ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.
ಹೌದು, ಶ್ರೀಕಾಂತ್ ಜಿಕ್ಖರ್ರವರು ಭಾರತದ ಅತಿ ಹೆಚ್ಚಿನ ವಿದ್ಯಾರ್ಹತೆಯುಳ್ಳ ವ್ಯಕ್ತಿಯಾಗಿ ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಅನ್ನು ಹೊಂದಿದ್ದಾರೆ. ಎಮ್. ಬಿ. ಬಿ. ಎಸ್ ಮತ್ತು ಎಮ್. ಡಿ. ಇಂದ ಶುರು ಮಾಡಿದ ಇವರು ಎಲ್. ಎಲ್. ಬಿ ಮಾಡಿ ಕಾನೂನನ್ನು ಕೂಡ ಓದಿದ್ದಾರೆ. ನಂತರ ಅಂತಾರಾಷ್ಟ್ರೀಯ ಕಾನೂನಿನಲ್ಲಿ ಸ್ನಾತಕೋತ್ತರ ಪದವಿ(ಎಲ್. ಎಲ್. ಎಮ್) ಯನ್ನು ಪಡೆಯುತ್ತಾರೆ. ಹಾಗೂ ಇವರು ಬಿಸ್ನೆಸ್ ಆಡಳಿತ ಮತ್ತು ಪತ್ರಿಕೋದ್ಯಮದಲ್ಲಿಯು ಮಾಸ್ಟರ್ಸ್ ಅನ್ನು ಹೊಂದಿದ್ದಾರೆ .

ಎಂ. ಎ. ಸಾರ್ವಜನಿಕ ಆಡಳಿತ ,
ಎಂ. ಎ.ಸಮಾಜ ಶಾಸ್ತ್ರ ,
ಎಂ. ಎ. ಅರ್ಥ ಶಾಸ್ತ್ರ ,
ಎಂ. ಎ. ಸಂಸ್ಕೃತ,
ಎಂ. ಎ. ಇತಿಹಾಸ,
ಎಂ. ಎ. ಆಂಗ್ಲ ಸಾಹಿತ್ಯ ,
ಎಂ. ಎ. ತತ್ವ ಶಾಸ್ತ್ರ ,
ಎಂ. ಎ.ರಾಜ್ಯ ಶಾಸ್ತ್ರ ,
ಎಂ. ಎ.ಪ್ರಾಚೀನ ಭಾರತೀಯ ಇತಿಹಾಸ ,
ಸಂಸ್ಕೃತಿ ಮತ್ತು ಪುರಾತನ ಶಾಸ್ತ್ರ ,
ಎಂ. ಎ.ಮನೋವಿಜ್ಞಾನ . ಮತ್ತು ಇವರು ಯಾವುದೇ ಪದವಿಗಿಂತ ಉನ್ನತ ಪದವಿಯಾದ ಡಿ.ಲಿಟ್ (ಡಾಕ್ಟರ್ ಆಫ್ ಲೆಟರ್ಸ್) ಅನ್ನು ಗಳಿಸಿದ ಹೆಗ್ಗಳಿಕೆಗೆ ಪಾತ್ರರಾಗುತ್ತಾರೆ. ಸಾಕಷ್ಟು ಪದವಿಗಳಲ್ಲಿ ಚಿನ್ನದ ಪದಕಗಳನ್ನು ಗಳಿಸಿದ ಇವರು ಹಲವಾರು ಪದವಿಗಳಲ್ಲಿ ಪ್ರಥಮ ಶ್ರೇಣಿ /ಪ್ರಥಮ ದರ್ಜೆಯನ್ನು ಗಳಿಸಿದ ಹೆಮ್ಮೆ ಇವರದಾಗಿದೆ.

1978 ರಲ್ಲಿ ಅವರು ಇಂಡಿಯನ್ ಸಿವಿಲ್ ಸರ್ವಿಸ್ ಪರೀಕ್ಷೆ (IPS)ಯನ್ನು ಬರೆದು,ಇಂಡಿಯನ್ ಸಿವಿಲ್ ಸರ್ವಿಸ್ (ಐಪಿಎಸ್) ನಲ್ಲಿ ಆಯ್ಕೆಯಾದರು. ನಂತರ ಐಪಿಎಸ್ ಹುದ್ದೆಗೆ ರಾಜಿನಾಮೆ ನೀಡಿ,ಮತ್ತೆ 1980ರಲ್ಲಿ ಭಾರತೀಯ ಸಿವಿಲ್ ಸರ್ವೀಸ್ ಪರೀಕ್ಷೆ (IAS) ಪರೀಕ್ಷೆಯನ್ನು ಬರೆದ್ರು.ಅದರಲ್ಲೂ ಕೂಡ ಐಎಎಸ್ ಆಫಿಸರ್ ಆಗಿ ಆಯ್ಕೆ ಆದ್ರು.ಆದರೆ ನಾಲ್ಕು ತಿಂಗಳ ನಂತರ ತಮ್ಮ ಐಎಎಸ್ ಹುದ್ದೆಗೂ ರಾಜೀನಾಮೆ ನೀಡಿದ್ರು.
1980ರಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ,ತಮ್ಮ ಮೊದಲ ಸಾರ್ವತ್ರಿಕ ಚುನಾವಣೆಯಲ್ಲೇ ಗೆದ್ದು, ತಮ್ಮ 26ನೇ ವಯಸ್ಸಿನಲ್ಲೇ,ಎಂಎಲ್ಎ ಆಗಿ ಆಯ್ಕೆ ಆದ್ರು.ಹಾಗೂ ಭಾರತದಲ್ಲೇ ಅತೀ ಕಿರಿಯ ವಯಸ್ಸಿನ ಎಂಎಲ್ಎ ಎಂಬ ಹೆಸರಿಗೆ ಪಾತ್ರರಾದ್ರು ಕೂಡ. ತರುವಾಯ ಆ ಸಮಯದಲ್ಲಿ 14 ಶಾಸಕಾಂಗಗಳನ್ನು ಹೊಂದಿರುವ ಸರ್ಕಾರದ, ಅತ್ಯಂತ ಶಕ್ತಿಶಾಲಿ ಸರ್ಕಾರಿ ಮಂತ್ರಿಯಾದರು.
ಭಾರತದಲ್ಲಿ 52,000 ಕ್ಕಿಂತ ಹೆಚ್ಚು ಪುಸ್ತಕಗಳನ್ನು ಹೊಂದಿರುವ ಗ್ರಂಥಾಲಯಗಳಲ್ಲಿ ಇವರದು ಒಂದು ವೈಯುಕ್ತಿಕ ಗ್ರಂಥಾಲಯ ಸೇರಿದೆ.ಶ್ರೀಕಾಂತ್ ಜಿಕ್ಖರ್ರವರು ಒಬ್ಬ ಶಿಕ್ಷಣತಜ್ಞ, ವರ್ಣಚಿತ್ರಕಾರ, ವೃತ್ತಿಪರ ಛಾಯಾಗ್ರಾಹಕ, ಮತ್ತು ನಟರು ಕೂಡ ಆಗಿದ್ದರುಇವರು 1992-98ರವರೆಗೆ ಭಾರತ ರಾಜ್ಯಾಂಗದ ಸದಸ್ಯರಾಗಿದ್ದರು. ಅವರು 1992 ರಲ್ಲಿ ನಾಗಪುರದಲ್ಲಿ ಸಂದಿಪಾನಿ ಎಂಬ ಶಾಲೆ ಸ್ಥಾಪಿಸಿದರು.ದುರದೃಷ್ಟಕರ ಎಂದರೆ ತಮ್ಮ 49ನೇ ವಯಸ್ಸಿನಲ್ಲಿ ಕಾರ್ ಅಪಘಾತವೊಂದರಲ್ಲಿ ತೀರಿಕೊಂಡ್ರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆ 2018 ಕುರಿತಂತೆ ಸಿ ಫೋರ್ ಸಂಸ್ಥೆಯು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ, ಆಗಸ್ಟ್ 20 ರಂದು ಪ್ರಕಟಿಸಿದೆ.
ಪ್ರಸಿದ್ಧ ಟಿವಿ ರಿಯಾಲಿಟಿ ಶೋ ನಟಿ ಕಿಮ್ ಕರ್ದಾಶಿಯನ್ ಮೂರನೇ ಬಾರಿ ಅಮ್ಮನಾಗಿದ್ದಾಳೆ. ಬಾಡಿಗೆ ತಾಯಿ ಮೂಲಕ ಕಿಮ್ ಮನೆಗೆ ಸೋಮವಾರ ಮಗುವೊಂದರ ಆಗಮನವಾಗಿದೆ. ಮಗಳ ಸ್ವಾಗತಕ್ಕೆ ಕಿಮ್ ಹಾಗೂ ಆಕೆ ಪತಿ ಕೆನ್ನೆ ವೆಸ್ಟ್ ವಿಶೇಷ ತಯಾರಿ ನಡೆಸಿದ್ದಾರೆ.
ಕೆಲವೊಂದು ಜೀವ ಜಂತುಗಳು ನಮ್ಮ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ನೀಡುತ್ತವೆ. ಇದಕ್ಕೆ ಹಲ್ಲಿ ಕೂಡ ಹೊರತಾಗಿಲ್ಲ. ಹಲ್ಲಿ ಏನು ಮಾಡಿದ್ರೆ ಶುಭ? ಏನು ಮಾಡಿದ್ರೆ ಅಶುಭ? ಹಲ್ಲಿ ಯಾವ ಸ್ಥಿತಿಯಲ್ಲಿ ಕಾಣಬಾರದು ಎಂಬುದನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಮನೆಯೊಳಗೆ ಪ್ರವೇಶ ಮಾಡುವಾಗ ಹಲ್ಲಿ ಕಂಡ್ರೆ ಶುಭ. ಆದ್ರೆ ಗೃಹಪ್ರವೇಶದ ದಿನ ಸತ್ತ ಹಲ್ಲಿ ಕಣ್ಣಿಗೆ ಬೀಳಬಾರದು. ಸತ್ತ ಹಲ್ಲಿ ಕಾಣಿಸಿಕೊಂಡ್ರೆ ಅವಶ್ಯವಾಗಿ ಪೂಜೆ ಮಾಡಿ ನಂತ್ರವೇ ಹೊಸ ಮನೆ ಪ್ರವೇಶ ಮಾಡಬೇಕು. ಸತ್ತ ಹಲ್ಲಿಗಳು…
ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ. ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅಮೆರಿಕದ…
ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…
ದೀಪಾವಳಿಯ ಹಿನ್ನೆಲೆಯಲ್ಲಿ ಕಂಪನಿಗಳ ಮಾರಾಟವು ಮತ್ತೆ ಚೇತರಿಸಿಕೊಂಡಿದೆ. ದೀಪಾವಳಿಗೆ ಜನರು ಹೊಸ ವಾಹನಗಳನ್ನು ಕೊಳ್ಳುವುದು ಹಿಂದಿನಿಂದ ನಡೆದು ಬಂದಿರುವ ಸಂಪ್ರದಾಯವಾಗಿರುವ ಕಾರಣಕ್ಕೆ ವಾಹನಗಳ ಮಾರಾಟವು ಹೆಚ್ಚಾಗಿದೆ.ಇದೇ ರೀತಿ ಮಧ್ಯ ಪ್ರದೇಶದಲ್ಲಿರುವ ಸಾತ್ನಾ ಜಿಲ್ಲೆಯ ರಾಕೇಶ್ ಕುಮಾರ್ ಗುಪ್ತಾರವರು ಸಹ ಹೊಸ ಸ್ಕೂಟರ್ ಖರೀದಿಸಲು ಬಯಸಿದ್ದಾರೆ. ಅದರಂತೆ ಇತ್ತೀಚಿನ ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿಸಲು ಡೀಲರ್ ಬಳಿ ಹೋಗಿದ್ದಾರೆ. ಇದರಲ್ಲೇನು ವಿಶೇಷ ಅಂತೀರಾ? ವಿಶೇಷ ಇರೋದು ಇದರಲ್ಲೆ. ಎಲ್ಲರಂತೆ ರಾಕೇಶ್ ಕುಮಾರ್ರವರು ಚೆಕ್ನಲ್ಲೋ, ಡಿಡಿಯಲ್ಲೋ, ಇಎಂಐನಲ್ಲೊ…