ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.
ಅದರಲ್ಲೂ ದೇಹದಿಂದ ಹೊರಸೂಸುವ ವಾಸನೆ ಕಚೇರಿಯಲ್ಲಿ, ಬಸ್ಸಿನಲ್ಲಿ ಮದುವೆ ಸಮಾರಂಭಗಳಲ್ಲಿ ಹಿಂಸೆ ನೀಡಿದರೆ, ಕಂಕುಳ ದುರ್ವಾಸನೆಯಿಂದ ಬಹಳಷ್ಟು ಮಂದಿ ಮುಜುಗರಪಡುವುದು ಸಾಮಾನ್ಯವೇ ಆಗಿದೆ.
ಆದರೆ ಇವುಗಳಿಗೆಲ್ಲ ಸುಲಭ ಪರಿಹಾರ ಕಂಡುಕೊಳ್ಳುವ ಬದಲು. ರಸಾಯನಿಕಗಳಿಂದ ತಯಾರಿಸಿದ ವಸ್ತುಗಳ ಮೇಲೆ ಮಾರು ಹೋಗಿ ಹಣ ವ್ಯರ್ಥ ಮಾಡುವುದರ ಜೊತೆಗೆ ಚರ್ಮದ ಕಾಂತಿಯನ್ನು ಕಳೆದುಕೊಳ್ಳುವ ಅಪಾಯಗಳಿಗೂ ಸಿಲುಕುವ ಬದಲು ಸುಲಭ ಪರಿಹಾರಗಳನ್ನು ಹುಡುಕುವುದು ಉತ್ತಮ.
ಕಂಕುಳ ದುರ್ವಾಸನೆಯಿಂದ ಮುಕ್ತರಾಗಲು ನೀವು ಈ ಕೆಳಗೆ ನೀಡಿರುವ ಸುಲಭ ಪರಿಹಾರೋಪಾಯಗಳನ್ನು ಅನುಸರಿಸಿದರೆ ನೀವು ಸುಲಭವಾಗಿ ಪರಿಹಾರ ಕಂಡುಕೊಳ್ಳ ಬಹುದಾಗಿದೆ.
ಬೇಸಿಗೆ ಕಾಲದಲ್ಲಿ ದೇಹವಿಡೀ ಬೆವರುವುದು ಸಾಮಾನ್ಯವಾಗಿದೆ. ಇಂತಹ ಸಂದರ್ಭದಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಸಾಬೂನಿನಿಂದ ಹಾಗೂ ಉಗುರು ಬೆಚ್ಚಗಿನ ನೀರಿನಿಂದ ಸ್ನಾನ ಮಾಡಿ, ಮುಖ್ಯವಾಗಿ ಕಂಕುಳಗಳನ್ನು ಚೆನ್ನಾಗಿ ತೊಳೆಯಿರಿ. ಸಾಧ್ಯವಾದರೆ ದಿನಕ್ಕೆರಡು ಬಾರಿ ಸ್ನಾನ ಮಾಡುವುದರಿಂದ ಬ್ಯಾಕ್ಟೀರಿಯಾಗಳಿಂದ ದೂರವಿದ್ದು, ಶುಚಿತ್ವ ಹಾಗೂ ನೈರ್ಮಲ್ಯತೆಯನ್ನು ಕಾಪಾಡಿಕೊಳ್ಳಿ. ರೇಷ್ಮೆಯಂತಹ ನೈಸರ್ಗಿಕ ನಾರುಗಳಿಂದ ತಯಾರಿಸಲ್ಪಟ್ಟ ವಸ್ತ್ರಗಳು ತೇವಾಂಶವನ್ನು ಹೀರಿ ಚರ್ಮವನ್ನು ತೇವರಹಿತವಾಗಿಡುತ್ತದೆ.
ನಮ್ಮ ದೈನಂದಿನ ಆಹಾರಗಳಲ್ಲಿಯೂ ಸಾಧ್ಯವಾದಷ್ಟು ಮಟ್ಟಿಗೆ ಗಮನಹರಿಸಬೇಕಾಗಿದೆ. ಕಾಫೀ, ಖಾರದ ತಿನಿಸುಗಳು, ಕೊಬ್ಬಿನಾಂಶವಿರುವ ಆಹಾರಗಳು ಹಾಗೂ ಧೂಮಪಾನದಿಂದ ದೂರವಿದ್ದು, ಕಂಕುಳದ ವಾಸನೆಯಿಂದ ದೂರವಿರಬಹುದು.
ಡಿಯೋಡ್ರಂಟ್ ಬದಲು ಹತ್ತಿಯನ್ನು ಆ್ಯಪಲ್ ಸೈಡರ್ ವಿನೆಗರ್ ನಿಂದ ಒದ್ದೆ ಮಾಡಿ ಕಂಕುಳಕ್ಕೆ ಹಚ್ಚಿರಿ.
ಬ್ಯಾಕ್ಟೀರಿಯಾಗಳನ್ನು ಹೊಡೆದೋಡಿಸುವಲ್ಲಿ ನಿಂಬೆ ಹಣ್ಣು ಕೂಡಾ ಪ್ರಭಾವಶಾಲಿಯಾಗಿದೆ. ನಿಂಬೆ ಹಣ್ಣು ನ್ನು ಎರಡು ಭಾಗ ಮಾಡಿ, ಒಂದು ಭಾಗವನ್ನು ಕಂಕುಳಕ್ಕೆ ಉಜ್ಜಿ ಅದರ ರಸವು ಕಂಕುಳದಲ್ಲಿಯೇ ಒಣಗಲು ಬಿಡಿ. ಸಂಪೂರ್ಣವಾಗಿ ಒಣಗಿದ ನಂತರ ಸ್ನಾನ ಮಾಡಿ. ಕಂಕುಳದ ವಾಸನೆ ಸಂಪೂರ್ಣವಾಗಿ ಮಾಯವಾಗುವ ತನಕ ಪ್ರತಿದಿನಕ್ಕೊಂದು ಬಾರಿ ಮಾಡಿರಿ.
ಬ್ಯಾಕ್ಟೀರಿಯಾಗಳನ್ನು ಶಮನ ಮಾಡುವುದರಲ್ಲಿ ನಮ್ಮ ಪರಿಸರದಲ್ಲಿ ಸಾಮಾನ್ಯವಾಗಿ ಲಭ್ಯವಿರುವ ತುಳಸಿ ಮತ್ತು ಬೇವು ಬಹಳ ಪರಿಣಾಮಕಾರಿಯಾಗಿದೆ. ಸ್ವಲ್ಪ ತುಳಸಿ ಹಾಗೂ ಬೇವಿನ ಸೊಪ್ಪನ್ನು ಅರೆದು ಪೇಸ್ಟ್ ತರ ಮಾಡಿ ಕಂಕುಳಗಳಿಗೆ ಹಚ್ಚಿರಿ. ಸ್ವಲ್ಪ ಸಮಯದ ನಂತರ ಸ್ನಾನ ಮಾಡಿ. ಇದನ್ನು ವಾರಕ್ಕೆ ಮೂರು ಸಲ ಮಾಡಿದಲ್ಲಿ ಪರಿಣಾಮ ಕಾಣಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ. ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್…
ಬಿಜೆಪಿ ವಲಯದಿಂದ ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಅಲ್ಲದೇ, ಅಥಣಿ ಮಾಜಿ ಶಾಸಕ ಲಕ್ಷ್ಮಣ್ ಸವದಿಗೂ ಕೂಡ ಸಚಿವ ಸ್ಥಾನ ಸಿಕ್ಕಿರೋದು ವಿಶೇಷ. 1.ಗೋವಿಂದ ಕಾರಜೋಳ: ಮುಧೋಳ್, ಬಾಗಲಕೋಟೆ, 2.ಅಶ್ವಥ್ ನಾರಾಯಣ: ಮಲ್ಲೇಶ್ವರಂ, ಬೆಂಗಳೂರು3.ಲಕ್ಷ್ಮಣ ಸವದಿ: ಅಥಣಿ ಮಾಜಿ ಶಾಸಕ 4.ಕೆ.ಎಸ್ ಈಶ್ವರಪ್ಪ: ಶಿವಮೊಗ್ಗ5.ಆರ್ ಅಶೋಕ್: ಪದ್ಮನಾಭನಗರ, 6.ಜಗದೀಶ್ ಶೆಟ್ಟರ್: ಧಾರವಾಡ ಸೆಂಟ್ರಲ್, (ಹುಬ್ಬಳ್ಳಿ- ಧಾರವಾಡ)7 ಶ್ರೀರಾಮುಲು: ಮೊಳಕಾಲ್ಮೂರು, ಚಿತ್ರದುರ್ಗ 8. ಸುರೇಶ್ ಕುಮಾರ್: ರಾಜಾಜಿನಗರ9.ಸಿ.ಟಿ ರವಿ: ಚಿಕ್ಕಮಗಳೂರು …
ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ. ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ…
ಕೃಷ್ಣ ಲೀಲಾ ಖ್ಯಾತಿಯ ನಟಿ ಮಯೂರಿಯವರು ಇಂದು ತನ್ನ ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೃಷ್ಣ ಲೀಲಾ ಸಿನಿಮಾ ಮೂಲಕ ಖ್ಯಾತ ಹೊಂದಿದ್ದ ನಟಿ ಮಯೂರಿ ಅವರು ಇಂದು ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುದಿನದ ಗೆಳೆಯ ಅರುಣ್ ಅವರ ಜೊತೆ ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ಇಂದು ಮದುವೆಯಾಗಿದ್ದಾರೆ. ಅರುಣ್ ಮತ್ತು ಮಯೂರಿ ಸುಮಾರು 10 ವರ್ಷಗಳಿಂದ ಪ್ರೀತಿ ಮಾಡುತ್ತಿದ್ದು, ಇಂದು ಕುಟುಂಬ ಒಪ್ಪಿಗೆಯ ಮೇರೆಗೆ…
ಪ್ರೀತಿ ಕುರುಡು ಅಂತಾರೆ. ಪ್ರೀತಿಯಲ್ಲಿ ವಯಸ್ಸು, ಜಾತಿ ಇದ್ಯಾವುದೂ ಪ್ರಮುಖ ಆಗುವುದಿಲ್ಲ. ಈ ತಾರಾ ಜೋಡಿಗಳಲ್ಲಿ ಪತಿಗಿಂತ ಪತ್ನಿಯರೇ ವಯಸಲ್ಲಿ ದೊಡ್ಡವರು.
ಮನುಷ್ಯತ್ವ ಮರೆತು ಮಂಗವನ್ನು ಹಗ್ಗದಿಂದ ಮರಕ್ಕೆ ಕಟ್ಟಿ ಬಡಿಗೆಯಿಂದ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದ ಆರೋಪಿ ಪವನ್ ಬಂಗಾರ್ ಗೆ ಕೋರ್ಟ್ ಎರಡು ಬಾರಿ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.