ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಂಡಕ್ಟರಿಲ್ಲದ ಕೆಎಸ್ಆರ್ಟಿಸಿ bus

ವಿರಾಜಪೇಟೆಯಿಂದ ಮೈಸೂರಿಗೆ ಪ್ರಯಾಣ ಹೊರಟೆ. ಸುಖಕರ ಹಾಗು ಸುರಕ್ಷಿತ ಪ್ರಯಾಣಕ್ಕೆ KSRTC ಬೆಸ್ಟ್. ಅಂದ ಮಾತ್ರಕ್ಕೆ ಬಸ್ ಹತ್ತಿ ಕಿಟಕಿಯ ಆಸನವನ್ನೇ ಆರಿಸಿ ಕುಳಿತುಕೊಂಡೆ. ನಾಲ್ಕೈದು ನಿಮಿಷದ ನಿಲುಗಡೆಯ ನಂತರ ಚಾಲಕ ಬಸ್ ಚಲಾಯಿಸಿದ. ಸಾಮಾನ್ಯವಾಗಿ ಬಸ್ ತಲುಪಿಸುವುದು ಚಾಲಕನಾದರೂ ಪ್ರಯಾಣಿಕರನ್ನು ನಿಭಾಯಿಸುವುದು ನಿರ್ವಾಹಕರು ತಾನೆ? ಅದೆ ನಮ್ಮ ಕಂಡಕ್ಟರ್.

ಬಸ್ 500 ಮೀಟರ್ ಮುಂದೆ ತಲುಪಿತು. ಪ್ರಯಾಣಿಕರೆಲ್ಲರೂ ಮೊಬೈಲ್, ಮಾತುಕತೆಗಳಲ್ಲಿ ನಿರತರಾಗಿದ್ದಾರೆ. ಆಸನಗಳು ಭರ್ತಿಯಾದ ಬಸ್ಸಿನಲ್ಲಿ ಕಂಡಕ್ಟರ್ ಇಲ್ಲವೆಂದು ಯಾರಿಗೂ ಭಾಸವಾಗಲಿಲ್ಲ.
ಸಾರ್ ಕಂಡಕ್ಟರ್ ಇಲ್ಲ ಎಂದು ಯುವಕನೊಬ್ಬ ಕೇಕೆ ಹಾಕಿದ. ಕೇಕೆ ಚಾಲಕನ ಕಿವಿಗೆ ಕೇಳದಿದ್ದರೂ ಕೇಳಿದ ಪ್ರಯಾಣಿಕರೆಲ್ಲರೂ ದಬ್ಬಿಬ್ಬಾಗಿ ಪರಸ್ಪರ ಮುಖ ನೋಡಿ ನಗು ಶುರುಮಾಡಿದರು. ಚಾಲಕನಿಗೆ ವಿಷಯದ ಪರಿವೇ ಇಲ್ಲ. ಪಟ್ಟಣದಲ್ಲಿ ವಾಹನಗಳ ದಟ್ಟಣೆ ಇರುವುದರಿಂದ ನಿಧಾನವಾಗಿ ಚಲಾಯುಸುತ್ತಿದ್ದಾನೆ. ಎಲ್ಲಿಯಾದರೂ ಸ್ಟೋಪ್ ಮಾಡಬೇಕಾದರೆ ಕಂಡಕ್ಟರ್ ನ ಪೀಪಿಯ ಪೀ….. ಶಬ್ಧ ಕೇಳಬೇಕಲ್ಲವೇ..!?
ಹಿಂದಿನಿಂದ ಬಂದ ಯುವಕನೊಬ್ಬ ಚಾಲಕನ ಬಳಿ ತೆರಳಿ ಕಂಡಕ್ಟರ್ ಇಲ್ಲ ಎಂದು ಜೋರಾಗಿ ಕೂಗಿದ. ತಟ್ಟನೆ ಹಿಂದೆ ತಿರುಗಿದೆ ಚಾಲಕ ನಗುತ್ತಾ ಬಸ್ ಬದಿಗೆ ನಿಲ್ಲಿಸಿದ. ಕತ್ತು ತಿರುಗಿಸಿ ಪ್ರಯಾಣಿಕರೊಂದಿಗೆ
ಎಲ್ಲಿ ಹೋದ ಇವ ? ಎಂದು ಕೇಳಿದ. ಹ್ನೇ…. ಕಾಲ್ ಮಾಡಿ ನೋಡು ಎಂದರು ಪ್ರಯಾಣಿಕರು. ನನ್ನತ್ರ ನಂಬರ್ ಇಲ್ಲ ಎಂದ. ಕೇಳಿದ ಪ್ರಯಾಣಿಕರಿಗೆ ಇದೇನೋ ಹಾಸ್ಯ ನಾಟಕದಂತೆ. ಹಾಗಾದ್ರೆ ಸ್ವಲ್ಪ ವೈಟ್ ಮಾಡಿ ಕಂಡಕ್ಟರ್ ಈಕಡೆ ಕಾಲ್ ಮಾಡ್ತಾನೆ ಎಂದರು ಪ್ರಯಾಣಿಕರು. ಇಲ್ಲ ಅವನತ್ರ ನನ್ನ ನಂಬರೂ ಇಲ್ಲಾರೀ ಎಂದನು ಚಾಲಕ.
ನಾವಿಬ್ಬರೂ ಈ ಬಸ್ಸಲ್ಲಿ ಹೊಸಬರು, ಇವತ್ತು ಬೆಳಿಗ್ಗೆ ನೇಮಕವಾಗಿದ್ದಷ್ಟೆ. ಪರಿಚಯವಾಗಲು ಬಿಡುವು ಸಿಗಲಿಲ್ಲ. ಪ್ರಯಾಣಿಕರಿಗೆ ಟಿಕೆಟ್ ಇಲ್ಲದೆ ಮೈಸೂರು ತಲುಪಬಹುದೆಂಬ ಆಸೆಯೇನೋ ಎಲ್ಲರೂ ಫುಲ್ ಖುಷಿಯಲ್ಲಿ.

ತಕ್ಷಣ ಹಿಂದಿನಿಂದ ಜೋರು ಹಾರ್ನ್ ಶಬ್ದ. ತಿರುಗಿ ನೋಡಿದಾಗ ಅತಿವೇಗದಿಂದ ಬಂದ ಆಟೋದಿಂದ ನಗುತ್ತಾ ಇಳಿದು ಬಸ್ಸತ್ತಿದ ಕಂಡಕ್ಟರ್ ಮಾಮ. ಏನಿದ್ದರೂ ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.
Shafi Anvaari
Kodagarahalli
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.
ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ. ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು.. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್…
ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ. ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(23 ಅಕ್ಟೋಬರ್, 2019) : ಗರ್ಭಿಣಿಯರಿಗೆ ಉತ್ತಮ ದಿನವಲ್ಲ. ನೀವು ನಡೆಯುವಾಗ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…
ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅನಾರೋಗ್ಯದ ನೆಪವೊಡ್ಡಿ ಅಂತಿಮ ದರ್ಶನಕ್ಕೆ ಆಗಮಿಸದೇ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಸಂಸದೆ ರಮ್ಯಾ ವಿರುದ್ಧ ಮತ್ತೆ ಮಂಡ್ಯ ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಮಾಡಲು ಮಂಡ್ಯ ಬೇಕು. ಆದರೆ, ಮಂಡ್ಯ ಜನತೆಯ ಕಷ್ಟ-ಸುಖದಲ್ಲಿ ರಮ್ಯಾ ಭಾಗಿಯಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಮಂಡ್ಯದ ಮಾಜಿ ಸಂಸದರಾಗಿರುವ ರಮ್ಯಾ ಯೋಧನ ಕುಟುಂಬದವರಿಗೆ ಸಾಂತ್ವನ ಹೇಳಿಲ್ಲ…