ಸುದ್ದಿ

ಕಂಡಕ್ಟರ್‌ನಿಂದ ಬಸ್ಸಲ್ಲೇ ಸಂಗೀತ ಸುರಿಮಳೆ – ಯಾದಗಿರಿಯ ಪರಶುರಾಮ್ ಈಗ ಪಬ್ಲಿಕ್ ಹೀರೋ……

83

ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ.

ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್‌ಟೈನ್‌ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್‍ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್ ಹಿಡ್ಕೊಂಡು ಹಾಡೋಕೆ ಶುರು ಮಾಡ್ತಾರೆ.

ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹಂದಿಗನೂರಿನವರಾದ ಪರಶುರಾಮ್, ಕಳೆದ ಎಂಟು ವರ್ಷದಿಂದ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಪರಶುರಾಮ್‍ಗೆ ಶಾಲಾ ದಿನಗಳಿಂದಲೂ ಹಾಡು ಹೇಳೋ ಹುಚ್ಚು. ಹೀಗಾಗಿ ಇದೀಗ ಇಲಾಖೆಯ ಅನುಮತಿ ಪಡೆದು ಬಸ್ಸಲ್ಲೂ ಗಾಯನ ಮುಂದುವರಿಸಿದ್ದಾರೆ.

ಅಂದ ಹಾಗೇ ಪರಶುರಾಮ್ ಎಲ್ಲೂ ಹೋಗಿ ಸಂಗೀತ ಕಲಿತಿಲ್ಲ. ಆದರೂ ಶೃತಿ, ರಾಗ, ಲಯ ತಪ್ಪದಂತೆ ಹಾಡಿ ನಿತ್ಯ ನೂರಾರು ಪ್ರಯಾಣಿಕರನ್ನು ರಂಜಿಸುತ್ತಾರೆ. ಈ ಮೂಲಕ ಅಭಿಮಾನಿಗಳನ್ನೂ ಗಳಿಸಿಕೊಂಡಿದ್ದಾರೆ. ಈ ಭಾಗದಲ್ಲಿ ನಿತ್ಯ ಸಂಚರಿಸೋ ಸರಕಾರಿ ನೌಕರರು, ವಿದ್ಯಾರ್ಥಿಗಳು ತಮ್ಮ ಒತ್ತಡ ಕಡಿಮೆ ಮಾಡಿಕೊಳ್ಳಲು ಈ ಬಸ್ ಹತ್ತುವುದಾಗಿ ಪ್ರಯಾಣಿಕರೊಬ್ಬರು ಹೇಳಿದ್ದಾರೆ.

ಒಟ್ಟಿನಲ್ಲಿ ಪರಶುರಾಮ್ ತನ್ನ ಗಾಯನದ ಮೂಲಕ ಪ್ರಯಾಣಿಕರನ್ನು ತನ್ನತ್ತ ಸೆಳೆಯುತ್ತಿದ್ದಾರೆ. ವೃತ್ತಿಯ ಜೊತೆಗೆ ತನ್ನ ಹವ್ಯಾಸ ಮುಂದುವರಿಸುತ್ತಾ ಎಲ್ಲರಿಗೂ ಮಾದರಿಯಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಈ ಪುಟ್ಟ ಬಾಲಕನ ಹೃದಯ ಈಗ ಆ ಮೊಬೈಲ್‌ನಲ್ಲಿದೆ..?

    ನಾವೆಲ್ಲಾ ಬ್ಯಾಟರಿ ಚಾಲಿತ ಬೈಕ್​ಗಳನ್ನು ಹಾಗೂ ಕಾರುಗಳನ್ನು ನೋಡಿದ್ದೇವೆ. ಆದ್ರೆ, ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಹೌದು ಇದು ನಿಜಕ್ಕೂ ಹೌಹಾರುವಂತಹ ವಿಷಯ. 4 ವರ್ಷದ ಬಾಲಕನಿಗೆ ಬ್ಯಾಟರಿ ಮೂಲಕ ಹೃದಯದ ಬಡಿತ ನಡೆಯುತ್ತಿರುವ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ. ನಿಜಕ್ಕೂ ಇದೊಂದು ರೀತಿಯಲ್ಲಿ ವಿಚಿತ್ರ ಅನಿಸಿದ್ರೂ ಸತ್ಯ. ದಾಂಡೇಲಿ ಮೂಲದ ಪ್ರಕಾಶ ಹಾಗೂ ಅಶ್ವಿನಿ ದಂಪತಿಯ 4 ವರ್ಷದ ಬಾಲಕನಿಗೆ ಇಂತಹದೊಂದು ಆಪರೇಷನ್ ಮಾಡಲಾಗಿದೆ. ನಾಲ್ಕು ವರ್ಷದ ಈ ಬಾಲಕ ಹೃದಯ ಸಂಬಂದಿ…

  • ಸುದ್ದಿ

    ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡು ರಸ್ತೆ ಮಧ್ಯದಲ್ಲಿ ಅಮಾನವೀಯ ರೀತಿ ವರ್ತಿಸಿದ ಮಹಿಳೆ.

    ಕೊರೊನಾ ಮಹಾಮಾರಿ ದೇಶ ಅದರಲ್ಲೂ ರಾಜ್ಯವನ್ನು ವಕ್ಕರಿಸಿದ ಬಳಿಕ ಅನೇಕ ಅಮಾನವೀಯ ಘಟನೆಗಳು ಬೆಳಕಿಗೆ ಬಂದಿವೆ. ಕೆಲವೊಂದು ಮಾನವೀಯ ಕೆಲಸಗಳು ಕೂಡ ನಡೆದಿವೆ. ಈ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಪೌರಕಾರ್ಮಿಕರ ಮೇಲೆ ಮಹಿಳೆಯೊಬ್ಬರು ಅಮಾನವೀಯವಾಗಿ ವರ್ತಿಸಿರುವುದು ಬೆಳಕಿಗೆ ಬಂದಿದೆ. ಹೌದು. ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡ ಮಹಿಳೆ ಅವರನ್ನು ನಿಂದಿಸಿದ್ದಲ್ಲದೇ, ಬಾಟಲಿಯಲ್ಲಿ ನೀರು ತುಂಬಿಸಿ ನಂತರ ಅದನ್ನು ರಸ್ತೆ ಮಧ್ಯದಲ್ಲಿಟ್ಟು ಬಂದಿದ್ದಾರೆ. ಈ ಮೂಲಕ ಅಮಾನವೀಯತೆಯನ್ನು ಪ್ರದರ್ಶಿಸಿದ್ದಾರೆ. ಇದನ್ನು ಅಲ್ಲೆ ಇದ್ದ ಕೆಲವರು ತಮ್ಮ ಮೊಬೈಲ್…

  • ಸುದ್ದಿ

    ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿ, ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತ ಶ್ವಾನ.

    ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…

  • inspirational

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(12 ನವೆಂಬರ್, 2018) ಅನಿಯಂತ್ರಿತ ಕೋಪಸಾಮಾನ್ಯವಾಗಿ ಎಲ್ಲರನ್ನೂ, ಹಾಗೂ ವಿಶೇಷವಾಗಿ ಕೋಪಗೊಂಡವರನ್ನು ಹೆಚ್ಚು ಘಾಸಿಗೊಳಿಸುತ್ತದೆ….

  • ಸುದ್ದಿ

    ಕೇವಲ 48 ಸೆಕೆಂಡ್ ಗಳಲ್ಲಿ ‌ʼಗಿನ್ನಿಸ್ʼ ದಾಖಲೆ ಪಡೆದ ಮುಂಬೈಕರ್

    ಈಜುಕೊಳಗಳ ರೂಬಿಕ್ ಕ್ಯೂಬ್ ಗಳಲ್ಲಿ ಕಂಡು ಬರುವ ಸಮಸ್ಯೆಯನ್ನು ಬರೀ 48 ಸೆಕೆಂಡ್ ಗಳಲ್ಲಿ ಪರಿಹಾರ ಹುಡುಕಿದ ಮುಂಬೈಕರ್ ಒಬ್ಬರು ಗಿನ್ನಿಸ್ ದಾಖಲೆ ಬರೆದಿದ್ದಾನೆ. ಮುಂಬೈನ 19 ವರ್ಷದ ಚಿನ್ಮಯಿ ಪ್ರಭು, ಈಜುಕೊಳದ ನೀರಿನ ಒಳಗಡೆ ಕೂತು 9 ರೂಬಿಕ್ ಕ್ಯೂಬ್ ಸಮಸ್ಯೆ ಗಳನ್ನು ಬರೀ 48 ಸೆಕೆಂಡ್ ಗಳಲ್ಲಿ ಬಗೆಹರಿಸಿರೋದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದೆ. ಪಿರಮಿಡ್ ಮಾದರಿಯಲ್ಲಿರುವ ರೂಬಿಕ್ ಕ್ಯೂಬ್ ಗಳಲ್ಲಿ ಸಮಸ್ಯೆಗಳು ಕಾಣಿಸಿಕೊಂಡ್ರೆ ಒಂದೆರಡು ದಿನ ಸಮಯ ಬೇಕಾಗುತ್ತದೆ. ಈ ಹಿಂದೆ ಜಾರ್ಜಿಯಾದಲ್ಲಿ 18…