News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಕರ್ನಾಟಕ

ಕನ್ನಡಿಗರಾಗಿ ನಮ್ಮ ಮಾತೃ ಭಾಷೆ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ?ಈ ಲೇಖನಿ ಓದಿ…

5347

ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.

ಕನ್ನಡ ಭಾಷೆಯು ಪ್ರಾಚೀನ ದ್ರಾವಿಡ ಭಾಷೆಗಳಲ್ಲಿ ಒಂದಾಗಿದ್ದು ಇದಕ್ಕೆ ಸುಮಾರು ಎರಡೂವರೆ ಸಾವಿರ ವರ್ಷಗಳ ಇತಿಹಾಸವಿದೆ. ದೇಶದ ಭಾಷೆಗಳಲ್ಲಿ ಕನ್ನಡ ಭಾಷೆಯೂ ಪ್ರಮುಖವಾಗಿದ್ದು ಇತ್ತೀಚೆಗೆ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರೆತಿದೆ. ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದಂತಹ ಭಾಷೆ ನಮ್ಮ ಕನ್ನಡ.

ಆದರೆ ಪ್ರಸ್ತುತ ಕನ್ನಡ ಭಾಷೆಯ ಸ್ಥಿತಿಗತಿಯನ್ನು ಗಮನಿಸುತ್ತಿದ್ದರೆ ಎಲ್ಲೋ ಒಂದು ಕಡೆ ನಮ್ಮ ಪರಭಾಷೆಯ ಮೇಲಿರುವ ವ್ಯಾಮೋಹದಿಂದ ನಮ್ಮ ತಾಯಿಯ ಸಮಾನದ ಕನ್ನಡ ಭಾಷೆಯು ಅಪಾಯದಂಚಿನಲ್ಲಿ ಸಿಕ್ಕಿ ಕೊಂಡಿದೆ. ಇಂದು ಯಾವುದೇ ಕ್ಷೇತ್ರದಲ್ಲಿ ನೋಡಿದರೂ ಅಲ್ಲಿ ಇಂಗ್ಲಿಷಿಗೆ ದೊರೆಯುವ ಪ್ರಾಮುಖ್ಯತೆ ಕನ್ನಡಕ್ಕೆ ದೊರೆತಿಲ್ಲ.

ಅನ್ಯ ರಾಜ್ಯಗಳಲ್ಲಿ ಅವರು ತಮ್ಮ ಮಾತೃಭಾಷೆಗೆ ಕೊಡುವ ಪ್ರಾಮುಖ್ಯತೆ ನಮ್ಮ ಕನ್ನಡಿಗರಿಗೆ ಇಲ್ಲ. ಹೊರ ರಾಜ್ಯದಿಂದ ಬಂದ ಕೆಲವರು ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಸುವಂತಹ ಅನೇಕ ಕಹಿ ಪ್ರಸಂಗಗಳು ದಿನ ಬೆಳಗಾದರೆ ನಮ್ಮ ಕಣ್ಣೆದುರು ನಡೆಯುತ್ತಲೇ ಇವೆ.

 

ಕನ್ನಡಿಗರು ಎಷ್ಟರ ಮಟ್ಟಿಗೆ ಭಾಷೆಯನ್ನು ದೂರ ಸರಿಸುತ್ತಿದ್ದಾರೆ, ಬೇರೆ ರಾಜ್ಯದವರು ಇಲ್ಲಿ ಬಂದು ನೆಲಸಿಯೂ ಕನ್ನಡ ಕಲಿಯುವ ಶ್ರಮ ನಿಮಗೆ ಬೇಡವೆಂದು ಕನ್ನಡಿಗರೇ ಅವರ ಭಾಷೆಯನ್ನು ಕಲಿತು ಅವರಿಗೆ ಸಹಕಾರ ಮಾಡುವಷ್ಟು ಪರ ಭಾಷಾಭಿಮಾನವುಳ್ಳವರು.

ಇಂದು ಕರ್ನಾಟಕದಲ್ಲಿ ಇತರೆ ಭಾಷೆಗಳಾದ ತಮಿಳು, ತೆಲುಗು, ಹಿಂದಿ, ಇಂಗ್ಲಿಷ್ ಭಾಷೆಗೆ ದೊರೆಯುತ್ತಿರುವ ಮಹತ್ವ ಕನ್ನಡಕ್ಕಿಲ್ಲ. ದಾರಿಯಲ್ಲಿ ಯಾರಾದರೂ ಅನ್ಯ ಭಾಷೆಯಲ್ಲಿ ಕೇಳಿದರೆ ಅವರಿಗೆ ಭಾಷೆ ತಿಳಿದಿದ್ದರೂ ಅವರು ತಮ್ಮ ಭಾಷೆಯಲ್ಲೇ ಉತ್ತರಿಸುವ ಭಾಷಾಭಿಮಾನಿಗಳು.

ಭಾರತದಲ್ಲಿ ಜಾತ್ಯತೀತ, ಭಾಷಾತೀತ, ರಾಷ್ಟ್ರದಂತೆ ಬದುಕಬೇಕು ನಿಜ. ಆದರೆ ಎಲ್ಲರಿಗೂ ಭಾಷಾಭಿಮಾನ ಮುಖ್ಯವಾಗಿ ಇರಬೇಕು. ಅನೇಕ ವರ್ಷಗಳ ಹಿಂದೆ ಸಾಮನ್ಯ ಭಾಷೆಗಳಲ್ಲಿ ಒಂದಾಗಿದ್ದ ಇಂಗ್ಲಿಷ್ ಇಂದು ಪ್ರಪಂಚದ ಪ್ರಮುಖ ಭಾಷೆಯಾಗಲು ಸಾಧ್ಯವಾಗುತ್ತಿರಲಿಲ್ಲ.

 

ಅಲ್ಲಿನ ದಾರ್ಶನಿಕರು ಸಾಹಿತಿಗಳು ಮತ್ತು ಇತರರ ಶ್ರಮದಿಂದ ಮಾತ್ರ ಇದು ಇಂದು ಪ್ರಮುಖ ಭಾಷೆಯಾಗಿದೆ. ಚೀನಾದಂತಹ ಶ್ರೀಮಂತ ದೇಶದಲ್ಲಿ ಇಂಗ್ಲಿಷ್ ತಿಳಿಯದವರೇ ಹೆಚ್ಚು. ಅಲ್ಲಿನ ಅನೇಕರಿಗೆ ಇಂಗ್ಲಿಷ್ ಭಾಷೆಯ ಗಂಧವೇ ತಿಳಿದಿಲ್ಲ. ಆದರೂ ಅದು ಅಭಿವೃದ್ಧಿ ಹೊಂದಿದ ರಾಷ್ಟ್ರ. ಇಂಗ್ಲಿಷ್ ಬೇಕು ಆದರೆ, ಅಗತ್ಯವಿದ್ದಲ್ಲಿ ಮಾತ್ರ.

 

ಅನಾವಶ್ಯಕವಾಗಿ ಇಂಗ್ಲಿಷ್ ಮಾತನಾಡುವುದರಿಂದ ಕೀರ್ತಿ ಹಚ್ಚುತ್ತದೆಂದು ಭಾವನೆಯಿಂದ ಇಂದು ಕನ್ನಡವನ್ನು ಕೀಳರಿಮೆಯ ದೃಷ್ಟಿಯಿಂದ ನೋಡುತ್ತಿರುವವರೆ ಹೆಚ್ಚು. ಇದರ ಉದ್ದೇಶ ಅನ್ಯ ಭಾಷೆಯಭಾಷೆಯನ್ನು ಸಹ ಪ್ರೀತಿಸಿ, ಗೌರವಿಸಿ, ಆದರೆ ಕನ್ನಡವನ್ನು ಬೆಳೆಸಬೇಕೆಂಬುದು.

ಕುವೆಂಪು ಅವರ ನುಡಿಯಂತೆ ‘ಎಲ್ಲಾದರು ಇರು ನೀ ಕನ್ನಡವಾಗಿರು’ ಎಂಬಂತೆ ಕನ್ನಡವನ್ನು ಪ್ರೀತಿಸೊಣ….ಕನ್ನಡವನ್ನು ಬೆಳೆಸೋಣ…

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬ್ರಹ್ಮಾವರದಲ್ಲಿ ಮಹಾಮಳೆಯ ಅಬ್ಬರ : ಜನಜೀವನ ಅಸ್ತವ್ಯಸ್ತ…..!

    ಬ್ರಹ್ಮಾವರ ತಾಲೂಕಿನೆಲ್ಲೆಡೆ ಕುಂಭ ದ್ರೋಣ ಮಳೆಯ ಅಬ್ಬರ ಜೋರಾಗಿದ್ದು, ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಯಿಂದಾಗಿ ಹಲವೆಡೆಗಳಲ್ಲಿ ನೆರೆ ಆವರಿಸಿದೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದರೆ, ಅನೇಕ ಕಡೆಗಳಲ್ಲಿ ಗದ್ದೆ, ಅಡಿಕೆ, ತೆಂಗಿನ ತೋಟ ಸಹಿತ ಕೃಷಿ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಪರಿಸರದ ಮಟಪಾಡಿ, ನೀಲಾವರ, ನಂದನಕುದ್ರು, ರಾಮನಕುದ್ರು, ಬಲ್ಜಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು ಇದರಿಂದಾಗಿ ವಾಹನ ಸವಾರರು ಕೂಡ ಸಮಸ್ಯೆಯನ್ನು ಅನುಭವಿಸಿದರು. ಅನೇಕ ಕಡೆಗಳಲ್ಲಿ ಭತ್ತದ ಕೃಷಿ ಬೆಳೆದಿರುವ ಗದ್ದೆ ಜಲಾವೃತಗೊಂಡಿದ್ದರೆ, ಅಡಿಕೆ ತೋಟಗಳಲ್ಲಿ ನೀರು ನಿಂತಿದೆ….

  • ಸುದ್ದಿ

    ವಿದ್ಯಾರ್ಥಿನಿ ವರಲಕ್ಷ್ಮಿ ಸೋಲಿಗೆ ಕಾರಣವಾಯಿತು ಅವರ ಟೀಚರ್ ಮಾಡಿದ ಎಡವಟ್ಟು…!

    ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…

  • inspirational

    ಭಾರತದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಪರಿಚಯ – ಈ ದಿನ ಭಾರತದ ಇತಿಹಾಸದ ಮಹತ್ವದ ದಿನ

    ಭಾರತದಲ್ಲಿ ಅಂಚೆ ವ್ಯವಸ್ಥೆಯ ಅಭಿವೃದ್ಧಿಯಲ್ಲಿ ಮಹತ್ವದ ಘಟ್ಟವೆಂದರೆ ಕೊಲ್ಕತ್ತಾದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಸ್ಥಾಪನೆ. ದಿನಾಂಕ: ಮಾರ್ಚ್ 31, 1855 ಸ್ಥಳ: Kolkata (ಆ ಕಾಲದಲ್ಲಿ ಕಲ್ಕತ್ತಾ)   ಕೊಲ್ಕತ್ತಾದ ಮೊದಲ ಪೋಸ್ಟ್ ಬಾಕ್ಸ್ ಪರಿಚಯ: ಆ ದಿನ, ಸಾರ್ವಜನಿಕರು ತಮ್ಮ ಪತ್ರಗಳನ್ನು ಸುಲಭವಾಗಿ ಕಳುಹಿಸಲು ಮೊದಲ ಬಾರಿಗೆ “ಪೋಸ್ಟ್ ಬಾಕ್ಸ್” ಅನ್ನು ಪರಿಚಯಿಸಲಾಯಿತು. ಇದಕ್ಕಿಂತ ಮೊದಲು, ಜನರು ತಮ್ಮ ಪತ್ರಗಳನ್ನು ನೇರವಾಗಿ ಅಂಚೆ ಕಚೇರಿಗೆ ನೀಡಬೇಕಾಗಿತ್ತು. ಇದರ ಮಹತ್ವ: ಸೌಲಭ್ಯ: ಜನರು ಯಾವಾಗ ಬೇಕಾದರೂ ಪೋಸ್ಟ್…

  • inspirational

    ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ

    ಬೇಸಿಗೆ ರಜೆಗಳು ಮಕ್ಕಳ ಜೀವನದಲ್ಲಿ ಅತ್ಯಂತ ಖುಷಿಯ ಕ್ಷಣಗಳು. ಶಾಲೆಯ ಒತ್ತಡದಿಂದ ದೂರವಾಗಿ, ಆಟ, ವಿಶ್ರಾಂತಿ, ಹೊಸ ವಿಷಯಗಳನ್ನು ಕಲಿಯುವ ಅವಕಾಶ ಈ ಸಮಯದಲ್ಲಿ ಸಿಗುತ್ತದೆ. ಆದರೆ, ಈ ಸಂತೋಷದ ಸಮಯದಲ್ಲಿ ಅಜಾಗರೂಕತೆ ಇದ್ದರೆ, ಅಪಾಯಗಳು ಕೂಡ ಸಂಭವಿಸಬಹುದು. ಆದ್ದರಿಂದ ರಜೆಗಳು ಆನಂದಕರವಾಗಿಯೇ ಇರಬೇಕು, ಅಪಾಯಕಾರಿಯಾಗಬಾರದು ಎಂಬುದು ಬಹಳ ಮುಖ್ಯ. ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ – ಬೇಸಿಗೆ ರಜೆಗಳಲ್ಲಿ ಮಕ್ಕಳು ಹೆಚ್ಚು ಸಮಯವನ್ನು ಹೊರಾಂಗಣದಲ್ಲಿ ಕಳೆಯುತ್ತಾರೆ. ಈ ಸಂದರ್ಭದಲ್ಲಿ ಕೆರೆಗಳು, ಬಾವಿಗಳು…

  • ಸುದ್ದಿ

    ‘ಮಿಸ್ ಸೌತ್ ಇಂಡಿಯಾ’ ಕಿರೀಟ ತನ್ನದಾಗಿಸಿಕೊಂಡ ಕಿರುತೆರೆ ನಟಿ ಕುಲವಧು ಧನ್ಯಾ….

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ. “ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ…