ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.
ಅದರಲ್ಲೂ ದೇಹದಿಂದ ಹೊರಸೂಸುವ ವಾಸನೆ ಕಚೇರಿಯಲ್ಲಿ, ಬಸ್ಸಿನಲ್ಲಿ ಮದುವೆ ಸಮಾರಂಭಗಳಲ್ಲಿ ಹಿಂಸೆ ನೀಡಿದರೆ, ಕಂಕುಳ ದುರ್ವಾಸನೆಯಿಂದ ಬಹಳಷ್ಟು ಮಂದಿ ಮುಜುಗರಪಡುವುದು ಸಾಮಾನ್ಯವೇ ಆಗಿದೆ.
ಆದರೆ ಇವುಗಳಿಗೆಲ್ಲ ಸುಲಭ ಪರಿಹಾರ ಕಂಡುಕೊಳ್ಳುವ ಬದಲು. ರಸಾಯನಿಕಗಳಿಂದ ತಯಾರಿಸಿದ ವಸ್ತುಗಳ ಮೇಲೆ ಮಾರು ಹೋಗಿ ಹಣ ವ್ಯರ್ಥ ಮಾಡುವುದರ ಜೊತೆಗೆ ಚರ್ಮದ ಕಾಂತಿಯನ್ನು ಕಳೆದುಕೊಳ್ಳುವ ಅಪಾಯಗಳಿಗೂ ಸಿಲುಕುವ ಬದಲು ಸುಲಭ ಪರಿಹಾರಗಳನ್ನು ಹುಡುಕುವುದು ಉತ್ತಮ.
ಕಂಕುಳ ದುರ್ವಾಸನೆಯಿಂದ ಮುಕ್ತರಾಗಲು ನೀವು ಈ ಕೆಳಗೆ ನೀಡಿರುವ ಸುಲಭ ಪರಿಹಾರೋಪಾಯಗಳನ್ನು ಅನುಸರಿಸಿದರೆ ನೀವು ಸುಲಭವಾಗಿ ಪರಿಹಾರ ಕಂಡುಕೊಳ್ಳ ಬಹುದಾಗಿದೆ.
ಬೇಸಿಗೆ ಕಾಲದಲ್ಲಿ ದೇಹವಿಡೀ ಬೆವರುವುದು ಸಾಮಾನ್ಯವಾಗಿದೆ. ಇಂತಹ ಸಂದರ್ಭದಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಸಾಬೂನಿನಿಂದ ಹಾಗೂ ಉಗುರು ಬೆಚ್ಚಗಿನ ನೀರಿನಿಂದ ಸ್ನಾನ ಮಾಡಿ, ಮುಖ್ಯವಾಗಿ ಕಂಕುಳಗಳನ್ನು ಚೆನ್ನಾಗಿ ತೊಳೆಯಿರಿ. ಸಾಧ್ಯವಾದರೆ ದಿನಕ್ಕೆರಡು ಬಾರಿ ಸ್ನಾನ ಮಾಡುವುದರಿಂದ ಬ್ಯಾಕ್ಟೀರಿಯಾಗಳಿಂದ ದೂರವಿದ್ದು, ಶುಚಿತ್ವ ಹಾಗೂ ನೈರ್ಮಲ್ಯತೆಯನ್ನು ಕಾಪಾಡಿಕೊಳ್ಳಿ. ರೇಷ್ಮೆಯಂತಹ ನೈಸರ್ಗಿಕ ನಾರುಗಳಿಂದ ತಯಾರಿಸಲ್ಪಟ್ಟ ವಸ್ತ್ರಗಳು ತೇವಾಂಶವನ್ನು ಹೀರಿ ಚರ್ಮವನ್ನು ತೇವರಹಿತವಾಗಿಡುತ್ತದೆ.
ನಮ್ಮ ದೈನಂದಿನ ಆಹಾರಗಳಲ್ಲಿಯೂ ಸಾಧ್ಯವಾದಷ್ಟು ಮಟ್ಟಿಗೆ ಗಮನಹರಿಸಬೇಕಾಗಿದೆ. ಕಾಫೀ, ಖಾರದ ತಿನಿಸುಗಳು, ಕೊಬ್ಬಿನಾಂಶವಿರುವ ಆಹಾರಗಳು ಹಾಗೂ ಧೂಮಪಾನದಿಂದ ದೂರವಿದ್ದು, ಕಂಕುಳದ ವಾಸನೆಯಿಂದ ದೂರವಿರಬಹುದು.
ಡಿಯೋಡ್ರಂಟ್ ಬದಲು ಹತ್ತಿಯನ್ನು ಆ್ಯಪಲ್ ಸೈಡರ್ ವಿನೆಗರ್ ನಿಂದ ಒದ್ದೆ ಮಾಡಿ ಕಂಕುಳಕ್ಕೆ ಹಚ್ಚಿರಿ.
ಬ್ಯಾಕ್ಟೀರಿಯಾಗಳನ್ನು ಹೊಡೆದೋಡಿಸುವಲ್ಲಿ ನಿಂಬೆ ಹಣ್ಣು ಕೂಡಾ ಪ್ರಭಾವಶಾಲಿಯಾಗಿದೆ. ನಿಂಬೆ ಹಣ್ಣು ನ್ನು ಎರಡು ಭಾಗ ಮಾಡಿ, ಒಂದು ಭಾಗವನ್ನು ಕಂಕುಳಕ್ಕೆ ಉಜ್ಜಿ ಅದರ ರಸವು ಕಂಕುಳದಲ್ಲಿಯೇ ಒಣಗಲು ಬಿಡಿ. ಸಂಪೂರ್ಣವಾಗಿ ಒಣಗಿದ ನಂತರ ಸ್ನಾನ ಮಾಡಿ. ಕಂಕುಳದ ವಾಸನೆ ಸಂಪೂರ್ಣವಾಗಿ ಮಾಯವಾಗುವ ತನಕ ಪ್ರತಿದಿನಕ್ಕೊಂದು ಬಾರಿ ಮಾಡಿರಿ.
ಬ್ಯಾಕ್ಟೀರಿಯಾಗಳನ್ನು ಶಮನ ಮಾಡುವುದರಲ್ಲಿ ನಮ್ಮ ಪರಿಸರದಲ್ಲಿ ಸಾಮಾನ್ಯವಾಗಿ ಲಭ್ಯವಿರುವ ತುಳಸಿ ಮತ್ತು ಬೇವು ಬಹಳ ಪರಿಣಾಮಕಾರಿಯಾಗಿದೆ. ಸ್ವಲ್ಪ ತುಳಸಿ ಹಾಗೂ ಬೇವಿನ ಸೊಪ್ಪನ್ನು ಅರೆದು ಪೇಸ್ಟ್ ತರ ಮಾಡಿ ಕಂಕುಳಗಳಿಗೆ ಹಚ್ಚಿರಿ. ಸ್ವಲ್ಪ ಸಮಯದ ನಂತರ ಸ್ನಾನ ಮಾಡಿ. ಇದನ್ನು ವಾರಕ್ಕೆ ಮೂರು ಸಲ ಮಾಡಿದಲ್ಲಿ ಪರಿಣಾಮ ಕಾಣಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಿಚ್ಚ ಸುದೀಪ್ ಅವರು ಮಕ್ಕಳಿಗೆ ಸ್ಕೂಲ್ ಶೂ ತೊಡಿಸಿ ತಮ್ಮಲ್ಲಿರುವ ಸಾಮಾಜಿಕ ಕಳಕಳಿಯನ್ನು ತೋರಿದ್ದಾರೆ. ಇಂದು ಕೆಂಗೇರಿಯ ಸರ್ಕಾರಿ ಶಾಲಾ ಮಕ್ಕಳಿಗೆ ಕಿಚ್ಚಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮಕ್ಕಳಿಗೆ ಶೂ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶೂ ವಿತರಣೆ ಕಾರ್ಯಕ್ರಮಕ್ಕೆ ಸುದೀಪ್ ಅಭಿಮಾನಿಗಳು ಸುದೀಪ್ ಅವರನ್ನು ಆಹ್ವಾನ ಮಾಡಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಕಿಚ್ಚ ಸುದೀಪ್ ಅವರು ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಶೂ ಮತ್ತು ಸಾಕ್ಸ್…
ಇದು ಭಾರತದ ಜೈಪುರ್ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು,…
ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪ ಹೆಚ್ಚದಾಗ ಜನರು ತಂಪುಪಾನೀಯಗಳ ಮೊರೆ ಹೋಗುವುದು ಸಹಜ. ಆದರೆ ಆರೋಗ್ಯದ ದೃಷ್ಟಿಯಿಂದ ಎಳನೀರಿನ ಸೇವನೆ ಅತಿ ಉತ್ತಮ ಎಂದು ವೈಜ್ಞಾನಿಕವಾಗಿಯೇ ತಿಳಿದಿರುವ ವಿಷಯ. ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ. ಇದರ ಸೇವನೆಯಿಂದ ದೇಹಕ್ಕೆ ಆರೋಗ್ಯ ನೀಡುವುದಲ್ಲದೇ,ಫಿಟ್ನೆಸ್ ಗೂ ಇದು ಉಪಯೋಗಕರವಾಗಿದೆ. ಗರ್ಭಿಣಿ ಮಹಿಳೆ ಇದನ್ನು ನಿಯಮಿತವಾಗಿ ಸೇವಿಸಿದರೆ ಸುಂದರ ಹಾಗೂ ಸ್ವಾಸ್ಥ್ಯ ಮಗು ಹುಟ್ಟಲಿದೆ. ಈ…
ಕುರುಕ್ಷೇತ್ರ ಚಿತ್ರಕ್ಕೆ ಅಂತೂ ಚಾಲನೆ ಸಿಕ್ಕಿದೆ. ದರ್ಶನ್ ದುರ್ಯೋಧನನಾಗಿ ಬರಲಿದ್ದಾರೆ ಎನ್ನುವ ಮಾತೀಗ ನಿಜವಾಗಿದೆ. ಮುನಿರತ್ನ ನಿರ್ಮಾಣದ ಈ ಸಿನಿಮಾ ಯಾವಾಗ ಕೆಲಸ ಸೆಟ್ಟೇರಲಿದೆ ಎನ್ನುವ ಕುತೂಹಲ ಸಿನಿಪ್ರಿಯರನ್ನು ಕಾಡುತ್ತಿತ್ತು. ಮಲ್ಟಿ ಸ್ಟಾರ್ ಸಿನಿಮಾ ನಿಜಕ್ಕೂ ತಯಾರಾಗುತ್ತಾ ಅನ್ನುವ ಪ್ರಶ್ನೆ ಹಲವರಿಗಿತ್ತು. ಆ ಎಲ್ಲಾ ಪ್ರಶ್ನೆಗಳಿಗೂ ಮುನಿರತ್ನ ತಮ್ಮ ಕೆಲಸದ ಮುಖಾಂತರವೇ ಉತ್ತರ ಕೊಟ್ಟಿದ್ದಾರೆ.
ಬೆಂಗಳೂರು: ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು. ಅತ್ಯಂತ ಕಡಿಮೆ. ಹಣದಲ್ಲಿ ಭಾರಿ ಮೊತ್ತದ. ಅಪಘಾತ ವಿಮೆಯನ್ನು ಪರಿಚಯಿಸಿದೆ. ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠೆ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ 1 ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ. ಹತ್ತಾರು. ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು ಕೂಡಲೇ ಈ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ನಿಮ್ಮ ಹತ್ತಿರದ. ಅಂಚೆ ಕಚೇರಿಗೆ ತೆರಳಿ…
ಸಿಎಂ ಅಮೆರಿಕ ಪ್ರವಾಸಕ್ಕೆ ತೆರಳಿದ್ದು ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಆಷಾಢದ ಮೊದಲ ದಿನವೇ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾದಂತೆ ಕಾಣುತ್ತಿದೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಒಟ್ಟು 10 ಶಾಸಕರು ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಜಿಂದಾಲ್ಗೆ ಭೂಮಿ ನೀಡಿದ್ದನ್ನು ನೆಪವಾಗಿಟ್ಟುಕೊಂಡು ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಸಂಖ್ಯಾಬಲ 78ಕ್ಕೆ ಕುಸಿದಿದೆ. ಇತ್ತ ಮೂರು…