ಸೌಂದರ್ಯ

ಕಪ್ಪು ವರ್ತುಲಕ್ಕೆ ಕನ್ನಡಿಯಲ್ಲಿಲ್ಲ ಮದ್ದು..!ಇಲ್ಲಿದೆ ಮನೆ ಮದ್ದು…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

286

ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ.

ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು ಕ್ರೀಮುಗಳು ಲಭ್ಯವಿವೆ. ಆದರೆ ಇವು ತಾತ್ಕಾಲಿಕವಾಗಿ ಕಪ್ಪು ವರ್ತುಲವನ್ನು ಹೋಗಲಾಡಿಸಿಯಾವೇ ಹೊರತು ಇದಕ್ಕೊಂದು ಶಾಶ್ವತ ಪರಿಹಾರಬೇಕೆಂದರೆ ನಮ್ಮ ಆಹಾರಕ್ರಮದಲ್ಲಿ ಬದಲಾವಣೆ ಮಾಡಿಕೊಳ್ಳುವುದು ಬಹಳ ಮುಖ್ಯ.

ಕಪ್ಪು ವರ್ತುಲಕ್ಕೆ ಇವೇ ಕಾರಣಗಳು…

ಸರಿಯಾಗಿ ನಿದ್ದೆ ಮಾಡದಿದ್ದಲ್ಲಿ ಕಣ್ಣಿನ ಮೇಲೆ ಒತ್ತಡ ಉಂಟಾಗಿ ಕಪ್ಪು ವರ್ತುಲಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ದಿನಕ್ಕೆ ಕನಿಷ್ಠ 6 ಗಂಟೆಯಾದರೂ ನಿದ್ದೆ ಮಾಡುವುದರಿಂದ ಕಪ್ಪು ವರ್ತುಲಗಳು ಬರದಂತೆ ತಡೆಯಬಹುದು.

ಕಂಪ್ಯೂಟರ್ ಮುಂದೆ ಕುಳಿತು, ಕಣ್ಣಿಗೆ ವಿಶ್ರಾಂತಿ ನೀಡದೆ ಹೆಚ್ಚು ಹೊತ್ತು  ಕೆಲಸ ಮಾಡುವುದರಿಂದ ಕೂಡ ಕಣ್ಣಿನ ಕೆಳಗಡೆ ಕರ್ಪೂ ವರ್ತುಲಗಳು ಏರ್ಪಡುತ್ತವೆ.ಕಂಪ್ಯೂಟರ್ ಮುಂದೆ ಬಹಳ ಸಮಯ ಕುಳಿತು ಕೆಲಸ ಮಾಡುವವರು ಪ್ರತಿ 2–3 ಗಂಟೆಗೊಮ್ಮೆ ಕಣ್ಣನ್ನು ತಣ್ಣನೆಯ ನೀರಿನಿಂದ ತೊಳೆಯುವುದರಿಂದ ಕಣ್ಣಿಗೆ ವಿಶ್ರಾಂತಿ ನೀಡಿದಂತಾಗುತ್ತದೆ. ಇದರಿಂದ ಕಣ್ಣಿನ ಆರೋಗ್ಯ ಕಾಪಾಡುವ ಜೊತೆಗೆ ಕಪ್ಪು ವರ್ತುಲ ಬಾರದಂತೆ ತಡೆಯಬಹುದು.

ಕಪ್ಪು ವರ್ತುಲವನ್ನು ಹೋಗಲಾಡಿಸಲು ಇಲ್ಲಿದೆ ಮನೆ ಮದ್ದು…

  * ಆದಷ್ಟು ಹೆಚ್ಚು ಹಸಿ ತರಕಾರಿಗಳನ್ನು ಸೇವಿಸಿ.

* ಸೌತೆಕಾಯಿ ರಸವನ್ನು ಪ್ರತಿದಿನ ಕಣ್ಣಿನ ಸುತ್ತ ಹಚ್ಚಿ 25 ನಿಮಿಷ ಬಿಟ್ಟು ಸ್ವಚ್ಛ ನೀರಿನಿಂದ ತೊಳೆಯಿರಿ.

  * ಸೊಪ್ಪಿನಿಂದ ತಯಾರಿಸಲಾದ ಪದಾರ್ಥಗಳನ್ನು ಸೇವಿಸುವುದು ಸಹ ಒಳ್ಳೆಯದು.

  * ನಿಂಬೆ ರಸವನ್ನು ಕಣ್ಣಿನ ಸುತ್ತ ಹಚ್ಚಿ 15 ನಿಮಿಷ ಬಿಟ್ಟು ಸ್ವಚ್ಛ ನೀರಿನಿಂದ ತೊಳೆದುಕೊಳ್ಳಿ.

* ಪ್ರತಿದಿನವೂ ರಾತ್ರಿ ಮಲಗುವ ಮೊದಲು 2-4 ಬಾದಾಮಿ ಬೀಜವನ್ನು ನೀರಿನಲ್ಲಿ ನೆನೆಸಿಟ್ಟು, ಬೆಳಗ್ಗೆ ಸೇವಿಸಿ. ಬಾದಾಮಿಯಲ್ಲಿ ಹೆಚ್ಚು  ಪೋಷಕಾಶವಿರುವುದರಿಂದ ಇದು ಕಪ್ಪು ವರ್ತುಲವನ್ನು ಕಡಿಮೆ ಮಾಡುವುದಷ್ಟೇ ಅಲ್ಲದೆ, ಚರ್ಮಕ್ಕೂ ಹೊಳಪು ನೀಡುತ್ತದೆ.

* ದೇಹದಲ್ಲಿ ಬಿಳಿ ರಕ್ತಕಣವನ್ನು ಹೆಚ್ಚಿಸುವಂಥ ಆಹಾರ ಸೇವಿಸಿ. ರಕ್ತದಲ್ಲಿ ಹಿಮೋಗ್ಲೋಬಿನ್ ಪ್ರಮಾಣವೂ ಕಡಿಮೆಯಿದ್ದರೆ ಕಪ್ಪುವರ್ತುಲ ಕಾಣಿಸಿಕೊಳ್ಳುತ್ತದೆ ಇದಕ್ಕಾಗಿ ಯಾವುದೇ ರೀತಿಯ ವೈದ್ಯಕೀಯ ಉಪಚಾರಗಳ ಅಗತ್ಯವಿಲ್ಲ. ಪ್ರತಿದಿನವೂ ತಿನ್ನುವ ಆಹಾರದ ಪ್ರಮಾಣವನ್ನೇ ಹೆಚ್ಚಿಸಿ.

* ನಾಲಿಗೆಗೆ ರುಚಿ ಅನ್ನಿಸುವ ಆರೋಗ್ಯಕ್ಕಿಂತ ಯಾವುದು ದೇಹಕ್ಕೆ ಹಿತವೋ ಅದನ್ನೇ ಸೇವಿಸಿ.

*  ಪಪ್ಪಾಯ ಹಣ್ಣಿನ ರಸವನ್ನು ಕಣ್ಣಿನ ಸುತ್ತ ಹಚ್ಚಿಕೊಂಡರೂ ಒಳ್ಳೆಯದು.

* ನಿಮಗೆ ಚರ್ಮದ ಸಮಸ್ಯೆಯಿಂದಲೇ ಕಪ್ಪು ವರ್ತುಲ ಆರಂಭವಾಗಿದೆ ಅನ್ನಿಸಿದರೆ ಹಸಿ ಸೌತೆ ಕಾಯಿ ಅಥವಾ ಆಲೂಗಡ್ಡೆಯನ್ನು ವೃತ್ತಾಕಾರದಲ್ಲಿ ಹೆಚ್ಚಿಕೊಂಡು ಹದಿನೈದು ನಿಮಿಷ ಕಣ್ಣಿನ ಮೇಲೆ ಇಟ್ಟುಕೊಳ್ಳಿ.

* ಕಪ್ಪು ವರ್ತಲ ಹೋಗಲಾಡಿಸುವುದಕ್ಕಾಗಿ ದುಬಾರಿ ಕ್ರೀಮುಗಳನ್ನು ಬಳಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಅದೂ ಅಲ್ಲದೆ, ಇದರಿಂದ ಅಡ್ಡಪರಿಣಾಮ ಉಂಟಾಗಬಹುದು. ಒಣಹಣ್ಣುಗಳಾದ ದ್ರಾಕ್ಷಿ, ಗೋಡಂಬಿ, ಬಾದಾಮಿ, ಪಿಸ್ತಾ ಮುಂತಾದವುಗಳ ಸೇವನೆಯಿಂದ ದೇಹ ಶಕ್ತಿಯುತವಾಗುತ್ತದೆ. ಇವು ದೇಹದಲ್ಲಿ ರಕ್ತದ ಪ್ರಮಾಣ ಹೆಚ್ಚುವುದಕ್ಕೆ ಸಹಕಾರಿಯಾಗಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ವಯಸ್ಸು 50 ವರ್ಷವಾದರೂ, 20 ವರ್ಷದ ಹುಡುಗನಂತೆ ಕಾಣಿಸುತ್ತಾನೆ..!ತಿಳಿಯಲು ಈ ಲೇಖನ ಓದಿ..

    ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.

  • ಸಿನಿಮಾ

    ಈ ನಟ ‘ಮೆಗಾ ಸ್ಟಾರ್’ ಆದ್ರೂ ಈಗಲೂ ಬೀಡಿ ಸೇದುತ್ತಾರೆ..!ಯಾರು ಗೊತ್ತಾ..?ತಿಳಿಯಲು ಈ ಲೇಖನ ಓದಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೇದುವವರಿಗೆ ಯಾವುದಾದರೇನಂತೆ..? ಬೀಡಿ, ಸಿಗರೇಟ್. ಜೇಬಿನಲ್ಲಿ ಹಣ ತುಂಬಿರುವಾಗ ಸಿಗರೇಟ್ ನಂತಹ ದುಬಾರಿಗಳೇ ಬೇಕಾಗುತ್ತದೆ. ಆದರೆ ಈ ನಟ ಹಾಗಲ್ಲ. ಇವರು ಮೆಗಾ ಸ್ಟಾರ್ ನಟ. ಹಣ, ಪ್ರಚಾರ ಇದ್ದರೂ ಸಿಂಪ್ಲಿಸಿಟಿ ಫಾಲೋ ಮಾಡುತ್ತಾರೆ. ಮಲಯಾಳಂನ ಮೆಗಾ ಸ್ಟಾರ್ ನಟ ಮಮ್ಮೂಟಿ ಇಲ್ಲಿಯವರೆಗೂ ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮೂರು ಬಾರಿ ನ್ಯಾಷನಲ್ ಅವಾರ್ಡ್ ಪಡೆದಿದ್ದಾರೆ. ಅಲ್ಲದೇ ಇವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿದೆ. ಕೋಟಿ,…

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಭರವಸೆಯ ವ್ಯವಹಾರದ ಅವಕಾಶವೊಂದು ನಿಮಗೆ ಸಿಗುವುದು. ಇದರಿಂದ ಉತ್ತೇಜಿತರಾಗಿ ಈ ದಿನವನ್ನು ಬಹು ಖುಷಿಯಿಂದ ಕಳೆಯುವಿರಿ. ಆಹಾರ ವಿಹಾರದಲ್ಲಿ ಸ್ವಲ್ಪ ಎಚ್ಚರ ಇರಲಿ. ಪ್ರಯಾಣದಲ್ಲಿ ಸುಖ ಕಾಣುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಉಪಯುಕ್ತ ಮಾಹಿತಿ

    ನಿಮ್ಮ ಬೊಜ್ಜನ್ನು ಕಡಿಮೆ ಮಾಡಿಕೊಳ್ಳಲು ಖಾಲಿ ಹೊಟ್ಟೆಯಲ್ಲಿ ಇದನ್ನು ಕುಡಿಯಿರಿ

    ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು. ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು…

  • ಉದ್ಯೋಗ, ಉಪಯುಕ್ತ ಮಾಹಿತಿ

    ಬಾಳೆಹಣ್ಣಿನ ಸಿಪ್ಪೆಯನ್ನು ಎಸೆಯುವ ಮುನ್ನ ಇದರ ಪ್ರಯೋಜನವನ್ನು ತಿಳಿಯಿರಿ.

    ಸಾಮಾನ್ಯವಾಗಿ ಬಾಳೆಹಣ್ಣು ತಿಂದು ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಅಂದರೆ ಬಾಳೆಹಣ್ಣಿನ ಸಿಪ್ಪೆಯನ್ನು ಯಾರಾದರೂ ತಿನ್ನುತ್ತಾರಾ? ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಕಸದ ಬುಟ್ಟಿ ಸೇರುವ ಈ ಸಿಪ್ಪೆಯಿಂದಲೂ ಅನೇಕ ರೀತಿಯ ಪ್ರಯೋಜನಗಳಿವೆ ಎಂಬುದರ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಬಾಳೆ ಹಣ್ಣಿನ ಸಿಪ್ಪೆಯು ಅನೇಕ ರೀತಿಯ ಆರೋಗ್ಯಕರ ಅಂಶಗಳನ್ನು ಹೊಂದಿದೆ. ಈ ಹಣ್ಣಿನ ಸಿಪ್ಪೆಯಲ್ಲೂ ವಿಟಮಿನ್ ಬಿ6 ಅಧಿಕ ಪ್ರಮಾಣದಲ್ಲಿರುತ್ತದೆ. ಹಾಗೆಯೇ ನಾರಿನಂಶ, ಮೆಗ್ನೀಷಿಯಂ, ಪೊಟಾಷಿಯಂ  ಕೂಡ ಇದರಲ್ಲಿ ಅಡಗಿರುತ್ತವೆ. ಇಂತಹ ಹಲವು ಪೋಷಕಾಂಶಗಳನ್ನು ಬಾಳೆ ಸಿಪ್ಪೆಯಿಂದ ಪಡೆಯಬಹುದಾಗಿದೆ….

  • ಸುದ್ದಿ

    ‘ಗೂಗಲ್ ಪೇ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ!..ನೀವು ಬಳಸುತ್ತಿದ್ದಿರಾ ಅಗಾದರೆ ಇದನ್ನು ಓದಿ…

    ಭಾರತದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವ ಡಿಜಿಟಲ್ ವಾಲೆಟ್ ಮತ್ತು ಜನಪ್ರಿಯ ಆನ್‌ಲೈನ್ ಪಾವತಿ ವ್ಯವಸ್ಥೆ ‘ಗೂಗಲ್ ಪೇ’ ಅಪ್ಲಿಕೇಶನ್‌ಗೆ ಇದೀಗ ಬಯೋಮೆಟ್ರಿಕ್ ಭದ್ರತೆಯನ್ನು ಪರಿಚಯಿಸಲಾಗಿದೆ. ಆಂಡ್ರಾಯ್ಡ್ 10 ನೊಂದಿಗೆ ಗೂಗಲ್ ಪರಿಚಯಿಸಿದ ಬಯೋಮೆಟ್ರಿಕ್ ಭದ್ರತೆ ವೈಶಿಷ್ಟ್ಯವನ್ನು ಗೂಗಲ್ ಪೇ ಅಪ್ಲಿಕೇಶನ್‌ನ ಇತ್ತೀಚಿನ 2.100 ಆವೃತ್ತಿಯಲ್ಲಿ ತರಲಾಗಿದ್ದು, ಇದು ಫಿಂಗರ್‌ಪ್ರಿಂಟ್ ಮತ್ತು ಮುಖ ಗುರುತಿಸುವಿಕೆ ವೈಶಿಷ್ಟ್ಯವನ್ನು ಬಳಸಿಕೊಂಡು ಬಳಕೆದಾರರು ತಮ್ಮ ಆನ್‌ಲೈನ್ ವಹಿವಾಟುಗಳನ್ನು ರಕ್ಷಿಸಲು ಅನುವು ಮಾಡಿಕೊಡಲಿದೆ. ಗೂಗಲ್ ಪೇ ಅಪ್ಲಿಕೇಶನ್‌ ಬಳಕೆದಾರರು ಈ ಹಿಂದೆ ತಮ್ಮ ವಹಿವಾಟುಗಳನ್ನು ಭದ್ರಪಡಿಸಿಕೊಳ್ಳಲು…