ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಅಜ್ಜಿಗೆ ಬರೋಬ್ಬರಿ 80 ವರ್ಷ ವಯಸ್ಸು ಆದ್ರೂ ಇವರು ಛಲ ಬಿಡದೆ ಕೃಷಿಯಲ್ಲಿ ಸಾಧನೆಯನ್ನು ಮಾಡಿದ್ದಾರೆ. ಇವರ ಒಂದು ಸಾಧನೆಯು ಪ್ರತಿಯೊಬ್ಬ ರೈತನಿಗೆ ಸ್ಫೂರ್ತಿ ಅನ್ನಬಹುದು .ಈ ಅಜ್ಜಿಯ ಹೆಸರು ಲಕ್ಷ್ಮೀಬಾಯಿ ಮಲ್ಲಪ್ಪ ಜುಲ್ಪಿ ಎಂಬುದಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದವರು ಇವರಿಗೆ 80 ವರ್ಷ ವಯಸ್ಸು. ಮತ್ತೆ ಇವರಿಗೆ ಹೆಣ್ಣು ಮಕ್ಕಳು ಸೇರಿದಂತೆ ಮೊಮ್ಮಕ್ಕಳಿದ್ದಾರೆ. ಈ ವಯಸ್ಸಿನಲ್ಲೂ ಕೂಡ ಇವರ ಕಾರ್ಯ ವೈಖರಿಯನ್ನು ನೋಡಿದರೆ ಎಂತವರಿಗೂ ಕೂಡ ಅಚ್ಚರಿ ಮೂಡಿಸುತ್ತದೆ. ಆ ರೀತಿಯಲ್ಲಿ ಕೃಷಿ ಚಟುವಟಿಕೆಯ ಕೆಲಸವನ್ನು ಮಾಡುತ್ತಾರೆ ಈ ಲಕ್ಶ್ಮಿಬಾಯಿ.
ಲಕ್ಶ್ಮಿಬಾಯಿಯವರು ತಮ್ಮ ತವರುಮನೆಯ ಸೋರಗಾಂವಿ ಗ್ರಾಮದಿಂದ ದೇಶೀಯ ಬದನೆ ತಳಿಗಳನ್ನ ತಂದು ತಮ್ಮ ಗಂಡನ ಮನೆಯಲ್ಲಿ ಬೆಳೆಯುವ ಮೂಲಕ ಅದ್ಭುತ ಸಾಧನೆಯನ್ನ ಮಾಡಿದ್ದಾರೆ. ಇವರು ಬೆಳೆಯುವಂತ ದೇಶಿಯ ಬದನಕಾಯಿಗೆ ಉತ್ತಮ ಮಾರ್ಕೆಟಿಂಗ್ ಇದ್ದು ಸುತ್ತ ಮುತ್ತಲಿನ ರೈತರೆಲ್ಲರೂ ಇವರನ್ನು ನೋಡಿ ಪ್ರೇರೇಪಿತರಾಗಿದ್ದರೆ ಎನ್ನಲಾಗುತ್ತದೆ.
ದಿನಾ ಬೆಳಗಾದರೆ ಸಾಕು ಎದ್ದು ದನಕರುಗಳಿಗೆ ನೀರು ಹಾಕೋದು, ಹೊಲಗದ್ದೆಗಳಲ್ಲಿ ಬದನೆಕಾಯಿಗಳ ಬೆಳೆ ನೋಡಿಕೊಳ್ಳೋದು ಮತ್ತು ದೇಶಿಯ ಬೀಜಗಳನ್ನ ಸಂರಕ್ಷಣೆ ಮಾಡೋದು ಹಾಗು ನಿತ್ಯವೂ ಕೃಷಿ ಕಾರ್ಯದಲ್ಲಿ ತೊಡಗುವಂತ ಕೆಲಸವನ್ನು ಮಾಡುತ್ತಾರೆ.
ಹೊಲದಲ್ಲಿ ಬದನೆಕಾಯಿ ಹೆಚ್ಚೋದು, ಬೆಳೆಗೆ ನೀರುಣಿಸೋದು, ಕಸ ಕೀಳೋದು ಸೇರಿದಂತೆ ಹಲವು ಕಾರ್ಯಗಳಲ್ಲಿ ತೊಡಗಿರುತ್ತಾರೆ. ಅಲ್ಲದೆ ಹೊಲದಲ್ಲಿ ಕೆಲ್ಸ ಮಾಡೋರನ್ನ ತಮ್ಮ ಮಕ್ಕಳಂತೆ ನೋಡಿಕೊಳ್ತಾರೆ.
ಲಕ್ಷ್ಮೀಬಾಯಿಯವರು ಬೀಜ ಬ್ಯಾಂಕನ್ನು ತಮ್ಮ ಮನೆಯಲ್ಲಿ ಮಾಡಿಕೊಂಡಿದ್ದಾರೆ. ಬೇರೆ ಬೇರೆ ಜಾತಿಯ ದೇಶಿಯ ತಳಿಗಳ ಬೀಜಗಳನ್ನ ಮಣ್ಣಿನ ಮಡಿಕೆಗಳಲ್ಲಿಟ್ಟು ಸಂರಕ್ಷಿಸಿ ಇತರರಿಗೆ ಮಾದರಿಯಾಗಿದ್ದಾರೆ. ಇನ್ನು ಕೃಷಿ ಸಾಧನೆ ಮಾಡಿರೋ ಕುಟುಂಬದಲ್ಲಿ ಪತಿ ಮಲ್ಲಪ್ಪಗೆ ರಾಜ್ಯ ಪ್ರಶಸ್ತಿ, ಪುತ್ರ ರುದ್ರಪ್ಪಗೆ ಮಹಿಂದ್ರಾ ನ್ಯಾಷನಲ್ ಅವಾರ್ಡ, ಐಎಆರ್ಐ ಪ್ರಶಸ್ತಿಗಳು ಬಂದಿದ್ದು, ಇಡಿ ಕುಟುಂಬ ಕೃಷಿ ಸಾಧಕ ಕುಟುಂಬವಾಗಿ ಹೆಸರುವಾಸಿಯಾಗಿದೆ.
ಕಳೆದ ಹಲವು ವರ್ಷಗಳ ಸಾಧನೆ ಮತ್ತು ಬದನೆ ಸಂಶೋಧನೆಗಾಗಿ ನ್ಯೂ ದೆಹಲಿಯ ನ್ಯಾಷನಲ್ ಇನೋವೇಷನ್ ಪೌಂಡೇಶನ್ ವತಿಯಿಂದ ಪ್ರಶಸ್ತಿಗೂ ಭಾಜನರಾಗಿದ್ದು, ದೇಶಿಯ ತಳಿ ಸಂರಕ್ಷಣೆಗಾಗಿ 2015ನೇ ಸಾಲಿನ ರಾಷ್ಟ್ರಪ್ರಶಸ್ತಿಯನ್ನ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಂದ ಪಡೆದು ಗೌರವಕ್ಕೆ ಪಾತ್ರರಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೇಬಿನಿಂದ ಪೆನ್ ಅಥವಾ ಮತ್ತ್ಯಾವುದೋ ಚೀಟಿ ತೆಗೆಯುವಾಗ ನಾಣ್ಯ ಅಥವಾ ನೋಟು ಕೆಲವೊಮ್ಮೆ ಕೆಳಗೆ ಬೀಳುತ್ತದೆ. ಕೆಳಗೆ ಬಿದ್ದ ನೋಟನ್ನು ಅನೇಕರು ಕೋಪ ಮಾಡಿಕೊಂಡು ಕಿರಿಕಿರಿ ಮಾಡ್ತಾ ಎತ್ತಿಕೊಳ್ತಾರೆ. ಆದ್ರೆ ಇನ್ಮುಂದೆ ಹಾಗೆ ಮಾಡಬೇಡಿ. ನಿಮ್ಮ ಜೇಬಿನಿಂದ ಕೆಳಗೆ ಬಿದ್ದ ಹಣವನ್ನು ಖುಷಿಯಿಂದ ಎತ್ತಿಕೊಳ್ಳಿ. ಜೇಬಿನಿಂದ ಹಣ ಬೀಳೋದು ಯಾವುದರ ಮುನ್ಸೂಚನೆ ಎಂಬುದನ್ನು ತಿಳಿದುಕೊಂಡ್ರೆ ಯಾವಾಗ ಜೇಬಿನಿಂದ ಹಣ ಬೀಳುತ್ತೆ ಅಂತಾ ನೀವು ಕಾಯೋದ್ರಲ್ಲಿ ಸಂಶಯವಿಲ್ಲ. ನಿಮ್ಮ ಜೇಬಿನಿಂದ ಬಿದ್ದ ನಾಣ್ಯವನ್ನು ಎತ್ತಿಕೊಳ್ಳುವ ಮೊದಲು ಅದ್ರಿಂದಾಗುವ ಶುಭ…
ಒಣ ದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡ್ತಾರೆ. ಈ ದ್ರಾಕ್ಷಿ ಬಾಯಿಗೆ ರುಚಿಯೊಂದೇ ಅಲ್ಲ ಆರೋಗ್ಯಕರ. ಒಣ ದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ರಾತ್ರಿ ಪೂರ್ತಿ ಹಾಗೆ ಇಟ್ಟು ಬೆಳಗ್ಗೆ ಸೇವಿಸುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ಕುದಿಸಿದ ನೀರನ್ನು ಕುಡಿಯುವುದ್ರಿಂದ ಮಲಬದ್ಧತೆ, ಎಸಿಡಿಟಿ ಹಾಗೂ ಆಯಾಸ ಸಮಸ್ಯೆ ಕಡಿಮೆಯಾಗುತ್ತದೆ. ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. ಇದು ದೇಹದಲ್ಲಿರುವ ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತದೆ. ಒಣದ್ರಾಕ್ಷಿ ಕುದಿಸಿಟ್ಟ ನೀರು ಮುಖದ ಮೇಲಿನ ಸುಕ್ಕನ್ನು ಕಡಿಮೆ…
ಕನ್ನಡ ಚಿತ್ರಗಳಲ್ಲಿ ಪೋಷಕ ಪಾತ್ರಗಳ ಭಾವಪೂರ್ಣ ಅಭಿನಯದಿಂದಲೇ ಜನ ಮಾನಸವನ್ನು ಆವರಿಸಿಕೊಂಡಿರುವವರು ದಿವಂಗತ ಅಶ್ವತ್ಥ್. ಇಂಥಾ ಅಭಿಜಾತ ಕಲಾವಿದನ ಪುತ್ರ ಶಂಕರ್ ಅಶ್ವತ್ಥ್ ಕಷ್ಟ ನೀಗಿಕೊಳ್ಳಲು ಮೈಸೂರಿನಲ್ಲಿ ಊಬರ್ ಕ್ಯಾಬ್ ಡ್ರೈವರ್ ಆಗಿದ್ದಾರೆಂಬ ಸುದ್ದಿ ಈವತ್ತು ಎಲ್ಲೆಡೆ ಪ್ರಚಾರ ಪಡೆದುಕೊಂಡಿತ್ತಲ್ಲಾ? ಅದು ಗೊತ್ತಾದ ಕೂಡಲೆ ಕೆಲಸ ಕಾರ್ಯ ಬಿಟ್ಟು ಮೈಸೂರಿಗೆ ತೆರಳಿರೋ ಪ್ರಥಮ್ ತಮ್ಮ ‘ಬಿಲ್ಡಪ್ ಚಿತ್ರದಲ್ಲಿ ನಟಿಸೋ ಅವಕಾಶವನ್ನ ಶಂಕರ್ ಅಶ್ವತ್ಥ್ಗೆ ಕೊಟ್ಟು ಜೊತೆಗೆ ಅಡ್ವಾನ್ಸ್ ರೂಪದಲ್ಲಿ ಬ್ಲ್ಯಾಂಕ್ ಚೆಕ್ ಕೊಡೋ ಮೂಲಕ ಆಪತ್ಭಾಂಧವನಾಗಿದ್ದಾರೆ. ಈವತ್ತು…
ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ೪೫ ಜನ ಸೈನಿಕರು ಹುತಾತ್ಮರಾಗಿದ್ದು, ಈ ರಕ್ಕಸರ ಕೃತ್ಯಕ್ಕೆ ಪ್ರತೀಕಾರ ಕೈಗೊಳ್ಳಲೇಬೇಕು ಎಂದು ಪ್ರಧಾನಿ ಮೋದಿಯನ್ನು ಎಲ್ಲರೂ ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಹೋರಾಟಗಾರ ಅಣ್ಣಾ ಅಜಾರೆ ಅವರು ಹೇಳಿರುವ ಮಾತು ಎಂತಹವರಲ್ಲೂ ರಕ್ತ ಕುದಿಯುವಂತೆ ಮಾಡಿದೆ.ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಶಕ್ತಿ ನನಗೆ ಇದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ…
ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 5% ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಕೆಲವರ್ಗದ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿಗೂ ಮುನ್ನ ಬೋನಸ್ ಹಾಗೂ ಸಾರಿಗೆ ಭತ್ಯೆ(TA) ಲಭ್ಯವಾಗಿದೆ. ಈಗ ನವೆಂಬರ್ ತಿಂಗಳಿನಲ್ಲಿ ಬಂಪರ್ ಕೊಡುಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರಿ ನೌಕರರ ಸಂಬಳ ಏರಿಕೆ ಬಗ್ಗೆ ನವೆಂಬರ್ ತಿಂಗಳಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ಅಧಿಕೃತ ಆದೇಶ ಹೊರಬರಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ…
ಪ್ರತಿಬಾರಿ ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಎಂದರೆ ಆಲೂಗಡ್ಡೆ ಬೇಯುವಾಗ ಒಡೆದುಹೋಗುತ್ತದೆ ಎಂಬುದು. ಆಲೂಗಡ್ಡೆ ಒಡೆದು ಅದರೊಳಗೆ ನೀರು ಸೇರಿ ಆಲೂಗಡ್ಡೆಯ ರುಚಿ ಹಾಳಾಗುತ್ತದೆ.