ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೇಳಿದ್ದರು.
ರಾಷ್ಟ್ರಪತಿಗಳ ಈ ಹೇಳಿಕೆಗೆ ಪೂರಕ ಎನ್ನುವಂತೆ ತಾವು ನ್ಯಾಯಾಧೀಶರಾಗಿದ್ದ 28 ವರ್ಷಗಳಲ್ಲಿ 2000ಕ್ಕೂ ಅಧಿಕ ಪ್ರಕರಣಗಳ
ತೀರ್ಪುಗಳನ್ನು ಕನ್ನಡ ಭಾಷೆಯಲ್ಲೇ ನೀಡಿ, ನ್ಯಾಯಾಂಗ ಕ್ಷೇತ್ರದಲ್ಲೂ ತಮ್ಮ ಕನ್ನಡ ಪ್ರೀತಿ ಮೆರೆದಿ ದ್ದಾರೆ ನಿವೃತ್ತ ನ್ಯಾ.ಎಸ್.ಎಚ್. ಮಿಟ್ಟಲಕೋಡ ಅವರು… ಮೂಲತಃ ಧಾರವಾಡದವರೇ ಆದ ನ್ಯಾ.ಮಿಟ್ಟಲಕೋಡ ಅವರು ಪ್ರಾಥಮಿಕ ಶಾಲೆಯಲ್ಲಿದ್ದಾಗಿನಿಂದಲೂ ತಮ್ಮ ಕನ್ನಡ ಪ್ರೀತಿಯನ್ನು ಆಯ್ಕೆ ಮಾಡಿಕೊಂಡ ವಕೀಲ ವೃತ್ತಿ, ನಂತರ ನ್ಯಾಯಾಧೀಶರಾಗಿ ನೀಡುವ ತೀರ್ಪುಗಳಲ್ಲೂ ತುಂಬಿ “ಕನ್ನಡ ಕಾನೂನು ಸಾಹಿತ್ಯ’ ಎನ್ನುವ ಹೊಸ ಪ್ರಕಾರವೊಂದರ ಹುಟ್ಟಿಗೂ ಕಾರಣರಾಗಿದ್ದಾರೆ.
ದಾವಣಗೆರೆಯಲ್ಲಿ ಸಾವಿರ:-
ಶಿವಮೊಗ್ಗ, ಕಾರವಾರ, ಚಿತ್ರದುರ್ಗ, ಕೊಪ್ಪಳ ಸೇರಿದಂತೆ ಅನೇಕ ಕಡೆ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುವ ಸಂದರ್ಭದಲ್ಲೂ ಕನ್ನಡ ತೀರ್ಪು ನೀಡುತ್ತಿದ್ದ ಅವರಿಗೆ ನ್ಯಾಯಾಲಯಗಳಲ್ಲಿನ ಶೀಘ್ರ ಲಿಪಿಕಾರರು ಮತ್ತು ಬೆರಳಚ್ಚುಗಾರರಾಗಿ ಸೇವೆ ಸಲ್ಲಿಸುತ್ತಿದ್ದ ನೌಕರರ ಕೊರತೆ ಇತ್ತು. ಹೀಗಾಗಿ ಕನ್ನಡದಲ್ಲಿ ತೀರ್ಪು ಪ್ರಕಟಿಸಲು ತಡಕಾಡಬೇಕಿತ್ತು.
ಕೊನೆಗೆ ಒಂದೊಂದು ತೀರ್ಪುಗಳನ್ನು ಸುದೀರ್ಘವಾಗಿ ಬರೆಯಬೇಕಿದ್ದರಿಂದ ಕಚೇರಿ ಅವಧಿ ಮುಗಿಸಿ ಟೈಪ್ವೈಟರ್ನ್ನು ತಮ್ಮ ಮನೆಗೆ ತರಿಸಿಕೊಂಡು ತಡರಾತ್ರಿವರೆಗೂ ಕುಳಿತು ಕಷ್ಟವಾದರೂ ತೀರ್ಪಿನ ಪ್ರತಿ ಕನ್ನಡದಲ್ಲೇ ಪೂರ್ಣಗೊಳಿಸುತ್ತಿದ್ದರು.
ಹೈಕೋರ್ಟ್ನಲ್ಲೂ ಬರಲಿ:-
ಜೆಎಂಎಫ್ಸಿ ಮತ್ತು ಜಿಲ್ಲಾ ಕೋರ್ಟ್ಗಳಲ್ಲಿ ಕರ್ನಾಟಕ ಏಕೀಕರಣದ ನಂತರ ಕನ್ನಡ ಭಾಷೆಯಲ್ಲಿ ತೀರ್ಪು ನೀಡಲು ಸರ್ಕಾರ ಅನುಮತಿ ನೀಡಿತು.
ಆದರೆ ಇಂದಿಗೂ ಪರಿಪೂರ್ಣವಾಗಿ ಇದು ಜಾರಿಯಾಗಿಲ್ಲ. ಇನ್ನು ಹೈಕೋರ್ಟ್ನಲ್ಲಿ ಸದ್ಯಕ್ಕೆ ಕನ್ನಡದಲ್ಲಿ ಪ್ರಕರಣಗಳ ದಾಖಲೆಗಳನ್ನು ಸಲ್ಲಿಸಲು ಅವಕಾಶವಿಲ್ಲ. ಆದರೆ ಇಂಗ್ಲಿಷ್ ಮೂಲ ದಾಖಲೆ ಜೊತೆಗೆ ಕನ್ನಡದ ದಾಖಲೆ ಪ್ರತಿಯೊಂದನ್ನು ಸಲ್ಲಿಸಬಹುದು ಅಷ್ಟೇ. ಹೈಕೋರ್ಟ್ ನ್ಯಾಯಾಧೀಶರು ಹೊರ ರಾಜ್ಯಗಳಿಂದ ಬಂದವರಾಗಿರುವುದರಿಂದ ಇದು ಇಂಗ್ಲಿಷ್ನಲ್ಲೇ ಇರಬೇಕು ಎನ್ನುವ ನಿಯಮವಿದೆ.
ಕನ್ನಡದಲ್ಲೇ ಮೊದಲ ತೀರ್ಪು:-
1977ರಲ್ಲಿ ಧಾರವಾಡದ ಸರ್ ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು ಪದವಿ ಮುಗಿಸಿ ವಕೀಲಿ ವೃತ್ತಿ ಆರಂಭಿಸಿದ ಅವರು, 1985ರಲ್ಲಿ ಚಿಕ್ಕನಾಯಕನಹಳ್ಳಿ ಮುನ್ಸಿಫ್-ಮ್ಯಾಜಿಸ್ಟ್ರೇಟ್ ಆದರು. ನ್ಯಾಯಾಧೀಶರಾಗಿ ತಮ್ಮ ಎದುರಿಗೆ ಬಂದ ಮೊದಲ ಪ್ರಕರಣದ ತೀರ್ಪನ್ನು ಕನ್ನಡದಲ್ಲೇ ಪ್ರಕಟಿಸಿದರು. ನಂತರ ಅಥಣಿ, ಸೊರಬ, ಬಂಟ್ವಾಳ, ಸಾಗರದಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾಗಲೂ ಕನ್ನಡ ಪ್ರೀತಿ ಮುಂದುವರಿಯಿತು.
ಕ್ರಿಮಿನಲ್, ಕಂದಾಯ, ಸಿವಿಲ್, ತೆರಿಗೆ ಇಲಾಖೆ, ಸಹಕಾರ ಇಲಾಖೆಗೆ ಸಂಬಂಧಿಸಿದ ಎಲ್ಲಾ ಬಗೆಯ ಪ್ರಕರಣಗಳ ತೀರ್ಪು ಕನ್ನಡದಲ್ಲಿ ನೀಡಿದ್ದು ಇವರ ಕನ್ನಡ ಪ್ರೀತಿಗೆ ಸಾಕ್ಷಿ ಕಾನೂನು ಕ್ಷೇತ್ರದ ತೀರ್ಪು ಗಳು ಸ್ಥಳೀಯ ಭಾಷೆಯಲ್ಲೇ ಬಂದರೆ ನ್ಯಾಯ ಕೇಳಲು ಬಂದ ವರಿಗೂ ತಮ್ಮ ಪ್ರಕರಣದ ಸಮಗ್ರ ಮಾಹಿತಿ ಲಭಿಸುತ್ತದೆ. ಜೊತೆಗೆ ಕನ್ನಡ ಕಾನೂನು ಸಾಹಿತ್ಯವೂ ವೃದ್ಧಿಯಾಗುತ್ತದೆ.
ನ್ಯಾ.ಎಸ್.ಎಚ್. ಮಿಟ್ಟಲಕೋಡ ನಿವೃತ್ತ ನ್ಯಾಯಾಧೀಶರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ. ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ. ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ) ತೇವಾಂಶ-85.3ಸಸಾರಜನಕ- 0.1 ಗ್ರಾಂಮೇದಸ್ಸು – 0.2 ಗ್ರಾಂಖನಿಜಾಂಶ – – 0.6 ಗ್ರಾಂಕಾರ್ಬೋಹೈಡ್ರೇಟ್ಸ್…
ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಜಾರಿಗೆ ತಂದಾಗಿನಿಂದಲೂ ಸಂಚಾರ ನಿಯಮ ಉಲ್ಲಂಘನೆಗೆ ಮಾಡಿದವರಿಗೆ ದಂಡ ವಿಧಿಸುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಕೆಲ ದಂಡದ ಮೊತ್ತ 80 ಸಾವಿರ ರೂ. ತಲುಪಿದ್ದು ಇದೆ. ಮೋಟಾರು ವಾಹನ ಕಾಯಿದೆ (ತಿದ್ದುಪಡಿ) 2019, ಜಾರಿಗೆ ಬಂದ ದಿನದಿಂದಲೂ ದೇಶಾದ್ಯಂತ ಸಂಚಾರ ಶಿಸ್ತು ಪಾಲನೆ ಮಾಡದ ಸವಾರರಿಗೆ ಭಾರೀ ಮೊತ್ತದ ದಂಡ ಪೀಕಿಸುತ್ತಿರುವ ಸುದ್ದಿಗಳೇ ಎಲ್ಲೆಲ್ಲೂ. ಇವುಗಳ ನಡುವೆ ಒಡಿಶಾ ರಾಜಧಾನಿ ಭುವನೇಶ್ವರದ…
ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ…
ಕಿರುಗೋಣಿಸೊಪ್ಪು ಎಂದು ಕರೆಯಲ್ಪಡುವ ಈ ಸಸ್ಯ ಬೆಳೆಯದಿರುವ ಜಾಗವೇ ಇಲ್ಲ. ಶೇಕಡ 65 % ನೀರನ್ನು ಹಿಡಿದಿಟ್ಟು ಕೊಳ್ಳುವ ಹಾಗೂ ಒಮ್ಮೆಲೇ ಸುಮಾರು 3 ಲಕ್ಷ ಬೀಜ ಪ್ರಸರಣ ಸಾಮರ್ಥ್ಯ ಇರುವ ಸಸ್ಯ ಎಂತಹಾ ಬರದಲ್ಲೂ ಬದುಕುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ಸೇವಿಸುವವರ ಬದುಕನ್ನೂ ಹಸನು ಮಾಡುವ ಗುಣಗಳಿವೆ. Purslane ಎಂದು ವಿಶ್ವದಾದ್ಯಂತ ಸಾಮಾನ್ಯವಾಗಿ ಕರೆಯಲ್ಪಡುವ Portulacaceae ಕುಟುಂಬದ ಇದರ ಸಸ್ಯ ಶಾಸ್ತ್ರೀಯ ಹೆಸರು Portulaca oleracea. ಮುಲತಃ ಉತ್ತರ ಅಮೆರಿಕಾದ ಸಸ್ಯ. ಗೋಣಿಸೊಪ್ಪು ಅತ್ಯಾದಿಕವಾದ ವಿಟಮಿನ್…
ಬಡವರ ಬಾದಾಮಿ ಎಂದೇ ಕರೆಯುವ ಕಡಲೆಕಾಯಿಯಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಸದಾ ನೀವು ಯಂಗ್ ಆಗಿ ಕಾಣುವಂತೆ ಮಾಡುವುದಲ್ಲದೆ, ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತೆ. ಹಾಗಾದ್ರೆ ಕಡಲೆ ಕಾಯಿಯನ್ನು ತಿನ್ನುವುದರಿಂದ ಇನ್ನು ಹಲವಾರು ಪ್ರಯೋಜನಗಳಿವೆ.. *ಪ್ರತಿದಿನ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಗ್ಯಾಸ್ ಮತ್ತು ಎಸಿಡಿಟಿ ಸಮಸ್ಯೆ ಶಮನವಾಗುತ್ತದೆ.ಜೊತೆಗೆ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. *ದಿನಾಲೂ ಪುರುಷ ಹಾಗೂ ಮಹಿಳೆ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಹಾರ್ಮೋನುಗಳು ಸಮತೋಲನದಲ್ಲಿದ್ದು ಅವರ ಲೈಂಗಿಕ…
ಬೆಂಗಳೂರು, ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಮಹಿಳೆಯರ ಸುಖಃಕರ ಪ್ರಯಾಣಕ್ಕಾಗಿ ಬಸ್ಗಳಲ್ಲಿ ಅತ್ಯಾಧುನಿಕ ಸಿಸಿ ಕ್ಯಾಮಾರಗಳನ್ನು ಆಳವಡಿಸಲು ಮುಂದಾಗಿದೆ. ಬೆಂಗಳೂರಿನಾದ್ಯಂತ ಸಂಚಾರಕ್ಕೆ ಹೆಚ್ಚಿನ ಮಹಿಳೆಯರು ಬಿಎಂಟಿಸಿಯನ್ನೇ ಅವಲಂಭಿಸಿದ್ದಾರೆ. ಹೀಗಾಗಿ ನಮ್ಮ ಬೆಂಗಳೂರಲ್ಲಿ ದೆಹಲಿ ನಿರ್ಬಯಾ ಪ್ರಕರಣದಂತ ಘಟನೆ ನಡೆಯಬಾರದೆಂದು, ಮುನ್ನೆಚ್ಚರಕಾ ಕ್ರಮವಾಗಿ ಮಹಿಳೆಯರ ಭದ್ರತೆಗೆ ಹೆಚ್ಚಿನ ಆಧ್ಯತೆ ನೀಡಿದ್ದು, ಸಿಸಿ ಕ್ಯಾಮರಾ ಅಳವಡಿಸಲು ಮುಂದಾಗಿದೆ. 48 ಗಂಟೆಗಳ ಕಾಲ ಕೊಟಿಂಗ್ ಕೆಪಾಸಿಟಿ ಇರೋ ಕ್ಯಾಮಾರಗಳು ಇವಾಗಿದ್ದು, ಮಹಿಳೆಯ ಮೇಲಿನ…