ಸಿನಿಮಾ

ಒಳ್ಳೆ ಹುಡುಗ ಪ್ರಥಮ್’ನ ಹುಚ್ಚಾಟ!ಭುವನ್ ತೊಡೆ ಕಚ್ಚಿದ ಪ್ರಥಮ್! ಅಲ್ಲಿ ನಡೆದಿದ್ದಾದರು ಏನು ಗೊತ್ತಾ?

1281

ಒಳ್ಳೆ ಹುಡುಗ ಪ್ರಥಮ್ ಹಾಗೂ ನಟ ಭುವನ್ ನಡುವೆ ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ  ಜಗಳವಾಗಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಆರೋಪ ಮಾಡಿದ್ದಾರೆ.

ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುತ್ತಿರುವ ಸಂಜು ಮತ್ತು ನಾನು ಧಾರಾವಾಹಿಯಲ್ಲಿ ಬಿಗ್ ಬಾಸ್ ಖ್ಯಾತಿಯ ಪ್ರಥಮ್, ಭುವನ್ ಮತ್ತು ಸಂಜನಾ ನಟಿಸುತ್ತಿದ್ದಾರೆ. ಧಾರಾವಹಿಯ ಚಿತ್ರೀಕರಣದ ವೇಳೆ ಭುವನ್ ಹಾಗೂ ಪ್ರಥಮ್ ನಡುವೆತ ಮಾರಾಮಾರಿ ನಡೆದಿದ್ದು, ಈ ವೇಳೆ ಪ್ರಥಮ್ ನೇರವಾಗಿ ಬಂದು ಭುವನ್‍ರ ತೊಡೆಯ ಭಾಗವನ್ನು ಕಚ್ಚಿ ಗಾಯಗೊಳಿಸಿದ್ದಾರೆ.

ಚಿತ್ರೀಕರಣದ ವೇಳೆ ಪ್ರಥಮ್ ಅವರು ಸಂಜನಾ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಈ ವೇಳೆ ಆಕ್ರೋಶಗೊಂಡಿರುವ ಭುವನ್ ಅವರು ಆ ರೀತಿ ಮಾತನಾಡದಂತೆ ತಾಕೀತು ಮಾಡಿದ್ದಾರೆ. ನಂತರ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಜಗಳ ವಿಕೋಫಕ್ಕೆ ತಿರುಗಿದೆ. ನಂತರ ಪ್ರಥಮ್ ಅವರು ಭುವನ್ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದು, ಹಲ್ಲೆ ನಡೆಸಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಚಿತ್ರೀಕರಣದ ಸಿಬ್ಬಂದಿಗಳು ಮಧ್ಯೆ ಪ್ರವೇಶ ಮಾಡಿದ್ದಾರೆ. ಆದರೂ ಸುಮ್ಮನಾಗದ ಪ್ರಥಣ್ ಅವರು ಭುವನ್ ಅವರ ತೊಡೆಗೆ ಕಚ್ಚಿದ್ದಾರೆಂದು ವರದಿಯಾಗಿದೆ.

 

ಪ್ರಥಮ್ ಮತ್ತು ಭುವನ್ ನಡುವೆ ಜಗಳ ನಡೀತಾಯಿದ್ದಾಗ ನಾನು ಅಲ್ಲಿರಲಿಲ್ಲ, ಸೆಟ್ ಒಳಗಡೆ ನಾನು ಶೂಟಿಂಗ್ ನಲ್ಲಿ ಬ್ಯೂಸಿಯಾಗಿದ್ದೆ ಹಾಗಾಗಿ ನಾನು ಜಗಳ ನೋಡಿಲ್ಲ. ನಾನು ಹೊರ ಬಂದಾಗ ಭುವನ್ ಪ್ರಥಮ್ ಕತ್ತನ್ನು ಹಿಡಿದಿದ್ರು. ಇಬ್ಬರ ನಡುವೆ ಗಲಾಟೆ ನಡೆಯುತಿತ್ತು, ಕೂಡಲೇ ಪಕ್ಕದ ರೂಮಿನಲ್ಲಿ ಕರೆದುಕೊಂಡು ಹೋಗಿ ನೋಡಿದಾಗ ಭುವನ್ ತೊಡೆಯ ಭಾಗದಲ್ಲಿ ಹಲ್ಲಿನ ಗುರುತುಗಳಿದ್ದವು. ಈ ವೇಳೆ ನಾನು, ಭುವನ್ ಹಾಗೂ ವಿಶಾಲಮ್ಮ ಎಂಬವರು ಸಹ ಇದ್ದರು. ಭುವನ್ ಗೆ ಯಾವ ನಾಯಿಯೂ ಕಚ್ಚಿಲ್ಲ. ಪ್ರಥಮ್ ಕಚ್ಚಿದ್ದು ಎಂದು ಸೆಟ್‍ನಲ್ಲಿ ಎಲ್ರೂ ಹೇಳ್ತಾಯಿದ್ರು. ಪ್ರಥಮ್ ಯಾವಗಲೂ ಕೆಟ್ಟದಾಗಿ ಕಮೆಂಟ್, ಟಾಂಟ್ ಮಾಡ್ತಾಯಿದ್ದ ಎಂದು ನಟಿ ಸಂಜನಾ ಹೇಳಿದ್ದಾರೆ.

ಇನ್ನು ಭುವನ್ ಅವರ ಆರೋಪಕ್ಕೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಪ್ರಥಮ್ ಅವರು, ನಾನು ಅಪ್ಪಟ ಸಸ್ಯಹಾರಿ, ನಾನು ಯಾರಿಗೂ ಕಚ್ಚಿಲ್ಲ. ಮೊದಲು ಭುವನ್ ಅವರೇ ನನ್ನ ಮೇಲೆ ಕೈ ಮಾಡಿದ್ದು, ಅಲ್ಲಿದ್ದ ಸಿಬ್ಬಂದಿಗಳು ನಮ್ಮ ಜಗಳ ಬಿಡಿಸಿದ್ದರು ಎಂದು ಹೇಳಿಕೊಂಡಿದ್ದಾರೆ.

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದಯಮಾಡಿ ಬಿಟ್ಟುಬಿಡಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಕೇಳಿಕೊಂಡ ನಟ ಪ್ರಕಾಶ್ ರೈ ಪತ್ನಿ..!

    ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ, ಖಳನಟ ಪ್ರಕಾಶ್ ರೈ ಅವರ ಪತ್ನಿ ದಯಮಾಡಿ ಬಿಟ್ಟುಬಿಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಟ-ನಟಿಯರನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಕಾಶ್ ರೈ ಪತ್ನಿ ಪೋನಿ ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿಯೊಂದಿಗೆ ಮಾಡಿದ ರಾಜಕಿಯೇತ್ತರ ಸಂದರ್ಶನ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪೋನಿ ಪ್ರಧಾನಿಗೆ ಟ್ವೀಟ್…

  • ಜ್ಯೋತಿಷ್ಯ

    ಮಹಿಳೆಯರು ಸ್ಮಶಾನಕ್ಕೆ ಹೋಗಬಾರದೇಕೆ ಗೊತ್ತಾ?

    ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…

  • ಉಪಯುಕ್ತ ಮಾಹಿತಿ

    ಮುಂದಿನ ತಿಂಗಳಿಂದ 500 ಕಿಮೀ. ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿ ಕಡಿತ..! ತಿಳಿಯಲು ಓದಿ…

    ಮುಂದಿನ ತಿಂಗಳಿಂದ 500 ಕಿ.ಮೀ.ಗಿಂತ ಹೆಚ್ಚು ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ಸುದ್ದಿ

    ವೈರಲ್ ಆಯ್ತು ಧೋನಿ ತನ್ನ ಹೆಂಡತಿ ಸಾಕ್ಷಿಗೆ ಚಪ್ಪಲಿ ತೊಡಿಸುತ್ತಿರುವ ಈ ಫೋಟೋ..!

    ಹೊರಗಡೆ ಗಂಡನಾದವನು ಎಷ್ಟೇ ಫೇಮಸ್ ಆಗಿದ್ರೂ ಹೆಂಡತಿಗೆ ಮಾತ್ರ ಗಂಡನೇ ಎಂಬ ಗಾದೆಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಹೊಸ ‘ಸಾಕ್ಷಿ’ಯಾಗಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕೂಲ್ ಕ್ಯಾಪ್ಟನ್ ಮಾತ್ರ ಅಲ್ಲ, ಹೆಂಡತಿಗೆ ಒಳ್ಳೆ ಪತಿ ಕೂಡ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕನಾದರೂ ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಸಾಕ್ಷಿ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಧೋನಿ ಸರಳತೆ ಮೆರೆದಿದ್ದಾರೆ. ಧೋನಿ ಪತ್ನಿ ಕಾಲಿಗೆ ಚಪ್ಪಲಿ…

  • ರಾಜಕೀಯ, ಸುದ್ದಿ

    ಪಕ್ಷೇತರ ಅಭ್ಯರ್ಥಿ,ಏಪ್ರಿಲ್ 16ರಂದು ತಮ್ಮ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ಮತದಾರರ ಅನುಕಂಪ ಗಿಟ್ಟಿಸಿಕೊಳ್ಳಲಿದ್ದಾರೆ ಎಂದು ಕುಮಾರಸ್ವಾಮಿಯಿಂದ ಗಂಭೀರ ಆರೋಪ..!

    ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಇಡೀ ದೇಶದ  ಗಮನ ಸೆಳೆಯುತ್ತಿದೆ. ಉಭಯ ಪಕ್ಷಗಳ ಅಭ್ಯರ್ಥಿಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದು, ಈ ಮೊದಲು ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರು ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಮೂಲಕ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೀಳುಮಟ್ಟದ ಪ್ರಚಾರ ನಡೆಸಲು ಸಿದ್ಧತೆ ನಡೆಸಿದ್ದಾರೆ ಎಂದು ಆರೋಪ ಮಾಡಿದ್ದರು. ಇದೀಗ ಮೈತ್ರಿ ಪಕ್ಷದ ಅಭ್ಯರ್ಥಿ ಹಾಗೂ…

  • ವಿಚಿತ್ರ ಆದರೂ ಸತ್ಯ

    ಮತ್ಸ್ಯ ಮಗುವಿಗೆ ಜನ್ಮ ನೀಡಿದ ಮಹಿಳೆ..!ತಿಳಿಯಲು ಈ ಲೇಖನ ಓದಿ…

    ಮತ್ಸ್ಯಕನ್ಯೆ ಸಿಕ್ಕಿದ್ದಾಳೆ ಎನ್ನುವ ಫೋಟೋಗಳು, ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇರುತ್ತದೆ. ಇದನ್ನು ನಂಬುವುದು ತುಂಬಾ ಕಷ್ಟದ ಕೆಲಸ. ಆದರೆ ಕೆಲವೊಮ್ಮೆ ಇಂತಹ ಘಟನೆಗಳನ್ನು ನಂಬಲೇಬೇಕಾಗುವುದು. ಯಾಕೆಂದರೆ ಮಹಿಳೆಯೊಬ್ಬಳು ಮತ್ಸ್ಯಶಿಶುವಿಗೆ ಜನ್ಮ ನೀಡಿದ ಸುದ್ದಿಯಿದು. ಇದನ್ನು ನೀವು ಕೂಡ ಕೇಳಿರಬಹುದು.