ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.
ಕನ್ನಡ ಭಾಷೆಯು ಪ್ರಾಚೀನ ದ್ರಾವಿಡ ಭಾಷೆಗಳಲ್ಲಿ ಒಂದಾಗಿದ್ದು ಇದಕ್ಕೆ ಸುಮಾರು ಎರಡೂವರೆ ಸಾವಿರ ವರ್ಷಗಳ ಇತಿಹಾಸವಿದೆ. ದೇಶದ ಭಾಷೆಗಳಲ್ಲಿ ಕನ್ನಡ ಭಾಷೆಯೂ ಪ್ರಮುಖವಾಗಿದ್ದು ಇತ್ತೀಚೆಗೆ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರೆತಿದೆ. ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದಂತಹ ಭಾಷೆ ನಮ್ಮ ಕನ್ನಡ.
ಆದರೆ ಪ್ರಸ್ತುತ ಕನ್ನಡ ಭಾಷೆಯ ಸ್ಥಿತಿಗತಿಯನ್ನು ಗಮನಿಸುತ್ತಿದ್ದರೆ ಎಲ್ಲೋ ಒಂದು ಕಡೆ ನಮ್ಮ ಪರಭಾಷೆಯ ಮೇಲಿರುವ ವ್ಯಾಮೋಹದಿಂದ ನಮ್ಮ ತಾಯಿಯ ಸಮಾನದ ಕನ್ನಡ ಭಾಷೆಯು ಅಪಾಯದಂಚಿನಲ್ಲಿ ಸಿಕ್ಕಿ ಕೊಂಡಿದೆ. ಇಂದು ಯಾವುದೇ ಕ್ಷೇತ್ರದಲ್ಲಿ ನೋಡಿದರೂ ಅಲ್ಲಿ ಇಂಗ್ಲಿಷಿಗೆ ದೊರೆಯುವ ಪ್ರಾಮುಖ್ಯತೆ ಕನ್ನಡಕ್ಕೆ ದೊರೆತಿಲ್ಲ.
ಅನ್ಯ ರಾಜ್ಯಗಳಲ್ಲಿ ಅವರು ತಮ್ಮ ಮಾತೃಭಾಷೆಗೆ ಕೊಡುವ ಪ್ರಾಮುಖ್ಯತೆ ನಮ್ಮ ಕನ್ನಡಿಗರಿಗೆ ಇಲ್ಲ. ಹೊರ ರಾಜ್ಯದಿಂದ ಬಂದ ಕೆಲವರು ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಸುವಂತಹ ಅನೇಕ ಕಹಿ ಪ್ರಸಂಗಗಳು ದಿನ ಬೆಳಗಾದರೆ ನಮ್ಮ ಕಣ್ಣೆದುರು ನಡೆಯುತ್ತಲೇ ಇವೆ.
ಕನ್ನಡಿಗರು ಎಷ್ಟರ ಮಟ್ಟಿಗೆ ಭಾಷೆಯನ್ನು ದೂರ ಸರಿಸುತ್ತಿದ್ದಾರೆ, ಬೇರೆ ರಾಜ್ಯದವರು ಇಲ್ಲಿ ಬಂದು ನೆಲಸಿಯೂ ಕನ್ನಡ ಕಲಿಯುವ ಶ್ರಮ ನಿಮಗೆ ಬೇಡವೆಂದು ಕನ್ನಡಿಗರೇ ಅವರ ಭಾಷೆಯನ್ನು ಕಲಿತು ಅವರಿಗೆ ಸಹಕಾರ ಮಾಡುವಷ್ಟು ಪರ ಭಾಷಾಭಿಮಾನವುಳ್ಳವರು.
ಇಂದು ಕರ್ನಾಟಕದಲ್ಲಿ ಇತರೆ ಭಾಷೆಗಳಾದ ತಮಿಳು, ತೆಲುಗು, ಹಿಂದಿ, ಇಂಗ್ಲಿಷ್ ಭಾಷೆಗೆ ದೊರೆಯುತ್ತಿರುವ ಮಹತ್ವ ಕನ್ನಡಕ್ಕಿಲ್ಲ. ದಾರಿಯಲ್ಲಿ ಯಾರಾದರೂ ಅನ್ಯ ಭಾಷೆಯಲ್ಲಿ ಕೇಳಿದರೆ ಅವರಿಗೆ ಭಾಷೆ ತಿಳಿದಿದ್ದರೂ ಅವರು ತಮ್ಮ ಭಾಷೆಯಲ್ಲೇ ಉತ್ತರಿಸುವ ಭಾಷಾಭಿಮಾನಿಗಳು.
ಭಾರತದಲ್ಲಿ ಜಾತ್ಯತೀತ, ಭಾಷಾತೀತ, ರಾಷ್ಟ್ರದಂತೆ ಬದುಕಬೇಕು ನಿಜ. ಆದರೆ ಎಲ್ಲರಿಗೂ ಭಾಷಾಭಿಮಾನ ಮುಖ್ಯವಾಗಿ ಇರಬೇಕು. ಅನೇಕ ವರ್ಷಗಳ ಹಿಂದೆ ಸಾಮನ್ಯ ಭಾಷೆಗಳಲ್ಲಿ ಒಂದಾಗಿದ್ದ ಇಂಗ್ಲಿಷ್ ಇಂದು ಪ್ರಪಂಚದ ಪ್ರಮುಖ ಭಾಷೆಯಾಗಲು ಸಾಧ್ಯವಾಗುತ್ತಿರಲಿಲ್ಲ.
ಅಲ್ಲಿನ ದಾರ್ಶನಿಕರು ಸಾಹಿತಿಗಳು ಮತ್ತು ಇತರರ ಶ್ರಮದಿಂದ ಮಾತ್ರ ಇದು ಇಂದು ಪ್ರಮುಖ ಭಾಷೆಯಾಗಿದೆ. ಚೀನಾದಂತಹ ಶ್ರೀಮಂತ ದೇಶದಲ್ಲಿ ಇಂಗ್ಲಿಷ್ ತಿಳಿಯದವರೇ ಹೆಚ್ಚು. ಅಲ್ಲಿನ ಅನೇಕರಿಗೆ ಇಂಗ್ಲಿಷ್ ಭಾಷೆಯ ಗಂಧವೇ ತಿಳಿದಿಲ್ಲ. ಆದರೂ ಅದು ಅಭಿವೃದ್ಧಿ ಹೊಂದಿದ ರಾಷ್ಟ್ರ. ಇಂಗ್ಲಿಷ್ ಬೇಕು ಆದರೆ, ಅಗತ್ಯವಿದ್ದಲ್ಲಿ ಮಾತ್ರ.
ಅನಾವಶ್ಯಕವಾಗಿ ಇಂಗ್ಲಿಷ್ ಮಾತನಾಡುವುದರಿಂದ ಕೀರ್ತಿ ಹಚ್ಚುತ್ತದೆಂದು ಭಾವನೆಯಿಂದ ಇಂದು ಕನ್ನಡವನ್ನು ಕೀಳರಿಮೆಯ ದೃಷ್ಟಿಯಿಂದ ನೋಡುತ್ತಿರುವವರೆ ಹೆಚ್ಚು. ಇದರ ಉದ್ದೇಶ ಅನ್ಯ ಭಾಷೆಯಭಾಷೆಯನ್ನು ಸಹ ಪ್ರೀತಿಸಿ, ಗೌರವಿಸಿ, ಆದರೆ ಕನ್ನಡವನ್ನು ಬೆಳೆಸಬೇಕೆಂಬುದು.
ಕುವೆಂಪು ಅವರ ನುಡಿಯಂತೆ ‘ಎಲ್ಲಾದರು ಇರು ನೀ ಕನ್ನಡವಾಗಿರು’ ಎಂಬಂತೆ ಕನ್ನಡವನ್ನು ಪ್ರೀತಿಸೊಣ….ಕನ್ನಡವನ್ನು ಬೆಳೆಸೋಣ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಟ್ನಾದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಸುಂದರ ಹುಡುಗಿಯ ಫೋಟೋ ನೋಡಿದ್ದಾನೆ. ಆಕೆ ಸೌಂದರ್ಯಕ್ಕೆ ಸೋತು ಮೊದಲು ರಿಕ್ವೆಸ್ಟ್ ಕಳುಹಿಸಿದ್ದಾನೆ. ಹುಡುಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ. ನಿಧಾನವಾಗಿ ಇಬ್ಬರ ಮಧ್ಯೆ ಸ್ನೇಹ ಚಿಗುರಿದೆ. ನಂತ್ರ ಪ್ರೀತಿ ಶುರುವಾಗಿದೆ. ಇಬ್ಬರೂ ಹೊಸ ಪ್ರಪಂಚದಲ್ಲಿ ತೇಲಾಡಲು ಶುರು ಮಾಡಿದ್ದಾರೆ. ಗಂಟೆಗಟ್ಟಲೆ ಚಾಟ್ ಮಾಡ್ತಿದ್ದವರು ಹೊಸ ವರ್ಷ ಭೇಟಿಯಾಗಿ, ಮದುವೆಯಾಗುವ ನಿರ್ಧಾರ ಕೈಗೊಂಡಿದ್ದಾನೆ. ಹೊಸ ವರ್ಷದ ಮೊದಲ ದಿನ ಪಾರ್ಕ್ ಒಂದನ್ನು ನಿಗಧಿ ಮಾಡಿ ಅಲ್ಲಿ ಮೊದಲ ಭೇಟಿಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ….
ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ಈದ್ ಮಿಲಾದ್ ಪ್ರಯುಕ್ತ ನವಂಬರ್ 10 ರಂದು ಬೆಂಗಳೂರಿನಾದ್ಯಂತ ಮದ್ಯಬಂದ್ ಮಾಡಿ ಪೊಲೀಸ್ ಆಯುಕ್ತ ಆದೇಶ ಹೊರಡಿಸಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯಮಾರಟ ನಿಷೇಧ ಮಾಡಿ ಆದೇಶ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಇಂದು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಇದರಿಂದ ಎಲ್ಲರು ಸಂತೋಷದಿಂದ ಹಬ್ಬವನ್ನು ಆಚರಿಸಲಿ ಎಂಬ ಉದ್ದೇಶವಷ್ಟೇ. ಇದೇ ನವೆಂಬರ್ 10 ರಂದು ಭಾನುವಾರ ಬೆಳಗ್ಗೆ 6 ರಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆವರೆಗೂ ಮದ್ಯ…
ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ. ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್ಗೆ…
ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಅನ್ನುವುದು ಈಗ ಎಲ್ಲರಿಗು ಸಾಮಾನ್ಯವಾದ ವಿಷಯ ಇದಕ್ಕೆ ಎಲ್ಲರು ಹಾಸ್ಪಿಟಲ್ಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ ಮತ್ತು ಇನ್ನು ಸ್ವಲ್ಪ ಜನ ನಾಟಿ ಔಷದಿ ಪಡೆಯುತ್ತಾರೆ. ಆದರೆ ಇಲ್ಲಿದೆ ನೋಡಿ ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಇದಕ್ಕೆ ನೀವು ಜಾಸ್ತಿ ಏನು ಖರ್ಚು ಮಾಡಬೇಕಿಲ್ಲ. ಅದ್ಬುತವಾದ ಪಲ್ಯ ಮಾಡೊದು ಹೇಗೆ ಎಂದು ತಿಳಿಯಲು ಇದನ್ನೊಮ್ಮೆ ಓದಿ.ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು…
ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು. ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ…
ತೆರೆಯ ಮೇಲೆ ತಮ್ಮ ನಟನೆಯಿಂದ ಸಿನಿ ಪ್ರೇಕ್ಷಕರನ್ನು ನಗೆಗಡಲಿಗೆ ತೇಲಿಸಿದ ಜೀವವದು. ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡ ಚಲನಚಿತ್ರೋದ್ಯಮಕ್ಕೆ ಹೆಮ್ಮೆ ತಂದು ಕೊಟ್ಟ ಹಾಸ್ಯದಿಗ್ಗಜ ಇವರು. ತೆರೆಯ ಮೇಲೆ ಬಣ್ಣ ಹಚ್ಚಿದ್ದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಎಲ್ಲಿಲ್ಲದ ನಗು ಖುಷಿ ತಂದುಕೊಟ್ಟವರು. ಅವರ ನಟನೆಗೆ ಅವರೇ ಸರಿಸಾಟಿ. ಅವರು ಬೇರೆಯಾರು ಅಲ್ಲ. ನಮ್ಮ ನಿಮ್ಮೆಲ್ಲ ನೆಚ್ಚಿನ ಹಾಸ್ಯ ದಿಗ್ಗಜ ಬಿರಾದರ್ ಅವೆು. ಬಿರಾದಾರ್ ಅವರು ಸಿನಿಮಾಗಳಲಿ ಕೇವಲ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡರು, ಅವರ…