಡಿಕೊಂಡಿವೆ. ನಾನು ಕಾಗೆಯಾಗಿ ಯಾಕೆ ಹುಟ್ಟಲಿಲ್ಲ ಎಂದು ಎಷ್ಟೋ ಸಲ ವ್ಯಥೆ ಪಟ್ಟಿದ್ದೇನೆ. ‘ ಎಂದು ನವಿಲು ಹೇಳಿದ ಬಳಿಕ ಕಾಗೆಗೆ ಜ್ಞಾನೋದಯವಾಯಿತು.

ಮನುಷ್ಯರಲ್ಲೂ ಇತರರೊಂದಿಗೆ ತಮ್ಮನ್ನು ಹೋಲಿಸಿಕೊಳ್ಳುವವರಿಗೇನು ಬರವಿಲ್ಲ. ಈ ರೀತಿ ಮಾಡುತ್ತಾ ತಮ್ಮಲ್ಲಿನ ಜ್ಞಾನವನ್ನು, ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾರೆ. ಅವರವರ ವಿಶೇಷತೆ ಅವರಿಗೆ ಇದ್ದೇ ಇರುತ್ತದೆ. ಅವರವರ ಸಮಸ್ಯೆಗಳೂ ಅವರವರಿಗೆ ಇರುತ್ತವೆ. ನಮಗೆ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಂಡು ಸದ್ಭಳಕೆ ಮಾಡಿಕೊಂಡರೆ ಸಂತೃಪ್ತಿಯಾಗಿ ಜೀವಿಸಬಹುದು ಎಂಬುದನ್ನು ನಮಗೆ ನೆನಪಿಸುತ್ತದೆ. ಒಮ್ಮೆ ನೋಡಿ ಬದಲಾಗಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ 11 ದಿನಗಳಲ್ಲಿ ಪೆಟ್ರೋಲ್ ಬೆಲೆ 6 ರೂ. ಹಾಗೂ ಡೀಸೆಲ್ 6.49 ರೂ.ಗಳಷ್ಟು ಹೆಚ್ಚಳವಾಗಿದೆ. ಕಳೆದ 11 ದಿನಗಳಲ್ಲಿ ಪ್ರತಿ ದಿನ 20 ಪೈಸೆಯಿಂದ 80 ಪೈಸೆ ವರೆಗೂ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ ಮಾಡಲಾಗಿದೆ. ಬೆಲೆ ಹೆಚ್ಚಳದಿಂದಾಗಿ ಜನ ಕಂಗಾಲಾಗಿದ್ದಾರೆ. ಮೊದಲೆ ಕೆಲಸ ಸರಿಯಾಗಿ ಸಿಗುತ್ತಿಲ್ಲ. ಕೆಲಸವಿದ್ದರೂ ಸಂಬಳ ಸರಿಯಾಗಿ ಬರುತ್ತಿಲ್ಲ. ಅಲ್ಲದೆ ಇನ್ನೊಂದೆಡೆ ಸಾರ್ವಜನಿಕ ಸಾರಿಗೆ…
ಚಾಮರಾಜನಗರ ತಾಲೂಕಿನ ಚಂದಕವಾಡಿ ನಿವಾಸಿ ಟೈಲರ್ ಎಸಾಬುಲ್ಲಾ ಖಾನ್ ಕಳೆದ 12 ವರ್ಷಗಳಿಂದ ಟೈಲರ್ ವೃತ್ತಿ ಮಾಡಿಕೊಂಡಿದ್ದಾರೆ. ಹುಡುಗರಿಗೆ ಅಂಗಿ, ನಿಕ್ಕರ್ ಮತ್ತು ಬಾಲಕಿಯರಿಗೂ ಡ್ರೆಸ್ ಹೊಲಿದು ಕೊಡುತ್ತಿದ್ದಾರೆ. ಪ್ರತಿ ಸರ್ಕಾರಿ ಶಾಲೆಗೆ ಕೂಡ ತಾವೇ ಖುದ್ದಾಗಿ ಭೇಟಿ ನೀಡಿ ಮಕ್ಕಳಿಂದ ಬಟ್ಟೆಯ ಅಳತೆ ಪಡೆದುಕೊಳ್ಳುತ್ತಾರೆ. 5 ವರ್ಷದಿಂದ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿದು ಕೊಟ್ಟಿದ್ದಾರೆ. ಪ್ರತಿ ವರ್ಷ 5 ರಿಂದ6 ಸಾವಿರ ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿಯುತ್ತಿದ್ದಾರೆ. ಬೇರೆಯವರ ಬಳಿ ಒಂದು ಜೊತೆ ಬಟ್ಟೆ…
ಈಗಾಗಲೇ ಕೊರೊನ ವೈರಸ್ ಪ್ರಕರಣಗಳು ಭಾರತದಲ್ಲಿ ಬೆಳಕಿಗೆ ಬಂದಿವೆ, ಈ ಬಗ್ಗೆ ಹಲವು ನ್ಯೂಸ್ ಚಾನೆಲ್ ಗಳು ಒಂದೊಂದು ರೀತಿಯ ವರದಿ ಮಾಡುತ್ತಿವೆ. ದೇಶದಲ್ಲಿ ಈಗಾಗಲೇ ಈ ವೈರಸ್ ಬಗ್ಗೆ ಭಾರಿ ಪ್ರಮಾಣದ ಜಾಗ್ರತೆ ವಹಿಸಲಾಗಿದೆ, ಏಕೆಂದರೆ ಈ ಮಹಾಮಾರಿ ವೈರಸ್ ಈಗಾಗಲೇ ಚೀನಾದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರ ಪ್ರಾಣ ತೆಗೆದುಕೊಂಡಿದೆ. ಕೊರೋನಾ ವೈರಸ್ ಎಂಬ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ವಿಶ್ವದಾದ್ಯಂತ 100,000 ಮೀರಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಮಾಹಿತಿ ತಿಳಿಸಿದೆ. ಇನ್ನು…
ಇಂದು ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ. ವೃಷಭ:- ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ…
ಬುಧವಾರ , 04/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಮನಃಕಾರಕ ಚಂದ್ರ ಚತುರ್ಥಸ್ಥಾನದಲ್ಲಿ ಸಂಚರಿಸುವ ಮೂಲಕ ಈ ದಿನ ಮಾನಸಿಕ ಖಿನ್ನತೆಯನ್ನು ಹೆಚ್ಚು ಮಾಡುವರು. ಶಿವನ ಸ್ತುತಿ ಪಠಿಸಿರಿ. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿರಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ವೃಷಭ:- ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಈ ದಿನ ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿರಿ. ಮನೋಕಾಮನೆಗಳು ಪೂರ್ಣಗೊಳ್ಳುವುದು….
ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್. ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ…