ಸೌಂದರ್ಯ

ಕಪ್ಪು ವರ್ತುಲಕ್ಕೆ ಕನ್ನಡಿಯಲ್ಲಿಲ್ಲ ಮದ್ದು..!ಇಲ್ಲಿದೆ ಮನೆ ಮದ್ದು…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

281

ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ.

ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು ಕ್ರೀಮುಗಳು ಲಭ್ಯವಿವೆ. ಆದರೆ ಇವು ತಾತ್ಕಾಲಿಕವಾಗಿ ಕಪ್ಪು ವರ್ತುಲವನ್ನು ಹೋಗಲಾಡಿಸಿಯಾವೇ ಹೊರತು ಇದಕ್ಕೊಂದು ಶಾಶ್ವತ ಪರಿಹಾರಬೇಕೆಂದರೆ ನಮ್ಮ ಆಹಾರಕ್ರಮದಲ್ಲಿ ಬದಲಾವಣೆ ಮಾಡಿಕೊಳ್ಳುವುದು ಬಹಳ ಮುಖ್ಯ.

ಕಪ್ಪು ವರ್ತುಲಕ್ಕೆ ಇವೇ ಕಾರಣಗಳು…

ಸರಿಯಾಗಿ ನಿದ್ದೆ ಮಾಡದಿದ್ದಲ್ಲಿ ಕಣ್ಣಿನ ಮೇಲೆ ಒತ್ತಡ ಉಂಟಾಗಿ ಕಪ್ಪು ವರ್ತುಲಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ದಿನಕ್ಕೆ ಕನಿಷ್ಠ 6 ಗಂಟೆಯಾದರೂ ನಿದ್ದೆ ಮಾಡುವುದರಿಂದ ಕಪ್ಪು ವರ್ತುಲಗಳು ಬರದಂತೆ ತಡೆಯಬಹುದು.

ಕಂಪ್ಯೂಟರ್ ಮುಂದೆ ಕುಳಿತು, ಕಣ್ಣಿಗೆ ವಿಶ್ರಾಂತಿ ನೀಡದೆ ಹೆಚ್ಚು ಹೊತ್ತು  ಕೆಲಸ ಮಾಡುವುದರಿಂದ ಕೂಡ ಕಣ್ಣಿನ ಕೆಳಗಡೆ ಕರ್ಪೂ ವರ್ತುಲಗಳು ಏರ್ಪಡುತ್ತವೆ.ಕಂಪ್ಯೂಟರ್ ಮುಂದೆ ಬಹಳ ಸಮಯ ಕುಳಿತು ಕೆಲಸ ಮಾಡುವವರು ಪ್ರತಿ 2–3 ಗಂಟೆಗೊಮ್ಮೆ ಕಣ್ಣನ್ನು ತಣ್ಣನೆಯ ನೀರಿನಿಂದ ತೊಳೆಯುವುದರಿಂದ ಕಣ್ಣಿಗೆ ವಿಶ್ರಾಂತಿ ನೀಡಿದಂತಾಗುತ್ತದೆ. ಇದರಿಂದ ಕಣ್ಣಿನ ಆರೋಗ್ಯ ಕಾಪಾಡುವ ಜೊತೆಗೆ ಕಪ್ಪು ವರ್ತುಲ ಬಾರದಂತೆ ತಡೆಯಬಹುದು.

ಕಪ್ಪು ವರ್ತುಲವನ್ನು ಹೋಗಲಾಡಿಸಲು ಇಲ್ಲಿದೆ ಮನೆ ಮದ್ದು…

  * ಆದಷ್ಟು ಹೆಚ್ಚು ಹಸಿ ತರಕಾರಿಗಳನ್ನು ಸೇವಿಸಿ.

* ಸೌತೆಕಾಯಿ ರಸವನ್ನು ಪ್ರತಿದಿನ ಕಣ್ಣಿನ ಸುತ್ತ ಹಚ್ಚಿ 25 ನಿಮಿಷ ಬಿಟ್ಟು ಸ್ವಚ್ಛ ನೀರಿನಿಂದ ತೊಳೆಯಿರಿ.

  * ಸೊಪ್ಪಿನಿಂದ ತಯಾರಿಸಲಾದ ಪದಾರ್ಥಗಳನ್ನು ಸೇವಿಸುವುದು ಸಹ ಒಳ್ಳೆಯದು.

  * ನಿಂಬೆ ರಸವನ್ನು ಕಣ್ಣಿನ ಸುತ್ತ ಹಚ್ಚಿ 15 ನಿಮಿಷ ಬಿಟ್ಟು ಸ್ವಚ್ಛ ನೀರಿನಿಂದ ತೊಳೆದುಕೊಳ್ಳಿ.

* ಪ್ರತಿದಿನವೂ ರಾತ್ರಿ ಮಲಗುವ ಮೊದಲು 2-4 ಬಾದಾಮಿ ಬೀಜವನ್ನು ನೀರಿನಲ್ಲಿ ನೆನೆಸಿಟ್ಟು, ಬೆಳಗ್ಗೆ ಸೇವಿಸಿ. ಬಾದಾಮಿಯಲ್ಲಿ ಹೆಚ್ಚು  ಪೋಷಕಾಶವಿರುವುದರಿಂದ ಇದು ಕಪ್ಪು ವರ್ತುಲವನ್ನು ಕಡಿಮೆ ಮಾಡುವುದಷ್ಟೇ ಅಲ್ಲದೆ, ಚರ್ಮಕ್ಕೂ ಹೊಳಪು ನೀಡುತ್ತದೆ.

* ದೇಹದಲ್ಲಿ ಬಿಳಿ ರಕ್ತಕಣವನ್ನು ಹೆಚ್ಚಿಸುವಂಥ ಆಹಾರ ಸೇವಿಸಿ. ರಕ್ತದಲ್ಲಿ ಹಿಮೋಗ್ಲೋಬಿನ್ ಪ್ರಮಾಣವೂ ಕಡಿಮೆಯಿದ್ದರೆ ಕಪ್ಪುವರ್ತುಲ ಕಾಣಿಸಿಕೊಳ್ಳುತ್ತದೆ ಇದಕ್ಕಾಗಿ ಯಾವುದೇ ರೀತಿಯ ವೈದ್ಯಕೀಯ ಉಪಚಾರಗಳ ಅಗತ್ಯವಿಲ್ಲ. ಪ್ರತಿದಿನವೂ ತಿನ್ನುವ ಆಹಾರದ ಪ್ರಮಾಣವನ್ನೇ ಹೆಚ್ಚಿಸಿ.

* ನಾಲಿಗೆಗೆ ರುಚಿ ಅನ್ನಿಸುವ ಆರೋಗ್ಯಕ್ಕಿಂತ ಯಾವುದು ದೇಹಕ್ಕೆ ಹಿತವೋ ಅದನ್ನೇ ಸೇವಿಸಿ.

*  ಪಪ್ಪಾಯ ಹಣ್ಣಿನ ರಸವನ್ನು ಕಣ್ಣಿನ ಸುತ್ತ ಹಚ್ಚಿಕೊಂಡರೂ ಒಳ್ಳೆಯದು.

* ನಿಮಗೆ ಚರ್ಮದ ಸಮಸ್ಯೆಯಿಂದಲೇ ಕಪ್ಪು ವರ್ತುಲ ಆರಂಭವಾಗಿದೆ ಅನ್ನಿಸಿದರೆ ಹಸಿ ಸೌತೆ ಕಾಯಿ ಅಥವಾ ಆಲೂಗಡ್ಡೆಯನ್ನು ವೃತ್ತಾಕಾರದಲ್ಲಿ ಹೆಚ್ಚಿಕೊಂಡು ಹದಿನೈದು ನಿಮಿಷ ಕಣ್ಣಿನ ಮೇಲೆ ಇಟ್ಟುಕೊಳ್ಳಿ.

* ಕಪ್ಪು ವರ್ತಲ ಹೋಗಲಾಡಿಸುವುದಕ್ಕಾಗಿ ದುಬಾರಿ ಕ್ರೀಮುಗಳನ್ನು ಬಳಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಅದೂ ಅಲ್ಲದೆ, ಇದರಿಂದ ಅಡ್ಡಪರಿಣಾಮ ಉಂಟಾಗಬಹುದು. ಒಣಹಣ್ಣುಗಳಾದ ದ್ರಾಕ್ಷಿ, ಗೋಡಂಬಿ, ಬಾದಾಮಿ, ಪಿಸ್ತಾ ಮುಂತಾದವುಗಳ ಸೇವನೆಯಿಂದ ದೇಹ ಶಕ್ತಿಯುತವಾಗುತ್ತದೆ. ಇವು ದೇಹದಲ್ಲಿ ರಕ್ತದ ಪ್ರಮಾಣ ಹೆಚ್ಚುವುದಕ್ಕೆ ಸಹಕಾರಿಯಾಗಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತನ್ನ ಹೆಂಡತಿಯ ರೂಮಿನಲ್ಲಿ ಆಕೆಯ ಪ್ರಿಯತಮನನ್ನು ನೋಡಿದ ಗಂಡ ಮಾಡಿದ್ದೇನು ಗೊತ್ತಾ?

    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ.  ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ…

  • ಸುದ್ದಿ

    ತಿರುವನಂತಪುರಂ ದೇವಾಲಯದ ಏಳನೇ ಬಾಗಿಲಿನ ರಹಸ್ಯ ಇಲ್ಲಿದೆ ನೋಡಿ.

    ಭಾರತದಲ್ಲಿ ಅನೇಕ ದೇವಾಲಯಗಳಿವೆ. ಆದರೆ ಕೆಲವು ದೇವಾಲಯಗಳ ರಹಸ್ಯಗಳನ್ನು ಇಲ್ಲಿಯವರೆಗೆ ಯಾರೂ ಬಹಿರಂಗಪಡಿಸಿಲ್ಲ. ಇಂದು ನಾವು ನಿಮಗೆ ಕೇರಳದ ತಿರುವನಂತಪುರಂನಲ್ಲಿರುವ ಪದ್ಮನಾಭಸ್ವಾಮಿ ದೇವಸ್ಥಾನದ ಬಗ್ಗೆ ಹೇಳಲಿದ್ದೇವೆ. ಈ ದೇವಾಲಯವನ್ನು ನೀವು ನೋಡಿರದಿದ್ದರೂ, ಅದರ ಹೆಸರನ್ನು ಖಂಡಿತ ಕೇಳಿರುತ್ತೀರಿ. ಏಕೆಂದರೆ ಈ ದೇವಾಲಯವು ಕೆಲವು ನಿಗೂಢತೆಗಳಿಗೆ ಮತ್ತು ಅದರ ಸಂಪತ್ತಿಗೆ ವಿಶ್ವದಾದ್ಯಂತ ಪ್ರಸಿದ್ಧವಾಗಿದೆ. ಆದ್ದರಿಂದ ಇದನ್ನು ಭಾರತದ ಶ್ರೀಮಂತ ದೇವಾಲಯ ಎಂದೂ ಕರೆಯುತ್ತಾರೆ. ಈ ದೇವಾಲಯದಲ್ಲಿ ಅನೇಕ ರಹಸ್ಯ ನೆಲಮಾಳಿಗೆಗಳಿವೆ. ಅವುಗಳಲ್ಲಿ ಕೆಲವು ತೆರೆದಿವೆ. ಆ ಮಳಿಗೆಗಳಿಂದ ಕೋಟ್ಯಂತರ…

  • ವಿಧ್ಯಾಭ್ಯಾಸ, ವ್ಯಕ್ತಿ ವಿಶೇಷಣ

    ಈ ಮದುಮಗಳು ಮದುವೆಯಲ್ಲಿ ವರನ ಬಳಿ ಕೇಳಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.

  • ಸುದ್ದಿ

    ಮನೆಗೆ ಹೋದ ದಿವಾಕರ್ ಪತ್ನಿಯಿಂದ ಈ ಸುದ್ದಿ ಕೇಳಿ ಶಾಕ್ ಆದ್ರು..!ಏನದು ಸುದ್ದಿ ಗೊತ್ತಾ..?

    ‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್. ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

  • ಸುದ್ದಿ

    ಪತ್ನಿಗೆ ಬೆಂಕಿ ಹಚ್ಚಿ ತಾನೂ ವಿಷ ಸೇವಿಸಿದ 70 ವಯಸ್ಸಿನ ವೃದ್ಧ..!

    ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ…

  • ಆರೋಗ್ಯ, ಉಪಯುಕ್ತ ಮಾಹಿತಿ

    ನಿಮಗೆ ಗೊತ್ತಿರದ ಈ ಬೀಜಗಳಲ್ಲಿದೆ ನಿಮ್ಮ ದೇಹದ ತೂಕ ಕಡಿಮೆ ಮಾಡುವ ತಾಕತ್ತು.!ತಿಳಿಯಲು ಈ ಮಾಹಿತಿ ನೋಡಿ..

    ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ. *ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ. *ಕಲ್ಲಂಗಡಿ…