ಆರೋಗ್ಯ

ಕರಬೂಜ ಹಣ್ಣು ತಿನ್ನೋದ್ರಿಂದ ,ಆಗುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

1218

ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.

ಹೊರಗಿನಿಂದ ಬೂದು-ಹಸಿರುಮಿಶ್ರಿತ ಸಿಪ್ಪೆ ಹೊಂದಿದ್ದರೂ ಒಳಗಣ ತಿರುಳು ಕೇಸರಿ ಅಥವಾ ಕಿತ್ತಳೆ ಬಣ್ಣ ಹೊಂದಿರುವ ಕೇಸರಿ ಕರಬೂಜ  ಬೇಸಿಗೆಯ ಫಲವಾಗಿದ್ದು ಇತರ ಕರಬೂಜ ಹಣ್ಣುಗಳಂತೆಯೇ ಸಿಹಿಯಾದ ಮತ್ತು ಹೆಚ್ಚು ನೀರಿನಂಶವನ್ನು ಹೊಂದಿರುವ ಹಣ್ಣಾಗಿದೆ. ಕಲ್ಲಂಗಡಿಯಂತೆಯೇ ಈ ಹಣ್ಣಿನ ಸೇವನೆಯಿಂದ ವಿಶೇಷವಾಗಿ ಬೇಸಿಗೆಯಲ್ಲಿ ಎದುರಾಗುವ ನಿರ್ಜಲೀಕರಣದಿಂದ ಪಾರಾಗಬಹುದು.

ಅಷ್ಟೇ ಅಲ್ಲ, ಎಲ್ಲರಿಗೂ ಇಷ್ಟವಾಗುವ ಈ ಹಣ್ಣು ತೂಕ ಇಳಿಸಿಕೊಳ್ಳುವ ಪ್ರಯತ್ನದಲ್ಲಿರುವವರಿಗೂ ಉತ್ತಮ ಆಯ್ಕೆಯಾಗಿದೆ. ನೀರಿನಂಶ ಮತ್ತು ವಿವಿಧ ಪೋಷಕಾಂಶಗಳು ಹೆಚ್ಚಿದ್ದರೂ ಕ್ಯಾಲೋರಿಗಳು ಕಡಿಮೆ ಇರುವ ಕಾರಣ ಕೊಬ್ಬು ಹೆಚ್ಚಿಸದೇ ದೇಹಕ್ಕೆ ಶಕ್ತಿ ಒದಗಿಸುವ ಮೂಲಕ ಆರೋಗ್ಯಕರ ಹಣ್ಣುಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುತ್ತದೆ.

ಕರಬೂಜ ಹಣ್ಣು ಹಾಗೂ ಬೀಜ ಇವು ಕರಬೂಜದ ಔಷಧೋಪಯೋಗಿ ಭಾಗಗಳು:-

೧. ಕರಬೂಜದ ರಸವನ್ನು ನಿತ್ಯುವೂ ಎರಡು ಲೋಟಗಳಷ್ಟು ಮೂರರಿಂದ ಐದುವಾರ ಸೇವಿಸಿದರೆ ಕಜ್ಜಿ, ಗಜಕರ್ಣ ಮುಂತಾದ ಚರ್ಮರೋಗಗಳು ಗುಣವಾಗುತ್ತವೆ.

೨. ಕರಬೂಜ ತಂಪು ಗುಣ ಹೊಂದಿದ್ದು ತಕ್ತವನ್ನು ಶುದ್ಧಿಸುತ್ತದೆ ಹಾಗೂ ಪಿತ್ತವನ್ನು ಶಮನ ಗೊಳಿಸುತ್ತದೆ.

ರಕ್ತದೊತ್ತಡವನ್ನು ನಿಯಂತ್ರಿಸುತ್ತವೆ:-

ಈ ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಪೊಟ್ಯಾಶಿಯಂ ರಕ್ತದೊತ್ತಡವನ್ನು ನಿಯಂತ್ರಿಸಲು ನೆರವಾಗುತ್ತದೆ ಹಾಗೂ ಅಧಿಕ ರಕ್ತದೊತ್ತಡವನ್ನು ಕಡಿಮೆಯಾಗಿಸಲು ನೆರವಾಗುತ್ತದೆ.

ತೂಕ ಇಳಿಸಲು ನೆರವಾಗುತ್ತದೆ:-

ಇದರಲ್ಲಿ ಅತಿ ಕಡಿಮೆ ಪರ್ಯಾಪ್ತ ಕೊಬ್ಬು ಹಾಗೂ ಅತಿ ಕಡಿಮೆ ಕ್ಯಾಲೋರಿಗಳಿರುವ ಕಾರಣ ತೂಕ ಏರದಿರಲು ನೆರವಾಗುತ್ತದೆ.

ಅಲ್ಲದೇ ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಕರಗುವ ನಾರು ಹೊಟ್ಟೆ ತುಂಬಿರುವ ಭಾವನೆಯನ್ನು ಮೂಡಿಸಿ ಹೊಟ್ಟೆಯ ಹಸಿವಿನ ಭಾವನೆ ಬರದಂತೆ ನೋಡಿಕೊಳ್ಳುತ್ತದೆ.

ಕಣ್ಣಿನ ದೃಷ್ಟಿಯನ್ನು ಉತ್ತಮಗೊಳಿಸುತ್ತದೆ:-

ಈ ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ವಿಟಮಿನ್ ಎ ಮತ್ತು ಸಿ ಕಣ್ಣುಗಳಿಗೆ ಅಗತ್ಯವಾದ ಪೋಷಕಾಂಶಗಳಾಗಿದ್ದು ಕಣ್ಣಿನ ದೃಷ್ಟಿಯನ್ನು ಉತ್ತಮವಾಗಿರಿಸಲು ನೆರವಾಗುತ್ತವೆ.

ಕ್ಯಾನ್ಸರ್ ಬರುವುದರಿಂದ ರಕ್ಷಣೆ ಒದಗಿಸುತ್ತದೆ:-

ಇದರಲ್ಲಿರುವ ವಿಟಮಿನ್ ಸಿ ಹಾಗೂ ಬೀಟಾ ಕ್ಯಾರೋಟೀನ್ ಎಂಬ ಆಂಟಿ ಆಕ್ಸಿಡೆಂಟ್ ದೇಹದಲ್ಲಿ ಕ್ಯಾನ್ಸರ್ ಉಂಟುಮಾಡಬಹುದಾದ ಫ್ರೀ ರ್‍ಯಾಡಿಕಲ್ ಎಂಬ ಕಣಗಳನ್ನು ಹಿಮ್ಮೆಟ್ಟಿಸುವ ಕ್ಷಮತೆ ಹೊಂದಿದ್ದು ಈ ಮೂಲಕ ದೇಹದ ಜೀವಕೋಶಗಳಿಗೆ ಈ ಕಣಗಳು ಹಾನಿ ಮಾಡುವುದರಿಂದ ರಕ್ಷಿಸುತ್ತದೆ.

ಕೆಮ್ಮಿನಿಂದ ರಕ್ಷಣೆ ಒದಗಿಸುತ್ತದೆ:-

ಒಂದು ವೇಳೆ ಗಂಟಲಿನಲ್ಲಿ ಕಫ ತುಂಬಿಕೊಂಡು ಕೆಮ್ಮು ಸತತವಾಗಿ ಬಾಧಿಸುತ್ತಿದ್ದರೆ ಈ ಹಣ್ಣುಗಳನ್ನು ತಿನ್ನುವ ಮೂಲಕ ಕಫ ಸಡಿಲಗೊಂಡು ಸುಲಭವಾಗಿ ನಿವಾರಿಸಲು ಸಾಧ್ಯವಾಗುತ್ತದೆ ಹಾಗೂ ಈ ಮೂಲಕ ಕೆಮ್ಮು ಸಹಾ ಇಲ್ಲವಾಗುತ್ತದೆ.

ಧೂಮಪಾನ ವರ್ಜಿಸಲು ನೆರವಾಗುತ್ತದೆ:-

ಕೇಸರಿ ಕರಬೂಜದಲ್ಲಿರುವ ಕೆಲವು ಪೋಷಕಾಂಶಗಳು ವ್ಯಸನದಿಂದ ಹೊರಬರಲು ಮಾನಸಿಕ ಬಲ ನೀಡುತ್ತವೆ. ಈ ಬಲ ಧೂಮಪಾನ, ಮದ್ಯಪಾನಗಳಂತಹ ಅನಾರೋಗ್ಯಕರ ಅಭ್ಯಾಸಗಳನ್ನು ವರ್ಜಿಸಲು ನೆರವಾಗುತ್ತದೆ.

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ:-

ಈ ಹಣ್ಣುಗಳು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕ್ಷಮತೆ ಹೊಂದಿದ್ದು ಇದಕ್ಕೆ ಈ ಹಣ್ಣಿನಲ್ಲಿರುವ ವಿಟಮಿನ್ ಸಿ ಪ್ರಮುಖ ಕಾರಣವಾಗಿದೆ. ಈ ಹಣ್ಣಿನ ಸೇವನೆಯಿಂದ ದೇಹದಲ್ಲಿ ಹೆಚ್ಚಿನ ಪ್ರಮಾಣದ ಬಿಳಿರಕ್ತಕಣಗಳನ್ನು ಉತ್ಪತ್ತಿಸಲು ಪ್ರಚೋದನೆ ದೊರಕುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಧ್ಯಾನ ಮಾಡೋದ್ರಿಂದ ಏನೆಲ್ಲಾ ಚಮತ್ಕಾರ ಆಗುತ್ತೆ ಗೊತ್ತಾ!ಹಾಗಾದ್ರೆ ಧ್ಯಾನ ಹೇಗೆ ಮಾಡಬೇಕು,ಹೇಗೆ ಮಾಡಬಾರದು?ತಿಳಿಯಲು ಈ ಲೇಖನಿ ಓದಿ…

    ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ..ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಮಾರ್ಚ್, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾ ಹೊಸ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಈ 4 ರೋಗಗಳನ್ನು ಗುಣಪಡಿಸುವ ಅದ್ಭುತ ಶಕ್ತಿ ಈ ಸೊಪ್ಪಿನಲ್ಲಿದೆ..!

    ಮೆಂತ್ಯ ಪಲಾವ್, ಮೆಂತ್ಯ ರೈಸ್, ಮೆಂತೆ ಪಲ್ಯ ಸೇವನೆ ಮಾಡುತ್ತಿದ್ದೀರಾ. ಹಾಗಿದ್ದರೆ ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯ ಪ್ರಯೋಜನ ಕೊಡುತ್ತದೆ ಅಂತ ತಿಳಿಯಿರಿ. ಮಧುಮೇಹ : ಮೆಂತ್ಯ ಸೊಪ್ಪು ಮಧುಮೇಹ ನಿಯಂತ್ರಿಸುವ ಗುಣ ಹೊಂದಿದೆ. ಇದು ಟೈಪ್ 1, ಟೈಪ್ 2 ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಸೊಪ್ಪು. ಕೊಲೆಸ್ಟ್ರಾಲ್ : ಮೆಂತ್ಯ ಸೊಪ್ಪು ಕರುಳಿನಲ್ಲಿರುವ ಕೊಲೆಸ್ಟ್ರಾಲ್ ಅಂಶವನ್ನು ಹೀರಿಕೊಳ್ಳುವ ಗುಣ ಹೊಂದಿದೆ. ಅಷ್ಟೇ ಅಲ್ಲದೆ, ಲಿವರ್ ನಲ್ಲಿ ಕೊಬ್ಬಿನಂಶ ಹೆಚ್ಚು ಬಿಡುಗಡೆಯಾಗದಂತೆ ನೋಡಿಕೊಳ್ಳುತ್ತದೆ. ಇದು ಒಳ್ಳೆಯ ಕೊಬ್ಬಿನಂಶ ಬಿಡುಗಡೆ ಮಾಡಲು…

  • ಸುದ್ದಿ

    ಶಾಸಕರ ಮುಂದೆಯೆ ವಿದ್ಯಾರ್ಥಿನಿಯರಿಂದ ಬಿಇಓಗೆ ಸಕತ್ ಕ್ಲಾಸ್…! ಯಾಕೆ ಗೊತ್ತಾ?

    ನಿಮ್ಮನ್ನು ನಂಬಿ ಎಷ್ಟು ದಿನ ನಾವೂ ಹೀಗೆ ಶಾಲೆಗೆ ಬರಬೇಕು. ಅದೇಗೆ ಕಲಿತು ತಂದೆ ತಾಯಿಗೆ ಒಳ್ಳೆಯ ಹೆಸರು ತರೊಕಾಗುತ್ತದೆ? ಎಂದು ಶಾಸಕನ ಮುಂದೆ ವಿದ್ಯಾರ್ಥಿನಿ ಪೋನ್ ಮಾಡಿ ಬಿಇಓ ವೆಂಕಟೇಶ ಗುಡಿಯಾಳಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಈ ಮೊದಲು ವಿದ್ಯಾರ್ಥಿಗಳು ಶಾಸಕರಿಗೆ ನಮ್ಮ ಶಾಲೆಗೆ ಭೇಟಿ ಕೊಡಿ ಎಂದಿದ್ದರು. ವಿದ್ಯಾರ್ಥಿಗಳ ಕರೆಗೆ ಶಾಲೆಗೆ ಭೇಟಿ ನೀಡಿದ ಮಾನವಿ ಶಾಸಕ ರಾಜಾ…

  • ಗ್ಯಾಜೆಟ್

    ಇನ್ನು ಮುಂದೆ ಸಮುದ್ರದಾಳದಲ್ಲಿ ಕೂಡ ಫೋನ್ ಮಾಡಬಹುದು!!!

    ಸರ್ಕಾರಿ ಒಡೆತನದ ಬಿಎಸ್ಎನ್‌ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.

  • ಉಪಯುಕ್ತ ಮಾಹಿತಿ

    ಜ್ವರದಿಂದ-ಹೃದಯಘಾತದವರೆಗೆ ಎಲ್ಲಾ ಕಾಯಿಲೆಗಳನ್ನು ತಡೆಯುವ ರಾಮಬಾಣ ಯಾವುದು ಗೊತ್ತಾ?

    ‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…