ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.
ಹೌದು, ಶ್ರೀಕಾಂತ್ ಜಿಕ್ಖರ್ರವರು ಭಾರತದ ಅತಿ ಹೆಚ್ಚಿನ ವಿದ್ಯಾರ್ಹತೆಯುಳ್ಳ ವ್ಯಕ್ತಿಯಾಗಿ ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಅನ್ನು ಹೊಂದಿದ್ದಾರೆ. ಎಮ್. ಬಿ. ಬಿ. ಎಸ್ ಮತ್ತು ಎಮ್. ಡಿ. ಇಂದ ಶುರು ಮಾಡಿದ ಇವರು ಎಲ್. ಎಲ್. ಬಿ ಮಾಡಿ ಕಾನೂನನ್ನು ಕೂಡ ಓದಿದ್ದಾರೆ. ನಂತರ ಅಂತಾರಾಷ್ಟ್ರೀಯ ಕಾನೂನಿನಲ್ಲಿ ಸ್ನಾತಕೋತ್ತರ ಪದವಿ(ಎಲ್. ಎಲ್. ಎಮ್) ಯನ್ನು ಪಡೆಯುತ್ತಾರೆ. ಹಾಗೂ ಇವರು ಬಿಸ್ನೆಸ್ ಆಡಳಿತ ಮತ್ತು ಪತ್ರಿಕೋದ್ಯಮದಲ್ಲಿಯು ಮಾಸ್ಟರ್ಸ್ ಅನ್ನು ಹೊಂದಿದ್ದಾರೆ .

ಎಂ. ಎ. ಸಾರ್ವಜನಿಕ ಆಡಳಿತ ,
ಎಂ. ಎ.ಸಮಾಜ ಶಾಸ್ತ್ರ ,
ಎಂ. ಎ. ಅರ್ಥ ಶಾಸ್ತ್ರ ,
ಎಂ. ಎ. ಸಂಸ್ಕೃತ,
ಎಂ. ಎ. ಇತಿಹಾಸ,
ಎಂ. ಎ. ಆಂಗ್ಲ ಸಾಹಿತ್ಯ ,
ಎಂ. ಎ. ತತ್ವ ಶಾಸ್ತ್ರ ,
ಎಂ. ಎ.ರಾಜ್ಯ ಶಾಸ್ತ್ರ ,
ಎಂ. ಎ.ಪ್ರಾಚೀನ ಭಾರತೀಯ ಇತಿಹಾಸ ,
ಸಂಸ್ಕೃತಿ ಮತ್ತು ಪುರಾತನ ಶಾಸ್ತ್ರ ,
ಎಂ. ಎ.ಮನೋವಿಜ್ಞಾನ . ಮತ್ತು ಇವರು ಯಾವುದೇ ಪದವಿಗಿಂತ ಉನ್ನತ ಪದವಿಯಾದ ಡಿ.ಲಿಟ್ (ಡಾಕ್ಟರ್ ಆಫ್ ಲೆಟರ್ಸ್) ಅನ್ನು ಗಳಿಸಿದ ಹೆಗ್ಗಳಿಕೆಗೆ ಪಾತ್ರರಾಗುತ್ತಾರೆ. ಸಾಕಷ್ಟು ಪದವಿಗಳಲ್ಲಿ ಚಿನ್ನದ ಪದಕಗಳನ್ನು ಗಳಿಸಿದ ಇವರು ಹಲವಾರು ಪದವಿಗಳಲ್ಲಿ ಪ್ರಥಮ ಶ್ರೇಣಿ /ಪ್ರಥಮ ದರ್ಜೆಯನ್ನು ಗಳಿಸಿದ ಹೆಮ್ಮೆ ಇವರದಾಗಿದೆ.

1978 ರಲ್ಲಿ ಅವರು ಇಂಡಿಯನ್ ಸಿವಿಲ್ ಸರ್ವಿಸ್ ಪರೀಕ್ಷೆ (IPS)ಯನ್ನು ಬರೆದು,ಇಂಡಿಯನ್ ಸಿವಿಲ್ ಸರ್ವಿಸ್ (ಐಪಿಎಸ್) ನಲ್ಲಿ ಆಯ್ಕೆಯಾದರು. ನಂತರ ಐಪಿಎಸ್ ಹುದ್ದೆಗೆ ರಾಜಿನಾಮೆ ನೀಡಿ,ಮತ್ತೆ 1980ರಲ್ಲಿ ಭಾರತೀಯ ಸಿವಿಲ್ ಸರ್ವೀಸ್ ಪರೀಕ್ಷೆ (IAS) ಪರೀಕ್ಷೆಯನ್ನು ಬರೆದ್ರು.ಅದರಲ್ಲೂ ಕೂಡ ಐಎಎಸ್ ಆಫಿಸರ್ ಆಗಿ ಆಯ್ಕೆ ಆದ್ರು.ಆದರೆ ನಾಲ್ಕು ತಿಂಗಳ ನಂತರ ತಮ್ಮ ಐಎಎಸ್ ಹುದ್ದೆಗೂ ರಾಜೀನಾಮೆ ನೀಡಿದ್ರು.
1980ರಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ,ತಮ್ಮ ಮೊದಲ ಸಾರ್ವತ್ರಿಕ ಚುನಾವಣೆಯಲ್ಲೇ ಗೆದ್ದು, ತಮ್ಮ 26ನೇ ವಯಸ್ಸಿನಲ್ಲೇ,ಎಂಎಲ್ಎ ಆಗಿ ಆಯ್ಕೆ ಆದ್ರು.ಹಾಗೂ ಭಾರತದಲ್ಲೇ ಅತೀ ಕಿರಿಯ ವಯಸ್ಸಿನ ಎಂಎಲ್ಎ ಎಂಬ ಹೆಸರಿಗೆ ಪಾತ್ರರಾದ್ರು ಕೂಡ. ತರುವಾಯ ಆ ಸಮಯದಲ್ಲಿ 14 ಶಾಸಕಾಂಗಗಳನ್ನು ಹೊಂದಿರುವ ಸರ್ಕಾರದ, ಅತ್ಯಂತ ಶಕ್ತಿಶಾಲಿ ಸರ್ಕಾರಿ ಮಂತ್ರಿಯಾದರು.
ಭಾರತದಲ್ಲಿ 52,000 ಕ್ಕಿಂತ ಹೆಚ್ಚು ಪುಸ್ತಕಗಳನ್ನು ಹೊಂದಿರುವ ಗ್ರಂಥಾಲಯಗಳಲ್ಲಿ ಇವರದು ಒಂದು ವೈಯುಕ್ತಿಕ ಗ್ರಂಥಾಲಯ ಸೇರಿದೆ.ಶ್ರೀಕಾಂತ್ ಜಿಕ್ಖರ್ರವರು ಒಬ್ಬ ಶಿಕ್ಷಣತಜ್ಞ, ವರ್ಣಚಿತ್ರಕಾರ, ವೃತ್ತಿಪರ ಛಾಯಾಗ್ರಾಹಕ, ಮತ್ತು ನಟರು ಕೂಡ ಆಗಿದ್ದರುಇವರು 1992-98ರವರೆಗೆ ಭಾರತ ರಾಜ್ಯಾಂಗದ ಸದಸ್ಯರಾಗಿದ್ದರು. ಅವರು 1992 ರಲ್ಲಿ ನಾಗಪುರದಲ್ಲಿ ಸಂದಿಪಾನಿ ಎಂಬ ಶಾಲೆ ಸ್ಥಾಪಿಸಿದರು.ದುರದೃಷ್ಟಕರ ಎಂದರೆ ತಮ್ಮ 49ನೇ ವಯಸ್ಸಿನಲ್ಲಿ ಕಾರ್ ಅಪಘಾತವೊಂದರಲ್ಲಿ ತೀರಿಕೊಂಡ್ರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬಾರಿಯ ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ…
ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ. ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ…
ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.
ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ…
ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್ಬುಕ್…
ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ ಎ, ಸಿ, ಬಿ2 ವಿಟಮಿನ್ ಸಾಕಷ್ಟು ಪ್ರಮಾಣದಲ್ಲಿದೆ. ನಿಯಮಿತ ರೂಪದಲ್ಲಿ ಸೀತಾಫಲ ಸೇವನೆಯಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ಸೀತಾಫಲ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಗುಣವಿರುತ್ತದೆ. ಇದು ದೇಹದಲ್ಲಿರುವ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗದಿಂದಲೂ ಮುಕ್ತಿ ಪಡೆಯಬಹುದಾಗಿದೆ. ಸೀತಾಫಲದಲ್ಲಿರುವ ಕ್ಯಾಲೋರಿ…