ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.
ಕನ್ನಡ ಭಾಷೆಯು ಪ್ರಾಚೀನ ದ್ರಾವಿಡ ಭಾಷೆಗಳಲ್ಲಿ ಒಂದಾಗಿದ್ದು ಇದಕ್ಕೆ ಸುಮಾರು ಎರಡೂವರೆ ಸಾವಿರ ವರ್ಷಗಳ ಇತಿಹಾಸವಿದೆ. ದೇಶದ ಭಾಷೆಗಳಲ್ಲಿ ಕನ್ನಡ ಭಾಷೆಯೂ ಪ್ರಮುಖವಾಗಿದ್ದು ಇತ್ತೀಚೆಗೆ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರೆತಿದೆ. ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದಂತಹ ಭಾಷೆ ನಮ್ಮ ಕನ್ನಡ.
ಆದರೆ ಪ್ರಸ್ತುತ ಕನ್ನಡ ಭಾಷೆಯ ಸ್ಥಿತಿಗತಿಯನ್ನು ಗಮನಿಸುತ್ತಿದ್ದರೆ ಎಲ್ಲೋ ಒಂದು ಕಡೆ ನಮ್ಮ ಪರಭಾಷೆಯ ಮೇಲಿರುವ ವ್ಯಾಮೋಹದಿಂದ ನಮ್ಮ ತಾಯಿಯ ಸಮಾನದ ಕನ್ನಡ ಭಾಷೆಯು ಅಪಾಯದಂಚಿನಲ್ಲಿ ಸಿಕ್ಕಿ ಕೊಂಡಿದೆ. ಇಂದು ಯಾವುದೇ ಕ್ಷೇತ್ರದಲ್ಲಿ ನೋಡಿದರೂ ಅಲ್ಲಿ ಇಂಗ್ಲಿಷಿಗೆ ದೊರೆಯುವ ಪ್ರಾಮುಖ್ಯತೆ ಕನ್ನಡಕ್ಕೆ ದೊರೆತಿಲ್ಲ.
ಅನ್ಯ ರಾಜ್ಯಗಳಲ್ಲಿ ಅವರು ತಮ್ಮ ಮಾತೃಭಾಷೆಗೆ ಕೊಡುವ ಪ್ರಾಮುಖ್ಯತೆ ನಮ್ಮ ಕನ್ನಡಿಗರಿಗೆ ಇಲ್ಲ. ಹೊರ ರಾಜ್ಯದಿಂದ ಬಂದ ಕೆಲವರು ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಸುವಂತಹ ಅನೇಕ ಕಹಿ ಪ್ರಸಂಗಗಳು ದಿನ ಬೆಳಗಾದರೆ ನಮ್ಮ ಕಣ್ಣೆದುರು ನಡೆಯುತ್ತಲೇ ಇವೆ.
ಕನ್ನಡಿಗರು ಎಷ್ಟರ ಮಟ್ಟಿಗೆ ಭಾಷೆಯನ್ನು ದೂರ ಸರಿಸುತ್ತಿದ್ದಾರೆ, ಬೇರೆ ರಾಜ್ಯದವರು ಇಲ್ಲಿ ಬಂದು ನೆಲಸಿಯೂ ಕನ್ನಡ ಕಲಿಯುವ ಶ್ರಮ ನಿಮಗೆ ಬೇಡವೆಂದು ಕನ್ನಡಿಗರೇ ಅವರ ಭಾಷೆಯನ್ನು ಕಲಿತು ಅವರಿಗೆ ಸಹಕಾರ ಮಾಡುವಷ್ಟು ಪರ ಭಾಷಾಭಿಮಾನವುಳ್ಳವರು.
ಇಂದು ಕರ್ನಾಟಕದಲ್ಲಿ ಇತರೆ ಭಾಷೆಗಳಾದ ತಮಿಳು, ತೆಲುಗು, ಹಿಂದಿ, ಇಂಗ್ಲಿಷ್ ಭಾಷೆಗೆ ದೊರೆಯುತ್ತಿರುವ ಮಹತ್ವ ಕನ್ನಡಕ್ಕಿಲ್ಲ. ದಾರಿಯಲ್ಲಿ ಯಾರಾದರೂ ಅನ್ಯ ಭಾಷೆಯಲ್ಲಿ ಕೇಳಿದರೆ ಅವರಿಗೆ ಭಾಷೆ ತಿಳಿದಿದ್ದರೂ ಅವರು ತಮ್ಮ ಭಾಷೆಯಲ್ಲೇ ಉತ್ತರಿಸುವ ಭಾಷಾಭಿಮಾನಿಗಳು.
ಭಾರತದಲ್ಲಿ ಜಾತ್ಯತೀತ, ಭಾಷಾತೀತ, ರಾಷ್ಟ್ರದಂತೆ ಬದುಕಬೇಕು ನಿಜ. ಆದರೆ ಎಲ್ಲರಿಗೂ ಭಾಷಾಭಿಮಾನ ಮುಖ್ಯವಾಗಿ ಇರಬೇಕು. ಅನೇಕ ವರ್ಷಗಳ ಹಿಂದೆ ಸಾಮನ್ಯ ಭಾಷೆಗಳಲ್ಲಿ ಒಂದಾಗಿದ್ದ ಇಂಗ್ಲಿಷ್ ಇಂದು ಪ್ರಪಂಚದ ಪ್ರಮುಖ ಭಾಷೆಯಾಗಲು ಸಾಧ್ಯವಾಗುತ್ತಿರಲಿಲ್ಲ.
ಅಲ್ಲಿನ ದಾರ್ಶನಿಕರು ಸಾಹಿತಿಗಳು ಮತ್ತು ಇತರರ ಶ್ರಮದಿಂದ ಮಾತ್ರ ಇದು ಇಂದು ಪ್ರಮುಖ ಭಾಷೆಯಾಗಿದೆ. ಚೀನಾದಂತಹ ಶ್ರೀಮಂತ ದೇಶದಲ್ಲಿ ಇಂಗ್ಲಿಷ್ ತಿಳಿಯದವರೇ ಹೆಚ್ಚು. ಅಲ್ಲಿನ ಅನೇಕರಿಗೆ ಇಂಗ್ಲಿಷ್ ಭಾಷೆಯ ಗಂಧವೇ ತಿಳಿದಿಲ್ಲ. ಆದರೂ ಅದು ಅಭಿವೃದ್ಧಿ ಹೊಂದಿದ ರಾಷ್ಟ್ರ. ಇಂಗ್ಲಿಷ್ ಬೇಕು ಆದರೆ, ಅಗತ್ಯವಿದ್ದಲ್ಲಿ ಮಾತ್ರ.
ಅನಾವಶ್ಯಕವಾಗಿ ಇಂಗ್ಲಿಷ್ ಮಾತನಾಡುವುದರಿಂದ ಕೀರ್ತಿ ಹಚ್ಚುತ್ತದೆಂದು ಭಾವನೆಯಿಂದ ಇಂದು ಕನ್ನಡವನ್ನು ಕೀಳರಿಮೆಯ ದೃಷ್ಟಿಯಿಂದ ನೋಡುತ್ತಿರುವವರೆ ಹೆಚ್ಚು. ಇದರ ಉದ್ದೇಶ ಅನ್ಯ ಭಾಷೆಯಭಾಷೆಯನ್ನು ಸಹ ಪ್ರೀತಿಸಿ, ಗೌರವಿಸಿ, ಆದರೆ ಕನ್ನಡವನ್ನು ಬೆಳೆಸಬೇಕೆಂಬುದು.
ಕುವೆಂಪು ಅವರ ನುಡಿಯಂತೆ ‘ಎಲ್ಲಾದರು ಇರು ನೀ ಕನ್ನಡವಾಗಿರು’ ಎಂಬಂತೆ ಕನ್ನಡವನ್ನು ಪ್ರೀತಿಸೊಣ….ಕನ್ನಡವನ್ನು ಬೆಳೆಸೋಣ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು.
ಮದುವೆಯ ದಿನ ವರನ ಕುಟುಂಬದವರು ನಗದು, ಒಡವೆ ಸೇರಿದಂತೆ ಒಂದು ಕೋಟಿ ಮೌಲ್ಯದ ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದರಿಂದ ಯುವತಿಯೊಬ್ಬಳು, ವೈದ್ಯನೊಂದಿಗೆ ನಿಗದಿಯಾಗಿದ್ದ ತನ್ನ ಮದುವೆಯನ್ನೇ ಸ್ಥಗಿತಗೊಳಿಸಿದ್ದಾಳೆ. ಡಾ. ರಾಶಿ ವರದಕ್ಷಿಣೆ ವಿರುದ್ಧ ಹೀಗೆ ಸಿಡಿದೆದ್ದ ವಧು.
ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್ಗೆ…
ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…
ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ ದಾಖಲೆ ಇಲ್ಲದ ಆದಾಯವನ್ನು…