ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ.

ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು ಕ್ರೀಮುಗಳು ಲಭ್ಯವಿವೆ. ಆದರೆ ಇವು ತಾತ್ಕಾಲಿಕವಾಗಿ ಕಪ್ಪು ವರ್ತುಲವನ್ನು ಹೋಗಲಾಡಿಸಿಯಾವೇ ಹೊರತು ಇದಕ್ಕೊಂದು ಶಾಶ್ವತ ಪರಿಹಾರಬೇಕೆಂದರೆ ನಮ್ಮ ಆಹಾರಕ್ರಮದಲ್ಲಿ ಬದಲಾವಣೆ ಮಾಡಿಕೊಳ್ಳುವುದು ಬಹಳ ಮುಖ್ಯ.
ಸರಿಯಾಗಿ ನಿದ್ದೆ ಮಾಡದಿದ್ದಲ್ಲಿ ಕಣ್ಣಿನ ಮೇಲೆ ಒತ್ತಡ ಉಂಟಾಗಿ ಕಪ್ಪು ವರ್ತುಲಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ದಿನಕ್ಕೆ ಕನಿಷ್ಠ 6 ಗಂಟೆಯಾದರೂ ನಿದ್ದೆ ಮಾಡುವುದರಿಂದ ಕಪ್ಪು ವರ್ತುಲಗಳು ಬರದಂತೆ ತಡೆಯಬಹುದು.

ಕಂಪ್ಯೂಟರ್ ಮುಂದೆ ಕುಳಿತು, ಕಣ್ಣಿಗೆ ವಿಶ್ರಾಂತಿ ನೀಡದೆ ಹೆಚ್ಚು ಹೊತ್ತು ಕೆಲಸ ಮಾಡುವುದರಿಂದ ಕೂಡ ಕಣ್ಣಿನ ಕೆಳಗಡೆ ಕರ್ಪೂ ವರ್ತುಲಗಳು ಏರ್ಪಡುತ್ತವೆ.ಕಂಪ್ಯೂಟರ್ ಮುಂದೆ ಬಹಳ ಸಮಯ ಕುಳಿತು ಕೆಲಸ ಮಾಡುವವರು ಪ್ರತಿ 2–3 ಗಂಟೆಗೊಮ್ಮೆ ಕಣ್ಣನ್ನು ತಣ್ಣನೆಯ ನೀರಿನಿಂದ ತೊಳೆಯುವುದರಿಂದ ಕಣ್ಣಿಗೆ ವಿಶ್ರಾಂತಿ ನೀಡಿದಂತಾಗುತ್ತದೆ. ಇದರಿಂದ ಕಣ್ಣಿನ ಆರೋಗ್ಯ ಕಾಪಾಡುವ ಜೊತೆಗೆ ಕಪ್ಪು ವರ್ತುಲ ಬಾರದಂತೆ ತಡೆಯಬಹುದು.
* ಆದಷ್ಟು ಹೆಚ್ಚು ಹಸಿ ತರಕಾರಿಗಳನ್ನು ಸೇವಿಸಿ.
* ಸೌತೆಕಾಯಿ ರಸವನ್ನು ಪ್ರತಿದಿನ ಕಣ್ಣಿನ ಸುತ್ತ ಹಚ್ಚಿ 25 ನಿಮಿಷ ಬಿಟ್ಟು ಸ್ವಚ್ಛ ನೀರಿನಿಂದ ತೊಳೆಯಿರಿ.

* ಸೊಪ್ಪಿನಿಂದ ತಯಾರಿಸಲಾದ ಪದಾರ್ಥಗಳನ್ನು ಸೇವಿಸುವುದು ಸಹ ಒಳ್ಳೆಯದು.
* ನಿಂಬೆ ರಸವನ್ನು ಕಣ್ಣಿನ ಸುತ್ತ ಹಚ್ಚಿ 15 ನಿಮಿಷ ಬಿಟ್ಟು ಸ್ವಚ್ಛ ನೀರಿನಿಂದ ತೊಳೆದುಕೊಳ್ಳಿ.
* ಪ್ರತಿದಿನವೂ ರಾತ್ರಿ ಮಲಗುವ ಮೊದಲು 2-4 ಬಾದಾಮಿ ಬೀಜವನ್ನು ನೀರಿನಲ್ಲಿ ನೆನೆಸಿಟ್ಟು, ಬೆಳಗ್ಗೆ ಸೇವಿಸಿ. ಬಾದಾಮಿಯಲ್ಲಿ ಹೆಚ್ಚು ಪೋಷಕಾಶವಿರುವುದರಿಂದ ಇದು ಕಪ್ಪು ವರ್ತುಲವನ್ನು ಕಡಿಮೆ ಮಾಡುವುದಷ್ಟೇ ಅಲ್ಲದೆ, ಚರ್ಮಕ್ಕೂ ಹೊಳಪು ನೀಡುತ್ತದೆ.
* ದೇಹದಲ್ಲಿ ಬಿಳಿ ರಕ್ತಕಣವನ್ನು ಹೆಚ್ಚಿಸುವಂಥ ಆಹಾರ ಸೇವಿಸಿ. ರಕ್ತದಲ್ಲಿ ಹಿಮೋಗ್ಲೋಬಿನ್ ಪ್ರಮಾಣವೂ ಕಡಿಮೆಯಿದ್ದರೆ ಕಪ್ಪುವರ್ತುಲ ಕಾಣಿಸಿಕೊಳ್ಳುತ್ತದೆ ಇದಕ್ಕಾಗಿ ಯಾವುದೇ ರೀತಿಯ ವೈದ್ಯಕೀಯ ಉಪಚಾರಗಳ ಅಗತ್ಯವಿಲ್ಲ. ಪ್ರತಿದಿನವೂ ತಿನ್ನುವ ಆಹಾರದ ಪ್ರಮಾಣವನ್ನೇ ಹೆಚ್ಚಿಸಿ.
* ನಾಲಿಗೆಗೆ ರುಚಿ ಅನ್ನಿಸುವ ಆರೋಗ್ಯಕ್ಕಿಂತ ಯಾವುದು ದೇಹಕ್ಕೆ ಹಿತವೋ ಅದನ್ನೇ ಸೇವಿಸಿ.

* ಪಪ್ಪಾಯ ಹಣ್ಣಿನ ರಸವನ್ನು ಕಣ್ಣಿನ ಸುತ್ತ ಹಚ್ಚಿಕೊಂಡರೂ ಒಳ್ಳೆಯದು.
* ನಿಮಗೆ ಚರ್ಮದ ಸಮಸ್ಯೆಯಿಂದಲೇ ಕಪ್ಪು ವರ್ತುಲ ಆರಂಭವಾಗಿದೆ ಅನ್ನಿಸಿದರೆ ಹಸಿ ಸೌತೆ ಕಾಯಿ ಅಥವಾ ಆಲೂಗಡ್ಡೆಯನ್ನು ವೃತ್ತಾಕಾರದಲ್ಲಿ ಹೆಚ್ಚಿಕೊಂಡು ಹದಿನೈದು ನಿಮಿಷ ಕಣ್ಣಿನ ಮೇಲೆ ಇಟ್ಟುಕೊಳ್ಳಿ.
* ಕಪ್ಪು ವರ್ತಲ ಹೋಗಲಾಡಿಸುವುದಕ್ಕಾಗಿ ದುಬಾರಿ ಕ್ರೀಮುಗಳನ್ನು ಬಳಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಅದೂ ಅಲ್ಲದೆ, ಇದರಿಂದ ಅಡ್ಡಪರಿಣಾಮ ಉಂಟಾಗಬಹುದು. ಒಣಹಣ್ಣುಗಳಾದ ದ್ರಾಕ್ಷಿ, ಗೋಡಂಬಿ, ಬಾದಾಮಿ, ಪಿಸ್ತಾ ಮುಂತಾದವುಗಳ ಸೇವನೆಯಿಂದ ದೇಹ ಶಕ್ತಿಯುತವಾಗುತ್ತದೆ. ಇವು ದೇಹದಲ್ಲಿ ರಕ್ತದ ಪ್ರಮಾಣ ಹೆಚ್ಚುವುದಕ್ಕೆ ಸಹಕಾರಿಯಾಗಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.
ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ. 1. ಅಕ್ಷಯ್ ಕುಮಾರ್:- ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್…
ಬೆಂಗಳೂರು: ಸಿಲಿಕಾನ್ ಸಿಟಿ ಉದ್ಯೋಗಿಗಳಿಗೆ ಇದು ನಿಜಕ್ಕೂ ಶಾಕಿಂಗ್ ನ್ಯೂಸ್. ಏಷ್ಯಾದಲ್ಲೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ ಎಂದು ಪ್ರಸಿದ್ಧಿ ಪಡೆದಿದ್ದ ಪೀಣ್ಯ ಕೈಗಾರಿಕಾ ಪ್ರದೇಶದ 10 ಸಾವಿರ ಕೈಗಾರಿಕೆಗಳು ಮುಚ್ಚುವ ಸ್ಥಿತಿ ನಿರ್ಮಾಣವಾಗಿದ್ದು, 15 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಬೀದಿಗೆ ಬೀಳುವ ಸಾಧ್ಯತೆಯಿದೆ. ಮಾಹಿತಿ ತಂತ್ರಜ್ಞಾನ ಆಗಮಿಸದ 80,90ರ ದಶಕದಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲದೆ, ದೇಶದ ವಿವಿಧ ಭಾಗಗಳಿಂದ ಉದ್ಯೋಗ ಆರಿಸಿ ಬೆಂಗಳೂರಿಗೆ ಬರುತ್ತಿದ್ದರು. ಅವರೆಲ್ಲರಿಗೂ ಪೀಣ್ಯ ಕೈಗಾರಿಕಾ ಪ್ರದೇಶ ಆಸರೆಯಾಗಿತ್ತು. ಆರ್ಥಿಕ ಹಿಂಜರಿತದ ಎಫೆಕ್ಟ್…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ. ಭಾರತೀಯ ವಾಸ್ತುವಿನ ಕೆಲ ಪ್ರಮುಖ ಮಾಹಿತಿಗಳು ಇಲ್ಲಿವೆ… 1) ನಾಮಫಲಕ: ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ…
ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ. ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು.. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್…
2026ರಲ್ಲಿ Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿರುವ ಬಗ್ಗೆ ವರದಿಗಳು ಬಂದಿವೆ. ಇಂದು (2026 ಏಪ್ರಿಲ್ 18–19) ಬಂದಿರುವ latest updates ದಾಳಿ ದೃಢಪಟ್ಟಿದೆ (Official confirmation) ಭಾರತ ಸರ್ಕಾರ ಅಧಿಕೃತವಾಗಿ ಹೇಳಿದ್ದು: – ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿದೆ ಇದರಿಂದ ಭಾರತ ತೀವ್ರ ಚಿಂತೆಗೆ ಒಳಗಾಗಿದೆ. Strait of Hormuz (ಹಾರ್ಮುಜ್ ಕಣಿವೆ) ಎಂಬುದು ಪರ್ಶಿಯನ್ ಗಲ್ಪ್ನಿಂದ ಜಗತ್ತಿನ ತೈಲ ಸಾಗಾಟಕ್ಕೆ ಅತ್ಯಂತ ಪ್ರಮುಖ ಸಮುದ್ರ…