ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..

2500 ವರ್ಷಗಳ :-
ಇತಿಹಾಸ ಕನ್ನಡ ಭಾಷೆ ಎರಡೂವರೆ ಸಹಸ್ರಮಾನದಷ್ಟು ಹಳೆಯದು! 2500 ವರ್ಷಗಳ ಹಿಂದೇ ಕನ್ನಡ ಭಾಷೆಯ ಅಸ್ತಿತ್ವದಲ್ಲಿತ್ತು ಎಂದು ಸಾಬೀತಾಗಿದೆ.
ಕಾಲದಲ್ಲಿ ಅಂದರೆ ಕ್ರಿ.ಪೂ.4 ನಾಲ್ಕನೇ ಶತಮಾನದಲ್ಲಿ ಸಿಕ್ಕ ತಾಳೆಗರಿಯೊಂದರಲ್ಲಿ ಕನ್ನಡದ ‘ಊರಲ್ಲಿ’ ಎಂಬ ಶಬ್ದ ಪತ್ತೆಯಾಗಿ ಅಚ್ಚರಿ ಮೂಡಿಸಿತ್ತಾದರೂ ಆ ತಾಳೆಗರಿಗಳನ್ನು ಸುಟ್ಟಿದ್ದರಿಂದ ಕನ್ನಡಕ್ಕೆ ಸಂಬಂಧಿಸಿದ ಪ್ರಮುಖ ಸಾಕ್ಷ್ಯವೊಂದು ನಾಶವಾಗಿತ್ತು.
ಹಿಂದಿ ಹುಟ್ಟಿಲ್ಲದ ಕಾಲದಲ್ಲಿ ಕನ್ನಡ ಮುಗಿಲಲ್ಲಿತ್ತು!
ಅಮೋಘವರ್ಷ, ‘ಕವಿರಾಜಮಾರ್ಗ’ ರಚಿಸುವಾಗ ಇಂಗ್ಲೀಷ್ ಭಾಷೆಯಿನ್ನೂ ತೊಟ್ಟಿಲೊಳಗಿನ ಕೂಸಾಗಿತ್ತು. ಹಿಂದಿ ಭಾಷೆ ಹುಟ್ಟಿರಲೇ ಇಲ್ಲವಂತೆ!

ಪರಿಪೂರ್ಣ ಭಾಷೆ
ಕನ್ನಡ ಭಾಷೆ ಮತ್ತು ವರ್ಣಮಾಲೆ ತಾರ್ಕಿಕ ಮತ್ತು ವೈಜ್ಞಾನಿಕವಾಗಿಯೂ 99.99 ಪ್ರತಿಶತ ಪರಿಪೂರ್ಣವಾದುದು ಎಂಬುದು ಸಾಬೀತಾಗಿದೆ.

ಲಿಪಿಗಳ ರಾಣಿ ಕನ್ನಡ
ವಿಶ್ವದ ಲಿಪಿಗಳ ರಾಣಿ ಎಂದರೆ ಕನ್ನಡ ಲಿಪಿ ಎಂದು ಶ್ರೀ ವಿನೋಭಾ ಭಾವೆಯವರೇ ಹೇಳಿದ್ದರು ಎಂಬುದು ಕನ್ನಡದ ಶ್ರೇಷ್ಠತೆಗೆ ಸಾಕ್ಷಿ.

ಅತೀ ಹೆಚ್ಚು ಪ್ರಶಸ್ತಿ
ಸಾಹಿತ್ಯಕ್ಕಾಗಿ ಅತೀ ಹೆಚ್ಚು ಪ್ರಶಸ್ತಿ ಪಡೆದ ಭಾರತೀಯರೆಂದರೆ ಅದು ಕುವೆಂಪು. ಅಂದರೆ ಕನ್ನಡ ಸಾಹಿತ್ಯದಿಂದಾಗಿಯೇ ಜಗದ ಕವಿ, ಯುಗದ ಕವಿ ಕುವೆಂಪು ಅವರು ಈ ಗೌರವ ಪಡೆದರು.

ಎಂಟು ಜ್ಞಾನಪೀಠದ ಹೆಗ್ಗಳಿಕೆ
ಎಂಟು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದ ಭಾಷೆ ಎಂದರೆ ಕನ್ನಡ. ಕುವೆಂಪು, ದ.ರಾ.ಬೇಂದ್ರೆ, ಶಿವರಾಮ ಕಾರಂತ, ವಿ.ಕೃ.ಗೋಕಾಕ್, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಯು.ಆರ್.ಅನಂತಮೂರ್ತಿ, ಗಿರೀಶ್ ಕಾರ್ನಾಡ್, ಚಂದ್ರಶೇಖರ ಕಂಬಾರ ಈ ಎಂಟು ಜನ ಸಾಹಿತ್ಯದ ಬೇರೆ ಬೇರೆ ಪ್ರಾಕಾರಗಳಲ್ಲಿ ಕೃಷಿ ಮಾಡಿ ಕನ್ನಡಕ್ಕೆ ಗರಿಷ್ಠ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟವರು.

ಗ್ರೀಕ್ ನಾಟಕದಲ್ಲಿ ಕನ್ನಡ ಸಾಲು
ಚಾರಿಯಟ್ ಮೈಮ್ ಎಂಬ ಎರಡನೇ ಶತಮಾನದ ಗ್ರೀಕ್ ನಾಟಕವೊಂದು ಕನ್ನಡ ಸಾಲನ್ನು ಉಪಯೋಗಿಸಿದೆ. ಅಂದರೆ ಎರಡನೇ ಶತಮಾನದಷ್ಟು ಹಿಂದೆಯೇ ಕನ್ನಡ ಭಾಷೆ ಗ್ರೀಸ್ ದೇಶದವರೆಗೂ ಲಗ್ಗೆಯಿಟ್ಟಿತ್ತು ಎಂದಾಯ್ತು!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊರೆಯುವ, ಥರಗುಟ್ಟುವ ಚಳಿಯಲ್ಲಿ ಕೆಲವರು ಪ್ರತಿದಿನ ಸ್ನಾನ ಮಾಡಲು ಇಷ್ಟ ಪಡುವುದಿಲ್ಲ. ಅನೇಕರು ಪ್ರತಿದಿನ ಸ್ನಾನ ಮಾಡ್ತಾರೆ. ಪ್ರತಿದಿನ ಸ್ನಾನ ಮಾಡೋರು ಬೆಸ್ಟ್ ಅಂತಾ ನೀವು ಹೇಳಬಹುದು. ಆದ್ರೆ ಸಂಶೋಧನೆಯೊಂದು ನಿಮಗೆ ಆಶ್ಚರ್ಯವಾಗುವಂತಹ ಸಂಗತಿ ಹೇಳಿದೆ. ಪ್ರತಿದಿನ ಸ್ನಾನ ಮಾಡೋರು ಗಮನ ಇಟ್ಟು ಓದಿ. ಪ್ರತಿದಿನ ಸ್ನಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ. ಹಾಗೆ ಮಾಡುವವರು ಹೆಚ್ಚಿನ ಬಾರಿ ಅನಾರೋಗ್ಯಕ್ಕೆ ತುತ್ತಾಗ್ತಾರಂತೆ. ಯಸ್, ಸಂಶೋಧನೆಯೊಂದು ಈ ವಿಷಯವನ್ನು ಹೇಳಿದೆ. ನಮ್ಮ ದೇಹಕ್ಕೆ ಎಣ್ಣೆಯ ಅವಶ್ಯಕತೆ ಇದೆ. ದೇಹದಲ್ಲಿರುವ ತೈಲದ ಅಂಶ…
ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.
“ವಾಟ್ಸಪ್” (ಸಾಮಾಜಿಕ ಜಾಲತಾಣ)ವನ್ನು ಉಪಯೋಗಿಸದವರು ಯಾರಿದ್ದಾರೆ. ಈಗಂತೂ ಎಲ್ಲಾ ವಯೋಮಾನದವರು
ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ. ಇದಕ್ಕೆ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್ (ಬಿಇಎಫ್ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ…
ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…