ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.

ಕೆಂಡಸಂಪಿಗೆಯ ಮೂಲಕ ಎಲ್ಲರ ಮನಗೆದ್ದಿದ್ದ ನಾಯಕ “ವಿಕ್ಕಿ ವರುನ್” ಹಾಗೂ ಕಿರಿಕ್ ಪಾರ್ಟಿ ಸಿನಿಮಾದ “ಸಂಯುಕ್ತ ಹೆಗ್ಡೆ” ನಟಿಸಿರುವ *#ಕಾಲೇಜ್ ಕುಮಾರ್* ಟ್ರೈಲರ್ ಬಿಡುಗಡೆಯಾದ ಒಂದೇ ದಿನದಲ್ಲಿ 2 ಲಕ್ಷ ವೀಕ್ಷಣೆಗಳನ್ನು ಪಡೆದು ಮುನ್ನುಗ್ಗುತಿದೆ..

ಇದಕ್ಕಿಂತ ಹೆಚ್ಚಿನದು ಏನೆಂದರೆ ಬಾಲಿವುಡ್ ನ ಮೆಗಾ ಪ್ರಾಜೆಕ್ಟ್ ಎಂದೇ ಕರೆಯುತ್ತಿರುವ “ಪದ್ಮಾವತಿ” ಸಿನಿಮಾದ ಟ್ರೈಲರ್ ಯೂಟ್ಯೂಬ್ ನಲ್ಲಿ ಸತತವಾಗಿ ಟಾಪ್ 1 ಟ್ರೆಂಡ್ ನಲ್ಲಿ ಮುನ್ನುಗ್ಗುತಿತ್ತು.. ಆದರೆ ಈ ಓಟಕ್ಕೆ ನಮ್ಮ *”ಕಾಲೇಜ್ ಕುಮಾರ್”* ಚಿತ್ರದ ಟ್ರೈಲರ್ ಬ್ರೇಕ್ ಹಾಕಿ ನಂಬರ್ 1 ನಲ್ಲಿ ಟ್ರೆಂಡ್ ನಲ್ಲಿದೆ..

ಅಲೆಮಾರಿ ಚಿತ್ರವನ್ನು ನಿರ್ದೇಶನ ಮಾಡಿರುವ ಹರಿ ಸಂತೋಷ್ ಈ ಚಿತ್ರದ ನಿರ್ದೇಶನದ ಜವಬ್ದಾರಿಯನ್ನು ಹೊತ್ತಿದ್ದಾರೆ..ಈಗಾಗಲೇ ಜಾನ್ ಜಾನಿ ಜನಾರ್ದನ್ ಚಿತ್ರ ನಿರ್ಮಾಣ ಮಾಡಿರುವ “M R ಬ್ಯಾನರ್” ಅಡಿಯಲ್ಲಿ *L ಪದ್ಮನಾಭ* ರವರು ಈ ಸಿನಿಮಾ ವನ್ನು ನಿರ್ಮಾಣ ಮಾಡುತ್ತಿದ್ದಾರೆ.. ಸಿನಿಮಾದ ಮುಖ್ಯ ಭೂಮಿಕೆಯಲ್ಲಿ ರವಿಶಂಕರ್ ಹಾಗೂ ಶೃತಿ ರವರು ಕಾಣಿಸಿಕೊಂಡಿದ್ದಾರೆ.. *ಅರ್ಜುನ್ ಜನ್ಯ* ಮ್ಯೂಸಿಕ್ ನೀಡಿರುವ ಈ ಸಿನಿಮಾದ ಎಲ್ಲಾ ಹಾಡುಗಳು ಹಿಟ್ ಆಗಿ ಎಲ್ಲರ ಮನ ಗೆದ್ದಿದೆ.. ವಿಶೇಷ ಎಂದರೆ ಜೀ ಕನ್ನಡದ ಪ್ರಖ್ಯಾತ ಸಿಂಗಿಂಗ್ ಶೋ ಸರಿಗಮಪ ಖ್ಯಾತಿಯ ಸಂಜಿತ್ ಹೆಗ್ಡೆ ಈ ಚಿತ್ರದಲ್ಲಿ ಒಂದು ಹಾಡನ್ನು ಹಾಡಿದ್ದಾರೆ.. ಈ ಮೂಲಕ *L ಪದ್ಮನಾಭ* ರವರು ಹೊಸ ಪ್ರತಿಭೆಗಳಿಗೆ ಅವಕಾಶವನ್ನು ನೀಡಿದ್ದಾರೆ..

ಕಿರಿಕ್ ಪಾರ್ಟಿಯ ನಂತರ ಮತ್ತೊಂದು ಕಾಲೇಜ್ ಕತೆಯುಳ್ಳ ಸಿನಿಮಾ ಇದಾಗಿರುವುದರಿಂದ ಜನರಲ್ಲಿ ಕ್ಯೂರಿಯಾಸಿಟಿ ಯನ್ನು ಕ್ರಿಯೇಟ್ ಮಾಡಿದೆ.. ಸಿನಿಮಾ ಅತಿ ಶೀಘ್ರದಲ್ಲಿ ಬಿಡುಗಡೆ ಯಾಗುವುದೆಂದು ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡ ತಿಳಿಸಿದೆ.. ಹಾಡುಗಳು ಹಾಗೂ ಟ್ರೈಲರ್ ಮೂಲಕ ಹೊಸದೊಂದು ಹಿಟ್ ನೀಡುವ ಭರವಸೆಯ ಸಿನಿಮಾ ಎನಿಸಿಕೊಂಡಿರುವ ಕಾಲೇಜ್ ಕುಮಾರ್ ಚಿತ್ರತಂಡಕ್ಕೆ ಶುಭವಾಗಲಿ..

ಕನ್ನಡದಲ್ಲಿ ಅಂತ ಒಳ್ಳೆ ಸಿನಿಮಾ ಬರುವುದಿಲ್ಲ ಎನ್ನುವವರ ಬಾಯಿ ಮುಚ್ಚಿಸುವಂತಿದೆ “ಕಾಲೇಜ್ ಕುಮಾರ್” ಟ್ರೈಲರ್.. ಏನೇ ಆಗಲಿ ನಮ್ಮ ಕನ್ನಡದ ಸಿನಿಮಾ ಒಂದು ಬಾಲಿವುಡ್ ನವರಿಗೆ ಕಾಂಪಿಟೇಟರ್ ಆಗಿ ನಿಂತಿರುವುದು ನಮಗೆ ಹೆಮ್ಮೆಯೇ ಸರಿ..

ಸ್ಯಾಂಡಲ್ವುಡ್ ಸ್ಟಾರ್ ಗಳು ಈಗಾಗಲೇ ಟ್ರೈಲರ್ ನೋಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.. ನೀವು ಕೂಡ ಈ ಯೂತ್ ಫುಲ್ ಕಾಲೇಜ್ ಕತೆಯುಳ್ಳ ಸಿನಿಮಾದ ಅಧ್ಬುತ ಟ್ರೈಲರ್ ಅನ್ನು ಈ ಲಿಂಕ್ ಮೂಲಕ ಒಮ್ಮೆ ನೋಡಿ..

ಕನ್ನಡ ಸಿನಿಮಾವನ್ನು ಪ್ರೋತ್ಸಾಹಿಸಿ.. ಶೇರ್ ಮಾಡುವ ಮೂಲಕ ಇತರರಿಗೂ ತಿಳಿಯುವಂತೆ ಮಾಡಿ..
ಜೈ ಕರ್ನಾಟಕ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಳ್ಳಂಬೆಳಿಗ್ಗೆ ಸೆಲೆಬ್ರಿಟಿ ಒಬ್ಬರಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ. ಮಧ್ಯಾಹ್ನ ಫೇಸ್ ಬುಕ್ ಲೈವ್ ಗೆ ಬಂದು ಅದನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಅಂದ ಹಾಗೆ, ಆ ಸೆಲೆಬ್ರಿಟಿ ಸಿನಿಮಾದವರೇ ಅಥವಾ ರಾಜಕೀಯದವರೇ ಎನ್ನುವುದು ಕುತೂಹಲ ಮೂಡಿಸಿದೆ. ‘ಕುರುಕ್ಷೇತ್ರ’ ಸಿನಿಮಾದ ಆಡಿಯೋ ಸಂದರ್ಭದಲ್ಲಿ ದರ್ಶನ್ ಫೋಟೋ ಇರಲಿಲ್ಲ ಎಂಬ ಆರೋಪ ಅಭಿಮಾನಿಗಳಿಂದ ಕೇಳಿಬಂದಿತ್ತು. ಅಲ್ಲದೆ, ಇತ್ತೀಚೆಗೆ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ದರ್ಶನ್ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿದ್ದರು. ಇಂದು ಅವರು…
ಇಂದೋರ್ ನಲ್ಲಿ ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.
ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಪ್ರದಕ್ಷಿಣೆ ಹಾಕಬೇಕು? ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ. ಹಿಂದೂ ಪುರಾಣಗಳ ಪ್ರಕಾರ ದೇವರಿಗೆ ಹಾಕುವ ಪ್ರದಕ್ಷಿಣೆ ಬಗ್ಗೆ ಹಲವಾರು ಕಥೆಗಳಿವೆ. ಇವುಗಳಲ್ಲಿ ಶಿವ, ಗಣಪತಿ ಮತ್ತು ಕಾರ್ತೀಕೇಯನ ಕಥೆಯು ನಮ್ಮೆಲ್ಲರಿಗೆ ತಿಳಿದಿರುವಂತಾಗಿದೆ. ಶಿವ…
ಬೆಂಗಳೂರು ಮುದ್ದಿನಪಾಳ್ಯ ದ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಇಂದು ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಸ್ಪರ್ಧಿಗಳಾದ ಗೋವಿಂದೇಗೌಡ ಮತ್ತು ದಿವ್ಯಾ ಅವರ ನಿಶ್ಚಿತಾರ್ಥ ನೆರವೇರಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನ ಕ್ಯೂಟ್ ಕಪಲ್ ಗೋವಿಂದೇ ಗೌಡ ಹಾಗೂ ದಿವ್ಯಾಶ್ರೀ ಭಾನುವಾರ ಒಬ್ಬರನೊಬ್ಬರು ತಮ್ಮ ಉಂಗುರವನ್ನು ಬದಲಾಯಿಸಿಕೊಂಡಿದ್ದಾರೆ. ಇವರಿಬ್ಬರ ನಿಶ್ಚಿತಾರ್ಥ ಸರಳವಾಗಿ ನಡೆದಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸಂಬಂಧಿಕರು ಮಾತ್ರ ಆಗಮಿಸಿದ್ದರು. ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಸ್ಪರ್ಧಿಗಳಾಗಿದ್ದ ಗೋವಿಂದೇಗೌಡ ಮತ್ತು ದಿವ್ಯಾ ಸ್ನೇಹಿತರಾಗಿದ್ದರು….
ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದಲ್ಲಿಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು. ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು (ಪ್ರಥಮ) ಪಡೆದಿದ್ದಾರೆ. ಇವರು ಬೆಂಗಳೂರಿನ ಚೈತನ್ಯ ಟೆಕ್ನೋ…