News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಒಳ್ಳೆ ಹುಡುಗ ಪ್ರಥಮ್’ನ ಹುಚ್ಚಾಟ!ಭುವನ್ ತೊಡೆ ಕಚ್ಚಿದ ಪ್ರಥಮ್! ಅಲ್ಲಿ ನಡೆದಿದ್ದಾದರು ಏನು ಗೊತ್ತಾ?

1290

ಒಳ್ಳೆ ಹುಡುಗ ಪ್ರಥಮ್ ಹಾಗೂ ನಟ ಭುವನ್ ನಡುವೆ ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ  ಜಗಳವಾಗಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಆರೋಪ ಮಾಡಿದ್ದಾರೆ.

ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುತ್ತಿರುವ ಸಂಜು ಮತ್ತು ನಾನು ಧಾರಾವಾಹಿಯಲ್ಲಿ ಬಿಗ್ ಬಾಸ್ ಖ್ಯಾತಿಯ ಪ್ರಥಮ್, ಭುವನ್ ಮತ್ತು ಸಂಜನಾ ನಟಿಸುತ್ತಿದ್ದಾರೆ. ಧಾರಾವಹಿಯ ಚಿತ್ರೀಕರಣದ ವೇಳೆ ಭುವನ್ ಹಾಗೂ ಪ್ರಥಮ್ ನಡುವೆತ ಮಾರಾಮಾರಿ ನಡೆದಿದ್ದು, ಈ ವೇಳೆ ಪ್ರಥಮ್ ನೇರವಾಗಿ ಬಂದು ಭುವನ್‍ರ ತೊಡೆಯ ಭಾಗವನ್ನು ಕಚ್ಚಿ ಗಾಯಗೊಳಿಸಿದ್ದಾರೆ.

ಚಿತ್ರೀಕರಣದ ವೇಳೆ ಪ್ರಥಮ್ ಅವರು ಸಂಜನಾ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಈ ವೇಳೆ ಆಕ್ರೋಶಗೊಂಡಿರುವ ಭುವನ್ ಅವರು ಆ ರೀತಿ ಮಾತನಾಡದಂತೆ ತಾಕೀತು ಮಾಡಿದ್ದಾರೆ. ನಂತರ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಜಗಳ ವಿಕೋಫಕ್ಕೆ ತಿರುಗಿದೆ. ನಂತರ ಪ್ರಥಮ್ ಅವರು ಭುವನ್ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದು, ಹಲ್ಲೆ ನಡೆಸಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಚಿತ್ರೀಕರಣದ ಸಿಬ್ಬಂದಿಗಳು ಮಧ್ಯೆ ಪ್ರವೇಶ ಮಾಡಿದ್ದಾರೆ. ಆದರೂ ಸುಮ್ಮನಾಗದ ಪ್ರಥಣ್ ಅವರು ಭುವನ್ ಅವರ ತೊಡೆಗೆ ಕಚ್ಚಿದ್ದಾರೆಂದು ವರದಿಯಾಗಿದೆ.

 

ಪ್ರಥಮ್ ಮತ್ತು ಭುವನ್ ನಡುವೆ ಜಗಳ ನಡೀತಾಯಿದ್ದಾಗ ನಾನು ಅಲ್ಲಿರಲಿಲ್ಲ, ಸೆಟ್ ಒಳಗಡೆ ನಾನು ಶೂಟಿಂಗ್ ನಲ್ಲಿ ಬ್ಯೂಸಿಯಾಗಿದ್ದೆ ಹಾಗಾಗಿ ನಾನು ಜಗಳ ನೋಡಿಲ್ಲ. ನಾನು ಹೊರ ಬಂದಾಗ ಭುವನ್ ಪ್ರಥಮ್ ಕತ್ತನ್ನು ಹಿಡಿದಿದ್ರು. ಇಬ್ಬರ ನಡುವೆ ಗಲಾಟೆ ನಡೆಯುತಿತ್ತು, ಕೂಡಲೇ ಪಕ್ಕದ ರೂಮಿನಲ್ಲಿ ಕರೆದುಕೊಂಡು ಹೋಗಿ ನೋಡಿದಾಗ ಭುವನ್ ತೊಡೆಯ ಭಾಗದಲ್ಲಿ ಹಲ್ಲಿನ ಗುರುತುಗಳಿದ್ದವು. ಈ ವೇಳೆ ನಾನು, ಭುವನ್ ಹಾಗೂ ವಿಶಾಲಮ್ಮ ಎಂಬವರು ಸಹ ಇದ್ದರು. ಭುವನ್ ಗೆ ಯಾವ ನಾಯಿಯೂ ಕಚ್ಚಿಲ್ಲ. ಪ್ರಥಮ್ ಕಚ್ಚಿದ್ದು ಎಂದು ಸೆಟ್‍ನಲ್ಲಿ ಎಲ್ರೂ ಹೇಳ್ತಾಯಿದ್ರು. ಪ್ರಥಮ್ ಯಾವಗಲೂ ಕೆಟ್ಟದಾಗಿ ಕಮೆಂಟ್, ಟಾಂಟ್ ಮಾಡ್ತಾಯಿದ್ದ ಎಂದು ನಟಿ ಸಂಜನಾ ಹೇಳಿದ್ದಾರೆ.

ಇನ್ನು ಭುವನ್ ಅವರ ಆರೋಪಕ್ಕೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಪ್ರಥಮ್ ಅವರು, ನಾನು ಅಪ್ಪಟ ಸಸ್ಯಹಾರಿ, ನಾನು ಯಾರಿಗೂ ಕಚ್ಚಿಲ್ಲ. ಮೊದಲು ಭುವನ್ ಅವರೇ ನನ್ನ ಮೇಲೆ ಕೈ ಮಾಡಿದ್ದು, ಅಲ್ಲಿದ್ದ ಸಿಬ್ಬಂದಿಗಳು ನಮ್ಮ ಜಗಳ ಬಿಡಿಸಿದ್ದರು ಎಂದು ಹೇಳಿಕೊಂಡಿದ್ದಾರೆ.

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ 2 ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ 202ರನ್‌ಗಳಿಗೆ ಸರ್ವ ಪತನವಾಗಿದೆ.ಆರಂಭಿಕರಾದ ಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರ್ವಾಲ್ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ಅಗರ್ವಾಲ್ ವಿಕೆಟ್ ಕಳೆದುಕೊಂಡಿತು.ನಂತರ ಬಂದ ಪುಜಾರ (3), ರಹಾನೆ (0) ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ವಿಕೆಟ್ ಕೈಚೆಲ್ಲಿದರು.ಹನಮ ವಿಹಾರಿ ರಾಹುಲ್ ಜೊತೆಗೂಡಿ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ಸೂಚನೆ ನೀಡುವಾಗ ವಿಹಾರಿ (20) ಔಟಾದರು. ನಂತರ…

    Loading

  • ಜ್ಯೋತಿಷ್ಯ

    ದಿನ ಭವಿಷ್ಯ , ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….

    ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು.  ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…

  • ಸಿನಿಮಾ

    ಈ ನಟ ‘ಮೆಗಾ ಸ್ಟಾರ್’ ಆದ್ರೂ ಈಗಲೂ ಬೀಡಿ ಸೇದುತ್ತಾರೆ..!ಯಾರು ಗೊತ್ತಾ..?ತಿಳಿಯಲು ಈ ಲೇಖನ ಓದಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೇದುವವರಿಗೆ ಯಾವುದಾದರೇನಂತೆ..? ಬೀಡಿ, ಸಿಗರೇಟ್. ಜೇಬಿನಲ್ಲಿ ಹಣ ತುಂಬಿರುವಾಗ ಸಿಗರೇಟ್ ನಂತಹ ದುಬಾರಿಗಳೇ ಬೇಕಾಗುತ್ತದೆ. ಆದರೆ ಈ ನಟ ಹಾಗಲ್ಲ. ಇವರು ಮೆಗಾ ಸ್ಟಾರ್ ನಟ. ಹಣ, ಪ್ರಚಾರ ಇದ್ದರೂ ಸಿಂಪ್ಲಿಸಿಟಿ ಫಾಲೋ ಮಾಡುತ್ತಾರೆ. ಮಲಯಾಳಂನ ಮೆಗಾ ಸ್ಟಾರ್ ನಟ ಮಮ್ಮೂಟಿ ಇಲ್ಲಿಯವರೆಗೂ ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮೂರು ಬಾರಿ ನ್ಯಾಷನಲ್ ಅವಾರ್ಡ್ ಪಡೆದಿದ್ದಾರೆ. ಅಲ್ಲದೇ ಇವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿದೆ. ಕೋಟಿ,…

  • ಸುದ್ದಿ

    ಕೀನ್ಯಾ ನಿಂದ 200 ರೂ ಸಾಲ ತೀರಿಸಲು 30 ವರ್ಷಗಳ ಬಳಿಕ ಭಾರತಕ್ಕೆ ಬಂದ ಭೂಪ…!

    ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…

  • ಸಿನಿಮಾ

    ರಾಜಮೌಳಿ ಮುಂದಿನ ಚಿತ್ರದಲ್ಲಿ ಕನ್ನಡದ ನಾಯಕ ನಟ! ಯಾರು ಗೊತ್ತೇ???

    ಸಾವಿರಾರು ಕೋಟಿ ಹಣ ಗಳಿಕೆಯ ಜೊತೆ ವಿಶ್ವದಾದ್ಯಂತ ಅದ್ಭುತ ಯಶಸ್ಸು ಗಳಿಸಿದ ಬಾಹುಬಲಿ-2 ಚಿತ್ರದ ನಿರ್ದೆಶಕ ಎಸ್.ಎಸ್.ರಾಜಮೌಳಿ ತಮ್ಮ ಮುಂದಿನ ಚಿತ್ರಕ್ಕೆ ಸ್ಯಾಂಡಲ್’ವುಡ್ ಪವರ್ ಸ್ಟಾರ್ ಪುನೀತ್ ರಾಜ್’ಕುಮಾರ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಎಲ್ಲಡೆ ಹರಿದಾಡುತ್ತಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ…ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….