ಸೌಂದರ್ಯ

ಕಪ್ಪು ವರ್ತುಲಕ್ಕೆ ಕನ್ನಡಿಯಲ್ಲಿಲ್ಲ ಮದ್ದು..!ಇಲ್ಲಿದೆ ಮನೆ ಮದ್ದು…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

276

ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ.

ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು ಕ್ರೀಮುಗಳು ಲಭ್ಯವಿವೆ. ಆದರೆ ಇವು ತಾತ್ಕಾಲಿಕವಾಗಿ ಕಪ್ಪು ವರ್ತುಲವನ್ನು ಹೋಗಲಾಡಿಸಿಯಾವೇ ಹೊರತು ಇದಕ್ಕೊಂದು ಶಾಶ್ವತ ಪರಿಹಾರಬೇಕೆಂದರೆ ನಮ್ಮ ಆಹಾರಕ್ರಮದಲ್ಲಿ ಬದಲಾವಣೆ ಮಾಡಿಕೊಳ್ಳುವುದು ಬಹಳ ಮುಖ್ಯ.

ಕಪ್ಪು ವರ್ತುಲಕ್ಕೆ ಇವೇ ಕಾರಣಗಳು…

ಸರಿಯಾಗಿ ನಿದ್ದೆ ಮಾಡದಿದ್ದಲ್ಲಿ ಕಣ್ಣಿನ ಮೇಲೆ ಒತ್ತಡ ಉಂಟಾಗಿ ಕಪ್ಪು ವರ್ತುಲಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ದಿನಕ್ಕೆ ಕನಿಷ್ಠ 6 ಗಂಟೆಯಾದರೂ ನಿದ್ದೆ ಮಾಡುವುದರಿಂದ ಕಪ್ಪು ವರ್ತುಲಗಳು ಬರದಂತೆ ತಡೆಯಬಹುದು.

ಕಂಪ್ಯೂಟರ್ ಮುಂದೆ ಕುಳಿತು, ಕಣ್ಣಿಗೆ ವಿಶ್ರಾಂತಿ ನೀಡದೆ ಹೆಚ್ಚು ಹೊತ್ತು  ಕೆಲಸ ಮಾಡುವುದರಿಂದ ಕೂಡ ಕಣ್ಣಿನ ಕೆಳಗಡೆ ಕರ್ಪೂ ವರ್ತುಲಗಳು ಏರ್ಪಡುತ್ತವೆ.ಕಂಪ್ಯೂಟರ್ ಮುಂದೆ ಬಹಳ ಸಮಯ ಕುಳಿತು ಕೆಲಸ ಮಾಡುವವರು ಪ್ರತಿ 2–3 ಗಂಟೆಗೊಮ್ಮೆ ಕಣ್ಣನ್ನು ತಣ್ಣನೆಯ ನೀರಿನಿಂದ ತೊಳೆಯುವುದರಿಂದ ಕಣ್ಣಿಗೆ ವಿಶ್ರಾಂತಿ ನೀಡಿದಂತಾಗುತ್ತದೆ. ಇದರಿಂದ ಕಣ್ಣಿನ ಆರೋಗ್ಯ ಕಾಪಾಡುವ ಜೊತೆಗೆ ಕಪ್ಪು ವರ್ತುಲ ಬಾರದಂತೆ ತಡೆಯಬಹುದು.

ಕಪ್ಪು ವರ್ತುಲವನ್ನು ಹೋಗಲಾಡಿಸಲು ಇಲ್ಲಿದೆ ಮನೆ ಮದ್ದು…

  * ಆದಷ್ಟು ಹೆಚ್ಚು ಹಸಿ ತರಕಾರಿಗಳನ್ನು ಸೇವಿಸಿ.

* ಸೌತೆಕಾಯಿ ರಸವನ್ನು ಪ್ರತಿದಿನ ಕಣ್ಣಿನ ಸುತ್ತ ಹಚ್ಚಿ 25 ನಿಮಿಷ ಬಿಟ್ಟು ಸ್ವಚ್ಛ ನೀರಿನಿಂದ ತೊಳೆಯಿರಿ.

  * ಸೊಪ್ಪಿನಿಂದ ತಯಾರಿಸಲಾದ ಪದಾರ್ಥಗಳನ್ನು ಸೇವಿಸುವುದು ಸಹ ಒಳ್ಳೆಯದು.

  * ನಿಂಬೆ ರಸವನ್ನು ಕಣ್ಣಿನ ಸುತ್ತ ಹಚ್ಚಿ 15 ನಿಮಿಷ ಬಿಟ್ಟು ಸ್ವಚ್ಛ ನೀರಿನಿಂದ ತೊಳೆದುಕೊಳ್ಳಿ.

* ಪ್ರತಿದಿನವೂ ರಾತ್ರಿ ಮಲಗುವ ಮೊದಲು 2-4 ಬಾದಾಮಿ ಬೀಜವನ್ನು ನೀರಿನಲ್ಲಿ ನೆನೆಸಿಟ್ಟು, ಬೆಳಗ್ಗೆ ಸೇವಿಸಿ. ಬಾದಾಮಿಯಲ್ಲಿ ಹೆಚ್ಚು  ಪೋಷಕಾಶವಿರುವುದರಿಂದ ಇದು ಕಪ್ಪು ವರ್ತುಲವನ್ನು ಕಡಿಮೆ ಮಾಡುವುದಷ್ಟೇ ಅಲ್ಲದೆ, ಚರ್ಮಕ್ಕೂ ಹೊಳಪು ನೀಡುತ್ತದೆ.

* ದೇಹದಲ್ಲಿ ಬಿಳಿ ರಕ್ತಕಣವನ್ನು ಹೆಚ್ಚಿಸುವಂಥ ಆಹಾರ ಸೇವಿಸಿ. ರಕ್ತದಲ್ಲಿ ಹಿಮೋಗ್ಲೋಬಿನ್ ಪ್ರಮಾಣವೂ ಕಡಿಮೆಯಿದ್ದರೆ ಕಪ್ಪುವರ್ತುಲ ಕಾಣಿಸಿಕೊಳ್ಳುತ್ತದೆ ಇದಕ್ಕಾಗಿ ಯಾವುದೇ ರೀತಿಯ ವೈದ್ಯಕೀಯ ಉಪಚಾರಗಳ ಅಗತ್ಯವಿಲ್ಲ. ಪ್ರತಿದಿನವೂ ತಿನ್ನುವ ಆಹಾರದ ಪ್ರಮಾಣವನ್ನೇ ಹೆಚ್ಚಿಸಿ.

* ನಾಲಿಗೆಗೆ ರುಚಿ ಅನ್ನಿಸುವ ಆರೋಗ್ಯಕ್ಕಿಂತ ಯಾವುದು ದೇಹಕ್ಕೆ ಹಿತವೋ ಅದನ್ನೇ ಸೇವಿಸಿ.

*  ಪಪ್ಪಾಯ ಹಣ್ಣಿನ ರಸವನ್ನು ಕಣ್ಣಿನ ಸುತ್ತ ಹಚ್ಚಿಕೊಂಡರೂ ಒಳ್ಳೆಯದು.

* ನಿಮಗೆ ಚರ್ಮದ ಸಮಸ್ಯೆಯಿಂದಲೇ ಕಪ್ಪು ವರ್ತುಲ ಆರಂಭವಾಗಿದೆ ಅನ್ನಿಸಿದರೆ ಹಸಿ ಸೌತೆ ಕಾಯಿ ಅಥವಾ ಆಲೂಗಡ್ಡೆಯನ್ನು ವೃತ್ತಾಕಾರದಲ್ಲಿ ಹೆಚ್ಚಿಕೊಂಡು ಹದಿನೈದು ನಿಮಿಷ ಕಣ್ಣಿನ ಮೇಲೆ ಇಟ್ಟುಕೊಳ್ಳಿ.

* ಕಪ್ಪು ವರ್ತಲ ಹೋಗಲಾಡಿಸುವುದಕ್ಕಾಗಿ ದುಬಾರಿ ಕ್ರೀಮುಗಳನ್ನು ಬಳಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಅದೂ ಅಲ್ಲದೆ, ಇದರಿಂದ ಅಡ್ಡಪರಿಣಾಮ ಉಂಟಾಗಬಹುದು. ಒಣಹಣ್ಣುಗಳಾದ ದ್ರಾಕ್ಷಿ, ಗೋಡಂಬಿ, ಬಾದಾಮಿ, ಪಿಸ್ತಾ ಮುಂತಾದವುಗಳ ಸೇವನೆಯಿಂದ ದೇಹ ಶಕ್ತಿಯುತವಾಗುತ್ತದೆ. ಇವು ದೇಹದಲ್ಲಿ ರಕ್ತದ ಪ್ರಮಾಣ ಹೆಚ್ಚುವುದಕ್ಕೆ ಸಹಕಾರಿಯಾಗಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನಿಮ್ಮ ಮನೆಯಲ್ಲಿಯೇ ಇದೆ, ಹಲ್ಲು ನೋವಿಗೆ ಮದ್ದು..!ತಿಳಿಯಲು ಈ ಲೇಖನ ಓದಿ…

    ಹಲ್ಲು ನೋವು ಅಂತ ಕೇಳಿದ ಕೂಡಲೇ ನಮಗೆ ಅದು ಭಯ ಬೀಳಿಸುತ್ತದೆ.ಹಲ್ಲು ನೋವು ಬಂದಾಗ ಜನರು ಅವುಗಳನ್ನು ಪರಿಹರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಹುಡುಕುತ್ತಾರೆ. ಇದರಿಂದ ಅವರ ನೋವು ಕಡಿಮೆಯಾಗುವ ಬದಲು ಮತ್ತಷ್ಟು ಹೆಚ್ಚಾಗುತ್ತದೆ. ಹಲ್ಲು ಹಾಗೂ ವಸಡುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದಿದ್ದರೆ ನಾನಾ ಸಮಸ್ಯೆಗಳನ್ನು ಎದುರಿಸಲೇಬೇಕಾಗುತ್ತೆ. ಸಾಮಾನ್ಯವಾಗಿ ಕಾಡುವ ಹಲ್ಲು ನೋವು ಹಾಗೂ ವಸಡುಗಳ ರಕ್ತಸ್ರಾವದ ಕೆಲವು ಸಮಸ್ಯೆಗಳು ಕಾಣಿಸಿಕೊಂಡಾಗ ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಹಲವಾರು ಮದ್ದುಗಳಿಂದ ನಿಮ್ಮ ಹಲ್ಲು ನೋವಿಗೆ ಅಗತ್ಯವಾದ…

  • ರಾಜಕೀಯ

    20ಕ್ಕೂ ಅಧಿಕ ಕೈ ಶಾಸಕರಿಂದ ಬಿಎಸ್‍ವೈಗೆ ಕರೆ!

    ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು,ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್‍ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್‍ನಲ್ಲಿ ಇದೆ. ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ…

  • ದೇಶ-ವಿದೇಶ

    ಕಡೆಗೂ ಬಂತು ಆಪಲ್ ಐಫೋನ್ ನಲ್ಲಿ ಕನ್ನಡ ಕೀಬೋರ್ಡ್ !ಇದು ಕನ್ನಡಿಗರಿಗೆ ಸಂದ ಜಯ….ಮುಂದೆ ಓದಿ…..

    ಟೆಕ್ ದೈತ್ಯ ಕಂಪನಿ ಆಪಲ್, ಅದರ ಕೀಬೋರ್ಡ್ ಆಪರೇಟಿಂಗ್ ಸಿಸ್ಟಮ್, ಐಒಎಸ್ 2ರ ಇತ್ತೀಚಿನ ಆವೃತ್ತಿಯಲ್ಲಿ ಕನ್ನಡ

  • ಮನರಂಜನೆ

    ಬಿಗ್ ಬಾಸ್ ಮನೆಯಿಂದ ದಿಡೀರ್ ಆಚೆ ಬಂದ ಹರೀಶ್ ರಾಜ್ ಅವರಿಗೆ ಸಿಕ್ಕ ದೊಡ್ಡ ಸಂಭಾವನೆ ಎಷ್ಟು ಗೊತ್ತಾ.

    ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ…

  • ಸುದ್ದಿ

    ಪಿತೃಪಕ್ಷ ಹಮಾವಾಸೆ ದಿನ ಏನು ತಿನ್ನಬಹುದು…? ಏನು ತಿನ್ನಬಾರದು ಗೊತ್ತಾ…?

    ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…

  • ಸುದ್ದಿ

    ಇನ್ನಷ್ಟು ಸುರಕ್ಷಿತವಾದ ಎಂ-ಆಧಾರ್‌ ಆ್ಯಪ್‌ ಬಿಡುಗಡೆ,ಇದರ ವಿಶೇಷತೆಯಾದರು ಏನು ಗೊತ್ತಾ,.!

    ಸ್ಮಾರ್ಟ್‌ಫೋನ್‌ನಲ್ಲಿ ಬಳಕೆಗೆ ಅಭಿವೃದ್ಧಿಪಡಿಸಲಾಗಿರುವ ಎಂ-ಆಧಾರ್‌ ಆ್ಯಪ್‌ ಅನ್ನು ಮತ್ತಷ್ಟು ಸುರಕ್ಷಿತಗೊಳಿಸಿರುವ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ಹೊಸ ಆವೃತ್ತಿಯನ್ನು ಗ್ರಾಹಕರ ಬಳಕೆಗಾಗಿ ಬಿಡುಗಡೆಮಾಡಿದೆ.ಹಿಂದಿನ ಆವೃತ್ತಿಯನ್ನು ಅಳಿಸಿ,ನೂತನ ಆವೃತ್ತಿಯನ್ನು ಸ್ಮಾರ್ಟ್‌ಫೋನ್‌ಗಳಲ್ಲಿ ಇನ್‌ಸ್ಟಾಲ್‌ ಮಾಡಿಕೊಳ್ಳುವಂತೆ ಯುಐಡಿಎಐ ಸೂಚಿಸಿದೆ. ನೂತನ ಆವೃತ್ತಿಯ ಎಂ-ಆಧಾರ್‌ನಲ್ಲಿ ಕನ್ನಡ ಸೇರಿದಂತೆ 13 ಭಾಷೆಗಳಿವೆ. ಆಧಾರ್‌ ಕಾರ್ಡ್‌ ಡೌನ್‌ಲೋಡ್‌, ಆಫ್‌ಲೈನ್‌ ಇಕೆವೈಸಿ, ವಿಳಾಸ ಪರಿಷ್ಕರಣೆ, ಇ-ಮೇಲ್‌ ಪರಿಶೀಲನೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಗ್ರಾಹಕರು ಎಂ-ಆಧಾರ್‌ನಿಂದ ಪಡೆಯಬಹುದಾಗಿದೆ. ಗುರುತು ಖಾತ್ರಿಗಾಗಿ ಆಧುನಿಕ ಬಯೋಮೆಟ್ರಿಕ್‌ ವ್ಯವಸ್ಥೆಯನ್ನುನೂತನ ಆವೃತ್ತಿಯಲ್ಲಿ ಬಳಸಲಾಗಿದ್ದು, ಇದರಿಂದ ಆಧಾರ್‌ ಆ್ಯಪ್‌ಅನ್ನು ಲಾಕ್‌…