KSRTC

ಕಂಡಕ್ಟರಿಲ್ಲದ KSRTC BUS – ಎಲ್ಲಿ ಹೋದ ಕಂಡಕ್ಟರ್

245

ಕಂಡಕ್ಟರಿಲ್ಲದ ಕೆಎಸ್ಆರ್ಟಿಸಿ bus

ವಿರಾಜಪೇಟೆಯಿಂದ ಮೈಸೂರಿಗೆ ಪ್ರಯಾಣ ಹೊರಟೆ. ಸುಖಕರ ಹಾಗು ಸುರಕ್ಷಿತ ಪ್ರಯಾಣಕ್ಕೆ KSRTC ಬೆಸ್ಟ್. ಅಂದ ಮಾತ್ರಕ್ಕೆ ಬಸ್ ಹತ್ತಿ ಕಿಟಕಿಯ ಆಸನವನ್ನೇ ಆರಿಸಿ ಕುಳಿತುಕೊಂಡೆ. ನಾಲ್ಕೈದು ನಿಮಿಷದ ನಿಲುಗಡೆಯ ನಂತರ ಚಾಲಕ ಬಸ್ ಚಲಾಯಿಸಿದ. ಸಾಮಾನ್ಯವಾಗಿ ಬಸ್ ತಲುಪಿಸುವುದು ಚಾಲಕನಾದರೂ ಪ್ರಯಾಣಿಕರನ್ನು ನಿಭಾಯಿಸುವುದು ನಿರ್ವಾಹಕರು ತಾನೆ? ಅದೆ ನಮ್ಮ ಕಂಡಕ್ಟರ್.

ಬಸ್ 500 ಮೀಟರ್ ಮುಂದೆ ತಲುಪಿತು. ಪ್ರಯಾಣಿಕರೆಲ್ಲರೂ ಮೊಬೈಲ್, ಮಾತುಕತೆಗಳಲ್ಲಿ ನಿರತರಾಗಿದ್ದಾರೆ. ಆಸನಗಳು ಭರ್ತಿಯಾದ ಬಸ್ಸಿನಲ್ಲಿ ಕಂಡಕ್ಟರ್ ಇಲ್ಲವೆಂದು ಯಾರಿಗೂ ಭಾಸವಾಗಲಿಲ್ಲ.
ಸಾರ್ ಕಂಡಕ್ಟರ್ ಇಲ್ಲ ಎಂದು ಯುವಕನೊಬ್ಬ ಕೇಕೆ ಹಾಕಿದ. ಕೇಕೆ ಚಾಲಕನ ಕಿವಿಗೆ ಕೇಳದಿದ್ದರೂ ಕೇಳಿದ ಪ್ರಯಾಣಿಕರೆಲ್ಲರೂ ದಬ್ಬಿಬ್ಬಾಗಿ ಪರಸ್ಪರ ಮುಖ ನೋಡಿ ನಗು ಶುರುಮಾಡಿದರು. ಚಾಲಕನಿಗೆ ವಿಷಯದ ಪರಿವೇ ಇಲ್ಲ. ಪಟ್ಟಣದಲ್ಲಿ ವಾಹನಗಳ‌ ದಟ್ಟಣೆ ಇರುವುದರಿಂದ ನಿಧಾನವಾಗಿ ಚಲಾಯುಸುತ್ತಿದ್ದಾನೆ. ಎಲ್ಲಿಯಾದರೂ ಸ್ಟೋಪ್ ಮಾಡಬೇಕಾದರೆ ಕಂಡಕ್ಟರ್ ನ ಪೀಪಿಯ ಪೀ….. ಶಬ್ಧ ಕೇಳಬೇಕಲ್ಲವೇ..!?

ಹಿಂದಿನಿಂದ ಬಂದ ಯುವಕನೊಬ್ಬ ಚಾಲಕನ ಬಳಿ ತೆರಳಿ ಕಂಡಕ್ಟರ್ ಇಲ್ಲ ಎಂದು ಜೋರಾಗಿ ಕೂಗಿದ. ತಟ್ಟನೆ ಹಿಂದೆ ತಿರುಗಿದೆ ಚಾಲಕ ನಗುತ್ತಾ ಬಸ್ ಬದಿಗೆ ನಿಲ್ಲಿಸಿದ. ಕತ್ತು ತಿರುಗಿಸಿ ಪ್ರಯಾಣಿಕರೊಂದಿಗೆ
ಎಲ್ಲಿ ಹೋದ ಇವ ? ಎಂದು ಕೇಳಿದ. ಹ್ನೇ…. ಕಾಲ್ ಮಾಡಿ ನೋಡು ಎಂದರು ಪ್ರಯಾಣಿಕರು. ನನ್ನತ್ರ ನಂಬರ್ ಇಲ್ಲ ಎಂದ. ಕೇಳಿದ ಪ್ರಯಾಣಿಕರಿಗೆ ಇದೇನೋ ಹಾಸ್ಯ ನಾಟಕದಂತೆ. ಹಾಗಾದ್ರೆ ಸ್ವಲ್ಪ ವೈಟ್ ಮಾಡಿ ಕಂಡಕ್ಟರ್ ಈಕಡೆ ಕಾಲ್ ಮಾಡ್ತಾನೆ ಎಂದರು ಪ್ರಯಾಣಿಕರು. ಇಲ್ಲ ಅವನತ್ರ ನನ್ನ ನಂಬರೂ ಇಲ್ಲಾರೀ ಎಂದನು ಚಾಲಕ.
ನಾವಿಬ್ಬರೂ ಈ ಬಸ್ಸಲ್ಲಿ ಹೊಸಬರು, ಇವತ್ತು ಬೆಳಿಗ್ಗೆ ನೇಮಕವಾಗಿದ್ದಷ್ಟೆ. ಪರಿಚಯವಾಗಲು ಬಿಡುವು ಸಿಗಲಿಲ್ಲ. ಪ್ರಯಾಣಿಕರಿಗೆ ಟಿಕೆಟ್ ಇಲ್ಲದೆ ಮೈಸೂರು ತಲುಪಬಹುದೆಂಬ ಆಸೆಯೇನೋ ಎಲ್ಲರೂ ಫುಲ್ ಖುಷಿಯಲ್ಲಿ.

ತಕ್ಷಣ ಹಿಂದಿನಿಂದ ಜೋರು ಹಾರ್ನ್ ಶಬ್ದ. ತಿರುಗಿ ನೋಡಿದಾಗ ಅತಿವೇಗದಿಂದ ಬಂದ ಆಟೋದಿಂದ ನಗುತ್ತಾ ಇಳಿದು ಬಸ್ಸತ್ತಿದ ಕಂಡಕ್ಟರ್ ಮಾಮ. ಏನಿದ್ದರೂ ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.

Shafi Anvaari
Kodagarahalli

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ರೈಲಿನ ಪ್ರತಿ ಕಂಪಾರ್ಟ್‌ಮೆಂಟ್‌ ಮೇಲಿರುವ ಈ ಐದು ಡಿಜಿಟ್‌ ನಂಬರ್‌’ನ ಹಿಂದಿರುವ ರಹಸ್ಯ ಏನ್ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್‌ನ ಪ್ರತಿ ಕಂಪಾರ್ಟ್‌ಮೆಂಟ್‌ನ ಮೇಲೆ ಐದು ಡಿಜಿಟ್‌ ಹೊಂದಿರುವ ಒಂದು ನಂಬರ್‌ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್‌ ನಂಬರ್‌ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್‌ ಏನು..? ಯಾಕೆ ಈ ನಂಬರ್‌ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…? ರೈಲಿನ ಪ್ರತಿ ಕಂಪಾರ್ಟ್‌ಮೆಂಟ್‌ ಮೇಲೆಯೂ ಐದು ಡಿಜಿಟ್‌ನ ಈ ನಂಬರ್‌ ಇರುವುದು ಏಕೆ ಗೊತ್ತಾ..? ರೈಲಿನ ಪ್ರತಿ ಕಂಪಾರ್ಟ್‌ಮೆಂಟ್‌ ಮೇಲೆಯೂ…

  • ಜ್ಯೋತಿಷ್ಯ

    ದೇವಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಮಾರ್ಚ್, 2019) ನಿಮ್ಮ ಸ್ನೇಹಿತರು ಮತ್ತು ಸಂಬಂಧಿಗಳ ಮೇಲೆ ನಿಮ್ಮ ಅಭಿಪ್ರಾಯ ಹೇರುವುದು ಅವರನ್ನು ಅನಗತ್ಯವಾಗಿ…

  • ಜೀವನಶೈಲಿ

    ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಿದ್ರೆ ಏನಾಗುತ್ತೆ..?ಅವರಿಗಿಂತ ಚಿಕ್ಕವರನ್ನು ಮದುವೆ ಆಗಬಹುದೇ..?ತಿಳಿಯಲು ಈ ಲೇಖನ ಓದಿ…

    ಎಲ್ಲರಿಗು ಗೊತ್ತಿರುವಂತೆ ನಮ್ಮ ಸಂಸ್ಕೃತಿಯ ಪ್ರಕಾರ ಮದುವೆ ಆಗುವ ಹುಡುಗಿ ಹುಡುಗನಿಗಿಂತ ಚಿಕ್ಕವಳಿರಬೇಕು. ಆದರೆ ಇತ್ತೀಚಿಗೆ ನಡೆದ ರಿಸೆರ್ಚ್ ನ ಪ್ರಕಾರ ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಲು ಇಷ್ಟ ಪಡ್ತಾರಂತೆ.

  • inspirational

    ತಾನು’ಮುಟ್ಟಾಳ ಅಲ್ಲ’ಎಂದು ಸಾಬೀತು ಪಡಿಸಿದ ಮನೋಜ್..! ಮನೋಜ್ ಗೆದ್ದ ಮೊತ್ತ ಎಷ್ಟು.?

    ಕುಟುಂಬದ ಆರ್ಥಿಕ ಸಂಕಷ್ಟವನ್ನು ತೀರಿಸಿಕೊಳ್ಳಲು ಕೆಲವರು ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮಕ್ಕೆ ಬರುತ್ತಾರೆ. ಸಮಾಜಕ್ಕೆ ಏನಾದರೂ ಒಳಿತು ಮಾಡುವ ಉದ್ದೇಶದಿಂದ ಕೆಲವರು ಹಾಟ್ ಸೀಟ್ಮೇಲೆ ಕೂರುತ್ತಾರೆ. ವಿದ್ಯಾಭ್ಯಾಸಕ್ಕೆ ಸಹಾಯ ಆಗಲಿ ಎಂದೂ ಕೆಲವರು ಪುನೀತ್ ರಾಜ್ ಕುಮಾರ್  ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಂಥದ್ರಲ್ಲಿ, ಇವರೆಲ್ಲರಿಗಿಂತಲೂ ಕೊಂಚ ವಿಭಿನ್ನವಾಗಿ ಕಂಡಿದ್ದು ಮನೋಜ್ ಎಂಬ ಯುವಕ. ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಗೆದ್ದ ಹಣದಿಂದ ತಂದೆಗೆ ಸಹಾಯ ಮಾಡಬೇಕು ಎಂಬ ಇಚ್ಛೆಏನೋ ಮನೋಜ್ ಗಿದೆ. ಆದ್ರೆ,ಅದಕ್ಕಿಂತ ಹೆಚ್ಚಾಗಿ ತಾನು ಮುಟ್ಟಾಳ ಅಲ್ಲ ಎಂಬುದನ್ನ…

  • inspirational, ಸುದ್ದಿ

    ಗಾಂಧಿಜಿ ಪ್ರತಿಮೆಯ ಮುಂದೆ ಧರಣಿಗೆ ಕುಳಿತ ಕಾಂಗ್ರೆಸ್ ಶಾಸಕರು….!

    ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್‌ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ‌ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….

  • ಕಾನೂನು

    ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

    ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.